• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಡಿಕೆಶಿ ಮನೆ ಮೇಲೆ CBI ದಾಳಿ: ಕಾಂಗ್ರೆಸ್-BJP ನಾಯಕರ ನಡುವೆ ಟ್ವಿಟರ್ ಜಟಾಪಟಿ

by
October 5, 2020
in ಕರ್ನಾಟಕ
0
ಡಿಕೆಶಿ ಮನೆ ಮೇಲೆ CBI ದಾಳಿ: ಕಾಂಗ್ರೆಸ್-BJP ನಾಯಕರ ನಡುವೆ ಟ್ವಿಟರ್ ಜಟಾಪಟಿ
Share on WhatsAppShare on FacebookShare on Telegram

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮನೆ, ಕಛೇರಿ ಮೇಲೆ ನಡೆದ ಸಿಬಿಐ ದಾಳಿ ರಾಜಕೀಯ ಪ್ರೇರಿತ ದಾಳಿಯೆಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಅವರ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಡಿಕೆ ಶಿವಕುಮಾರ್‌ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಪ್ರಿಯಾಂಕ್‌ ಖರ್ಗೆ ಕೂಡಾ ಟೀಕಿಸಿದ್ದಾರೆ. ಸರ್ಕಾರವನ್ನು ಪ್ರಶ್ನಿಸಿದರ ಮತ್ತು ಅವರ ಹಗರಣವನ್ನು ಬಯಲಿಗೆಳೆದರ ಪರಿಣಾಮವೇ ಈ ದಾಳಿ ಎಂದಿದ್ದಾರೆ. ಚುನಾವಣೆಗಳು ಇರುವಾಗ ಕಾಂಗ್ರೆಸ್‌ ಸಾಯಕರ ಮೇಲೆ ಸಿಬಿಐ, ಐಟಿ, ಇಡಿ ಮೊದಲಾದ ದಾಳಿಗಳು ನಡೆಯುತ್ತವೆ ಎಂದೂ ಸೇರಿಸಿದ್ದಾರೆ.

Again the timing of CBI raid on @DKShivakumar is suspect. The cost of questioning the Govt & exposing their corruption.

CBI, IT, ED etc happens to @INCIndia leaders when :
• Govt is caught off guard
• Needs to manage a new headline
• When elections are around the corner

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 5, 2020


ಡಿಕೆ ಶಿವಕುಮಾರ್‌ ಮೇಲೆ ಮೊದಲು ಐಟಿ ದಾಳಿ ನಡೆಸಲಾಯಿತು, ಬಳಿಕ ಇಡಿ ದಾಳಿಯಾಯ್ತು. ಇದೀಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೋದಿಜಿಗೆ ಟ್ರಂಪ್‌ ಹಾಗೂ ನೆತನ್ಯಾಹು ಜೊತೆ ಉತ್ತಮ ಬಾಂಧವ್ಯವಿದೆ. ಮುಂದೆ ಸಿಐಎ ಅಥವಾ ಮೊಸ್ಸಾದ್‌ ದಾಳಿ ಮಾಡುತ್ತದೆಯೇ ಎಂದು ಬ್ರಿಜೇಶ್‌ ಕಾಳಪ್ಪ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ದೇಶವನ್ನು ಮುನ್ನಡೆಸಲು ಬಾರದ ಮೂರ್ಖರು ವಿರೋಧ ಪಕ್ಷಗಳ ದನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದ್ದಾರೆ.

First IT raided @DKShivakumar Ji. Next ED raided, now CBI has raided. Modi Ji has excellent relationship with Trump and Netanyahu.
Will it be CIA and Mossad next?!
Idiots who don't know how to run the nation are trying to silence the opposition!

— Brijesh Kalappa (@brijeshkalappa) October 5, 2020


ನರೇಂದ್ರ ಮೋದಿ ಸರ್ಕಾರ ಸಿಬಿಐ, ಇಡಿ, ಐಟಿ ಮೊದಲಾದ ಇಲಾಖೆಗಳನ್ನು ವಿರೋಧಿಗಳನ್ನು ಹಣಿಯಲು ಬಳಸುತ್ತಿದೆ. ಆದರೆ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಇಂತಹದಕ್ಕೆಲ್ಲಾ ಮಣಿಯುವವರಲ್ಲ ಎಂದು ಹೇಳಿದ ಕರ್ನಾಟಕ ಕಾಂಗ್ರೆಸ್‌ ವಕ್ತಾರ ರಣ್‌ದೀಪ್‌ ಸುರ್ಜೇವಾಲ ಸಿಬಿಐ ಯಡಿಯೂರಪ್ಪ ಸರ್ಕಾರದ ಭ್ರಷ್ಟಾಚಾರದ ಪದರಗಳನ್ನು ಕಂಡುಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

2/2
Let Modi & Yeddyurappa Govts & BJP’s frontal organizations i.e CBI-ED-Income Tax know that Congress workers & leaders will not be cowed down nor bow down before such devious attempts.

Our resolve to fight for people & expose BJP’s maladministration only becomes stronger. https://t.co/AfoJgxOsGl

— Randeep Singh Surjewala (@rssurjewala) October 5, 2020


ಕಾಂಗ್ರೆಸ್‌ ನಾಯಕರ ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಕರ್ನಾಟಕ ವೈದ್ಯಕೀಯ ಶಿಕ್ಷಣಗಳ ಸಚಿವ ಡಾ. ಕೆ ಸುಧಾಕರ್‌, ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಅಮಿತ್ ಶಾ ಅವರಿಗೆ 2 ವರ್ಷ ಗುಜರಾತ್ ಪ್ರವೇಶ ನಿಷೇಧಿಸಿದ್ದಾಗ, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ? ಎಂದು ಪ್ರಶ್ನಿಸಿದ್ದಾರೆ.

ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಅಮಿತ್ ಶಾ ಅವರಿಗೆ 2 ವರ್ಷ ಗುಜರಾತ್ ಪ್ರವೇಶ ನಿಷೇಧಿಸಿದ್ದಾಗ, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ?(1/2) pic.twitter.com/lXyjvMlksd

— Dr Sudhakar K (@mla_sudhakar) October 5, 2020


ಸಿಬಿಐ, ಈಡಿ, ಐಟಿ ಸ್ವತಂತ್ರ ಸ್ವಾಯತ್ತ ಸಂಸ್ಥೆಗಳಾಗಿದ್ದು ಸಹಜ ಕಾನೂನು ಪ್ರಕ್ರಿಯೆ ಪಾಲಿಸುವ ಮೂಲಕ ತಮ್ಮ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದು ಸರಿಯಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಷ್ಟೇ ದೊಡ್ಡವರಾದರೂ ಕಾನೂನಿಗೆ ತಲೆ ಬಾಗಲೇ ಬೇಕು ಎಂದು ಸುಧಾಕರ್‌ ಹೇಳಿದ್ದಾರೆ.

ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ #CBI ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ!!

— Nalinkumar Kateel (@nalinkateel) October 5, 2020


ADVERTISEMENT

ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕೂಡಾ ಕಾಂಗ್ರೆಸ್‌ ಆರೋಪಗಳಿಗೆ ಪ್ರತಿಕ್ರಿಯಿಸಿದ್ದು, ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ CBI ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ ಎಂದು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ.

Tags: ಕಾಂಗ್ರೆಸ್ಡಿಕೆ ಶಿವಕುಮಾರ್‌ಬಿಜೆಪಿಸಿಬಿಐ
Previous Post

ಡಿಕೆಶಿ ಮೇಲೆ ಸಿಬಿಐ ದಾಳಿ: 50 ಲಕ್ಷ ನಗದು ವಶ

Next Post

ಬಿಹಾರ: ಚುನಾವಣಾಧಿಕಾರಿಯಾಗಿ ತೃತೀಯಲಿಂಗಿ ಮಹಿಳೆ ನೇಮಕ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಬಿಹಾರ: ಚುನಾವಣಾಧಿಕಾರಿಯಾಗಿ ತೃತೀಯಲಿಂಗಿ ಮಹಿಳೆ ನೇಮಕ

ಬಿಹಾರ: ಚುನಾವಣಾಧಿಕಾರಿಯಾಗಿ ತೃತೀಯಲಿಂಗಿ ಮಹಿಳೆ ನೇಮಕ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada