ಡ್ರಗ್ಸ್ ಪ್ರಕರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಕೇರಳದ ಕಮ್ಯುನಿಸ್ಟ್ ಪಕ್ಷದ ನಾಯಕ ಕೊಡಿಯೇರಿ ಬಾಲಕೃಷ್ಣನ್ ಅವರ ಮಗ ಬಿನೇಶ್ ಕೊಡಿಯೇರಿಯನ್ನು ಜಾರಿ ನಿರ್ದೆಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಬಿನೇಶ್ ಅವರನ್ನು ಬಂಧಿಸಲಾಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡಾ ಅವರನ್ನು ವಿಚಾರಿಸಲಾಗುವುದು, ಎಂದು ಎಡಿ ಅಧಿಕಾರಿಗಳು ತಿಳಿಸಿದ್ದಾರೆ. ಬಂಧನದ ನಂತರ ಸ್ಥಳೀಯ ನ್ಯಾಯಾಲಯಕ್ಕೆ ಬಿನೇಶ್ ಅವರನ್ನು ಹಾಜರುಪಡಿಸಲಾಗಿದ್ದು, ನಾಲ್ಕು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ನ್ಯಾಯಾಲಯವು ಆದೇಶ ಹೊರಡಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಗುರುವಾರ ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಗೆ ಆಗಮಿಸಲು ಬಿನೇಶ್ ಅವರಿಗೆ ಸಮನ್ಸ್ ನೀಡಲಾಗಿತ್ತು. ಅಲ್ಲಿ ಅವರನ್ನು ತೀವ್ರವಾಗಿ ವಿಚಾರಿಸಿದ ಇಡಿ ಅಧಿಕಾರಿಗಳು, ನಂತರ ಬಂಧಿಸಿದ್ದಾರೆ.
ಕರ್ನಾಟಕದಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಅನೂಪ್ ಎಂ, ರವಿಚಂದ್ರನ್ ಅವರೊಂದಿಗೆ ಬಿನೇಶ್ಗೆ ಲಿಂಕ್ ಇತ್ತೆಂದು ಇಡಿ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. ಅನೂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ರೆಕಾರ್ಡ್ ಕೂಡಾ ಇಡಿಗೆ ಲಭಿಸಿದೆ ಎಂದು ಹೇಳಲಾಗಿದೆ.






