• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತಮ್ಮ ಅಸ್ತಿತ್ವಕ್ಕಾಗಿ ಕುರುಬರನ್ನು ST ಗೆ ಸೇರಿಸುವ ಹೋರಾಟದ ಮುಂಚೂಣಿಗೆ ಬಂದಿದ್ದಾರಾ ಈಶ್ವರಪ್ಪ?

by
November 25, 2020
in ಕರ್ನಾಟಕ
0
ತಮ್ಮ ಅಸ್ತಿತ್ವಕ್ಕಾಗಿ ಕುರುಬರನ್ನು ST ಗೆ ಸೇರಿಸುವ ಹೋರಾಟದ ಮುಂಚೂಣಿಗೆ ಬಂದಿದ್ದಾರಾ ಈಶ್ವರಪ್ಪ?
Share on WhatsAppShare on FacebookShare on Telegram

ರಾಜಕಾರಣಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು, ಸ್ಥಾನಮಾನ‌ ಗಿಟ್ಟಿಸಿಕೊಳ್ಳಲು ಸಮುದಾಯದ ಬಗ್ಗೆ, ಸಮುದಾಯದ ನಾಯಕರ ಬಗ್ಗೆ, ನಾಡು, ನುಡಿಗಳ ಅಸ್ತಿತ್ವದ ಬಗ್ಗೆ ಮಾತನಾಡುತ್ತಾರೆ. ಅವುಗಳನ್ನು ಬಳಸಿಕೊಂಡು ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ ಎಂಬುದಕ್ಕೆ ಈಗ ಇನ್ನೊಂದು ಉದಾಹರಣೆ ಕುರುಬ ಸಮುದಾಯವನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸುವ ಹೋರಾಟ.

ADVERTISEMENT

ಕುರುಬ ಸಮುದಾಯವನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಬೇಕೆಂದು‌ ರಾಜ್ಯ ಕುರುಬರ ಸಂಘ ಮತ್ತು ಸಮುದಾಯದ ಮಠಾಧೀಶರು ಬಹಳ‌ ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೀಗ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.‌‌ ಈಶ್ವರಪ್ಪ ಹೋರಾಟದ ವೇಗ ಹೆಚ್ಚಿಸುವ ಹುಮ್ಮಸ್ಸು ತೋರುತ್ತಿದ್ದಾರೆ.‌ ಈಶ್ವರಪ್ಪ ಅವರ ಈ‌ ಉತ್ಸಾಹ-ಹುಮ್ಮಸ್ಸುಗಳೇ ಈಗ ಅನುಮಾನ ಮೂಡಿಸುವಂತಿವೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆರ್ ಎಸ್ ಎಸ್ ಮತ್ತು ಬಿಜೆಪಿ ಜೊತೆಯೇ ಪಯಣ ಮಾಡಿಕೊಂಡು ಬಂದಿರುವ ಈಶ್ವರಪ್ಪ ‌ಎಂದೂ ಕುರುಬರ ಸಂಘದ ಜೊತೆ ಸಕ್ರೀಯವಾಗಿ ಗುರುತಿಸಿಕೊಂಡವರಲ್ಲ. ಈಗ ದಿಢೀರನೇ ಅವರಿಗೆ ಸಮುದಾಯದ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿರುವುದೇಕೆ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಇಂಥ ಅನುಮಾನ ಹುಟ್ಟಲು ಸಕಾರಣಗಳೂ ಇವೆ.

ಮೊದಲನೆಯದಾಗಿ ಈಶ್ವರಪ್ಪ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟಿದ್ದರು. ಆಗ ಯಡಿಯೂರಪ್ಪ ವಿರುದ್ಧ ಪಕ್ಷದಲ್ಲಿ ತಮ್ಮ ಹಿಡಿತ ಸಾಧಿಸಲು ಕಟ್ಟಿಕೊಂಡಿದ್ದ ವೇದಿಕೆ ಎಂದು ವ್ಯಾಖ್ಯಾನಿಸಲಾಗುತ್ತಿತ್ತು. ಇದಕ್ಕೆ ಪೂರಕವೆಂಬಂತೆ ಶಿವಮೊಗ್ಗದಿಂದ ತಮಗೆ ಟಿಕೆಟ್ ಸಿಗುತ್ತಿದ್ದಂತೆ ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅನ್ನು ಮರೆತರು.

ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ‌ಮಾಡಲಾಗುತ್ತದೆ ಎಂಬ ವಿಚಾರ ಚರ್ಚೆಯಾಗುತ್ತಿದೆ. ಜೊತೆಗೆ ಸಂಪುಟ ಪುನರ್ರಚನೆಯಾದರೆ ಕೆಲವು ಹಿರಿಯ ಸಚಿವರನ್ನು ಕೈಬಿಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಆ ಪಟ್ಟಿಯಲ್ಲಿ ಈಶ್ವರಪ್ಪ ಹೆಸರು ಕೂಡ ಇದೆ. ಹಾಗಾಗಿ ಈಗ ಈಶ್ವರಪ್ಪ ಅವರಿಗೆ ಸಮುದಾಯದ ಸಮಸ್ಯೆ ನೆನಪಾಗಿರಬಹುದು ಎನ್ನಲಾಗುತ್ತಿದೆ.

ಈಶ್ವರಪ್ಪ ಅವರ ನಡೆಯ ಬಗ್ಗೆ ಕುರುಬ ಸಮುದಾಯವನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಬೇಕೆಂದು‌ ಮೊದಲಿಂದಲೂ ಹೋರಾಟ ಮಾಡುತ್ತಿರುವ ಕೆಲವು ನಾಯಕರಿಗೆ ಹಾಗೂ ಸ್ವಾಮೀಜಿಗಳಿಗೆ ಅನುಮಾನಗಳಿವೆ. ಆದರೆ ಹೋರಾಟದ ರಥ ಸ್ವಲ್ಪವಾದರೂ ಮುಂದಕ್ಕೆ ಹೋಗಲಿ ಎಂಬ ಕಾರಣಕ್ಕಾಗಿ ಈಶ್ವರಪ್ಪ ಅವರನ್ನು ಮುಂಚೂಣಿಗೆ ಬರಲು ಅವಕಾಶ ಮಾಡಿಕೊಡಲಾಗಿದೆ. ಅಲ್ಲದೆ ಈಗ ರಾಜ್ಯ ಮತ್ತು ಕೇಂದ್ರ ಎರಡೂ ಕಡೆ ಬಿಜೆಪಿ ಸರ್ಕಾರ ಇರುವುದರಿಂದ ತಮ್ಮ ಹೋರಾಟಕ್ಕೆ ಸ್ವಲ್ಪವಾದರೂ ಜಯ ಸಕ್ಕೀತು ಎಂಬ ಆಶಾಭಾವನೆ ಇದೆ. ಈ ಹೋರಾಟದ ಹೆಸರು ಹೇಳಿಕೊಂಡು ಈಶ್ವರಪ್ಪ ರಾಜಕೀಯವಾಗಿ ಯಶಸ್ಸು ಸಾಧಿಸುವುದಾದರೆ ನಮ್ಮ ಅಭ್ಯಂತರವಿಲ್ಲ. ಜೊತೆಜೊತೆಯಲ್ಲಿ ಸಮುದಾಯವನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಬೇಕೆಂಬ ನಮ್ಮ ಉದ್ದೇಶವೂ ಈಡೇರಬೇಕಷ್ಟೇ ಎಂದು ಹೆಸರನ್ನು ಬಹಿರಂಗೊಳಿಸಲು ಇಚ್ಛಿಸದ ನಾಯಕರೊಬ್ಬರು ‘ಪ್ರತಿಧ್ವನಿ’ಗೆ ಪ್ರತಿಕ್ರಿಯಿಸಿದರು.

ಈಗ ಈಶ್ವರಪ್ಪ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಹೋರಾಟವನ್ನು ಸಮುದಾಯದ ಜನಪ್ರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಆರ್ ಎಸ್ ಎಸ್ ಪ್ರೇರಿತ ಹೋರಾಟ’ ಎಂದು ವ್ಯಾಖ್ಯಾನಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ‘ಲಿಂಗಾಯತ ಕಾರ್ಡ್’ ಬಳಸುತ್ತಿರುವುದರಿಂದ ಇದಕ್ಕೆ ಪ್ರತಿಯಾಗಿ ಆರ್ ಎಸ್ ಎಸ್ ನಾಯಕರು ಈಶ್ವರಪ್ಪ ಅವರನ್ನು ಎತ್ತಿಕಟ್ಟಿದ್ದಾರೆ. ಆ ಮೂಲಕ ಕುರುಬರನ್ನು ಎತ್ತಿಕಟ್ಟಿದ್ದಾರೆ. ಹಿಂದೆ ಕೂಡ ಯಡಿಯೂರಪ್ಪ ಬಗ್ಗೆ ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟಲು, ಹಾಗೂ ತಮ್ಮ ಕಾರ್ಯ ಸಿದ್ದಿಸಿದ ಮೇಲೆ ಸುಮ್ಮನಾಗಲು ಆರ್ ಎಸ್ ಎಸ್ ಕಾರಣ. ಈಗಲೂ ಅದೇ ಕೆಲಸ ಮಾಡಲಾಗುತ್ತಿದೆ ಎಂಬ ಗುಮಾನಿ ಸಮುದಾಯದ ಹಲವು ನಾಯಕರಲ್ಲಿ ಆರ್ ಎಸ್ ಎಸ್ ಮತ್ತು ಈಶ್ವರಪ್ಪ ಮೇಲೆ ಇದೆ. ಆದರೆ ‘ಹೋರಾಟ ಜೀವಂತವಾಗಿರಲಿ’ ಎಂದು ಪ್ರಜ್ಞಾಪೂರ್ವಕವಾಗಿಯೇ ಈಶ್ವರಪ್ಪ ಅವರನ್ನು ಬೆಂಬಲಿಸುತ್ತಿದ್ದಾರೆ. ಈಶ್ವರಪ್ಪ ರಾಜಕೀಯವಾಗಿ ಯಶಸ್ವಿಯಾಗುತ್ತಾರಾ? ಕುರುಬ ಸಮುದಾಯಕ್ಕೆ ಪರಿಶಿಷ್ಟ ಜನಾಂಗದ ಸ್ಥಾನ ಸಿಗುತ್ತಾ ಎಂಬುದನ್ನು ಕಾದುನೋಡಬೇಕು.

Tags: K S EeshwarappaKuruba Communityಈಶ್ವರಪ್ಪಕುರುಬ ಸಮುದಾಯಕೆ ಎಸ್ ಈಶ್ವರಪ್ಪಸಚಿವ ಕೆ ಎಸ್ ಈಶ್ವರಪ್ಪ
Previous Post

ಲವ್ ಜಿಹಾದ್‌: ಮಹಿಳೆಯ ಆಯ್ಕೆಯ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಷಡ್ಯಂತ್ರ

Next Post

ಸಿದ್ದೀಕ್ ಕಪ್ಪನ್ ವಿರುದ್ದ ಅಫಿಡವಿಟ್ ನಲ್ಲಿ ಯಾವುದೇ ಪುರಾವೆ ನೀಡದ UP ಸರ್ಕಾರ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಸಿದ್ದೀಕ್ ಕಪ್ಪನ್ ವಿರುದ್ದ ಅಫಿಡವಿಟ್ ನಲ್ಲಿ ಯಾವುದೇ ಪುರಾವೆ ನೀಡದ UP ಸರ್ಕಾರ

ಸಿದ್ದೀಕ್ ಕಪ್ಪನ್ ವಿರುದ್ದ ಅಫಿಡವಿಟ್ ನಲ್ಲಿ ಯಾವುದೇ ಪುರಾವೆ ನೀಡದ UP ಸರ್ಕಾರ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada