• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಂಡದ ರೂಪದಲ್ಲಿ ಸರ್ಕಾರ ಹಗಲು ದರೋಡೆ ಮಾಡುತ್ತಿದೆ –HD ಕುಮಾರಸ್ವಾಮಿ ಕಿಡಿ

by
October 20, 2020
in ಕರ್ನಾಟಕ
0
ದಂಡದ ರೂಪದಲ್ಲಿ ಸರ್ಕಾರ ಹಗಲು ದರೋಡೆ ಮಾಡುತ್ತಿದೆ –HD ಕುಮಾರಸ್ವಾಮಿ ಕಿಡಿ
Share on WhatsAppShare on FacebookShare on Telegram

ಕೋವಿಡ್-19 ವೇಳೆ ಸಂಕಟಕ್ಕೆ ಒಳಗಾಗಿದ್ದ ಚಾಲಕರಿಗೆ ₹5000 ಕೊಡುವ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಸರ್ಕಾರ ಚಾಲಕರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿತ್ತು, ಆದರೆ ಅನುಷ್ಠಾನಕ್ಕೆ ತರಲಿಲ್ಲ.‌ ಚಾಲಕರಿಗೆ ಪರಿಹಾರ ಕೊಡದೆ ಮಾತು ತಪ್ಪಿದ ಸರ್ಕಾರ ಈಗ ದಂಡ ವಸೂಲಿಯ ನೆಪದಲ್ಲಿ ಚಾಲಕರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಕಳೆದ ಏಳು ತಿಂಗಳಿಂದ ಸಂಪಾದನೆ ಇಲ್ಲದೆ ಹತಾಶರಾಗಿರುವ ರಿಕ್ಷಾ, ಕ್ಯಾಬ್ ಚಾಲಕರಿಗೆ ದಂಡದ ರೂಪದಲ್ಲಿ ಹಗಲು ದರೋಡೆ ಮಾಡುತ್ತಿರುವ ಸರ್ಕಾರ, ಕಠಿಣ ಕ್ರಮದಿಂದ ಬಡ ಚಾಲಕರ ಮೂರುಕಾಸಿನ ಮೇಲೂ ಕೆಂಗಣ್ಣು ಬೀರಿರುವುದು ರಾಕ್ಷಸೀ ಪ್ರವೃತ್ತಿ. ಬಡ ಚಾಲಕರ ಹಿಡಿಶಾಪ ಸರ್ಕಾರಕ್ಕೆ ತಗುಲುವ ಮುನ್ನವೇ ದರ್ಪ ದೌರ್ಜನ್ಯದ ಗದಾಪ್ರಹಾರ ತಕ್ಷಣವೇ ನಿಲ್ಲಿಸಬೇಕು. ಬೆಂದ ಮನೆಯಲ್ಲಿ ಗಳ ಅರಿಯುವ ಕೆಲಸ ಜವಾಬ್ದಾರಿಯುತ ಸರ್ಕಾರಕ್ಕೆ ಶೋಭೆಯಲ್ಲ. ಇಂತಹ ದುಂಡಾವರ್ತಿ ಪ್ರವೃತ್ತಿಯನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಚಾಲಕರ ಪರವಾಗಿ ಮಾತನಾಡಿದ್ದಾರೆ.

ಸರ್ಕಾರ ಚಾಲಕರನ್ನು ಸುಲಿಯುವ ನಿರ್ದಾಕ್ಷಿಣ್ಯ ಕ್ರಮಕ್ಕೆ ತಕ್ಷಣ ತಡೆಯೊಡ್ಡಿ ಔದಾರ್ಯ ತೋರುವ ಮೂಲಕ ಚಾಲಕರಿಗೆ ತುಸು ನೆಮ್ಮದಿ ನೀಡಬೇಕಾದ ತುರ್ತು ಅಗತ್ಯವಿದೆ.
ಎಗ್ಗಿಲ್ಲದೆ ದಂಡ ವಸೂಲಿ ಮಾಡುವ ಪೋಲಿಸರ ಕ್ರಮದಿಂದ ಚಾಲಕರು ನಲುಗಿ ಹೋಗಿದ್ದಾರೆ. ಇಂತಹ ಕಡು ಕಷ್ಟಕಾಲದಲ್ಲಿ ಸರ್ಕಾರ ಮಾನವೀಯತೆಯನ್ನು ಪ್ರದರ್ಶಿಸಬೇಕು ಎಂದು ಆಗ್ರಹಿಸುತ್ತೇನೆ.
8/8

— H D Kumaraswamy (@hd_kumaraswamy) October 20, 2020


ಸೋಂಕು ಮತ್ತು ಲಾಕ್‌ಡೌನ್ ಪರಿಸ್ಥಿತಿಯಿಂದ ಸಂಪಾದನೆ ಇಲ್ಲದೆ ಕಂಗೆಟ್ಟಿರುವ ಆಟೋರಿಕ್ಷಾ ಚಾಲಕರು ಹಾಗೂ ಕ್ಯಾಬ್ ಡ್ರೈವರ್ ಗಳ ಮೇಲೆ ಮುಲಾಜಿಲ್ಲದೆ ದಂಡ ವಸೂಲಿ ಮಾಡುತ್ತಿರುವ ಸಂಚಾರಿ ಪೊಲೀಸರು ಮತ್ತು ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ಬಡ ಚಾಲಕರಿಗೆ ಬರಸಿಡಿಲು ಬಡಿದಂತಾಗಿದೆ. ಮಾಸ್ಕ್ ಧರಿಸಿದವರಿಗೆ ಕಾನೂನು-ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ದಂಡ ವಸೂಲಿ ದಂಧೆಗೆ ಇಳಿದಿರುವುದು ನಾಗರಿಕರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಜಾಗೃತಿ ಮೂಡಿಸಬೇಕಾದ ಪೊಲೀಸರು ವಾಹನ ತಪಾಸಣೆ ಹೆಸರಲ್ಲಿ ಬಡ ಚಾಲಕರನ್ನು ಸುಲಿಯುತ್ತಿರುವ ನಿರ್ದಾಕ್ಷಿಣ್ಯ ವರ್ತನೆ ಸರಿಯಲ್ಲ ಎಂದು ಅವರು ಹೇಳಿದ್ದಾರೆ.

Also Read: ಕಳೆದ ವಾರದಲ್ಲಿ ಮಾಸ್ಕ್ ಧರಿಸದ 11 ಸಾವಿರಕ್ಕೂ ಹೆಚ್ಚು ಜನರಿಗೆ ದಂಡ

ಎಲ್ಲ ದಾಖಲಾತಿಗಳನ್ನು ತೋರಿಸಿದರೂ ಒಂದಲ್ಲಾ ಒಂದು ಕಾನೂನು ತಗಾದೆ ತೆಗೆದು ಚಾಲಕರನ್ನು ಹಗಲು ದರೋಡೆ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಪೊಲೀಸರಿಗೆ ದಂಡ ವಸೂಲಿಗೆ ಟಾರ್ಗೆಟ್ ನೀಡಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಈಗಷ್ಟೇ ರಸ್ತೆಗೆ ಇಳಿದಿರುವ ಆಟೋರಿಕ್ಷಾ ಮತ್ತು ಕ್ಯಾಬ್ ಚಾಲಕರು ಪ್ರಯಾಣಿಕರ ಕೊರತೆಯಿಂದ ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂಥ ಸಂಕಷ್ಟ ಪರಿಸ್ಥಿತಿಯಲ್ಲಿ ಪೊಲೀಸರು ದಂಡ ವಸೂಲಿಯನ್ನೇ ಮೂಲಮಂತ್ರವಾಗಿರಿಸಿ ಕೊಂಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು ಎಂದು ಅವರು ಅಭಿಪ್ರಾಯಿಸಿದ್ದಾರೆ.

ಕಳೆದ ಏಳು ತಿಂಗಳಿಂದ ಸಂಪಾದನೆ ಇಲ್ಲದೆ ಹತಾಶರಾಗಿರುವ ರಿಕ್ಷಾ, ಕ್ಯಾಬ್ ಚಾಲಕರಿಗೆ ದಂಡದ ರೂಪದಲ್ಲಿ ಹಗಲು ದರೋಡೆ ಮಾಡುತ್ತಿರುವ ಸರ್ಕಾರ, ಕಠಿಣ ಕ್ರಮದಿಂದ ಬಡ ಚಾಲಕರ ಮೂರುಕಾಸಿನ ಮೇಲೂ ಕೆಂಗಣ್ಣು ಬೀರಿರುವುದು ರಾಕ್ಷಸೀ ಪ್ರವೃತ್ತಿ.
2/8

— H D Kumaraswamy (@hd_kumaraswamy) October 20, 2020


ADVERTISEMENT

ಸರ್ಕಾರ ತಕ್ಷಣ ಚಾಲಕರನ್ನು ಸುಲಿಯುವ ನಿರ್ದಾಕ್ಷಿಣ್ಯ ಕ್ರಮಕ್ಕೆ ತಡೆಯೊಡ್ಡಿ ಔದಾರ್ಯ ತೋರುವ ಮೂಲಕ ಚಾಲಕರಿಗೆ ತುಸು ನೆಮ್ಮದಿ ನೀಡಬೇಕಾದ ತುರ್ತು ಅಗತ್ಯವಿದೆ. ಎಗ್ಗಿಲ್ಲದೆ ದಂಡ ವಸೂಲಿ ಮಾಡುವ ಪೋಲಿಸರ ಕ್ರಮದಿಂದ ಚಾಲಕರು ನಲುಗಿ ಹೋಗಿದ್ದಾರೆ. ಇಂತಹ ಕಡು ಕಷ್ಟಕಾಲದಲ್ಲಿ ಸರ್ಕಾರ ಮಾನವೀಯತೆಯನ್ನು ಪ್ರದರ್ಶಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Previous Post

ಕಳೆದ ವಾರದಲ್ಲಿ ಮಾಸ್ಕ್ ಧರಿಸದ 11 ಸಾವಿರಕ್ಕೂ ಹೆಚ್ಚು ಜನರಿಗೆ ದಂಡ

Next Post

ಹಬ್ಬದ ವಾತಾವರಣವಿದ್ದರೂ ಎಚ್ಚರಿಕೆಯಿಂದಿರಿ- ದೇಶಕ್ಕೆ ಪ್ರಧಾನಿ ಮೋದಿ ಸಂದೇಶ

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ಹಬ್ಬದ ವಾತಾವರಣವಿದ್ದರೂ ಎಚ್ಚರಿಕೆಯಿಂದಿರಿ- ದೇಶಕ್ಕೆ ಪ್ರಧಾನಿ ಮೋದಿ ಸಂದೇಶ

ಹಬ್ಬದ ವಾತಾವರಣವಿದ್ದರೂ ಎಚ್ಚರಿಕೆಯಿಂದಿರಿ- ದೇಶಕ್ಕೆ ಪ್ರಧಾನಿ ಮೋದಿ ಸಂದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada