• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದಾವೂದ್‌ ತನ್ನ ದೇಶದಲ್ಲಿರುವುದಾಗಿ ಒಪ್ಪಿಕೊಂಡ ಪಾಕಿಸ್ತಾನ

by
August 23, 2020
in ದೇಶ
0
ದಾವೂದ್‌ ತನ್ನ ದೇಶದಲ್ಲಿರುವುದಾಗಿ ಒಪ್ಪಿಕೊಂಡ ಪಾಕಿಸ್ತಾನ
Share on WhatsAppShare on FacebookShare on Telegram

1993 ರ ಮುಂಬೈ ಬಾಂಬ್ ಸ್ಫೋಟದ ಹಿಂದಿನ ಸೂತ್ರಧಾರಿ ಎಂದು ಭಾರತ ಆರೋಪಿಸಿರುವ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾನೆ ಎಂದು ದಶಕಗಳಲ್ಲಿ ಮೊದಲ ಬಾರಿಗೆ ಪಾಕಿಸ್ತಾನ ಒಪ್ಪಿಕೊಂಡಿದೆ. ವಿಶ್ವಸಂಸ್ಥೆಯ ಅನುಮೋದನೆ ನಿರ್ಣಯದಡಿ 88 ಭಯೋತ್ಪಾದಕರನ್ನು ನಿಷೇಧಿಸಿ ಪಾಕಿಸ್ತಾನ ಸರ್ಕಾರ ಆಗಸ್ಟ್ 18 ರಂದು ಹೊರಡಿಸಿದ ಅನುಮತಿ ಆದೇಶದಲ್ಲಿ ದಾವೂದ್‌ ಇಬ್ರಾಹಿಂ ಹೆಸರು ಸೇರಿಸಲಾಗಿದೆ ಎಂದು ನ್ಯೂಸ್ 18.ಕಾಮ್ ವರದಿಯಲ್ಲಿ ತಿಳಿಸಿದೆ.

ADVERTISEMENT

1993 ರ ಮುಂಬೈ ಬಾಂಬ್ ಸ್ಫೋಟದ ನಂತರ ಇಬ್ರಾಹಿಂ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ. ಆತ ಭಾರತದಿಂದ ಪರಾರಿಯಾಗಿ ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾನೆ ಎಂದು ಹೇಳಲಾಗಿತ್ತು. ಕರಾಚಿಯ ದುಬಾರಿ ಕ್ಲಿಫ್ಟನ್ ಪ್ರದೇಶದಲ್ಲಿ ದಾವೂದ್‌ ಇಬ್ರಾಹಿಂ ವಾಸಿಸುತ್ತಿದ್ದಾನೆ ಎಂದು ಭಾರತೀಯ ಅಧಿಕಾರಿಗಳು ಹಲವಾರು ಬಾರಿ ಹೇಳಿದ್ದರು. ಆದರೆ ಪಾಕಿಸ್ತಾನ ತನ್ನ ದೇಶದಲ್ಲಿ ದಾವೂದ್ ಇರುವಿಕೆಯನ್ನು ಪ್ರತಿಬಾರಿಯೂ ನಿರಾಕರಿಸಿತ್ತು.

ಕೊನೆಗೂ, ದಾವೂದ್ ಕರಾಚಿಯ ಕ್ಲಿಫ್ಟನ್ ಪ್ರದೇಶದಲ್ಲಿ ವಾಸಿಸುತ್ತಿದ್ದಾನೆ ಎಂದು ಪಾಕಿಸ್ತಾನ ತನ್ನ ಅನುಮೋದನೆ ಆದೇಶದಲ್ಲಿ ಒಪ್ಪಿಕೊಂಡಿದೆ ಎಂದು ವರದಿ ತಿಳಿಸಿದೆ.

ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ಗ್ರೇ ಪಟ್ಟಿಯಿಂದ ಪಾರಾಗಲು ವಿಶ್ವಸಂಸ್ಥೆಯಲ್ಲಿ ಭಾರತ ಮಂಡಿಸಿದ ದಾವೂದ್ ವಿವರಗಳನ್ನು ಪಾಕಿಸ್ತಾನ ಒಪ್ಪಿಕೊಂಡಿದೆ ಎಂದು ಭಾರತೀಯ ಅಧಿಕಾರಿಗಳು ಹೇಳಿದ್ದಾರೆ. ಗ್ರೇ ಪಟ್ಟಿಯಲ್ಲಿ ಸೇರಿಸಿಕೊಂಡರೆ ಪಾಕಿಸ್ತಾನವು ಅಂತರರಾಷ್ಟ್ರೀಯ ಸಾಲಗಾರರಿಂದ ಸಾಲ ಪಡೆಯುವುದು ಮತ್ತು ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುವುದು ಕಷ್ಟಕರವಾಗುತ್ತದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನಿಷೇಧಿತ 88 ಭಯೋತ್ಪಾದಕ ಗುಂಪುಗಳು ಮತ್ತು ಅವರ ನಾಯಕರಲ್ಲಿ ಪಾಕಿಸ್ತಾನವು 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಮತ್ತು ಜಮಾತ್-ಉದ್-ದವಾ (Jamaat-ud-Dawa) ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಜೈಶ್-ಎ-ಮೊಹಮ್ಮದ್ (Jaish-e-Mohammed) ಮುಖ್ಯಸ್ಥ ಮಸೂದ್ ಅಜರ್ ವಿರುದ್ಧ ನಿರ್ಬಂಧಗಳನ್ನು ವಿಧಿಸಿದೆ. ಭಯೋತ್ಪಾದಕ ಸಂಘಟನೆಗಳ ಪ್ರಮುಖ ವ್ಯಕ್ತಿಗಳಾದ ಜಮಾತ್-ಉದ್-ದವಾ, ಜೈಶ್-ಎ-ಮೊಹಮ್ಮದ್, ತಾಲಿಬಾನ್, ದಾಶ್, ಹಕ್ಕಾನಿ ಗ್ರೂಪ್, ಅಲ್-ಖೈದಾ ಮತ್ತು ಇತರರ ಮೇಲೆ ಅಧಿಸೂಚನೆ ನಿರ್ಬಂಧಗಳನ್ನು ಪ್ರಕಟಿಸಿದೆ ಎಂದು ವರದಿ ತಿಳಿಸಿದೆ.

Tags: ದಾವೂದ್ ಇಬ್ರಾಹಿಂಪಾಕಿಸ್ತಾನಭಾರತವಿಶ್ವಸಂಸ್ಥೆ
Previous Post

ಬಿಹಾರ ಚುನಾವಣೆ; JD(U), BJP ಮತ್ತು LJP ಮೈತ್ರಿ ನಿಶ್ಚಿತ

Next Post

BL ಸಂತೋಷ್ ದೆಹಲಿಯಲ್ಲಿ ಕಡೆಗಣನೆಯಾಗಿದ್ದಾರಾ? ಅಥವಾ ರಾಜ್ಯ ಬಿಜೆಪಿಯಲ್ಲಿ ಕಟೀಲ್‌ಗೆ ಕಿಮ್ಮತ್ತಿಲ್ಲವೇ?

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
BL ಸಂತೋಷ್ ದೆಹಲಿಯಲ್ಲಿ ಕಡೆಗಣನೆಯಾಗಿದ್ದಾರಾ? ಅಥವಾ ರಾಜ್ಯ ಬಿಜೆಪಿಯಲ್ಲಿ ಕಟೀಲ್‌ಗೆ ಕಿಮ್ಮತ್ತಿಲ್ಲವೇ?

BL ಸಂತೋಷ್ ದೆಹಲಿಯಲ್ಲಿ ಕಡೆಗಣನೆಯಾಗಿದ್ದಾರಾ? ಅಥವಾ ರಾಜ್ಯ ಬಿಜೆಪಿಯಲ್ಲಿ ಕಟೀಲ್‌ಗೆ ಕಿಮ್ಮತ್ತಿಲ್ಲವೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada