• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿಯಲ್ಲಿ ಕೇಜ್ರಿವಾಲ್ ಬೆನ್ನಿಗೆ ದೀದಿ..! ಮೋದಿಗೆ ಭೀತಿ..!

by
January 31, 2020
in ದೇಶ
0
ದೆಹಲಿಯಲ್ಲಿ ಕೇಜ್ರಿವಾಲ್ ಬೆನ್ನಿಗೆ ದೀದಿ..! ಮೋದಿಗೆ ಭೀತಿ..!
Share on WhatsAppShare on FacebookShare on Telegram

ದೆಹಲಿಯ 70 ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದೆ. ಮತ್ತೊಮ್ಮೆ ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿ ಅರವಿಂದ್ ಕೇಜ್ರಿವಾಲ್ ಇದ್ದಾರೆ. ಆದ್ರೆ ಲೋಕಸಭಾ ಚುನಾವಣೆಯಲ್ಲಿ ನಡೆದ ಮ್ಯಾಜಿಲ್ ವಿಧಾನಸಭಾ ಚುನಾವಣೆಯಲ್ಲೂ ನಡೆಯಲಿದೆ ಅನ್ನೋ ನಂಬಿಕೆಯಲ್ಲಿ ಮೋದಿ ಅಂಡ್ ಟೀಂ ಕೆಲಸ ಮಾಡುತ್ತಿದೆ. ಬಹುತೇಕ ಸಮೀಕ್ಷೆಗಳು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಮುನ್ನಡೆ ಸಾಧಿಸಲಿದೆ ಅನ್ನೋ ವರದಿ ಕೊಟ್ಟಿರೋದು ಕಮಲ ಪಾಳಯಕ್ಕೆ ನುಂಗಲಾರದ ತುತ್ತಾಗಿದೆ. ಇದೇ ಕಾರಣದಿಂದ ದೆಹಲಿ ಚುನಾವಣೆಯಲ್ಲಿ ದೇಶಭಕ್ತಿಯನ್ನು ದಾಳವಾಗಿ ಉರುಳಿಸಲು ಮುಂದಾಗಿದ್ದ ಬಿಜೆಪಿ ತಂತ್ರಗಾರಿಕೆ ಮಗಾಡೆ ಮಲಗಿದ್ದು, ಕೇಂದ್ರ ಚುನಾವಣಾ ಆಯೋಗ ಪಾಕಿಸ್ತಾನ, ಯುದ್ಧ, ಗುಂಡಿಕ್ಕಿ ಕೊಲ್ಲಿ ಎಂದು ಪ್ರಚೋದನಾತ್ಮಕವಾಗಿ ಭಾಷಣ ಮಾಡಿದ ನಾಯಕರ ಚುನಾವಣಾ ಪ್ರಚಾರ ಮಾಡದಂತೆ ನಿಷೇಧ ಏರಿದೆ. ಈ ಶಾಕ್ ನಡುವೆ ಬಿಜೆಪಿ ನಾಯಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ. ಅದು ಏನಂದ್ರೆ ಪ್ರಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನಜರ್ಿ ಅರವಿಂಗ್ ಕೇಜ್ರಿವಾಲ್ ಬೆನ್ನಿಗೆ ನಿಂತಿದ್ದಾರೆ.

ADVERTISEMENT

ಮಮತಾ ಬ್ಯಾನರ್ಜಿ ಪರವಾಗಿ ತೃಣಮೂಲ ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರ ಡೇರೆಕ್ ಓ ಬ್ರಿಯಾನ್ ದೆಹಲಿಯಲ್ಲಿ ಮಾತನಾಡಿ, ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕರೆ ನೀಡಿದ್ದಾರೆ. ಒಂದು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿರುವ ಓ ಬ್ರಿಯಾನ್, ಕೇವಲ ಅರವಿಂದ್ ಕೇಜ್ರಿವಾಲ್ ಮಾತ್ರವಲ್ಲ ಇಡೀ ಆಮ್ ಆದ್ಮಿ ಪಾರ್ಟಿಯ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದಿದ್ದಾರೆ. ರಾಜೇಂದ್ರ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ರಾಘವ್ ಚಾಂದ್ ಪರ ಪ್ರಚಾರ ನಡೆಸಿದ ಡೇರೆಕ್ ಓ ಬ್ರಿಯಾನ್, ಟ್ವಿಟ್ಟರ್ ಹಾಗು ವಿಡಿಯೋ ಷೇರ್ ಮೂಲಕ ಇಡೀ ದೆಹಲಿ ಮತದಾರರಲ್ಲಿ ಮನವಿ ಮಾಡಿದ್ದಾರೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ, ಜನರಿಗೆ ಕೊಟ್ಟಿದ್ದ ಮಾತುಗಳನ್ನು ಉಳಿಸಿಕೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ದೆಹಲಿ ಮಹತ್ವದ ದಾಪುಗಾಲು ಇಟ್ಟಿದೆ. ವಿದ್ಯುತ್, ಆರೋಗ್ಯ ಕ್ಷೇತ್ರದಲ್ಲೂ ಸರ್ಕಾರ ಮಹತ್ವದ ಕೆಲಸ ಮಾಡಿದೆ. ಮೆಟ್ರೋ ಹಾಗು ಬಸ್ ಸಂಚಾರವನ್ನು ಮಹಿಳೆಯರಿಗೆ ಉಚಿತ ಮಾಡಿದ್ದಾರೆ. 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದ್ದಾರೆ. ಇಷ್ಟೊಂದು ಅಭಿವೃದ್ಧಿ ಕೆಲಸ ಮಾಡಿರುವ ಆಮ್ ಆದ್ಮಿ ಪಾರ್ಟಿಯನ್ನು ಮತ್ತೊಮ್ಮೆ ಅಧಿಕಾರ ತರಬೇಕು ಎಂದು ಮನವಿ ಮಾಡಿದ್ದಾರೆ.

2015ರ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳು ಜಯಬೇರಿ ಬಾರಿಸಿದ್ದರು. ಕೇವಲ ಮೂರು ಸ್ಥಾನಗಳಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಫಲರಾಗಿದ್ದರು. ಈ ಬಾರಿ ತನ್ನದೇ ದಾಖಲೆಯನ್ನು ಅಳಿಸಿ ಹಾಕಲು ಆಮ್ ಆದ್ಮಿ ನಾಯಕರು ತೀಮರ್ಾನ ಮಾಡಿದ್ದಾರೆ. ಇದೇ ಕಾರಣಕ್ಕಾಗಿ ಶಾಸಕರಾಗಿದ್ದ ಕೆಲವರಿಗೆ ಟಿಕೆಟ್ ಕೊಡಲು ನಿರಾಕರಿಸಿದ್ದಾರೆ. ಶಾಸಕರಾಗಿದ್ದ ಸಮಯದಲ್ಲಿ ಮಾಡಿದ ಕೆಲಸಗಳು ಹಾಗು ಅವರ ಕಾರ್ಯ ವೈಖರಿಯನ್ನು ಆಧರಿಸಿ ಟಿಕೆಟ್ ನೀಡಲಾಗಿದೆ. ಜನರ ಬಾಯಲ್ಲೂ ಆಮ್ ಆದ್ಮಿ ಪಾರ್ಟಿ ಗೆಲುವಿನ ಜಪ ನಡೆಯುತ್ತಿದೆ. ಕೇಂದ್ರ ಸಕರ್ಾರ ಅದೆಷ್ಟೇ ದಬ್ಬಾಳಿಕೆ ಮಾಡಿದರೂ ಸಮರ್ಥ ಅಧಿಕಾರ ಕೊಡಲು ನಾವು ಸಫಲರಾಗಿದ್ದೇವೆ ಎಂದು ಅರವಿಂದ್ ಕ್ರೇಜಿವಾಲ್ ಅಬ್ಬರದ ಪ್ರಚಾರ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ ವೇಗಕ್ಕೆ ಕಡಿವಾಣ ಹಾಕಲು ಮೋದಿ ನೇತೃತ್ವದ ಬಿಜೆಪಿ ಪಡೆ ಭಾರೀ ಕಸರತ್ತು ನಡೆಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಚಾಣಕ್ಯ ಖ್ಯಾತಿಯ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿದಂತೆ ಹಲವು ಕೇಂದ್ರ ಸಚಿವರು ದೆಹಲಿಯ ಮೂಲೆಮೂಲೆಯಲ್ಲಿ ಬೀಡುಬಿಟ್ಟು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಇಷ್ಟೆಲ್ಲಾ ಅಬ್ಬರದ ಚುನಾವಣಾ ಪ್ರಚಾರದ ನಡುವೆ ತೃಣಮೂಲ ಕಾಂಗ್ರೆಸ್ ಎಂಟ್ರಿ ಕೊಟ್ಟಿರೋದು ಮಹತ್ವದ ತಿರುವು ನೀಡಲಿದೆಯಾ ಎನ್ನುವುದು ಫೆಬ್ರವರಿ 11ರಂದು ಪ್ರಕಟವಾಗುವ ಫಲಿತಾಂಶದಲ್ಲಿ ಗೊತ್ತಾಗಲಿದೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ನಾವು ಕೇಂದ್ರ ಜಾರಿ ಮಾಡಿರುವ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ ಮಾಡಲ್ಲ ಎಂದಿದ್ದಾರೆ. ಇದೀಗ ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ಜೊತೆಗೆ ನೇರವಾಗಿ ನಿಂತಿರೋದು ಮತಗಳ ಕ್ರೋಢೀಕರಣ ಆಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ದೆಹಲಿಯಲ್ಲಿ ಕಟ್ಟಡ ಕಾಮರ್ಿಕರು, ಕೂಲಿ ಕಾಮರ್ಿಕರು, ಸೇರಿದಂತೆ ಪಶ್ಚಿಮ ಬಂಗಾಳ ಮೂಲದವರು ವಾಸವಿದ್ದಾರೆ. ಜೊತೆಗೆ ಕೇಂದ್ರದ ಸಿಎಎ ವಿರುದ್ಧ ಪ್ರಬಲ ದನಿ ಎತ್ತಿರುವ ನಾಯಕರಲ್ಲಿ ಮಮತಾ ಬ್ಯಾನರ್ಜಿ ಒಬ್ಬರಾಗಿದ್ದಾರೆ. ಹೀಗಾಗಿ ಮುಸ್ಲಿಂ ಮತಗಳು ಹರಿದು ಹಂಚಿ ಹೋಗುವುದನ್ನು ತಡೆದು ಆಮ್ ಆದ್ಮಿ ಪಾರ್ಟಿಯನ್ನು ಸೇರಲಿವೆ ಎನ್ನಲಾಗಿದೆ. ಅರವಿಂದ್ ಕೇಜ್ರಿವಾಲ್ ಉರುಳಿಸಿರುವ ಈ ದಾಳ ಮೋದಿ ಗ್ಯಾಂಗ್ ಭಯ ಹೆಚ್ಚುವಂತೆ ಮಾಡಿದೆ.

Tags: Aravind KejriwalDelhi ElectionDidiModiಅರವಿಂದ ಕೇಜ್ರಿವಾಲ್ದೀದಿದೆಹಲಿಮೋದಿ
Previous Post

ಪುತ್ರನ ಕಾರಣಕ್ಕೆ ಮೆತ್ತಗಾದ ರಾಜಾಹುಲಿ

Next Post

ಅಪಾಯಕಾರಿ ಕರೋನಾಗೆ ಯುನಾನಿ, ಹೊಮಿಯೋಪತಿ ಮದ್ದು

Related Posts

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
0

ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ...

Read moreDetails
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

January 12, 2026
WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

January 12, 2026
Next Post
ಅಪಾಯಕಾರಿ ಕರೋನಾಗೆ ಯುನಾನಿ

ಅಪಾಯಕಾರಿ ಕರೋನಾಗೆ ಯುನಾನಿ, ಹೊಮಿಯೋಪತಿ ಮದ್ದು

Please login to join discussion

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada