• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿ ಗೆಲಲ್ಲು ಮೋದಿ ಕಸರತ್ತು! ರಾಮ ಮಂದಿರ ಟ್ರಸ್ಟ್ ದಾಳ!?

by
February 5, 2020
in ದೇಶ
0
ದೆಹಲಿ ಗೆಲಲ್ಲು ಮೋದಿ ಕಸರತ್ತು! ರಾಮ ಮಂದಿರ ಟ್ರಸ್ಟ್ ದಾಳ!?
Share on WhatsAppShare on FacebookShare on Telegram

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚುನಾವಣಾ ಕಣ ರಂಗೇರಿದೆ. ಈ ಬಾರಿ ದೆಹಲಿ ಗದ್ದುಗೆಯಿಂದ ಅರವಿಂದ್ ಕೇಜ್ರಿವಾಲ್ ಕೆಳಕ್ಕಿಳಿಸಿ ಕಮಲ ಪತಾಕೆ ಹಾರಿಸಬೇಕೆಂದು ಪಣ ತೊಟ್ಟಿರುವ ಅಮಿತ್ ಸೇನೆ ಮಾತಿನ ಯುದ್ಧವನ್ನೇ ಸಾರಿದೆ. ಎಲ್ಲಾ ವರ್ಗದ ಜನರೂ ಕೇಜ್ರಿವಾಲ್ ಪರ ವಾಲಿರುವ ಅಂಶ ಸಮೀಕ್ಷೆಗಳ ಮೂಲಕ ಹೊರ ಬೀಳ್ತಿದ್ದು, ಬಿಜೆಪಿ ಪಕ್ಷದ ಆಂತರಿಕ ಸಮೀಕ್ಷೆಯಲ್ಲೂ ಪಕ್ಷದ ಸಾಧನೆ ಹೇಳುವ ಮಟ್ಟಕ್ಕೆ ಇಲ್ಲ ಎನ್ನಲಾಗಿದೆ. ದೆಹಲಿಯಲ್ಲಿ ಬಹುತೇಕ ವಲಸಿಗರೇ ತುಂಬಿಕೊಂಡಿದ್ದು, ಯಾವುದೇ ಚುನಾವಣಾ ಅಸ್ತçದ ಮೂಲಕ ಜನರನ್ನು ಸೆಳೆಯಲು ಸಾಧ್ಯವಾಗ್ತಿಲ್ಲ. ದೆಹಲಿ ಜನರನ್ನು ಸೆಳೆಯುವ ತಂತ್ರ ಹೆಣೆಯಲು ಭಾರೀ ಕಸರತ್ತು ಮಾಡುತ್ತಿರುವ ಕೇಸರಿ ಪಡೆ ಇದೀಗ ರಾಮ ಮಂದಿರ ದಾಳ ಉರುಳಿಸಿದೆ.

ADVERTISEMENT

ದೆಹಲಿಯಲ್ಲಿ ಬಹುತೇಕ ವಲಸಿಗರೇ ತುಂಬಿಕೊಂಡಿದ್ದಾರೆ. ಜೀವನ ಸಾಗಿಸಲು ಕಷ್ಟಪಟ್ಟು ಕೆಲಸ ಮಾಡುವ ಉದ್ದೇಶದಿಂದ ನಾನಾ ರಾಜ್ಯಗಳಿಂದ ದೆಹಲಿ ಪಟ್ಟಣ ಸೇರಿದ್ದಾರೆ. ಈ ಜನರಿಗೆ ಬೇಕಿರುವುದು ರಸ್ತೆ, ನೀರು, ಸಾರಿಗೆ, ವಿದ್ಯುತ್ ಸೌಲಭ್ಯ. ಅದನ್ನು ಬಿಟ್ಟು ಬೇರೇನು ಘೋಷಣೆ ಮಾಡಿದರೂ ಜನರು ಮತ ಹಾಕುವಂತೆ ಮಾಡುವುದು ಸಾಧ್ಯವಿಲ್ಲ. ಇದೇ ಕಾರಣದಿಂದ ದಿನದಿಂದ ದಿನಕ್ಕೆ ಬಿಜೆಪಿ ಹೊಸ ಹೊಸ ದಾಳ ಉರುಳಿಸುತ್ತಿದೆ. ಇವತ್ತು ಅಮಿತ್ ಷಾ ಹಾಗು ನರೇಂದ್ರ ಮೋದಿ ರಾಮಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ಸ್ಥಾಪಿಸುವ ಹೇಳಿಕೆಯನ್ನು ನೀಡಿದ್ದಾರೆ. ದೆಹಲಿ ಚುನಾವಣೆಗೂ ರಾಮಮಂದಿರ ಟ್ರಸ್ಟ್‍ಗೂ ಎಲ್ಲಿಂದ ಸಂಬಂಧ ಎನ್ನಬಹುದು. ಆದರೆ ದೆಹಲಿಯಲ್ಲಿರುವ ಕೆಳವರ್ಗದ ಜನರನ್ನು ಸೆಳೆಯಲು ಮುಂದಾಗಿರುವ ಅಮಿತ್ ಷಾ ಬಳಗ, 15 ಜನರ ಟ್ರಸ್ಟ್ನಲ್ಲಿ ಓರ್ವ ದಲಿತರನ್ನು ಸೇರ್ಪಡೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ

ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ನೀರು, ಸಾರಿಗೆ, ಶಿಕ್ಷಣ ಕ್ಷೇತ್ರದಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಬೆರಳು ತೋರಿಸದಂತೆ ಕೆಲಸ ಮಾಡಿದೆ. ಮೊದಲ ಎರಡು ವರ್ಷಗಳ ಕಾಲ ಮೋದಿಯನ್ನು ಟೀಕಿಸುತ್ತಿದ್ದ ಅರವಿಂದ್ ಕೇಜ್ರಿವಾಲ್ ದೆಹಲಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಆ ಬಳಿಕ ಜನgರಿಂದ ದೂರವಾಗುತ್ತಿರುವ ಸುಳಿವು ಕಂಡುಕೊಂಡ ಅರವಿಂದ್ ಕೇಜ್ರಿವಾಲ್, ತಾನು ಮಾತನಾಡುವುದಕ್ಕಿಂತ ಕೆಲಸ ಮಾಡುವುದು ಸೂಕ್ತವೆಂದು ಕೇವಲ ಕೆಲಸಕ್ಕಷ್ಟೇ ಆದ್ಯತೆ ನೀಡುತ್ತಾ ಸಾಗಿದರು. ಅರವಿಂದ್ ಕೇಜ್ರಿವಾಲ್ ಮಾಡಿದ ಈ ತಂತ್ರಗಾರಿಗೆ ದೆಹಲಿ ಜನರ ಮನಸ್ಸು ಸೆಳೆದಿದ್ದು, ಈ ಬಾರಿ ಕೂಡ ನರೇಂದ್ರ ಮೋದಿ ಸೇನೆಗೆ ಸೋಲಾಗುವುದು ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ. ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳದಿಂದ ಆಗಮಿಸಿರುವ ಜನರನ್ನು ಜನರನ್ನು ಸೆಳೆಯಲು ಏನೆಲ್ಲಾ ಕಸರತ್ತ ಮಾಡಬೇಕು ಅಷ್ಟನ್ನೂ ಮಾಡಿ ಆಗಿದೆ. ಇದೀಗ ಅಂತಿಮವಾಗಿ ರಾಮ ಮಂದಿರ ಟ್ರಸ್ಟ್‍ನಲ್ಲಿ ದಲಿತರಿಗೆ ಸ್ಥಾನ ನೀಡುವುದಾಗಿ ಘೋಷಣೆ ಮಾಡುವ ಮೂಲಕ ಮತ್ತೊಂದು ದಾಳ ಉರುಳಿಸಿದ್ದಾರೆ ಎನ್ನಲಾಗುತ್ತಿದೆ.

ನವೆಂಬರ್ 9 ರಂದು ಅಯೋಧ್ಯೆ ವಿವಾದದ ಬಗ್ಗೆ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್, ಮುಂದಿನ ಮೂರು ತಿಂಗಳ ಒಳಗಾಗಿ ರಾಮಮಂದಿರ ನಿರ್ಮಾಣದ ಉಸ್ತುವಾರಿಗಾಗಿ ಟ್ರಸ್ಟ್ ಸ್ಥಾಪನೆ ಮಾಡಿ, ಟ್ರಸ್ಟ್ ಮೂಲವೇ ರಾಮಮಂದಿರ ನಿರ್ಮಾಣ ಮಾಡಬೇಕೆಂದು ಸೂಚನೆ ನೀಡಿತ್ತು. ಇದೀಗ ದೆಹಲಿ ಚುನಾವಣೆ ಮುಗಿದ ಮರುದಿನವೇ ಸುಪ್ರೀಂಕೋರ್ಟ್ ಕೊಟ್ಟಿರುವ ಡೆಡ್‌ಲೈನ್ ಮುಕ್ತಾಯವಾಗಲಿದ್ದು, ಅಂದೇ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ಸ್ಥಾಪನೆ ಮಾಡ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ ಅಧಿವೇಶನದಲ್ಲಿ ಘೋಷಣೆ ಮಾಡಿದ್ದಾರೆ. ಈ ಟ್ರಸ್ಟ್‍ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎಂದು ಹೆಸರಿಡಲಾಗುವುದು ಎಂದೂ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ಸ್ಥಾಪನೆಯಾಗಲಿದ್ದು, ಅದರಲ್ಲಿ 15 ಮಂದಿ ಸದಸ್ಯರಿರುತ್ತಾರೆ. ಎಲ್ಲಾ ರೀತಿಯ ನಿರ್ಧಾರಗಳನ್ನು ಕೈಗೊಳ್ಳಲು ಸ್ವಾತಂತ್ರ್ಯ ಇರಲಿದೆ. ಈ ಕಮಿಟಿಯಲ್ಲಿ ಓರ್ವ ದಲಿತ ಇರುತ್ತಾರೆ ಎನ್ನುವ ಮೂಲಕ ದಲಿತ ಕಾರ್ಡ್ ಪ್ಲೇ ಮಾಡಿದ್ದಾರೆ. ಬಿಜೆಪಿಯ ಚುನಾವಣಾ ರಣತಂತ್ರ ಫೆಬ್ರವರಿ 8ರಂದು ನಡೆಯುವ ಮತದಾನದಲ್ಲಿ ವರ್ಕೌಟ್ ಆಗುತ್ತಾ ಎನ್ನುವುದು ಫೆಬ್ರವರಿ 11ರ ಫಲಿತಾಂಶದಲ್ಲಿ ಗೊತ್ತಾಗಲಿದೆ.

Tags: Delhi Assembly ElectionNarendra ModiRam MandirTrustದೆಹಲಿದೆಹಲಿ ಚುನಾವಣೆಮೋದಿರಾಮ ಮಂದಿರರಾಮ ಮಂದಿರ ಟ್ರಸ್ಟ್
Previous Post

ಗೊಂದಲ ಬಗೆಹರಿದರಷ್ಟೇ 13 ಮಂದಿ, ಇಲ್ಲವಾದರೆ 10 ಮಂದಿಗೆ ಮಾತ್ರ ಸಚಿವ ಸ್ಥಾನ

Next Post

ಹೊಸ ದೇಶವನ್ನೇ ನಿರ್ಮಿಸಿದ ನಿತ್ಯಾನಂದನ ಬಂಧನಕ್ಕೆ ವಾರೆಂಟ್!

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
ಹೊಸ ದೇಶವನ್ನೇ ನಿರ್ಮಿಸಿದ ನಿತ್ಯಾನಂದನ ಬಂಧನಕ್ಕೆ ವಾರೆಂಟ್!

ಹೊಸ ದೇಶವನ್ನೇ ನಿರ್ಮಿಸಿದ ನಿತ್ಯಾನಂದನ ಬಂಧನಕ್ಕೆ ವಾರೆಂಟ್!

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada