• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೇಶಾದ್ಯಂತ ಭಯದ ಆಳ್ವಿಕೆ ನಡೆಯುತ್ತಿದೆ; ಕೇಂದ್ರದ ವಿರುದ್ದ ದೀದಿ ಕಿಡಿ

by
July 22, 2020
in ಕರ್ನಾಟಕ
0
ದೇಶಾದ್ಯಂತ ಭಯದ ಆಳ್ವಿಕೆ ನಡೆಯುತ್ತಿದೆ; ಕೇಂದ್ರದ ವಿರುದ್ದ ದೀದಿ ಕಿಡಿ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೆ ಬಿಜೆಪಿಯ ವಿರುದ್ದ ಗುಡುಗಿದ್ದಾರೆ. ದೇಶಾದ್ಯಂತ ಭಯದ ಆಳ್ವಿಕೆ ನಡೆಯುತ್ತಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಜನರಿಗೆ ಮಾತನಾಡಲು ಕೂಡಾ ಭಯ ಹುಟ್ಟಿಸುವಂತಹ ಸನ್ನಿವೇಶ ಎದುರಾಗಿದೆ. ಬಿಜೆಪಿ ಪಶ್ಚಿಮ ಬಂಗಾಳದವರ ಪಕ್ಷವಲ್ಲ. ಏನೇ ಆದರೂ ಅವರು ʼಹೊರಗಿನವರುʼ. ಅವರು ಎಂದೂ ಪಶ್ಚಿಮ ಬಂಗಾಳವನ್ನು ಆಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯಲಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಸೆಮಿಫೈನಲ್‌ ಎಂದೇ ಇದು ಬಿಂಬಿತವಾಗಿದೆ. ಹೀಗಾಗಿ ಆಡಳಿತರೂಢ ತೃಣಮೂಲ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಪ್ರಚಾರ ಈಗಿನಿಂದಲೇ ಶುರುವಾಗಿದೆ. ಕೋವಿಡ್‌ ಸಂಕಷ್ಟದಲ್ಲೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ತಮ್ಮ ತಮ್ಮ ಪಕ್ಷದ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವ ಕೆಲಸ ಭರದಿಂದ ಸಾಗುತ್ತಿದೆ.

ಇದೇ ಹೊತ್ತಿನಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಮಮತಾ ಬ್ಯಾನರ್ಜಿ ಬಿಜೆಪಿಯ ವಿರುದ್ದ ಕೆಂಡಾ ಮಂಡಲವಾಗಿದ್ದಾರೆ. ರಾಜಕೀಯದಲ್ಲಿ ಅನುಭವವಿಲ್ಲದ ಕೆಲವು ಜನರಿದ್ದಾರೆ. ಅವರು ಜನರನ್ನು ಕೊಲ್ಲುವುದು ಹಾಗೂ ಅವರಿಗೆ ಬೆಂಕಿ ಹಚ್ಚುವುದರ ಕುರಿತೇ ಮಾತನಾಡುತ್ತಾರೆ ಎಂದು ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಗೃಹ ಸಚಿವ ಅಮಿತ್‌ ಶಾ ತಮ್ಮ ರ‌್ಯಾಲಿಯಲ್ಲಿ ಬಂಗಾಳದಲ್ಲಿ ಪ್ರತೀ ದಿನ ಅಹಿಂಸಾತ್ಮಕ ಘಟನೆಗಳು ನಡೆಯುತ್ತವೆ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಪ್ರತ್ಯುತ್ತರವಾಗಿ ಉತ್ತರ ಪ್ರದೇಶದೆಡೆಗೆ ಬೊಟ್ಟು ಮಾಡಿ ತೋರಿಸಿರುವ ದೀದಿ ಉತ್ತರ ಪ್ರದೇಶದ ಜಂಗಲ್‌ ರಾಜ್‌ನ ಕಥೆ ಏನು ಎಂದು ಪ್ರಶ್ನಿಸಿದ್ದಾರೆ.

“ಉತ್ತರ ಪ್ರದೇಶದಲ್ಲಿ ಜನರು ಪೊಲೀಸರ ಬಳಿ ಹೋಗಲು ಹೆದರುತ್ತಾರೆ. ಇನ್ನೊಂದು ಕಡೆ ಒಂದೇ ಪ್ರಕರಣದಲ್ಲಿ ಹಲವಾರು ಪೊಲೀಸರು ಪ್ರಾಣ ಕಳೆದುಕೊಳ್ಳುತ್ತಾರೆ,” ಎಂದು ಹೇಳಿದ್ದಾರೆ.

ಇನ್ನು ಕೇಂದ್ರದಿಂದ ಪಶ್ಚಿಮ ಬಂಗಾಳಕ್ಕಾದ ಅನ್ಯಾಯದ ಕುರಿತು ಮಾತನಾಡಿದ ಅವರು, ಪಶ್ಚಿಮ ಬಂಗಾಳಕ್ಕೆ ಸೇರಬೇಕಾದ ಸಂಪನ್ಮೂಲಗಳು ಸರಿಯಾದ ರೀತಿಯಲ್ಲಿ ದೊರಕದಂತೆ ಕೇಂದ್ರ ಅನ್ಯಾಯ ಮಾಡಿದೆ. ಈ ಅನ್ಯಾಯಕ್ಕೆ ಇಲ್ಲಿನ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಗುಡುಗಿದ್ದಾರೆ.

ಒಟ್ಟಿನಲ್ಲಿ, ಎರಡೂ ಪಕ್ಷಗಳು ತಮ್ಮ ತಮ್ಮ ರಾಜಕೀಯ ಚಕ್ರವ್ಯೂಹಗಳನ್ನು ರಚಿಸಲು ಆರಂಭಿಸಿದ್ದು, ಜನರನ್ನು ತಮ್ಮತ್ತ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬಿಹಾರ ಚುನಾವಣೆ ಮುಗಿದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಚುನಾವಣೆಗೂ ಮುಹೂರ್ತ ಒದಗಿ ಬರಲಿದ್ದು ಅದಕ್ಕೂ ಮುಂಚಿತವಾಗಿ ತಮ್ಮ ಪ್ರಚಾರ ಸಭೆಗಳಿಗೆ ಅನುಕೂಲವಾಗುವಂತೆ ಕಾರ್ಯಕರ್ತಲ್ಲಿ ಈಗಿನಿಂದಲೇ ಹುಮ್ಮಸ್ಸು ತುಂಬಿಸುವ ಕೆಲಸ ಭರದಿಂದ ಸಾಗುತ್ತಿದೆ.

Tags: ಪಶ್ಚಿಮ ಬಂಗಾಳಬಿಜೆಪಿ ಆಡಳಿತಮಮತಾ ಬ್ಯಾನರ್ಜಿ
Previous Post

ಕರೋನಾ ಕಾಲದಲ್ಲಿ ಬ್ಯಾಂಕ್ ಖಾಸಗೀಕರಣಕ್ಕೆ ಮೋದಿ ಹೆಜ್ಜೆ

Next Post

ರಾಜಸ್ಥಾನ: ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲಿರುವ ಸರ್ಕಾರ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ರಾಜಸ್ಥಾನ: ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲಿರುವ ಸರ್ಕಾರ

ರಾಜಸ್ಥಾನ: ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲಿರುವ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada