• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಧರ್ಮದ ಹೆಸರಲ್ಲಿ ಪೌರತ್ವ ನೀಡಿದರೆ ದೇಶಕ್ಕೆ ಮಾರಕ: ಆರ್ಚ್ ಬಿಷಪ್

by
January 10, 2020
in ಕರ್ನಾಟಕ
0
ಧರ್ಮದ ಹೆಸರಲ್ಲಿ ಪೌರತ್ವ ನೀಡಿದರೆ  ದೇಶಕ್ಕೆ ಮಾರಕ: ಆರ್ಚ್ ಬಿಷಪ್
Share on WhatsAppShare on FacebookShare on Telegram

ಬಿಜೆಪಿ ಸರ್ಕಾರ ಈಗ ಯಾವುದೇ ಧರ್ಮಗುರುಗಳಾಗಲೀ, ಬುದ್ಧಿಜೀವಿಗಳಾಗಲೀ ಏನೇ ಸಲಹೆಗಳನ್ನು ನೀಡಿದರೂ ಕಿವಿಗೆ ಹಾಕಿಕೊಳ್ಳುವ ಸ್ಥಿತಿಯಲ್ಲಿದ್ದಂತೆ ಕಾಣುತ್ತಿಲ್ಲ. ಧರ್ಮದ ಆಧಾರದಲ್ಲಿ ಜನತೆಯನ್ನು ವಿಭಜಿಸುವುದು ಸಂವಿಧಾನದ ಆಶಯಕ್ಕೆ ಧಕ್ಕೆ ತಂದಂತಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ, ಸರ್ಕಾರ ಮಾಡುತ್ತಿರುವುದು ಅದನ್ನೇ. ಅಧಿಕಾರಕ್ಕೆ ಬಂದ ದಿನದಿಂದಲೇ ಹಿಂದೂ ಮತಗಳನ್ನು ಕ್ರೋಢೀಕರಿಸಲು ಕೈ ಹಾಕಿರುವ ಬಿಜೆಪಿ ಇದಕ್ಕಾಗಿ ಭಾರೀ ಕಸರತ್ತನ್ನು ನಡೆಸುತ್ತಲೇ ಬಂದಿದೆ. ತನ್ನ ಥಿಂಕ್ ಟ್ಯಾಂಕ್ ಆಗಿರುವ ಸಂಘಪರಿವಾರದ ಹಿಡನ್ ಅಜೆಂಡಾವನ್ನು ಒಂದಲ್ಲಾ ಒಂದು ವಿಧದಲ್ಲಿ ಜಾರಿಗೆ ತರಲು ಮುನ್ನಡಿ ಇಡುತ್ತಲೇ ಬಂದಿದೆ.

ADVERTISEMENT

ಇದೀಗ ಮುಸ್ಲಿಂರನ್ನು ಹೊರಗಿಟ್ಟು ಹಿಂದೂ ಸೇರಿದಂತೆ ಆರು ಧರ್ಮಗಳ ಅಕ್ರಮ ವಲಸಿಗರಿಗೆ ಪೌರತ್ವ ನೀಡುವ ವಿವಾದಿತ ಕಾನೂನನ್ನು ತರಲು ಹೊರಟಿದೆ. ಇದಕ್ಕೆ ದೇಶಾದ್ಯಂತ ತೀವ್ರ ವಿವಾದ, ಪ್ರತಿಭಟನೆಗಳು ವ್ಯಕ್ತವಾಗುತ್ತಿವೆ.

ಈ ಮಧ್ಯೆ, ಯಾವುದೇ ಕಾರಣಕ್ಕೂ ಧರ್ಮದ ಆಧಾರದಲ್ಲಿ ಪೌರತ್ವ ನೀಡಬೇಡಿ. ಹಾಗೊಂದು ವೇಳೆ ನೀಡಿದ್ದೇ ಆದಲ್ಲಿ ದೇಶದ ದೊಡ್ಡ ಮಾರಕವಾಗುತ್ತದೆ ಎಂಬ ಅಭಿಪ್ರಾಯ ಮತ್ತು ಆತಂಕಗಳು ಧಾರ್ಮಿಕ ಗುರುಗಳು, ಬುದ್ಧಿಜೀವಿಗಳಿಂದ ಬರುತ್ತಿವೆ.

ಈ ಸಂಬಂಧ ಕಳವಳ ವ್ಯಕ್ತಪಡಿಸಿರುವ ಬೆಂಗಳೂರಿನ ಆರ್ಚ್ ಬಿಷಪ್ ರೆವರಂಡ್ ಡಾ.ಪೀಟರ್ ಮಚಡೋ ಅವರು ರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ರಾಜ್ಯದ ರಾಜ್ಯಪಾಲರಿಗೆ ಪತ್ರವೊಂದನ್ನು ಬರೆದಿದ್ದು, ನೀವು ನಿರ್ದಿಷ್ಟ ಧರ್ಮದ ಅಕ್ರಮ ನಿವಾಸಿಗಳಿಗೆ ಪೌರತ್ವ ನೀಡುವ ಬದಲು ಎಲ್ಲಾ ಧರ್ಮದವರನ್ನೂ ಒಂದೇ ರೀತಿಯಲ್ಲಿ ನೀಡಬೇಕು ಮತ್ತು ಮಾನವೀಯತೆ ಆಧಾರದಲ್ಲಿ ಅವರನ್ನೆಲ್ಲಾ ಪರಿಗಣಿಸಿ ಪೌರತ್ವ ನೀಡಬೇಕೆಂದು ಮನವಿ ಮಾಡಿದ್ದಾರೆ.

ಪೌರತ್ವ ಕಾನೂನಿನ ವಿಚಾರದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಅಹಿತಕರ ಘಟನೆಗಳು ದುರದೃಷ್ಟಕರ. ಇಂತಹ ಬೆಳವಣಿಗೆಗಳು ಆಗಬಾರದು. ಇದನ್ನು ತಹಬದಿಗೆ ತರುವ ಪ್ರಯತ್ನಗಳು ಸರ್ಕಾರದಿಂದ ಆಗಬೇಕು ಮತ್ತು ಎಲ್ಲಾ ಸಮುದಾಯ, ಧರ್ಮಗಳ ಜನರಿಗೂ ಒಂದೇ ರೀತಿಯ ಕಾನೂನನ್ನು ತಂದು ಅದರ ಪ್ರಕಾರ ಇವರೆಲ್ಲರಿಗೂ ಸಮಾನ ಅವಕಾಶವನ್ನು ನೀಡಬೇಕು ಎಂದು ಆರ್ಚ್ ಬಿಷಪ್ ಮನವಿ ಮಾಡಿದ್ದಾರೆ.

ಇದೇ ವೇಳೆ, ದೇಶದ ನಾಗರಿಕರು ಪ್ರತಿಭಟನೆ ಸಂದರ್ಭದಲ್ಲಿ ಶಾಂತಿ ಕಾಪಾಡಬೇಕು. ಶಾಂತಿಯುತ ಪ್ರತಿಭಟನೆ ಮೂಲಕ ನ್ಯಾಯವನ್ನು ಪಡೆಯಬೇಕು. ಎಲ್ಲಿಯೂ ಹಿಂಸಾಚಾರಕ್ಕೆ ಆಸ್ಪದ ನೀಡಬಾರದು ಎಂದೂ ಅವರು ಮನವಿ ಮಾಡಿದ್ದಾರೆ.

ಯಾವುದೇ ಒಂದು ಸಮಸ್ಯೆಗೆ ಹಿಂಸಾಚಾರ ಪರಿಹಾರವಾಗುವುದಿಲ್ಲ. ಯಾವುದೇ ಕಾನೂನು ನ್ಯಾಯಸಮ್ಮತವಾಗಿರಬೇಕು, ಸಮಾನತೆಯನ್ನು ಹೊಂದಿರಬೇಕು, ಪಕ್ಷಪಾತದಿಂದ ಕೂಡಿರಬಾರದು. ಹೀಗಾದಲ್ಲಿ ಮಾತ್ರ ದೇಶ ಪ್ರಗತಿಪಥದೆಡೆಗೆ ಸಾಗಲು ಸಾಧ್ಯವಾಗುತ್ತದೆ ಮತ್ತು ದೇಶದಲ್ಲಿ ಸಾಮರಸ್ಯದ ವಾತಾವರಣ ಮೂಡಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದರೆ ಎಲ್ಲಾ ಅಕ್ರಮ ನಿವಾಸಿಗಳಿಗೆ ಪೌರತ್ವದಂತಹ ಹಕ್ಕು ದೊರೆಯುತ್ತದೆ ಮತ್ತು ಅವರಿಗೆಲ್ಲರಿಗೂ ನ್ಯಾಯ ಸಿಗುತ್ತದೆ. ಇದೆಲ್ಲಕ್ಕಿಂತ ಹೆಚ್ಚಾಗಿ ಸಂವಿಧಾನದ ಪಾವಿತ್ರ್ಯತೆಯನ್ನು ಎತ್ತಿಹಿಡಿದಂತಾಗುತ್ತದೆ. ಯಾವುದೇ ತಾರತಮ್ಯವಿಲ್ಲದೇ, ಎಲ್ಲಾ ಸಮುದಾಯ, ಧರ್ಮದವರಿಗೂ ಸಮಾನತೆಯ ಹಕ್ಕು ನೀಡಿದ ಕೀರ್ತಿಗೆ ಸರ್ಕಾರ ಪಾತ್ರವಾಗುತ್ತದೆ ಎಂಬ ಕಿವಿಮಾತನ್ನು ಆರ್ಚ್ ಬಿಷಪ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಈ ಮನವಿ ಪತ್ರದ ಮೂಲಕ ನಾವು ದೇಶದ ಕ್ರಿಶ್ಚಿಯನ್ ಸಮುದಾಯದವರೆಲ್ಲರೂ ತಾರತಮ್ಯವಿಲ್ಲದ ರೀತಿಯಲ್ಲಿ ಸೌಹಾರ್ದಯುತವಾದ ವಾತಾವರಣ ನಿರ್ಮಾಣ ಮಾಡಿ ದೇಶದ ಸಾರ್ವಭೌಮತೆಯನ್ನು ಎತ್ತಿ ಹಿಡಿಯುವಂತಹ ಕೆಲಸ ಮಾಡುತ್ತೇವೆ ಮತ್ತು ಸಮಾಜದ ಉನ್ನತಿಗೆ ಶ್ರಮವಹಿಸುತ್ತೇವೆ ಎಂದು ವಾಗ್ದಾನ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಧರ್ಮದ ಹೆಸರಿನಲ್ಲಿ ಅನ್ಯಾಯಕ್ಕೆ ಒಳಗಾಗುವ ಆತಂಕದಲ್ಲಿರುವ ಧರ್ಮ, ಪಂಗಡಗಳ ಧ್ವನಿಗೆ ಧ್ವನಿಯಾಗಿ ನಾವು ನಿಲ್ಲಲಿದ್ದೇವೆ ಎಂದು ಧೈರ್ಯ ತುಂಬಿರುವ ಆರ್ಚ್ ಬಿಷಪ್ ಅವರು, ಅವರಿಗೆ ನೆಲದ ಕಾನೂನಿನಡಿಯಲ್ಲಿ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇವೆ ಎಂದು ಅಭಯ ನೀಡಿದ್ದಾರೆ.

Tags: Archbishop Peter MachadoCitizenship Amendment Actcontroversialillegal migrantsmemorandumPrime Minister Narendra Modiprotestsಆರ್ಚ್ ಬಿಷಪ್ ಪೀಟರ್ ಮಚಾಡೊಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಪ್ರತಿಭಟನೆಗಳುಪ್ರಧಾನಮಂತ್ರಿ ನರೇಂದ್ರ ಮೋದಿವಿವಾದಿತ
Previous Post

JNU ಎಂಬ ಆಲೋಚನೆಯ ಹತ್ಯೆ

Next Post

JNU ದಾಳಿ ಕುರಿತು ಅಂಕಣಕಾರ ಶಶಿ ಸಂಪಳ್ಳಿ ಅಭಿಮತ  

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
JNU ದಾಳಿ ಕುರಿತು ಅಂಕಣಕಾರ ಶಶಿ ಸಂಪಳ್ಳಿ ಅಭಿಮತ  

JNU ದಾಳಿ ಕುರಿತು ಅಂಕಣಕಾರ ಶಶಿ ಸಂಪಳ್ಳಿ ಅಭಿಮತ  

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada