• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಧ್ವೇಷ ಭಾಷಣ: ಬಿಜೆಪಿ ಶಾಸಕ ರಾಜಾಸಿಂಗ್‌ ಖಾತೆಯನ್ನು ರದ್ದುಗೊಳಿಸಿದ ಫೇಸ್‌ಬುಕ್

by
September 3, 2020
in ದೇಶ
0
ಧ್ವೇಷ ಭಾಷಣ: ಬಿಜೆಪಿ ಶಾಸಕ ರಾಜಾಸಿಂಗ್‌ ಖಾತೆಯನ್ನು ರದ್ದುಗೊಳಿಸಿದ ಫೇಸ್‌ಬುಕ್
Share on WhatsAppShare on FacebookShare on Telegram

ಭಾರತದಲ್ಲಿ ಫೇಸ್‌ಬುಕ್‌ ರಾಜಕೀಯ ಪಕ್ಷಗಳೊಳಗೆ ಪಕ್ಷಪಾತ ನಡೆಸುತ್ತಿದೆ ಎಂಬ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲೇ ಸಾಮಾಜಿಕ ಜಾಲತಾಣ ದಿಗ್ಗಜ ಸಂಸ್ಥೆ ಫೇಸ್‌ಬುಕ್‌ ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾರ ಫೇಸ್‌ಬುಕ್‌ ಖಾತೆಯನ್ನು ವಜಾಗೊಳಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಟಿ. ರಾಜಾ ಸೇರಿದಂತೆ ಹಲವು ಹಿಂದುತ್ವ ಹಾಗೂ ಬಿಜೆಪಿ ನಾಯಕರ ಧ್ವೇಷ ಭಾಷಣವನ್ನು ತಡೆಹಿಡಿಯದಂತೆ ಫೇಸ್‌ಬುಕ್‌ ಭಾರತದ ಎಕ್ಸಿಕ್ಯೂಟಿವ್‌ ಅಂಖಿ ದಾಸ್‌ ಹೇಗೆ ಪ್ರಭಾವ ಬೀರಿದ್ದರು ಎಂಬ WSJಯ (The Wall Street Journal) ತನಿಖಾ ವರದಿ ಬಂದ ಬಳಿಕ ಫೇಸ್‌ಬುಕ್‌ ಈ ಕ್ರಮ ತೆಗೆದುಕೊಂಡಿದೆ.

“ನಮ್ಮ ಪ್ಲ್ಯಾಟ್‌ಫಾರ್ಮ್‌ನಲ್ಲಿ ಧ್ವೇಷ ಹರಡುವುದನ್ನು ನಿಷೇಧಿಸುತ್ತೇವೆ ಹಾಗಾಗಿ ನಾವು ರಾಜಾ ಸಿಂಗ್ ಅವರನ್ನು ಫೇಸ್‌ಬುಕ್‌ನಿಂದ ನಿಷೇಧಿಸಿದ್ದೇವೆ, ಅವರು ನಮ್ಮ ನೀತಿ& ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಸಂಭಾವ್ಯ ಉಲ್ಲಂಘಿಸುವವರನ್ನು ಮೌಲ್ಯಮಾಪನ ಮಾಡುವ ಪ್ರಕ್ರಿಯೆಯು ವಿಸ್ತಾರವಾಗಿದೆ ಮತ್ತು ಇದು ಈ ನಿರ್ಧಾರಕ್ಕೆ ಬರಲು ನಮ್ಮನ್ನು ಕರೆದೊಯ್ಯಿತು” ಎಂದು ಫೇಸ್‌ಬುಕ್ ವಕ್ತಾರರು WSJ ಗೆ ತಿಳಿಸಿದ್ದಾರೆ.

ವರದಿಯ ಪ್ರಕಾರ ಆತನಿಗೆ ಸೇರಿರುವ 5 ಖಾತೆಗಳನ್ನು ಫೇಸ್‌ಬುಕ್‌ ವಜಾಗೊಳಿಸಿದೆ, ಅಲ್ಲದೆ ಇನ್ಸ್ಟಗ್ರಾಮ್‌ ಖಾತೆಯನ್ನೂ ರದ್ದುಗೊಳಿಸಲಾಗಿದೆ.

ತೆಲಂಗಾಣದ ಘೋಷ್‌ಮಹಲ್‌ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ಮೂಲಕ ಪ್ರತಿನಿಧಿಸುವ‌ ರೌಡಿಶೀಟರ್ ರಾಜಾಸಿಂಗ್‌ ಮೇಲೆ 60 ಕ್ಕಿಂತಲೂ ಹೆಚ್ಚು ಪ್ರಕರಣಗಳಿವೆ. ಅದರಲ್ಲಿ ಬಹುತೇಕ ಪ್ರಕರಣಗಳಿರುವುದು ಧ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ.

ಧ್ವೇಷ ಭಾಷಣಕ್ಕೆ ಕುಖ್ಯಾತಿ ಈ ರಾಜಾ ಸಿಂಗ್

ಜುಲೈ 2018 ರಲ್ಲಿ ಟಿ ರಾಜಾ ಸಿಂಗ್ ರೋಹಿಂಗ್ಯಾ ಮುಸ್ಲಿಮರನ್ನು “ಕೀಟಗಳು” ಎಂದು ಕರೆದಿದ್ದರು.“ರೋಹಿಂಗ್ಯಾ ಮುಸ್ಲಿಮರನ್ನು ತಮ್ಮ ದೇಶಕ್ಕೆ ವಾಪಸ್ ಕಳುಹಿಸಬೇಕು. ಇಂತಹ ಕೀಟಗಳನ್ನು ಭಾರತದಲ್ಲಿ ಉಳಿಸಿಕೊಳ್ಳುವ ಅಗತ್ಯವಿಲ್ಲ. ಹಿಂತಿರುಗದ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿಗಳನ್ನು ಗುಂಡಿಕ್ಕಿ ಕೊಲ್ಲಬೇಕು.” ಎಂದಿದ್ದರು.

Also Read: ಫೇಸ್ಬುಕ್-ಬಿಜೆಪಿ ಒಳ ಒಪ್ಪಂದ: ತನಿಖೆಯ ಬೇಡಿಕೆಯನ್ನು ಮತ್ತೆ ಮುಂದಿಟ್ಟ ಕಾಂಗ್ರೆಸ್

2018 ಜನವರಿಯಲ್ಲಿ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತ್‌ ಬಿಡುಗಡೆಯಾದ ಸಂಧರ್ಭದಲ್ಲಿ ಚಲನಚಿತ್ರ ಮಂದಿರಗಳನ್ನು ಬೆಂಕಿ ಹಾಕಿ ನಾಶಗೊಳಿಸುವಂತೆ ಪ್ರಚೋದನಾತ್ಮಕ ಭಾಷಣ ಮಾಡಿದ್ದರು.

2017 ರಲ್ಲಿ, ಪಶ್ಚಿಮ ಬಂಗಾಳದಲ್ಲಿ ಕೋಮು ಸಂಘರ್ಷದ ಮಧ್ಯೆ, ರಾಜಾ ಸಿಂಗ್ ಅವರು 2002 ರ ಗುಜರಾತ್ ಗಲಭೆಯನ್ನು ಪ್ರಸ್ತಾಪಿಸಿದ್ದರು ಮತ್ತು ಹಿಂದೂಗಳು ಹಿಂದೆಯೇ ಮಾಡಿದ ರೀತಿಯಲ್ಲಿ ಪ್ರತಿಕ್ರಿಯಿಸುವಂತೆ ಕರೆ ನೀಡಿದ್ದರು. ಗುಜರಾತ್‌ ಗಲಭೆಯ ಸಂಧರ್ಭದಲ್ಲಿ ಅಲ್ಲಿನ ಹಿಂದೂಗಳು ಮಾಡಿದಂತೆ ಬಂಗಾಳದ ಹುಲಿಗಳು ಮಾಡಬೇಕು ಎಂದು ಉದ್ರೇಕಕಾರಿ ಕರೆ ನೀಡಿದ್ದರು.

ವಿಶೇಷವೆಂದರೆ, ರಾಜಾ ಸಿಂಗ್ ಅವರು ಇತ್ತೀಚೆಗೆ ಅಧಿಕೃತ ಫೇಸ್‌ಬುಕ್ ಪುಟವನ್ನು ಹೊಂದಿಲ್ಲ ಎಂದು ಹೇಳಿಕೊಂಡಿದ್ದು, ಅವರ ಖಾತೆಯನ್ನು 2018 ರಲ್ಲಿ “ಹ್ಯಾಕ್ ಮಾಡಲಾಗಿದೆ ಮತ್ತು ನಿರ್ಬಂಧಿಸಲಾಗಿದೆ” ಎಂದು ಸೇರಿಸಿದ್ದಾರೆ

Also Read: ಬಿಜೆಪಿ ಗೆಲುವು ಸಮಾಜವಾದಿ ರಾಷ್ಟ್ರ ಎಂಬ ಕಳಂಕ ತೊಳೆಯಿತು ಎಂದಿದ್ದ ಅಂಖೀ ದಾಸ್!

Tags: ತೆಲಂಗಾಣಧ್ವೇಷ ಭಾಷಣಫೇಸ್ಬುಕ್ಬಿಜೆಪಿರಾಜಾ ಸಿಂಗ್‌
Previous Post

ವಲಸೆ ಕಾರ್ಮಿಕರನ್ನು ತಲುಪದ ಆತ್ಮನಿರ್ಭರ್ ಭಾರತ ಯೋಜನೆ

Next Post

ಹಿಂದುತ್ವ ಕಾರ್ಯಕರ್ತರ ಕೇಸ್‌ ವಾಪಸ್:‌ ʼಹೋರಾಟಗಾರʼರಿಗೆ ಹೊಸ ವ್ಯಾಖ್ಯಾನ ನೀಡಿದ ಸರ್ಕಾರ

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಹಿಂದುತ್ವ ಕಾರ್ಯಕರ್ತರ ಕೇಸ್‌ ವಾಪಸ್:‌ ʼಹೋರಾಟಗಾರʼರಿಗೆ ಹೊಸ ವ್ಯಾಖ್ಯಾನ ನೀಡಿದ ಸರ್ಕಾರ

ಹಿಂದುತ್ವ ಕಾರ್ಯಕರ್ತರ ಕೇಸ್‌ ವಾಪಸ್:‌ ʼಹೋರಾಟಗಾರʼರಿಗೆ ಹೊಸ ವ್ಯಾಖ್ಯಾನ ನೀಡಿದ ಸರ್ಕಾರ

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada