• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಕಲಿ ವಿಲ್‌ ಸೃಷ್ಟಿ ಆರೋಪ: ಶ್ರೀನಿವಾಸಲು ನಾಯ್ಡು ವಿರುದ್ದ ಪ್ರಕರಣ ದಾಖಲು

by
September 27, 2020
in ಕರ್ನಾಟಕ
0
ನಕಲಿ ವಿಲ್‌ ಸೃಷ್ಟಿ ಆರೋಪ: ಶ್ರೀನಿವಾಸಲು ನಾಯ್ಡು ವಿರುದ್ದ ಪ್ರಕರಣ ದಾಖಲು
Share on WhatsAppShare on FacebookShare on Telegram

ಲಿಕ್ಕರ್ ದೊರೆ ಆದಿಕೇಶವಲು ಮಗ ಶ್ರೀನಿವಾಸಲು ನಾಯ್ಡು ವಿರುದ್ದ ನ್ಯಾಯಾಲಯಕ್ಕೆ ವಂಚನೆ ಆರೋಪ ಕುರಿತು ಬೆಂಗಳೂರಿನ ಹಲಸೂರ್ ಗೇಟ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಮ್ಮದೇ ಕುಟುಂಬದ ಇನ್ನೊಬ್ಬರ ಹೆಸರಿನಲ್ಲಿ ಇದ್ದ ಕೋಟ್ಯಂತರ ರೂಪಾಯಿ ಬೆಲೆಬಾಳೋ ಆಸ್ತಿಯನ್ನು ನಕಲಿ ವಿಲ್ ಸೃಷ್ಟಿ ಮಾಡಿ ಅದನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ ಕೆ ಆರ್ ರೋಹಿತ್ ಎಂಬುವವರು ದೂರು ದಾಖಲಿಸಿದ್ದಾರೆ.

ಶ್ರೀನಿವಾಸಲು ನಾಯ್ಡು ನ್ಯಾಯಾಲಯಕ್ಕೆಸಲ್ಲಿಸಿದ ವಿಲ್‌ ನಕಲಿ ಎಂಬುದನ್ನ ದೃಢೀಕರಿಸಲು ಟ್ರೂತ್ ಲ್ಯಾಬ್ ರಿಪೋರ್ಟ್‌ ಅನ್ನು ಕೂಡ ಲಗತ್ತಿಸಲಾಗಿದೆ. ಆ ಟ್ರೂತ್ ಲ್ಯಾಬ್ ರಿಪೋರ್ಟ್ ನಲ್ಲಿ ಶ್ರೀನಿವಾಸಲು ನಾಯ್ಡು ಅವರ ವಿಲ್ ನಕಲಿ ಎಂದು ಹೇಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೇ ಶ್ರೀನಿವಾಸಲು ನಾಯ್ಡು ವಿರುದ್ಧ ಹೆಚ್.ಎ.ಎಲ್.ಪೋಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿದೆ.

ಈಗಾಗಲೇ ಶ್ರೀನಿವಾಸುಲು ನಾಯ್ಡು ಅವರ ವಿರುದ್ದ ಹಲವು ಪ್ರಕರಣಗಳು ದಾಖಲಾಗಿದ್ದು, ವೈಟ್ ಪೀಲ್ಡ್ ನ ಮಂಜುಳಾ ಎಂಬುವರು ಕೊಲೆ ಆರೋಪವನ್ನೂ ಮಾಡಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು 29ನೇ ಎಸಿಎಂಎಂ ನ್ಯಾಯಲಯದ ಸೂಚನೆ ನೀಡಿದೆ.

ಪ್ರಕರಣದ ಎರಡನೇ ಆರೋಪಿ ದಾಮೋದರ್‌

ಶ್ರೀನಿವಾಸ್ ವಿರುದ್ದ 2007 ರಲ್ಲಿ ಚಿತ್ತೂರ್ ಟೌನ್ ಪೋಲೀಸ್ ಠಾಣೆಯಲ್ಲಿ ಬಾಂಬ್ ಬ್ಲಾಸ್ಟ್ ಹಾಗು ಕೊಲೆ ಯತ್ನದ ಕೇಸ್ ವಿಚಾರಣೆ ಹಂತದಲ್ಲಿದೆ.

ಇನ್ನು 2016 ಅಕ್ಟೋಬರ್ ತಿಂಗಳಿನಲ್ಲಿ ಇವರದೇ ಕುಟುಂಬದ ಕಲ್ಪಜ ಹಾಗು ಶ್ರೀನಿವಾಸ್ ಒಡೆತನದ ವೈದೇಹಿ ಕಾಲೇಜ್ ಮೇಲೆ ಐ ಟಿ ರೇಡ್ ಆಗಿ 60 ಕೋಟಿ ಹಣ ಹಾಗು ನೂರಾರು ಕೋಟಿ ಬೆಲೆ ಬಾಳೋ ಅಕ್ರಮ ಆಸ್ತಿ ಪತ್ರಗಳು ದೊರಕಿದ್ದವು. ಈ ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ. ರಘುನಾಥ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ವೈದೇಹಿ ಕಾಲೇಜು ಒಡೆತನದ ಕಲ್ಪಜಾ ಅವರ ವಿರುದ್ಧವು ಸಾಕ್ಷಿನಾಶದ ಕುರಿತು ಕ್ರಿಮಿನಲ್ ಕೇಸ್ ಕೂಡ ದಾಖಲಾಗಿದೆ.

ಆರೋಪಿ ಶ್ರೀನಿವಾಸಲು ನಾಯ್ಡು ಆರ್ಥಿಕವಾಗಿ ಹಾಗು ರಾಜಕೀಯವಾಗಿ ತುಂಬ ಪ್ರಭಾವಶಾಲಿಯಾಗಿದ್ದು ಇಡೀ ಪ್ರಕರಣವನ್ನು ಮುಚ್ಚಿ ಹಾಕೋ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಗುಮಾನಿ ದಟ್ಟವಾಗಿ ಹರಡಿದೆ. ದೂರುದಾರರು ಹೇಳುವ ಪ್ರಕಾರ, ಪ್ರಭಾವಿ ರಾಜಕಾರಣಿಗಳ ಹಾಗೂ ಕೆಲವು ಅಧಿಕಾರಿಗಳ ಬೆಂಬಲದೊಂದಿಗೆ ತಮ್ಮ ವಿರುದ್ದದ ಕೇಸುಗಳ ಸರಿಯಾದ ವಿಚಾರಣೆ ನಡೆಸದಂತೆ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ನಮಗೆ ನ್ಯಾಯ ಸಿಗುವುದೋ ಇಲ್ಲವೋ ಎಂಬ ಗೊಂದಲದಲ್ಲಿದ್ದೇವೆ, ಎಂದು ಹೇಳಿದ್ದಾರೆ.

Tags: srinivaulu naiduನಕಲಿ ವಿಲ್‌ ಸೃಷ್ಟಿ ಆರೋಪಶ್ರೀನಿವಾಸಲು ನಾಯ್ಡು
Previous Post

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ: ಈ ಬಾರಿಯಾದರೂ ವ್ಯವಸ್ಥಿತ ಹೋರಾಟ ನಡೆಸುವುದೇ ಕಾಂಗ್ರೆಸ್‌?

Next Post

ʼಟೈಮ್ಸ್ 2020ʼಯ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಶಾಹೀನ್ ಭಾಗ್‌ನ ಬಿಲ್ಕಿಸ್

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ʼಟೈಮ್ಸ್ 2020ʼಯ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಶಾಹೀನ್ ಭಾಗ್‌ನ ಬಿಲ್ಕಿಸ್

ʼಟೈಮ್ಸ್ 2020ʼಯ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಶಾಹೀನ್ ಭಾಗ್‌ನ ಬಿಲ್ಕಿಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada