• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಗರದಲ್ಲಿ ನಿಷೇಧಾಜ್ಞೆ ಜಾರಿ; ಫ್ಲೈ ಓವರ್ ಮೇಲೆ ವಾಹನ ಸಂಚಾರ ನಿಷೇಧ

by
December 31, 2020
in ಕರ್ನಾಟಕ
0
ನಗರದಲ್ಲಿ ನಿಷೇಧಾಜ್ಞೆ ಜಾರಿ; ಫ್ಲೈ ಓವರ್ ಮೇಲೆ ವಾಹನ ಸಂಚಾರ ನಿಷೇಧ
Share on WhatsAppShare on FacebookShare on Telegram

ಕೋವಿಡ್-19 ಹಾಗೂ ರೂಪಾಂತರಿ ಕರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ನಗರದಲ್ಲಿ ಸಾರ್ವಜನಿಕ ಹೊಸವರ್ಷಾಚರಣೆಗೆ ನಿರ್ಬಂಧ ವಿಧಿಸಲಾಗಿದೆ. ಕೆಲವೆಡೆ ಸಂಚಾರ ನಿಷೇಧ ವಲಯಗಳನ್ನಾಗಿ ಮಾಡಲಾಗಿದೆ.

2020 ಡಿ31 ಮಧ್ಯಾಹ್ನ 12ಗಂಟೆ ಯಿಂದ 2021 ಜ1 ಬೆಳಿಗ್ಗೆ 6 ರವರೆಗೆ ಸೆಕ್ಷನ್ 144 ಜಾರಿ ಮಾಡುವುದಾಗಿ ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ತಿಳಿಸಿದ್ದರು. ಇದೀಗ ಸಂಚಾರ ನಿಯಮದಲ್ಲಿಯೂ ಕೆಲವೊಂದು ಕಟ್ಟುನಿಟ್ಟಿನ ನಿರ್ಬಂಧ ಹೇರಿದ್ದು, ನಗರದ ಫ್ಲೈ ಓವರ್‌ಗಳನ್ನು ಮುಚ್ಚುವುದಾಗಿ ಇಲಾಖೆ ತಿಳಿಸಿದೆ.

ಸಾರ್ವಜನಿಕರ ಗಮನಕ್ಕೆ: –

ಬೆಂಗಳೂರಿನಲ್ಲಿ ನಿಷೇಧಾಜ್ಞೆ ಆದೇಶದಲ್ಲಿ ಬದಲಾವಣೆಯಾಗಿದ್ದು, ಸೆಕ್ಷನ್ 144 ಈ ದಿನ ಮಧ್ಯಾಹ್ನ 12.00 ಗಂಟೆಯಿಂದ ಪ್ರಾರಂಭವಾಗಿ ಜನವರಿ 01, ಬೆಳಿಗ್ಗೆ 06.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ನಿಯಮ/ನಿರ್ಬಂಧಗಳು ಈ ಮೊದಲಿನ ಆದೇಶದಂತೆ ಅನ್ವಯವಾಗುತ್ತವೆ.
ಸಾರ್ವಜನಿಕರು ದಯವಿಟ್ಟು ಸಹಕರಿಸಬೇಕಾಗಿ ವಿನಂತಿ.

— Kamal Pant, IPS (@CPBlr) December 31, 2020


ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾ ನಗರದಲ್ಲಿ ಸಂಚಾರ ನಿಷೇಧ ವಲಯಗಳನ್ನಾಗಿ ಮಾಡಲಾಗಿದೆ. ಅನವಶ್ಯಕ ಸಂಚಾರ, ಬೈಕ್ ಸುತ್ತಾಟ, ವ್ಹಿಲಿಂಗ್ ಮಾಡುವಂತಿಲ್ಲ ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಒಂದು ವೇಳೆ ನಿಯಮಗಳನ್ನು ಮೀರಿದರೆ ದಂಡ ವಿಧಿಸುವುದರ ಜೊತೆಗೆ ಐಪಿಸಿ ಸೆಕ್ಷನ್ 188 ಹಾಗೂ ಎನ್ಡಿಎಮ್ಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ. ಹೊಸವರ್ಷಾಚರಣೆ ವೇಳೆ ಜಾರಿಗೆ ತಂದ ನಿಯಮಗಳನ್ನು ಪಾಲಿಸಬೇಕೆಂದು ಸಾರ್ವಜನಿಕರಲ್ಲಿ ವಿನಂತಿ ಮಾಡಿದೆ.

-ಆದೇಶವನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸುವುದಲ್ಲದೆ, IPC ಸೆಕ್ಷನ್ 188, ಹಾಗೂ NDMA ಕಾಯಿದೆಯಡಿ ಪ್ರಕರಣ ದಾಖಲಿಸಲಾಗುವುದು.

ಈ ಮೂಲಕ ಸಾರ್ವಜನಿಕರಲ್ಲಿ ಮಾರ್ಗಸೂಚಿಯನ್ನು ಪಾಲಿಸಬೇಕಾಗಿ ವಿನಂತಿ.

(5/5)

— Kamal Pant, IPS (@CPBlr) December 30, 2020


ADVERTISEMENT

ಡಿ. 31ರ ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಮೈಕೋ ಲೇಔಟ್, ಏರ್ಪೋರ್ಟ್, ವೈಟ್ ಫೀಲ್ಡ್, ಹೆಚ್ಎಸ್ಆರ್ ಲೇಔಟ್, ಹಲಸೂರು, ಕೆ.ಆರ್.ಪುರ, ಪುಲಿಕೇಶಿನಗರ, ಬಾಣಸವಾಡಿ, ಆಡುಗೋಡಿ, ಮೈಸೂರು ರಸ್ತೆ, ಬಸವನಗುಡಿ, ಜಯನಗರ, ಮಲ್ಲೇಶ್ವರಂ, ಬನಶಂಕರಿ, ಕೆಂಗೇರಿ, ಯಶವಂತಪುರ, ಹೆಬ್ಬಾಳ, ಹಾಗೂ ಪೀಣ್ಯ ಪ್ರದೇಶಗಳಲ್ಲಿರುವ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಹೊಸ ವರ್ಷ ಸಂಭ್ರಮಾಚರಣೆ ನಿಷೇಧವಿದ್ದರೂ ಗುಂಪು ಸೇರುವುದು ಹಾಗೂ ಫ್ಲೈ ಓವರ್ ಮೇಲೆ ವೀಲಿಂಗ್ ಮತ್ತು ಡ್ರ್ಯಾಗ್ ರೇಸ್ ಮಾಡುವ ಸಾಧ್ಯತೆ ಹೆಚ್ಚಿರುವುದರಿಂದ ಡಿ. 31ರ ರಾತ್ರಿ 10 ರಿಂದ ಜ.1 ಬೆಳಗ್ಗೆ 6 ಗಂಟೆ ವರೆಗೆ ನಗರದ ಒಟ್ಟು 44 ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುತ್ತದೆ.

ಪೊಲೀಸ್ ವಾಹನ ಹಾಗೂ ಕರ್ತವ್ಯ ನಿರತ ತುರ್ತು ವಾಹನಗಳನ್ನು ಹೊರತುಪಡಿಸಿ ಎಂಜಿ ರಸ್ತೆ, ಚರ್ಚ್ ರಸ್ತೆ ಮ್ಯುಸಿಯಮ್ ರಸ್ತೆ, ರೆಸ್ಟ್ ಹೌಸ್ ಪಾರ್ಕ್ ರಸ್ತೆ ಮತ್ತು ರೆಸಿಡೆನ್ಸಿ ರಸ್ತೆ ಸೇರಿ ಟ್ರಿನಿಟಿ ರಸ್ತೆ, ಇನ್ಪ್ರೆಟ್ರಿ ರಸ್ತೆ , ಬ್ರಿಗೆಡ್ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಿ ಆದೇಶಿಸಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಕಮಲ್‌ ಪಂತ್, ಚಾಲ್ತಿಯಲ್ಲಿರುವ COVID-19 ಪರಿಸ್ಥಿತಿ ಮತ್ತು ರೂಪಾಂತರಗೊಂಡಿರುವ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ, ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದಿದ್ದಾರೆ.

ʼ

Tags: some rules have been implemented by the police department during the new year celebrate
Previous Post

ಫಿಜರ್ ಲಸಿಕೆ ಪಡೆದ ಮೇಲ್ ನರ್ಸ್ ಗೆ ಕೋವಿಡ್ ಸೋಂಕು ದೃಢ!

Next Post

ಗ್ರಾಮೀಣ ಭಾಗದ ಪಕ್ಷದ ಕಾರ್ಯಕರ್ತರಿಗೆ ನಾನು ಚಿರಋಣಿ – ಹೆಚ್ ಡಿ ಕುಮಾರಸ್ವಾಮಿ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಗ್ರಾಮೀಣ ಭಾಗದ ಪಕ್ಷದ ಕಾರ್ಯಕರ್ತರಿಗೆ  ನಾನು ಚಿರಋಣಿ – ಹೆಚ್ ಡಿ ಕುಮಾರಸ್ವಾಮಿ

ಗ್ರಾಮೀಣ ಭಾಗದ ಪಕ್ಷದ ಕಾರ್ಯಕರ್ತರಿಗೆ ನಾನು ಚಿರಋಣಿ – ಹೆಚ್ ಡಿ ಕುಮಾರಸ್ವಾಮಿ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada