• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನನ್ನ ಹೇಳಿಕೆಯನ್ನು ಹಿಂದೂ ವಿರೋಧಿ ಎಂಬಂತೆ ತಿರುಚಲಾಗಿದೆ- ಸಿದ್ದರಾಮಯ್ಯ

by
August 12, 2020
in ಕರ್ನಾಟಕ
0
ನನ್ನ ಹೇಳಿಕೆಯನ್ನು ಹಿಂದೂ ವಿರೋಧಿ ಎಂಬಂತೆ ತಿರುಚಲಾಗಿದೆ- ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಾಂತ್ಯದಲ್ಲಿ ಭುಗಿಲೆದ್ದ ಗಲಭೆ ಗೋಲಿಬಾರ್‌ ನಡೆದು, ಸೆಕ್ಷನ್-144‌ ವಿಧಿಸುವಲ್ಲಿಗೆ ತಲುಪಿದೆ. ಪೊಲೀಸ್‌ ಸ್ಟೇಷನ್‌, ವಾಹನಗಳು ಸೇರಿದಂತೆ ಪೋಲಿಸರ ಮೇಲೆ ಗಲಭೆಕೋರರು ದಾಂಧಲೆ ನಡೆಸಿದ್ದಾರೆ. ಗಲಭೆಕೋರರ ಈ ಕೃತ್ಯಕ್ಕೆ ಆಡಳಿತ ಪಕ್ಷದ, ವಿರೋಧ ಪಕ್ಷದ ರಾಜಕೀಯ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡಾ ಘಟನೆಯನ್ನು ಖಂಡಿಸಿದ್ದು, ಗಲಭೆಗೆ ಕಾರಣರಾದವರನ್ನು ಬಂಧಿಸಿ ಎಂದು ಟ್ವೀಟ್‌ ಮಾಡಿದ್ದರು. ಅಲ್ಲದೆ ಶಾಂತಿಗೆ ಕರೆ ನೀಡಿರುವ ಸಿದ್ದರಾಮಯ್ಯ, “ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ.” ಎಂದು ಟ್ವೀಟ್‌ ಮಾಡಿದ್ದರು.

ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ.

ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ.#Kavalbyrasandra
1/4

— Siddaramaiah (@siddaramaiah) August 12, 2020


ಇದು ಸಿದ್ಧರಾಮಯ್ಯ ವಿರೋಧಿಗಳಿಗೆ ಆಹಾರವಾಗಿದೆ. ಅವರ ಹೇಳಿಕೆಯನ್ನು ಹಿಂದೂ ವಿರೋಧಿ ಎಂಬಂತೆ ಬಿಂಬಿಸಲಾಗುತ್ತಿದೆ. ಹಿಂದೂಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನಿನ್ನೆ ನಡೆದ ಘಟನೆ ಹಿಂದೂ ಮುಸಲ್ಮಾನರದ್ದು ಅಲ್ಲ. ಇದು ಯಾವಾಗ ಕೋಮು ಗಲಭೆಯ ಬಣ್ಣ ಪಡೆಯಿತು? ಅನಗತ್ಯವಾಗಿ ಹಿಂದೂಗಳನ್ನು ಎಳೆದು ತರುತ್ತಿರುವುದು ಯಾಕಾಗಿ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಇಲ್ಲೂ ಮುಸ್ಲಿಮರ ಓಲೈಕೆಗೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಹೀಗೆ ಬೆಂಗಳೂರಿನ ಗಲಭೆಯ ನಡುವೆ ಸಿದ್ದರಾಮಯ್ಯ ಟ್ವೀಟ್‌ ಬೇರೆಯೇ ಆಯಾಮ ಪಡೆದುಕೊಂಡಿತ್ತು. ವಿವಾದ ಇನ್ನಷ್ಟು ಉಲ್ಬಣಗೊಳ್ಳುತ್ತದೆ ಎಂದರಿತ ಸಿದ್ದರಾಮಯ್ಯ, ತಮ್ಮ ಹೇಳಿಕೆಯ ಉದ್ದೇಶವನ್ನು ಸ್ಪಷ್ಟಡಿಸಿದ್ದಾರೆ. ಹಿಂದೂ ಮುಸ್ಲಿಮರು ಕೂಡಿ ಶಾಂತಿಯಿಂದ ಬಾಳಬೇಕೆಂದು ನನ್ನ ಮಾತಿನ ತಾತ್ಪರ್ಯ ಎಂದು ಸಮಜಾಯಿಷಿ ನೀಡಿದ್ದಾರೆ.

“ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು‌ ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ. ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‌‌ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?ʼʼ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು‌ ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ.

ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‌‌ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ?

ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?

— Siddaramaiah (@siddaramaiah) August 12, 2020


ನಾವು ಹಿಂದುಗಳು ಸಂಯಮದಿಂದಲೇ ಇದ್ದೇವೆ..
ಹಾನಿ ಆಗಿರುವುದು ಹಿಂದುಗಳಿಗೆ..

ಹಾನಿ ಮಾಡಿದವರು, ನಿಮ್ಮ ಬಾಂಧವರು..

ಯಾವನೋ ಹಾಕಿದ ಒಂದು ಕಿತ್ತೋಗಿರೋ ಪೋಸ್ಟ್ ಗೆ ಈ ರೀತಿ ದಾಂಧಲೇ ನಡೆಸುತ್ತಾರೆ ಅಂದ್ರೆ, ಅದು ಅವರ ಮನಸ್ಥಿತಿ ‌ಮತ್ತು ಬೆನ್ನ ಹಿಂದೆ ನಿಂತಿರುವವರ ಕುಮ್ಮಕ್ಕು ಕಾರಣ..

— ಚೈತ್ರ ದೇವರಾಜ್ (@chaithradevraj) August 12, 2020


ADVERTISEMENT
Tags: ಬೆಂಗಳೂರುಬೆಂಗಳೂರು ಗಲಭೆಸಿದ್ದರಾಮಯ್ಯ
Previous Post

ಬೆಂಗಳೂರು ಮಿಡ್‌ನೈಟ್‌ ಗೋಲಿಬಾರ್‌ಗೆ ನಿಖರ ಕಾರಣ ಏನು..?

Next Post

ರಾಹುಲ್ ಗಾಂಧಿ ಮಾತುಕತೆ ರಾಜಸ್ಥಾನ ಕಾಂಗ್ರೆಸ್ ಭವಿಷ್ಯವನ್ನು ಸುಭದ್ರಗೊಳಿಸಲಿದೆಯೇ?

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ರಾಹುಲ್ ಗಾಂಧಿ ಮಾತುಕತೆ ರಾಜಸ್ಥಾನ ಕಾಂಗ್ರೆಸ್ ಭವಿಷ್ಯವನ್ನು ಸುಭದ್ರಗೊಳಿಸಲಿದೆಯೇ?

ರಾಹುಲ್ ಗಾಂಧಿ ಮಾತುಕತೆ ರಾಜಸ್ಥಾನ ಕಾಂಗ್ರೆಸ್ ಭವಿಷ್ಯವನ್ನು ಸುಭದ್ರಗೊಳಿಸಲಿದೆಯೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada