• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಾಲೆ ಕಾಮಗಾರಿಯಲ್ಲಿ ಅವ್ಯವಹಾರ: ತನಿಖೆ ಆದೇಶವನ್ನು ತಡೆಹಿಡಿದ BSY ಸರ್ಕಾರ

by
December 27, 2020
in ಕರ್ನಾಟಕ
0
ನಾಲೆ ಕಾಮಗಾರಿಯಲ್ಲಿ ಅವ್ಯವಹಾರ: ತನಿಖೆ ಆದೇಶವನ್ನು ತಡೆಹಿಡಿದ BSY ಸರ್ಕಾರ
Share on WhatsAppShare on FacebookShare on Telegram

ಒಂದರ ಮೇಲೆ ಒಂದರಂತೆ ಸದಾ ಹಗರಣಗಳಿಂದ ಸುದ್ದಿಯಾಗುತ್ತಿರುವ ಬಿ ಎಸ್ ಯಡಿಯೂರಪ್ಪ ಸರ್ಕಾರದ ಅವ್ಯವಹಾರಗಳ ಪಟ್ಟಿಗೆ ಇನ್ನೊಂದು ಪ್ರಕರಣ ಸೇರ್ಪಡೆಯಾಗಿದೆ. ಅವ್ಯವಹಾರಗಳ ಕುರಿತಂತೆ ನಡೆಯಬೇಕಿದ್ದ ತನಿಖೆಗೆ ತಡೆ ನೀಡಿ ಆದೇಶ ನೀಡಿರುವ ಮಾಹಿತಿ ಇದೀಗ ʼಪ್ರತಿಧ್ವನಿʼಗೆ ಲಭ್ಯವಾಗಿದೆ.

ADVERTISEMENT

ಹೇಮಾವತಿ ಎಡದಂಡೆ ನಾಲೆ ಆಧುನೀಕರಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತಂತೆ ನಡೆಯಬೇಕಿದ್ದ ತನಿಖೆಯ ಆದೇಶಕ್ಕೆ ಯಡಿಯೂರಪ್ಪ ಅವರ ಸರ್ಕಾರ ಅಧಿಕಾರ ವಹಿಸಿಕೊಂಡ 25 ದಿನಗಳೊಳಗಾಗಿಯೇ ತಡೆ ನೀಡಿ ಆದೇಶಿದೆ.

ದಿನಾಂಕ 08/11/2017 ರಲ್ಲಿ ಹೇಮಾವತಿ ಎಡದಂಡೆ ನಾಲೆ (ಸಾಹುಕಾರ್ ಚೆನ್ನಯ್ಯ ನಾಲೆ) ಆಧುನೀಕರಣಕ್ಕೆಂದು ಸುಮಾರು 809 ಕೋಟಿ ಮೊತ್ತದ ಯೋಜನೆಗೆ ಸರ್ಕಾರ ಅನುಮೋದನೆ ನೀಡಿ ಆದೇಶಿಸಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆದರೆ, ಈ ನಾಲಾ ಅಭಿವೃದ್ಧಿ ಕಾಮಗಾರಿಯನ್ನು ಸುಮಾರು ಸಾವಿರ ಕೋಟಿ ವೆಚ್ಚದಲ್ಲಿ ಆಧುನೀಕರಣ ಮಾಡಿದ್ದು, ಈ ಕಾಮಗಾರಿಯಲ್ಲಿ ನೂರಾರು ಕೋಟಿಗಳ ಬೋಗಸ್ ಬಿಲ್ ಪಾವತಿ ಮಾಡಿ ಅವ್ಯವಹಾರ ಎಸಗಲಾಗಿದೆಯಂದು, ಗುತ್ತಿಗೆದಾರರಿಗೆ ಬೋಗಸ್ ಬಿಲ್ ಪಾವತಿ ಮಾಡಿ ಅವ್ಯವಹಾರ ನಡೆಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಗಳನ್ನು ಕೈಗೊಳ್ಳಬೇಕೆಂದು, ಈ ಕುರಿತು ಉನ್ನತ ತನಿಖಾ ಸಂಸ್ತೆಯಿಂದ ತನಿಖೆ ನಡೆಸುವಂತೆ ʼಹೇಮಾವತಿ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿʼ ಅಧ್ಯಕ್ಷ ಎಂ ಕೆ ಶೇಷೇಗೌಡ ಅವರು ಸರ್ಕಾರಕ್ಕೆ ಮನವಿ ಅರ್ಜಿ ಸಲ್ಲಿಸಿದ್ದರು.

ಅಲ್ಲದೆ, 2018 ರಲ್ಲಿ ಇದೇ ಕಾಮಗಾರಿಗಳಿಗೆ ಸಂಬಂಧಿಸಿದಂತೆ, ಮಾಜಿ ಸಚಿವ ಎ ಮಂಜು ಅವರು ಕೂಡಾ ಸರ್ಕಾರಕ್ಕೆ ಪತ್ರ ಬರೆದು ತಪ್ಪಿತಸ್ಥ ಅಧಿಕಾರಿಗಳನ್ನು ಗುರುತಿಸಿ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಗುತ್ತಿಗೆದಾರರಿಗೆ ಪಾವತಿ ಮಾಡಿರುವ ಹೆಚ್ಚಿನ ಮೊತ್ತವನ್ನು ಕಾನೂನಿನ ಪ್ರಕಾರ ಹಿಂಪಡೆಯುವಂತೆ ಒತ್ತಾಯಿಸಿದ್ದರು.

ನಾಲೆ ಅಭಿವೃದ್ಧಿ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಸತ್ಯಾಸತ್ಯತೆಯನ್ನು ಪತ್ತೆಹಚ್ಚಲು 2019 ರ ಜುಲೈ 9ರಂದು ಜಲಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಎಸ್ ಜೆ ಚನ್ನಬಸಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಮೂರು ತಿಂಗಳೊಳಗೆ ತನಿಖೆ ನಡೆಸಿ ತನಿಖಾ ವರದಿಯನ್ನು ಸಲ್ಲಿಸಲು ಸೂಚಿಸಿತ್ತು.

ಈ ಆದೇಶ ನೀಡುವ ವೇಳೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಮೈತ್ರಿ ಸರ್ಕಾರ ಆಡಳಿತವಿತ್ತು. ಬಳಿಕ, ಅಂದರೆ 2019ರ ಜುಲೈ 23 ರಂದು ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಿತು. ಇದರ ನಂತರ ಅಧಿಕಾರ ಹಿಡಿದ ಬಿ ಎಸ್ ಯಡಿಯೂರಪ್ಪ ಸರ್ಕಾರ ಅಂದರೆ, ಜುಲೈ 26 ರಂದು ರಚನೆಯಾದ ಸರ್ಕಾರ ಆಗಸ್ಟ್ 13 ರಂದು ಈ ತನಿಖಾ ಆದೇಶವನ್ನು ತಡೆಹಿಡಿದಿದೆ. ಹೊಸ ಸರ್ಕಾರ ರಚನೆಯಾಗಿ 25 ದಿನಗೊಳಗೆ ತರಾತುರಿಯಲ್ಲಿ ತನಿಖೆಯನ್ನು ತಡೆಹಿಡಿದಿರುವುದು ಸಾಕಷ್ಟು ಗುಮಾನಿಗೆ ಕಾರಣವಾಗಿದೆ.

ತನಿಖೆಗೆ ನೀಡಿದ ಆದೇಶ

ಅವ್ಯವಹಾರ ನಡೆದಿದೆ ಎನ್ನಲಾದ ಕಾಮಗಾರಿಗೆ ಅನುಮೋದನೆ ನೀಡಿರುವುದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಧಿಕಾರವಧಿಯಲ್ಲಿ. ಅವ್ಯವಹಾರದ ಕುರಿತು ತನಿಖೆಗೆ ಆದೇಶಿಸಿರುವುದು ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಅಧಿಕಾರವಧಿಯಲ್ಲಿ. ಹಾಗೂ ತನಿಖೆಗೆ ತಡೆ ನೀಡಿರುವುದು ಯಡಿಯೂರಪ್ಪ ಅವರ ಸರ್ಕಾರ!

ಸದಾ ಒಂದಿಲ್ಲೊಂದು ಹಗರಣಗಳ ಸುಳಿಯಲ್ಲಿ ಸಿಲುಕುತ್ತಿರುವ ಯಡಿಯೂರಪ್ಪ ಸರ್ಕಾರ, ಆಡಳಿತದಲ್ಲಿ ತೋರುತ್ತಿರುವ ತನ್ನ ಅಪಾರದರ್ಶಕ ನಿಲುವಿನಿಂದಾಗಿ ಮತ್ತೆ ಮತ್ತೆ ನಂಬಿಕೆ ಕಳೆದುಕೊಳ್ಳುತ್ತಿದೆ. ಕಾಮಗಾರಿ ಬಿಲ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಯನ್ನು ತರಾತುರಿಯಲ್ಲಿ ಸ್ಥಗಿತಗೊಳಿಸಿದ ಕಾರಣವೇನು? ಇದರ ಹಿಂದೆ ಯಾರೆಲ್ಲಾ ಕೈವಾಡವಿದೆ? ಎನ್ನುವುದು ಬೆಳಕಿಗೆ ಬರಬೇಕಿದೆ. ಹೀಗೆ ತನಿಖೆಯೊಂದನ್ನು ಹಳ್ಳಹಿಡಿಸುವ ಸರ್ಕಾರದ ಪ್ರಯತ್ನ ಪ್ರತಿಪಕ್ಷಗಳ ಗಮನಕ್ಕೆ ಬಂದಿಲ್ಲವೇ? ಬಂದಿದ್ದರೆ ಯಾಕೆ ಸುಮ್ಮನಾಗಿವೆ? ಎನ್ನುವುದು ಕೂಡಾ ಪ್ರಶ್ನಾರ್ಹ.

ತನಿಖೆಯನ್ನು ತಡೆಹಿಡಿದು ನೀಡಿದ ಆದೇಶ
Tags: BSY ಸರ್ಕಾರಎಚ್ ಡಿ ಕುಮಾರಸ್ವಾಮಿತನಿಖೆ ಆದೇಶಯಡಿಯೂರಪ್ಪಸಿದ್ದರಾಮಯ್ಯ
Previous Post

ಟಿಕ್ರಿ ಗಡಿ ರಣಭೂಮಿ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು!

Next Post

ಶಾಂತಿಯುತ ಪ್ರತಿಭಟನಾಕಾರರನ್ನು ಭಯೋತ್ಪಾದಕರಂತೆ ಬಿಂಬಿಸಲಾಗಿದೆ -HS ದೊರೆಸ್ವಾಮಿ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಶಾಂತಿಯುತ ಪ್ರತಿಭಟನಾಕಾರರನ್ನು ಭಯೋತ್ಪಾದಕರಂತೆ ಬಿಂಬಿಸಲಾಗಿದೆ -HS ದೊರೆಸ್ವಾಮಿ

ಶಾಂತಿಯುತ ಪ್ರತಿಭಟನಾಕಾರರನ್ನು ಭಯೋತ್ಪಾದಕರಂತೆ ಬಿಂಬಿಸಲಾಗಿದೆ -HS ದೊರೆಸ್ವಾಮಿ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada