• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನೆರೆಯಲ್ಲಿ ತೇಲಿ ಬಂದ ಒಂದು ವ್ಯಕ್ತಿಚಿತ್ರ – ಗಂಗಾವಳಿ ನಾಗಮ್ಮ

by
October 13, 2019
in ಕರ್ನಾಟಕ
0
ನೆರೆಯಲ್ಲಿ ತೇಲಿ ಬಂದ ಒಂದು ವ್ಯಕ್ತಿಚಿತ್ರ - ಗಂಗಾವಳಿ ನಾಗಮ್ಮ
Share on WhatsAppShare on FacebookShare on Telegram

ನೆರೆ ಹಾವಳಿಯ ಸಂತ್ರಸ್ತರಿಗೆ ನೆರವಾಗಲು ಹೋದ ಸಾಮಾಜಿಕಕಾರ್ಯಕರ್ತರೊಬ್ಬರ ಕಣ್ಣಿಗೆ ಕಂಡ ಬಡಜೀವ ನಾಗಮ್ಮ. ಎತ್ತರದ ದಿಬ್ಬದ ಗೂಡಿನ ನಾಗಮ್ಮನನ್ನು ನದಿ ಪ್ರವಾಹದಲ್ಲಿ ಮುಳುಗಿಸಲಿಲ್ಲ, ದಾಖಲೆಗೆ ಗೊತ್ತೇ ಇಲ್ಲದ ಬದುಕನ್ನು ಸರಕಾರದ ಯೋಜನೆಗಳು ಕಣ್ಣೆತ್ತಿ ಕೂಡಾ ನೋಡಲಿಲ್ಲ. ಬಡವೆಯ ಬದುಕನ್ನು ಒಮ್ಮೆ ಓದೋಣ ಬನ್ನಿ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಗಂಗಾವಳಿ ನದಿ ತಟದ ಗ್ರಾಮಗಳು ಮುಳುಗಿದ್ದವು. ಸಾವಿರಾರು ಕುಟುಂಬಗಳು ಮನೆಕಳಕೊಂಡು ದುಃಖದ ಮಡಿಲಲ್ಲಿದ್ದವು. ಬೆಂಗಳೂರಿನ ಇನ್ಪೋಸಿಸ್‍ನ ಶ್ರೀಮತಿ ಸುಧಾಮೂರ್ತಿ ಲಾರಿಗಟ್ಟಲೇ ಪರಿಹಾರ ಸಾಮಗ್ರಿ ಅಲ್ಲಿಗೆ ಕಳಿಸಿದ್ದರು. ನೆರೆ ಸಂತ್ರಸ್ಥರನ್ನು ಗುರುತಿಸಿ ನಿಜವಾಗಿ ತೊಂದರೆಗೆ ಸಿಲುಕಿದವರನ್ನು ಗುರುತಿಸಿ ವಸ್ತು ತಲುಪಿಸುವುದು ಸವಾಲಿನ ಕೆಲಸವೇ! ಹಿರಿಯ ಸಾಮಾಜಿಕ ಕಾರ್ಯಕರ್ತರೊಬ್ಬರು ಶ್ರದ್ಧೆಯಿಂದ ಈ ಕಾರ್ಯ ಮಾಡುತ್ತಿದ್ದರು. ನೋವುಂಡ ನೂರಾರು ಜನರಿಗೆ ಪರಿಹಾರ ಸಾಮಗ್ರಿ ತಲುಪಿಸುತ್ತಿದ್ದ ಹೊತ್ತು ಎತ್ತರದ ದಿಬ್ಬದ ಮೇಲೆ ನಿಂತು ಹಾಲಕ್ಕಿ ವೃದ್ದೆಯೊಬ್ಬರು ಇವನ್ನೆಲ್ಲ ಸುಮ್ಮನೆ ನೋಡುತ್ತ ನಿಂತಿದ್ದರು.

ಹಣ್ಣಾದ ಕೂದಲು, ಕೃಶವಾದ ಶರೀರ, ಅವಳ ಬಟ್ಟೆ ನೋಡಿದ ಕಾರ್ಯಕರ್ತರು ‘ ಅಮ್ಮಾ, ಹೊಳೆಯಿಂದ ನಿಮಗ್ ತೊಂದರೆ ಆಗಿದಾ?’ ಕೇಳಿದರು. ‘ ನಂಗೆ ಎನೂ ತೊಂದರೆ ಆನಿಲ್ಲ, ಏನೂ ಕೂಡೂದು ಬ್ಯಾಡ್ರ ’ ಕೈ ಬೀಸುತ್ತ ಹೇಳಿದಳು. ಕೈಯಲ್ಲಿ ಬಂಗಾರದ ಬಳೆಯಿಟ್ಟವರೂ ನೆರೆ ನೆರವಿಗೆ ಕೈಚಾಚಿದ್ದು ನೋಡಿದವರಿಗೆ ಯಾಕೋ ಇವರ ದೇಹ-ಭಾಷೆ ನೋಡಿ ಅನುಮಾನ ಶುರುವಾಯ್ತು.

ನಿಧಾನಕ್ಕೆ ಒಬ್ಬರೇ ಅವಳ ಮನೆ ಹುಡುಕಿ ಹೊರಟರು. ಅದು ಶಿರೂರು ಗ್ರಾಮ ಗುಡ್ಡದ ಮೇಲೆ ಗೇರುಗಿಡ, ಕಾರೆಕಂಟಿ ದಾಟುತ್ತ ಲ್ಯಾಟ್ರೈಟ್ ಕಲ್ಲು ದಿಬ್ಬಗಳನ್ನು ಏರಿಳಿಯುತ್ತ ಏದುಸಿರು ಬಿಡುತ್ತ ನಡೆಯುವ ಕುರುಹು ಇಲ್ಲದ ಕಾಲು ದಾರಿ. ಅಲ್ಲಿರುವವಳು ಶಿರೂರು ಪುರುಷ ಗೌಡನ ಅಕ್ಕ ನಾಗಮ್ಮ, ಇಲ್ಲೇ ಸನಿಹದ ದೇವು ಗೌಡನಿಗೆ ಲಗ್ನ ಮಾಡಿಕೊಟ್ಟಿದ್ದರು. ಅವ ಇನ್ನೊಂದು ಮದುವೆಯಾಗಿ ಮಕ್ಕಳಿಲ್ಲದ ಇವಳನ್ನು ತ್ಯಜಿಸಿದ್ದರಿಂದ ದಿಕ್ಕಿಲ್ಲದೇ ಅನಾಥಳಾದಳು. ಕೊನೆಗೆ ಅಣ್ಣನ ಮನೆಯ ಹಿಂಭಾಗದ ದಿಬ್ಬದಲ್ಲಿ ಕಲ್ಲು, ತೆಂಗಿನ ಹೆಡೆ, ಪ್ಲಾಸ್ಟಿಕ್ ತುಂಡು ಬಳಸಿ ಗೂಡು ಸಿದ್ಧಪಡಿಸಿ ಬದುಕತೊಡಗಿದಳು.

ನಿತ್ಯ ನಾಲ್ಕೈದು ಕಿಲೋ ಮೀಟರ್ ನಡೆದು ಕಾಡಿನಿಂದ ಕಟ್ಟಿಗೆ ಹೊರೆ ತಂದು ಬದುಕುವ ಶ್ರಮಜೀವಿ ಆಶ್ರಮದ ನಾಗಮ್ಮನ ಪರಿಚಯ ಇಷ್ಟು ಹೇಳಿದರೆ ಪೂರ್ತಿಯಾಗುವುದಿಲ್ಲ. ಕತ್ತಲು ತುಂಬಿದ ಇವಳ ಗೂಡಿಗೆ ಬಾಗಿಲಿಲ್ಲ, ನಾಲ್ಕಾರು ಪಾತ್ರೆ, ಸ್ನಾನಕ್ಕೆ ನೀರು ಕಾಯಿಸಲು ಮಣ್ಣಿನ ಗಡಿಗೆ ಇವಳ ಆಸ್ತಿ. ಮನೆಗೆ ಪಂಚಾಯತ್ ನಂಬರ್ ಇಲ್ಲ, ವಿದ್ಯುತ್ ಸಂಪರ್ಕವಿಲ್ಲವೆಂದು ಬೇರೆ ಹೇಳಬೇಕಾಗಿಲ್ಲ ! ಪುಟ್ಟ ಕಿಟಕಿಯಿಂದ ಸೂರ್ಯ ನೀಡುವ ಚಿಕ್ಕ ಬೆಳಕಿನಲ್ಲಿ ಹಗಲಿನ ಅಡುಗೆ, ಊಟ ಮಾಡುತ್ತಾಳೆ. ರಾತ್ರಿ ಪುಟ್ಟ ಚಿಮಣಿ ದೀಪದ ಬೆಳಕಿನಲ್ಲಿ ಬೇಗ ಊಟ ಮುಗಿಸಿ ಅಲ್ಲೇ ಸಣ್ಣ ತಾಮಿನಲ್ಲಿ ಮಲಗುತ್ತಾಳೆ. ಮುಂಜಾನೆ ಎದ್ದು ಕಟ್ಟಿಗೆಗೆ ತರಲು ಹೋಗುವುದು ಒಂಟೀ ಜೀವದ ಜೀವನಚಕ್ರ. ಬದುಕಿನಲ್ಲಿ ಈವರೆಗೂ ಒಂದು ಓಟು ಹಾಕಿದವಳಲ್ಲ, ಮತದಾರರ ಗುರುತಿನ ಚೀಟಿ ಇಲ್ಲ. ಆಧಾರ ಕಾರ್ಡ್ ಕೇಳಬೇಡಿ. ವೃದ್ದ ದೇಹ ಹಾಗೂ ಅವಳೇ ಕಟ್ಟಿಕೊಂಡ ಗೂಡಷ್ಟೇ ಈ ಭೂಮಿಯಲ್ಲಿ ಇಷ್ಟು ಕಾಲದ ಬದುಕಿನ ಸಾಕ್ಷಿ. ‘ನಾಗಮ್ಮ ನಿನ್ನ ವಯಸ್ಸೆಷ್ಟು? ‘ಐವತ್ತಾಗಿರಬಹುದೆನ್ನುತ್ತಾಳೆ. ಇವರ ಸಹೋದರ ಪುರುಷ ಗೌಡನ ವಯಸ್ಸಿನ ಅಂದಾಜಿನಲ್ಲಿ ಕನಿಷ್ಟ 80-85 ವರ್ಷಗಳೆಂದು ನಾವು ನಿರ್ಧರಿಸಬಹುದು.

ಶಿರೂರಿನ ಕೊಡ್ತನಿ ಶಾಲೆ ಸನಿಹದ ಬಾವಿ ಕಿಲೋ ಮೀಟರ್ ದೂರವಿದೆ. ಮಳೆ ಇರಲಿ, ಬಿಸಿಲಿರಿ ನಿತ್ಯ ಅಲ್ಲಿಂದ ಐದಾರು ಬಿಂದಿಗೆ ನೀರೆತ್ತಿ ಇದೇ ಕಾರೇಕಂಟಿಯ ಕಾಲು ದಾರಿಯಲ್ಲಿ ಘಟ್ಟದ ಗುಡ್ಡಕ್ಕೆ ಹೊತ್ತು ತರುತ್ತಾಳೆ. ಗಂಗಾವಳಿ ಪ್ರವಾಹ ಉಕ್ಕೇರಿ ಅಬ್ಬರಿಸಿದಾಗ ನಾಗಮ್ಮನ ಗೂಡಿನ ಸನಿಹ ಬರಲಿಲ್ಲ, ಏಕೆಂದರೆ ಅಷ್ಟು ಎತ್ತರದ ಗುಡ್ಡವೇರುವುದು ಪ್ರವಾಹಕ್ಕೆ ಸಾಧ್ಯವೂ ಇಲ್ಲ, ಹೀಗಾಗಿ ನೆರೆ ನೋವು ತಾಗಲಿಲ್ಲ. ಪರಿಹಾರಕ್ಕೆ ಹೋದವರು ನಿತ್ಯ ಕಷ್ಟದಲ್ಲಿ ಮುಳುಗುತ್ತಿರುವ ಇವಳಿಗೊಂದು ಸೀರೆ ಕೊಟ್ಟರು. ಅವಳ ಬದುಕಿನ ಪರಿಸರ ನೋಡಿ ಸಂಕಟಪಟ್ಟು ಈಗ ಪ್ರತಿ ವಾರ ಸಮಯ ಸಿಕ್ಕಾಗ ಹೋಗಿ ಅವಳಿಗಾಗಿ ಮೊಟ್ಟೆ, ಒಂದಿಷ್ಟು ತಿಂಡಿ ಪೂರೈಸುತ್ತಿದ್ದಾರೆ.

‘ನಾಗಮ್ಮನಿಗೊಂದು ಪುಟ್ಟ ಮನೆ ನಿರ್ಮಿಸಿಕೊಡಬೇಕು. ಅವಳ ಛಾವಣಿಯಲ್ಲಿ ಸುರಿದ ಮಳೆ ನೀರಲ್ಲಿ ಬದುಕುವಂತೆ ಮಾಡಿದರೆ ಘಟ್ಟದಲ್ಲಿ ವೃದ್ಧೆಗೆ ನೀರು ಹೊರುವ ತೊಂದರೆಯಿಲ್ಲವೆಂದು ಯೋಚಿಸಿ ಅಲ್ಲಿಗೆ ನನ್ನನ್ನು ಕರೆದೊಯ್ದಿದ್ದರು. ಹಾಗಾದರೆ ನೆರೆ ನೋವಿನ ಮಧ್ಯೆ ಕಂಡ ವೃದ್ದೆ ನಾಗಮ್ಮನ ಬದುಕಿನ ದುಃಖ ಆಲಿಸಿದವರು ಯಾರು? ನಾಗಮ್ಮನಿಗೆ ನೆರವು ನೀಡಲು ಮುಂದಾದವರ ಒಂದು ಚಿತ್ರ ತೆಗೆಯಲು ಪ್ರಯತ್ನಿಸಿದೆ. ನನ್ನ ಜೊತೆಗೆ ಅಂಕೋಲಾ ಹಳ್ಳಿ ಸುತ್ತಾಡಲು ಹೊರಟಾಗಿಂದ ಈ ಸಾಮಾಜಿಕ ಕಾರ್ಯಕರ್ತರು ತಮಗೆ ಬಿಸಿಲು ಅಲರ್ಜಿಯೆಂದು ಹೇಳುತ್ತ ಛತ್ರಿ ಹಿಡಿದು ಬಂದಿದ್ದರು. ಇಡೀ ದಿನ ಸುತ್ತಾಡಿ ನಾಗಮ್ಮನ ಮನೆಗೆ ಹೋಗಿ ಮರಳುವಾಗ ಸಂಜೆಯಾಗಿತ್ತು, ಸೂರ್ಯನ ಬಿಸಿಲಿರಲಿಲ್ಲ, ಆದರೆ ಆ ಎಲೆಮರೆಯ ಸಾಮಾಜಿಕ ಕಾರ್ಯಕರ್ತರ ತಲೆಯ ಮೇಲೆ ಛತ್ರಿ ಇತ್ತು, ಅದು ಕೆಮರಾಕ್ಕೆ ಅಡ್ಡ ಬಂದು ಅವರ ಮುಖ ಕಾಣದಂತೆ ಮಾಡುತ್ತಿತ್ತು. ಬಿಸಿಲಿಗಿಂತ ಕೆಮರಾ ಅಲರ್ಜಿಯೆಂದು ಆಗ ತಿಳಿಯಿತು.

ಸರಕಾರ ನೆರೆ ಸಂತ್ರಸ್ತರ ನೆರವಿಗೆ ಬಂದಿಲ್ಲವೆಂದು ವಿಧಾನ ಸಭೆಯಲ್ಲಿ ದೊಡ್ಡ ಗಲಾಟೆ ನಡೆದಿದೆ. ಇದೇ ಹೊತ್ತಿನಲ್ಲಿ ಅಕ್ರಮ ಸಂಪತ್ತಿನ ಖಜಾನೆಯ ಸಾವಿರಾರು ಕೋಟಿ ಹೊಸ ಹೊಸ ಸುದ್ದಿಯೂ ಹೊರಬೀಳುತ್ತಿದೆ. ಉಳ್ಳವರು ಯಾವತ್ತೂ ಅಧಿಕಾರಕ್ಕೆ ಅಂಟಿ, ಆಸ್ತಿ ಕಾಯುವುದಕ್ಕೆ ಆಡಳಿತ ಒಂದು ಗುರಾಣಿಯಾದಂತಾಗಿದೆಯೇ? ಇವೆಲ್ಲದರ ಮಧ್ಯೆ ಪ್ರಚಾರ, ಪ್ರಸಿದ್ಧಿಗೆ ಇಷ್ಟಪಡದ, ಹೆಸರು ಹೇಳದ ಬಡ ಸಾಮಾಜಿಕ ಕಾರ್ಯಕರ್ತರು ಗಳಿಕೆಯ ಒಂದು ಪಾಲನ್ನು ನಾಗಮ್ಮನಂಥವರ ಕಣ್ಣೀರು ಒರೆಸಲು ನೀಡುತ್ತಿದ್ದಾರೆ. ಭೂಮಿಯಲ್ಲಿ ಇಂಥವರು ಇದ್ದಾರೆಂದು ಜಗತ್ತು ನಡೆದಿದೆ, ಮಾನವೀಯತೆ ಬದುಕಿದೆ. ಹಲವು ಅಂಗವಿಕಲರು, ಅನಾಥರನ್ನು ಹುಡುಕಿ ಹೋಗುವ ಈ ಕಾರ್ಯಕರ್ತರು ಯಾರೆಂಬುದಕ್ಕಿಂತ ಹೀಗೂ ಸಮಾಜದ ರಚನಾತ್ಮಕ ಕೆಲಸ ಸಾಧ್ಯವೆಂಬುದಕ್ಕೆ ಒಂದು ಉದಾಹರಣೆಯಿದು.

Tags: Ankola Talukflood situationflood victimsHalakki Communityincessant rainsKarnatakaUttara Kannada Districtಅಂಕೋಲ ತಾಲೂಕುಅತಿ ವೃಷ್ಟಿಉತ್ತರ ಕನ್ನಡ ಜಿಲ್ಲೆಕರ್ನಾಟಕನೆರೆ ಪರಿಸ್ಥಿತಿನೆರೆ ಸಂತ್ರಸ್ತರುಪರಿಹಾರ ಕೇಂದ್ರಹಾಲಕ್ಕಿ ಜನಾಂಗ
Previous Post

ಸ್ವಾವಲಂಬಿಗಳಾಗಿ ಪರಿವರ್ತಿತರಾದ ಕಾಲೂರಿನ ಸಂತ್ರಸ್ತ ಮಹಿಳೆಯರು

Next Post

ಆರ್ಥಿಕ ಬಿಕ್ಕಟ್ಟು ಮತ್ತಷ್ಟು ಆಳವಾಗುತ್ತಿದೆ.. ಇಲ್ಲಿದೆ ಪುರಾವೆ

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
Next Post
ಆರ್ಥಿಕ ಬಿಕ್ಕಟ್ಟು ಮತ್ತಷ್ಟು ಆಳವಾಗುತ್ತಿದೆ.. ಇಲ್ಲಿದೆ ಪುರಾವೆ

ಆರ್ಥಿಕ ಬಿಕ್ಕಟ್ಟು ಮತ್ತಷ್ಟು ಆಳವಾಗುತ್ತಿದೆ.. ಇಲ್ಲಿದೆ ಪುರಾವೆ

Please login to join discussion

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada