• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪದ್ಮ ವಿಭೂಷಣ ಪ್ರಶಸ್ತಿ ಮರಳಿಸಿದ ಪಂಜಾಬ್ ಮಾಜಿ ಸಿಎಂ ಪರಕಾಶ್ ಸಿಂಗ್ ಬಾದಲ್

by
December 3, 2020
in ದೇಶ
0
ಪದ್ಮ ವಿಭೂಷಣ ಪ್ರಶಸ್ತಿ ಮರಳಿಸಿದ ಪಂಜಾಬ್ ಮಾಜಿ ಸಿಎಂ ಪರಕಾಶ್ ಸಿಂಗ್ ಬಾದಲ್
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ಧ ರೈತರ ಹೋರಾಟದ ಕಿಚ್ಚು ಹೆಚ್ಚುತ್ತಿರುವಂತೆಯೇ ಪಂಜಾಬಿನ ಮಾಜಿ ಮುಖ್ಯಮಂತ್ರಿ ಹಾಗೂ ಅಕಾಲಿ ದಳ ಮುಖಂಡ ಪರಕಾಶ್ ಸಿಂಗ್ ಬಾದಲ್ ಅವರು ಪದ್ಮ ವಿಭೂಷಣ ಪ್ರಶಸ್ತಿಯನ್ನು ಕೇಂದ್ರ ಸರ್ಕಾರಕ್ಕೆ ಮರಳಿಸಿದ್ದಾರೆ. ನಿನ್ನೆಯಷ್ಟೇ ಪಂಜಾಬಿನ ಅನೇಕ ಕ್ರೀಡಾಪಟುಗಳೂ ಕೂಡ ತಮ್ಮ ಪದಕ ಮತ್ತು ಪ್ರಶಸ್ತಿಗಳನ್ನ ಹಿಂದಿರುಗಿಸಿ ರೈತರ ಹೋರಾಟಕ್ಕೆ ಕೈ ಜೋಡಿಸುತ್ತೇವೆಂದು ಹೇಳಿದ ಬೆನ್ನಲ್ಲೇ ಈ ಬೆಳವಣಿಗೆ ಆಗಿದೆ.

ADVERTISEMENT

ಪರಕಾಶ್ ಸಿಂಗ್ ಬಾದಲ್ ಅವರ ಅಕಾಲಿ ದಳ ಪಕ್ಷ ಕೃಷಿ ಕಾಯ್ದೆ ರೂಪುಗೊಳ್ಳುವವರೆಗೂ ಎನ್‌ಡಿಎ ಮೈತ್ರಿಕೂಟದಲ್ಲೇ ಇತ್ತು. ಪಂಜಾಬಿನಲ್ಲಿ ಕೃಷಿ ಕಾಯ್ದೆ ವಿರುದ್ಧ ಬೃಹತ್ ಹೋರಾಟ ರೂಪುಗೊಳ್ಳುತ್ತಿದ್ದಂತೆಯೇ ಅಕಾಲಿ ದಳ ಎನ್ಡಿಎಯಿಂದ ಮೈತ್ರಿ ಕಡಿದುಕೊಂಡು ರೈತರ ಜೊತೆ ಪ್ರತಿಭಟನೆಗೆ ಇಳಿದಿತ್ತು. ಕನಿಷ್ಠ ಬೆಂಬಲ ಬೆಲೆಯನ್ನು ಕಾಯ್ದೆಯಲ್ಲಿ ಸೇರಿಸಬೇಕೆಂದು ಅಕಾಲಿ ದಳದ ಬೇಡಿಕೆಗೆ ಎನ್‌ಡಿಎ ಬೆಲೆ ಕೊಡದ ಹಿನ್ನೆಲೆಯಲ್ಲಿ ಬಾದಲ್ ಈ ನಿರ್ಧಾರ ತೆಗೆದುಕೊಂಡಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಕೇಂದ್ರ ತಂದಿರುವ ಕೇಂದ್ರದ ಕೃಷಿ ಮಾರುಕಟ್ಟೆಯ ಕಾಯ್ದೆಗಳು ಬಹಳ ಅಪಾಯಕಾರಿಯಾಗಿದ್ದು, ಈಗಾಗಲೇ ಬಳಲಿ ಬೆಂಡಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಶಿರೋಮಣಿ ಅಕಾಲಿ ದಳ ಪಕ್ಷ ಬಿಜೆಪಿಯ ಅತ್ಯಂತ ಹಳೆಯ ಮಿತ್ರಪಕ್ಷವಾಗಿದ್ದರೂ ರೈತರ ಭಾವನೆಗಳಿಗೆ ಗೌರವ ನೀಡಬೇಕೆಂದು ನಾವು ಮಾಡಿಕೊಂಡ ಮನವಿಗೆ ಸರ್ಕಾರ ಕಿವಿಗೊಡಲಿಲ್ಲ” ಎಂದು ಪರಕಾಶ್ ಸಿಂಗ್ ಬಾದಲ್ ಹೇಳಿದ್ದಾರೆ.

ಹಾಗೆಯೇ, ಪ್ರತಿಭಟನೆ ನಡೆಸುತ್ತಿರುವ ಪಂಜಾಬ್ ರೈತರಿಗೆ ದೇಶದ್ರೋಹಿಗಳು ಮತ್ತು ಖಲಿಸ್ತಾನಿಗಳು ಎಂದು ಹಣೆಪಟ್ಟಿ ಕಟ್ಟುತ್ತಿರುವ ಬಗ್ಗೆ ಶಿರೋಮಣಿ ಅಕಾಲಿ ದಳ ಮುಖ್ಯಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಪ್ರತಿಭಟನೆಯಲ್ಲಿ ವೃದ್ಧ ಮಹಿಳೆಯರೂ ಇದ್ದಾರೆ. ಅವರು ನಿಮ್ಮ ಕಣ್ಣಿಗೆ ಖಲಿಸ್ತಾನಿಗಳಂತೆ ಕಾಣುತ್ತಾರಾ? ಇದು ರೈತರಿಗೆ ಮಾಡಿರುವ ಅಪಮಾನ ಎಂದು ಸುಖಬೀರ್ ಸಿಂಗ್ ಬಾದಲ್ ಗುಡುಗಿದ್ಧಾರೆ.

ನಿನ್ನೆ ಒಲಿಂಪಿಕ್ ಹಾಕಿ ಚಿನ್ನ ವಿಜೇತ ಆಟಗಾರ ಗುರ್ಮೇಲ್ ಸಿಂಗ್ ಸೇರಿದಂತೆ ಹಾಲಿ ಮತ್ತು ಮಾಜಿ ಕ್ರೀಡಾಪಟುಗಳು ಕೂಡ ತಮ್ಮ ಪ್ರಶಸ್ತಿಗಳನ್ನ ವಾಪಸ್ ನೀಡುವುದಾಗಿ ಹೇಳಿದ್ದಾರೆ. ಒಲಿಂಪಿಕ್ ಹಾಕಿ ಆಟಗಾರ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಸಾಜನ್ ಸಿಂಗ್ ಚೀಮಾ, ಮಾಜಿ ಕುಸ್ತಿಪಟು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತ ಕರ್ತಾರ್ ಸಿಂಗ್, ಮಾಜಿ ಹಾಕಿ ಆಟಗಾರ ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಗುರ್ಮೇಲ್ ಸಿಂಗ್, ಮಾಜಿ ಮಹಿಳಾ ಹಾಕಿ ಆಟಗಾರ್ತಿ ರಾಜಬೀರ್ ಕೌರ್ ಮೊದಲಾದವರು ರೈತರ ಹೋರಾಟಕ್ಕೆ ಬೆಂಬಲವಾಗಿ ತಮ್ಮ ಪದಕ ಮತ್ತು ಪ್ರಶಸ್ತಿಗಳನ್ನ ಸರ್ಕಾರಕ್ಕೆ ಹಿಂದಿರುಗಿಸಲಿದ್ದಾರೆ.

ಡಿಸೆಂಬರ್ 5ರಂದು ರೈತರ ಜೊತೆ ದೆಹಲಿಗೆ ಹೋಗಲಿರುವ ಈ ಕ್ರೀಡಾಪಟುಗಳು ರಾಷ್ಟ್ರಪತಿ ಭವನದ ಹೊರಗೆ ತಮ್ಮ ಪ್ರಶಸ್ತಿಗಳನ್ನ ಇಟ್ಟು ಬರಲು ಯೋಜಿಸಿದ್ದಾರೆ.

“ನಾವು ರೈತರ ಮಕ್ಕಳಾಗಿದ್ದೇವೆ. ಹಲವಾರು ತಿಂಗಳುಗಳಿಂದ ಅವರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ. ಒಂದೇ ಒಂದು ಹಿಂಸಾಚಾರ ಪ್ರಕರಣ ಆಗಿಲ್ಲ. ಇವರು ದೆಹಲಿಗೆ ಹೋಗಲು ಯತ್ನಿಸಿದಾಗ ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗ ಮಾಡಿ ಅವರ ಮುನ್ನಡೆ ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ…. ನಮ್ಮ ಹಿರಿಯರು ಮತ್ತು ಸಹೋದರರ ಮುಂಡಾಸು ನೆಲಕ್ಕೆ ಬೀಳುತ್ತಿದ್ದರೆ ನಾವು ಪ್ರಶಸ್ತಿ, ಪದಕ ಇಟ್ಟುಕೊಂಡು ಏನು ಮಾಡುವುದು? ರೈತರಿಗೆ ನಮ್ಮ ಬೆಂಬಲ ಇದೆ. ನಮಗೆ ಈ ಪ್ರಶಸ್ತಿಗಳು ಬೇಕಿಲ್ಲ. ಅದಕ್ಕೆ ಅದನ್ನ ಮರಳಿಸುತ್ತಿದ್ದೇವೆ” ಎಂದು ಹಾಕಿ ಆಟಗಾರ ಸಾಜನ್ ಸಿಂಗ್ ಚೀಮಾ ತಿಳಿಸಿದ್ಧಾರೆ.

ಸರ್ಕಾರದ ಭೋಜನ ತಿರಸ್ಕರಿಸಿದ ರೈತರು:

ಇವತ್ತು ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಮಗದೊಂದು ಸುತ್ತಿನ ಮಾತುಕತೆಯಲ್ಲಿ ರೈತರು ತಮ್ಮ ಸ್ವಾಭಿಮಾನವನ್ನು ಸ್ವಲ್ಪವೂ ಬಿಟ್ಟುಕೊಟ್ಟಿಲ್ಲ. ಔತನಕೂಟ ನೀಡುವ ಸರ್ಕಾರದ ಆಫರ್ ಅನ್ನು ರೈತರು ತಿರಸ್ಕರಿಸಿದ್ದಾರೆ. “ಸರ್ಕಾರದಿಂದ ನೀಡುವ ಆಹಾರ ಮತ್ತು ಚಹಾವನ್ನು ನಾವು ಸ್ವೀಕರಿಸುವುದಿಲ್ಲ. ನಾವೇ ಊಟ ತರಿಸಿಕೊಂಡಿದ್ದೇವೆ” ಎಂದು ಈ ರೈತರು ಹೇಳಿದ್ದಾರೆ. ಮೊನ್ನೆ ಮಂಗಳವಾರ ಕೂಡ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರ ಚಹಾ ಕೂಟವನ್ನೂ ರೈತರು ತಿರಸ್ಕರಿಸಿದ್ದರು.

Tags: ಒಲಿಂಪಿಕ್ಸ್‌ಪಂಜಾಬ್ಪದ್ಮ ವಿಭೂಷಣ ಪ್ರಶಸ್ತಿಪ್ರಕಾಶ್ ಸಿಂಗ್ ಬಾದಲ್
Previous Post

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

Next Post

ಜನರ ಹೆಣದ ಮೇಲೆ ಭ್ರಷ್ಟಾಚಾರ ನಡೆಸಿದ ಸರ್ಕಾರವಿದು – ಸಿದ್ದರಾಮಯ್ಯ

Related Posts

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
0

ಬೆಂಗಳೂರು : 2025ರ ವರ್ಷವೂ ರಾಜಕೀಯ, ಸಿನಿಮಾ, ಔದ್ಯೋಗಿಕ ಕ್ಷೇತ್ರದಲ್ಲಿ ಸಾಕಷ್ಟು ಗಮನ ಸೆಳೆದಂತೆ ಕ್ರೀಡಾಲೋಕದಲ್ಲೂ ಹೆಚ್ಚಿನ ಸದ್ದು ಮಾಡಿರುವ ವರ್ಷವಾಗಿದೆ. ಅದರಲ್ಲೂ ಕ್ರಿಕೆಟ್ ಪಂದ್ಯದಲ್ಲಿ ಶಕ್ತಿ...

Read moreDetails

ಓಲೈಕೆ, ಮತಬ್ಯಾಂಕಿಗಾಗಿ ಸ್ಲಂ ನಿರ್ಮಾಣಕ್ಕೆ ಕಾಂಗ್ರೆಸ್ ಕಾರಣ: ಛಲವಾದಿ ನಾರಾಯಣಸ್ವಾಮಿ

December 29, 2025

ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ ಸಿಎಂ ಸಿದ್ದರಾಮಯ್ಯ..

December 29, 2025

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಜ‌.10ಕ್ಕೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

December 29, 2025

ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಗೌರವ್ ಗುಪ್ತ

December 29, 2025
Next Post
ಜನರ ಹೆಣದ ಮೇಲೆ ಭ್ರಷ್ಟಾಚಾರ ನಡೆಸಿದ ಸರ್ಕಾರವಿದು - ಸಿದ್ದರಾಮಯ್ಯ

ಜನರ ಹೆಣದ ಮೇಲೆ ಭ್ರಷ್ಟಾಚಾರ ನಡೆಸಿದ ಸರ್ಕಾರವಿದು - ಸಿದ್ದರಾಮಯ್ಯ

Please login to join discussion

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!
Top Story

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

by ಪ್ರತಿಧ್ವನಿ
December 31, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

December 31, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada