• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪರದೆ ಮೇಲಿನ ಖಳನಾಯಕ, ವಲಸೆ ಕಾರ್ಮಿಕರ ಪಾಲಿನ ʼರಿಯಲ್ ಹೀರೋʼ!

by
May 29, 2020
in ದೇಶ
0
ಪರದೆ ಮೇಲಿನ ಖಳನಾಯಕ
Share on WhatsAppShare on FacebookShare on Telegram

ಕರೋನಾ ಸಂಕಷ್ಟದಲ್ಲಿ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟದ ಬದುಕಿಗೆ ತಮ್ಮನ್ನು ತಾವು ಅರ್ಪಿಸಿಕೊಂಡರು. ನೂರಾರು ಜನರು ಅರ್ಧ ದಾರಿಯಲ್ಲೇ ತಮ್ಮ ಬದುಕಿನ ಕ್ಷಣಗಳನ್ನು ಅಂತ್ಯ ಮಾಡಿದ್ದಾರೆ. ದೇಶದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಕಣ್ಣೀರಲ್ಲಿ ಕೈ ತೊಳೆಯುವಾಗ ಸಹಾಯಕ್ಕೆ ಬಂದು ನಿಂತು ತನ್ನ ಪಾಡಿಗೆ ಕೆಲಸ ಶುರು ಮಾಡಿದ ಸಿನಿಮಾ ವಿಲನ್ ಈಗ ಹೀರೋ ಆಗಿ ಬದಲಾಗಿದ್ದಾರೆ. ಸಿನಿಮಾದಲ್ಲಿ ತಾನು ನಾಯಕ ಅಲ್ಲದಿರಬಹುದು, ಆದರೆ ನಿಜ ಜೀವನದಲ್ಲಿ ಮಾನವೀಯತೆ ಮೂಲಕ ಜನಮಾನಸಲ್ಲಿ ಉಳಿಯುವಂತೆ ನಡೆದುಕೊಂಡಿದ್ದಾರೆ. ಬಾಲಿವುಡ್ ಚಿತ್ರೋದ್ಯಮದಲ್ಲಿ ಖಳನಾಯಕನಾಗಿ ಹೆಸರು ಮಾಡಿರುವ ನಟ ಸೋನು ಸೂದ್, ವಲಸೆ ಕಾರ್ಮಿಕರ ಹಿತಕ್ಕಾಗಿ ನೂರಾರು ಬಸ್‌ ಗಳ ಮೂಲಕ ಸ್ವಂತ ಊರುಗಳಿಗೆ ಕಳುಹಿಸಿ ಕೊಡುವ ಕೆಲಸ ಮಾಡಿದ್ದಾರೆ. ಬಾಲಿವುಡ್ ಖಳನಟ ಸೋನ್ ಸೂದ್ ನಿಜ ಜೀವನದಲ್ಲಿ ನಾಯಕನಾಗಿ ವಿಜೃಂಭಿಸುತ್ತಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ವಲಸೆ ಕಾರ್ಮಿಕರನ್ನು ತೋರಿಕೆಗಾಗಿ ಬಸ್ ವ್ಯವಸ್ಥೆ ಮಾಡಿ ಕಳುಹಿಸಿ ಫೋಟೋ ತೆಗೆಸಿಕೊಂಡು ಪ್ರಚಾರ ಪಡೆಯುವ ಕೆಲಸ ಮಾಡಲು ಮುಂದಾಗಲಿಲ್ಲ. ಬದಲಿಗೆ ನಿರಂತರವಾಗಿ ತನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈಗಾಗಲೇ ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರನ್ನು ಕರ್ನಾಟಕ, ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶಕ್ಕೆ ಕಳುಹಿಸಿಕೊಡುವ ಕೆಲಸ ಮಾಡಿದ್ದಾರೆ. ಈ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನ ಮೆಚ್ಚಿಕೊಂಡು ಶಹಬ್ಬಾಸ್‌ ಗಿರಿ ಕೊಡುತ್ತಿದ್ದಾರೆ. ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸುತ್ತ ಸಾಗುತ್ತಿರುವ ನಟ ಸೋನು ಸೂದ್, ಇದೀಗ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಕೇಳಿಸಿಕೊಂಡು ಅವರಿಗೆ ಸಹಾಯ ಮಾಡಲು ಕಾಲ್ ಸೆಂಟರ್ ತೆಗೆದಿದ್ದಾರೆ. ಟೋಲ್ ಫ್ರೀ ಸಂಖ್ಯೆ 18001213711 ಗೆ ಕರೆ ಮಾಡಿ ವಲಸೆ ಕಾರ್ಮಿಕರು ಸಮಸ್ಯೆ ಹೇಳಿಕೊಳ್ಳಬಹುದಾಗಿದೆ.

Kk my brother you are a Rockstar. Thank u for all the help @NeetiGoel2 https://t.co/UsDFDRky4s

— sonu sood (@SonuSood) May 29, 2020


“ನನಗೆ ಇತ್ತೀಚಿಗೆ ಸಾಕಷ್ಟು ಕರೆಗಳು ಬರುತ್ತಿದ್ದು, ಸಾವಿರಾರು ಜನರು ತಮ್ಮ ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬ ಹಾಗೂ ನನ್ನ ಸ್ನೇಹಿತರು ಪ್ರತಿದಿನ ಸಾವಿರಾರು ಜನರ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಆದರೆ ನಮ್ಮನ್ನು ಸಂಪರ್ಕ ಮಾಡಲು ಸಾಧ್ಯವಾಗದ ಸಾಕಷ್ಟು ಜನರು ನೋವು ಅನುಭವಿಸುತ್ತಿದ್ದಾರೆ. ಹಾಗಾಗಿ ಅಂತಹವರಿಗೆ ನಾವು ನೆರವು ನೀಡಲು ಕಾಲ್ ಸೆಂಟರ್ ಓಪನ್ ಮಾಡಿದ್ದೇವೆ. ನಾವು ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ. ಗರಿಷ್ಠ ಪ್ರಮಾಣದ ವಲಸೆ ಕಾರ್ಮಿಕರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ನಾವು ಎಷ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತದೆಯೋ ಗೊತ್ತಿಲ್ಲ. ಆದರೂ ನಾವು ನಮ್ಮ ಪ್ರಯತ್ನವನ್ನು ಕೈ ಬಿಡುವುದಿಲ್ಲ” ಎಂದಿದ್ದಾರೆ ನಟ ಸೋನು ಸೂದ್.ನಟ ಸೋನು ಸೂದ್ ಕೆಲಸವನ್ನು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಶ್ಲಾಘಿಸಿದ್ದಾರೆ. “ಬಾಲಿವುಡ್ ನಟನಾಗಿರುವ ಸೋನು ಸೂದ್ ಹಲವಾರು ರಾಜ್ಯಗಳ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಸ್ವಯಂ ಪ್ರೇರಣೆಯಿಂದ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಚಾರ” ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ನಟ ಸೋನು ಸೂದ್, “ನಿಮ್ಮ ಮಾತುಗಳು ನಮಗೆ ಸ್ಫೂರ್ತಿದಾಯಕ. ಇನ್ನಷ್ಟು ಕೆಲಸ ಮಾಡಲು ಪ್ರೋತ್ಸಾಹವಿತ್ತಂತಿದೆ. ವಲಸೆ ಕಾರ್ಮಿಕರಾಗಿರುವ ಸಹೋದರ ಸಹೋದರಿಯರು ತಮ್ಮ ಮನೆಗಳನ್ನು ಸೇರಿಕೊಳ್ಳುವ ತನಕವೂ ನಮ್ಮ ಕೆಲಸ ಮುಂದುವರಿಸುತ್ತೇವೆ” ಎಂದಿದ್ದಾರೆ.

Thank u so much sir. Your words inspire me to work harder. Will continue working for the migrant brothers and sisters till we unite them with their families Honoured. https://t.co/fmZjfCfAqH

— sonu sood (@SonuSood) May 27, 2020


ದಿನನಿತ್ಯ ಕೆಲಸವನ್ನೇ ನಂಬಿಕೊಂಡು ತಮ್ಮ ಕುಂಟುಂಬ ನಿರ್ವಹಣೆ ಮಾಡುತ್ತಿದ್ದ ಅದೆಷ್ಟೋ ಕುಟುಂಬಗಳು ಮಕ್ಕಳ ಸಮೇತ ಕಾಲ್ನಡಿಗೆಯಲ್ಲಿ ಹುಟ್ಟೂರುಗಳಿಗೆ ತೆರಳುವ ದೃಶ್ಯ ನನ್ನನ್ನು ಕಾಡಲು ಶುರು ಮಾಡಿತ್ತು. ಅದೊಂದೇ ಕಾರಣಕ್ಕಾಗಿ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡು ಮೊದಲಿಗೆ ಮಹಾರಾಷ್ಟ್ರ ಸರ್ಕಾರದ ಅನುಮತಿ ಮೇರೆಗೆ ಕಳುಹಿಸಿಕೊಡಬೇಕಾದ ರಾಜ್ಯ ಸರ್ಕಾರಗಳ ಜೊತೆಗೆ ಚರ್ಚೆ ನಡೆಸಿ ಬಸ್, ಊಟ, ನೀರು ವ್ಯವಸ್ಥೆ ಮಾಡಿ ಕಳುಹಿಸಿಕೊಡುತ್ತಿದ್ದೇವೆ. ಕೊನೆಯ ಕಾರ್ಮಿಕ ಮನೆ ಸೇರುವ ತನಕ ನಾನು ಈ ಕೆಲಸವನ್ನು ನಿಲ್ಲಿಸುವುದಿಲ್ಲ. ಈ ಕೆಲಸದಿಂದ ನನಗೆ ಆತ್ಮ ತೃಪ್ತಿ ಇದೆ. ಪದಗಳಲ್ಲಿ ವರ್ಣಿಸಲು ಸಾಧ್ಯವಾಗಲ್ಲ. ಸಾಕಷ್ಟು ಜನರು ನನ್ನನ್ನು ಮನಸ್ಸಲ್ಲೇ ಹರಸಿದ್ದಾರೆ ಅಷ್ಟು ಸಾಕು. ನನ್ನ ತಾಯಿ ಒಂದು ಮಾತು ಹೇಳುತ್ತಿದ್ದರು. ನಿನಗೆ ಸಹಾಯ ಮಾಡುವ ಶಕ್ತಿ ಇದ್ದಾಗ ಎಷ್ಟು ಜನರಿಗೆ ಸಾಧ್ಯವೋ ಅಷ್ಟು ಸಹಾಯ ಮಾಡು. ಅವರ ಆಶೀರ್ವಾದ ನಿನ್ನನ್ನು ಕಾಪಾಡುತ್ತದೆ. ಅದೇ ನಿನ್ನ ಗೆಲುವು ಎಂದು ಹೇಳುತ್ತಿದ್ದರು. ಇದೀಗ ಆ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.ಸಹಾಯದ ಅಗತ್ಯ ಇದ್ದಾಗ ಹೇಳದೆ ಕೇಳದೆ ಸಹಾಯ ನಿಲ್ಲುವ ನಮ್ಮ ಪಂಜಾಬಿಗಳ ಬಗ್ಗೆ ಓದಿದಾಗ ನನಗೆ ಅಪಾರವಾದ ಹೆಮ್ಮೆಯಾಗುತ್ತದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೊಂಡಾಡಿದ್ದಾರೆ. ಪಂಜಾಬ್ ಮೂಲದ ಸೋನ್ ಸೂದ್ ವಲಸೆ ಕಾರ್ಮಿಕರಿಗೆ ಮಾಡುತ್ತಿರುವ ಸಹಾಯವನ್ನು ಪಂಜಾಬಿಗಳ ಹೆಮ್ಮೆಯ ಕಾರ್ಯ ಎಂದು ಶ್ಲಾಘಿಸಿದ್ದಾರೆ. ಒಳ್ಳೇದಾಗಲಿ ಸೋನು ಎಂದು ಆಶಿಸಿದ್ದಾರೆ. ನಿಮ್ಮ ಮಾತುಗಳು ಹಾಗೂ ನೀವು ನಮಗೆ ಯಾವಾಗಲೂ ಸ್ಫೂರ್ತಿದಾಯಕ. ನಿಮಗೆ ನಾನು ಮಾತು ಕೊಡುತ್ತೇನೆ ಪಂಜಾಬಿಗಳು ಹೆಮ್ಮೆಪಡುವ ಕೆಲಸ ಖಂಡಿತ ಮಾಡುತ್ತೇನೆ ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Thank you so much for your kind words sir. You have always a been an inspiration for me. I promise to make our our fellow punjabis proud. https://t.co/2R9dpS0zGW

— sonu sood (@SonuSood) May 28, 2020


ಇದೀಗ ಸೋನ್ ಸೂದ್ ಅವರನ್ನು ಅಮಿತಾ ಬಚ್ಚನ್, ತಮಿಳು ಸೂಪರ್ ಸ್ಟಾರ್ ರಜನೀಕಾಂತ್‌ ಗೆ ಹೋಲಿಕೆ ಮಾಡಿ ಚರ್ಚೆ ನಡೆಯುತ್ತಿದೆ. ನಟ ವಿವೇಕ್ ಒಬೇರಾಯ್, ಐಶ್ವರ್ಯ ಚೌಬೆ, ರಂಗನಾಥನ್ ಮಾಧವನ್, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಸಂಸದ ಸುಶೀಲ್ ಕುಮಾರ್ ಸಿಂಗ್, ಅಸ್ಲಾಂ ಶೇಖ್, ಹರೀಶ್ ಕೌರಾನ, ಗೌರವ್ ಭಾಟಿಯಾ, ಸೂರಜ್ ಠಾಕೂರ್ ಸೇರಿದಂತೆ ಸಾಕಷ್ಟು ಜನಪ್ರತಿನಿಧಿಗಳು, ರಾಜಕಾರಣಿಗಳು ಸೋನುಸೂದ್ ಕೆಲಸಕ್ಕೆ ಮೆಚ್ಚುಗೆ ಸೂಚಿಸುವ ಕೆಲಸ ಮಾಡಿದ್ದಾರೆ.

Extremely proud of you my brother! Kudos to your noble efforts! It’s incredible to see how you’re helping thousands of helpless people reach their homes!

Big Salute! Keep inspiring!

May god bless @SonuSood

— Vivek Anand Oberoi (@vivekoberoi) May 27, 2020


I’ve had the privilege of knowing you as a professional colleague for over 2 decades now @SonuSood & celebrated your rise as an actor ;but the kindness you have displayed in these challenging times makes me prouder still thank you for helping those in need https://t.co/JcpoZRIr8M

— Smriti Z Irani (@smritiirani) May 24, 2020


ADVERTISEMENT

ಓರ್ವ ನಟ ಹೊಟ್ಟೆಗೆ ಹಿಟ್ಟಿಲ್ಲದೆ ಸಾವಿರಾರು ಕಿಲೋಮೀಟರ್ ದೂರ ಕಾಲ್ನಡಿಗೆಯಲ್ಲಿ ಸಾಗುವ ಸಂಕಷ್ಟ ಕಂಡು ವಲಸೆ ಕಾರ್ಮಿಕರ ನೆರವಿಗೆ ಬಂದಿರುವ ನಟನಿಗೆ ಸಿಗಬೇಕಾದ ಗೌರವ ಸಿಕ್ಕೇ ಸಿಗುತ್ತದೆ. ಚಿತ್ರಗಳಲ್ಲಿ ಖಳನಟನಾದರೂ ನಿಜಜೀವನದಲ್ಲಿ ನಾಯಕನಟನಾಗಿಯೇ ಸ್ಥಾನ ಪಡೆಯುತ್ತಾನೆ. ಆದರೆ ಸಿನಿಮಾಗಳಲ್ಲಿ ಕೋಟಿ ಕೋಟಿ ಸಂಭಾವನೆ ಪಡೆದು ತೆರೆ ಮೇಲೆ ಮಿಂಚಿ ಮೆರೆಯುವ ನಾಯಕ ನಟರು ಮಾತ್ರ ಲಾಕ್ಡೌನ್ ಅವಧಿಯಲ್ಲಿ ತೋರಿಕೆಗೂ ತೆರೆ ಮುಂದೆ ಬಾರಲಿಲ್ಲ ಎನ್ನುವುದು ಮಾತ್ರ ವಿಪರ್ಯಾಸ. ಅದರಲ್ಲೂ ಸಿನಿಮಾ ಮಂದಿಗಳನ್ನು ಹೆಚ್ಚಾಗಿ ಇಷ್ಟಪಡುವುದೇ ಕೂಲಿಕಾರ್ಮಿಕರು. ಕಷ್ಟದಲ್ಲಿ ಜೀವನ ನಡೆಸುತ್ತಿದ್ದರೂ ಸಮಯ ಸಿಕ್ಕಾಗ ಒಂದು ಸಿನಿಮಾ ನೋಡಿಕೊಂಡು ಬರುವ ಮನಸ್ಸು ಮಾಡುವುದೇ ವಲಸೆ ಕಾರ್ಮಿಕರು. ಪರಿಸ್ಥಿತಿ ಹೀಗಿದ್ದರೂ ಕೋಟ್ಯಂತರ ರೂಪಾಯಿ ಒಡೆಯರಾಗಿ, ಜಾಹಿರಾತುಗಳಲ್ಲಿ ಜನರನ್ನು ಮೋಡಿ ಮಾಡುತ್ತ ಸಂಭಾವನೆಯಿಂದ ಖಜಾನೆ ಭರ್ತಿ ಮಾಡಿಕೊಳ್ಳುವ ಕಂಜೂಸ್‌ ನಟರು ಸೋನುಸೂದ್ ನೋಡಿ ಕಲಿಯಬೇಕಾದದ್ದು ಸಾಕಷ್ಟು ಇದೆ ಎನಿಸುತ್ತದೆ.

Tags: BollywoodCovid 19Migrant Workerssmrithi iranisonu soodಕೋವಿಡ್-19ಬಾಲಿವುಡ್ವಲಸೆ ಕಾರ್ಮಿಕರುಸೋನು ಸೂದ್ಸ್ಮೃತಿ ಇರಾನಿ
Previous Post

ಲಾಕ್ ಡೌನ್ ಕಾರ್ಯತಂತ್ರದ ವೈಫಲ್ಯ ಪ್ರಶ್ನಿಸಿದರೆ ದೇಶದ ವಿರೋಧಿ ಟೀಕೆ ಹೇಗೆ?

Next Post

ಭಾರತ-ಚೀನಾ ಗಡಿ ವಿವಾದ: ಟ್ರಂಪ್‌ ಹೇಳಿಕೆ ಅಲ್ಲಗೆಳೆದ ಭಾರತ

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಭಾರತ-ಚೀನಾ ಗಡಿ ವಿವಾದ: ಟ್ರಂಪ್‌ ಹೇಳಿಕೆ ಅಲ್ಲಗೆಳೆದ ಭಾರತ

ಭಾರತ-ಚೀನಾ ಗಡಿ ವಿವಾದ: ಟ್ರಂಪ್‌ ಹೇಳಿಕೆ ಅಲ್ಲಗೆಳೆದ ಭಾರತ

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada