• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪರಿಸರ ನಿರಾಕ್ಷೇಪಣಾ ಪತ್ರವಿಲ್ಲದೇ ಕಾರ್ಯನಿರ್ವಹಿಸುತ್ತಿದ್ದ ವೈಜಾಗ್‌ನ LG Polymers

by
May 14, 2020
in ದೇಶ
0
ಪರಿಸರ ನಿರಾಕ್ಷೇಪಣಾ ಪತ್ರವಿಲ್ಲದೇ ಕಾರ್ಯನಿರ್ವಹಿಸುತ್ತಿದ್ದ ವೈಜಾಗ್‌ನ LG Polymers
Share on WhatsAppShare on FacebookShare on Telegram

ಮೇ 7, 2020ರಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದ ವಿಷಾನಿಲ ಸೋರಿಕೆ ದುರಂತ ನಿಜಕ್ಕೂ ದೇಶವನ್ನೇ ಕಂಗಾಲಾಗಿಸಿತು. ಮೂವರು ಅಮಾಯಕ ಮಕ್ಕಳನ್ನು ಒಳಗೊಂಡಂತೆ ಒಟ್ಟು 11 ಜನರನ್ನು ಬಲಿ ಪಡೆದಂತಹ ಈ ದುರಂತ, ಒಮ್ಮೆಗೆ ಇಡೀ ದೇಶ ವಿಶಾಖಪಟ್ಟಣಂ ಕಡೆಗೆ ನೋಡುವಂತೆ ಮಾಡಿತು. ಅಂದಿನ ಭಯಾನಕ ಚಿತ್ರಣ ಎಂದಿಗೂ ಕಣ್ಣಿಂದ ಅಳಿಸಲಾಗದಂತಹವು.

ಒಂದು ಬಾರಿಗೆ ಭೋಪಾಲ್‌ನಲ್ಲಿ ನಡೆದಂತಹ ವಿಷಾನಿಲ ಸೋರಿಕೆ ಪ್ರಕರಣ ಭಾರತೀಯರ ಕಣ್ಣ ಮುಂದೆ ಹಾದು ಹೋದದ್ದು ಸುಳ್ಳಲ್ಲ. ಅಲ್ಲಲ್ಲಿ ಪ್ರಜ್ಞೆ ತಪ್ಪಿ ಬಿದ್ದಂತಹ ಜನರನ್ನು ನೋಡಿ ಒಮ್ಮೆಗೆ ಸಾವಿನ ಭಯ ಅಲ್ಲಿದ್ದ ಎಲ್ಲರಿಗೂ ಕಾಡಲು ಶುರುವಾಗಿತ್ತು.

Also Read: ಭೂಪಾಲ್ ದುರಂತವನ್ನು ನೆನಪಿಸಿದ ವಿಶಾಖಪಟ್ಟಣಂ; ಈ ಪ್ರಕರಣದಲ್ಲಾದರೂ ತಪ್ಪಿತಸ್ಥರಿಗೆ ಶಿಕ್ಷೆ ಸಿಗುವುದೇ?

ಇಂತಹ ಒಂದು ದುರ್ಘಟನೆಗೆ ಕಾರಣ ಸರಿಯಾಗಿ ನಿರ್ವಹಿಸಲ್ಪಡದ ಕೈಗಾರಿಕಾ ಘಟಕ. ದೇಶದಲ್ಲಿ, ಒಂದು ಕೈಗಾರಿಕಾ ಘಟಕವನ್ನು ತೆರೆಯಬೇಕಾದಲ್ಲಿ ಹಲವಾರು ರೀತಿಯ ಪರೀಕ್ಷೆಗಳಿಗೆ ಒಳಪಡಬೇಕಾಗುತ್ತದೆ. ಪರಿಸರ ಖಾತೆ ಸಚಿವಾಲಯ ಸೇರಿದಂತೆ ಹಲವು ಇಲಾಖೆಗಳ ಅನುಮತಿಯನ್ನು ಪಡೆಯಬೇಕಾಗುತ್ತದೆ. ಆದರೆ, LG Polymers ಸಂಸ್ಥೆಯ ಕಡತಗಳನ್ನು ಗಮನಿಸುತ್ತಾ ಹೋದರೆ, ಈ ಸಂಸ್ಥೆಯು ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಂದ ಪರಿಸರ ನಿರಕ್ಷೇಪಣಾ ಪತ್ರ (Environmental Clearance) ನ್ನು ಪಡೆಯದಿರುವುದು ಬೆಳಕಿಗೆ ಬಂದಿದೆ.

ಮಾಹಿತಿ ಹಕ್ಕು ಕಾರ್ಯಕರ್ತ ಸಾಕೇತ್‌ ಗೋಖಲೆ ಅವರು, ಮಾಹಿತಿ ಹಕ್ಕು ಅಧಿನಿಯಮದಡಿ ಪಡೆದಿರುವಂತಹ ದಾಖಲೆಗಳಲ್ಲಿ, LG Polymers ಸಂಸ್ಥೆಯು ಪರಿಸರ ಹಾನಿಗೆ ಸಂಬಂಧಪಟ್ಟಂತೆ ಯಾವುದೇ ರೀತಿಯ ದಾಖಲೆಗಳನ್ನು ಹೊಂದದಿರುವುದು ಸ್ಪಷ್ಟವಾಗಿದೆ. ಇಂತಹ ಒಂದು ಸಂಸ್ಥೆಯು ಇಷ್ಟರವರೆಗೆ ಕಾರ್ಯ ನಿರ್ವಹಿಸಲು ಹೇಗೆ ಸಾಧ್ಯವಾಯಿತು ಎನ್ನುವುದು ನಿಜವಾಗಿಯೂ ಈಗ ಎದ್ದಿರುವ ಪ್ರಶ್ನೆ.

This is a May 2019 affidavit filed by LG Polymers (company behind the Vizag gas leak which killed 12 people).

In this, the company admits that it is operating the unit WITHOUT environmental clearances from the Union or State govt.

Why was action never taken @PrakashJavdekar? pic.twitter.com/Z7j2NWjwit

— Saket Gokhale (@SaketGokhale) May 12, 2020


ADVERTISEMENT

ಪರಿಸರ ನಿರಕ್ಷೇಪಣಾ ಪತ್ರವನ್ನು ಪಡೆಯದೇ, ಯಾವುದೇ ರಾಸಾಯನಿಕ ಫ್ಯಾಕ್ಟರಿಗಳು ಕಾರ್ಯ ನಿರ್ವಹಿಸುವುದು ಕಾನೂನಿನ ಅಡಿಯಲ್ಲಿ ಅಪರಾಧ. ಆದರೂ, LG Polymersನಂತಹ ಒಂದು ಕಂಪೆನಿ ಈ ಸಂಬಂಧ ಯಾವುದೇ ಅಧಿಕೃತ ದಾಖಲೆ ಹೊಂದಿರದೇ ಇರುವುದು ಸಂಶಯವನ್ನು ಉಂಟುಮಾಡಿದೆ. ಸರ್ಕಾರದಿಂದಲೇ ಈ ಕಂಪೆನಿಯನ್ನು ಕಾಪಾಡುವಂತಹ ಪ್ರಯತ್ನ ಈವರೆಗೆ ನಡೆಸಲಾಗುತ್ತಿತ್ತು ಎಂಬ ಅಂಶ ಬಹಿರಂಗಗೊಂಡಿದೆ.

LG Polymers ನೀಡಿರುವ ಅಫಡವಿಟ್‌ನಲ್ಲಿ ತಮ್ಮಲ್ಲಿ ರಾಜ್ಯ ಪರಿಸರ ಹಾನಿ ಮೌಲ್ಯಮಾಪನ ಪ್ರಾಧಿಕಾರ ನೀಡುವ ಅಧಿಕೃತವಾದ ಪ್ರಮಾಣಪತ್ರವನ್ನು ನಾವು ಹೊಂದಿಲ್ಲ ಎಂದು ಹೇಳಿದೆ. Environment clearance ನಮಗೆ ಸಿಕ್ಕಿಲ್ಲವಾದರೂ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಕೃತವಾದ ಅನುಮತಿಯನ್ನು ಪಡೆದುಕೊಂಡು ನಮ್ಮ ಕೈಗಾರಿಕಾ ಘಟಕವು ಕಾರ್ಯ ನಿರ್ವಹಿಸುತ್ತಿದೆ ಎಂದು ಅಫಿಡವಿಟ್‌ನಲ್ಲಿ ಹೇಳಲಾಗಿದೆ.

ಈ ಅಂಶವು ಬಹಿರಂಗಗೊಂಡ ಮೇಲೆ ನಿಜಕ್ಕೂ ಎಲ್ಲರಲ್ಲೂ ಮೂಡುವ ಸಾಮಾನ್ಯ ಪ್ರಶ್ನೆಯೆಂದರೆ, ಅಧಿಕೃತವಾಗಿ ಪ್ರಮಾಣಪತ್ರವನ್ನು ಪಡೆಯಲಾಗದ ಕಂಪೆನಿಯೊಂದು ಇಷ್ಟು ದಿನ ಹೇಗೆ ಕಾರ್ಯ ನಿರ್ವಹಿಸಿತು? 11 ಜನರ ಜೀವವನ್ನು ಬಲಿ ತೆಗೆದುಕೊಂಡ ಕಂಪೆನಿಯ ವಿರುದ್ದ ಈ ಮೊದಲೇ ಏಕೆ ಕ್ರಮ ಕೈಗೊಂಡಿಲ್ಲ? ಎಂಬುದು.

ಇನ್ನು ಇಲ್ಲಿ ಎಲೆಕ್ಟೋರಲ್‌ ಬಾಂಡ್‌ಗಳ ಕೈವಾಡವೂ ಇರಬಹುದು ಎಂಬ ಶಂಕೆಯನ್ನು ಸಾಕೆತ್‌ ಗೋಖಲೆ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅವರು ಶಂಕೆ ನಿಜವಾದಲ್ಲಿ, ಇಂತಹ ಇನ್ನೆಷ್ಟು ಕಂಪೆನಿಗಳು ಭಾರತದಲ್ಲಿ ಸರಿಯಾದ ಅನುಮತಿಯಿಲ್ಲದೇ ಕಾರ್ಯನಿರ್ವಹಿಸುತ್ತಿವೆಯೋ ಎಂಬ ಪ್ರಶ್ನೆ ಕೂಡಾ ಹುಟ್ಟಿಕೊಳ್ಳಲಿದೆ.

Tags: ‌ ವಿಜಾಗ್‌ ದುರಂತAndhra PradeshLG Polymerssaketh gokhalevizag tragedyಆಂಧ್ರ ಪ್ರದೇಶಎಲ್‌ಜಿ ಪಾಲಿಮರ್ಸ್ಸಾಕೇತ್‌ ಗೋಖಲೆ
Previous Post

ವಲಸೆ ಕಾರ್ಮಿಕರ ಹಿತಕ್ಕಾಗಿ ಕೇಂದ್ರದಿಂದ 11 ಸಾವಿರ ಕೋಟಿ.!

Next Post

ಅಮೆರಿಕದ ಕರೋನಾ ಸಾವಿನಲ್ಲಿ ವೃದ್ಧಾಶ್ರಮಗಳ ಪಾಲು ಶೇ.35!

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
ಅಮೆರಿಕದ ಕರೋನಾ ಸಾವಿನಲ್ಲಿ ವೃದ್ಧಾಶ್ರಮಗಳ ಪಾಲು ಶೇ.35!

ಅಮೆರಿಕದ ಕರೋನಾ ಸಾವಿನಲ್ಲಿ ವೃದ್ಧಾಶ್ರಮಗಳ ಪಾಲು ಶೇ.35!

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada