• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪುರಂದರ ದಾಸರ ಜನ್ಮಸ್ಥಳ ತೀರ್ಥಹಳ್ಳಿ ತಾಲೂಕಿನ ಆರಗವೆ?

by
May 27, 2020
in ಕರ್ನಾಟಕ
0
ಪುರಂದರ ದಾಸರ ಜನ್ಮಸ್ಥಳ ತೀರ್ಥಹಳ್ಳಿ ತಾಲೂಕಿನ ಆರಗವೆ?
Share on WhatsAppShare on FacebookShare on Telegram

ಕರ್ನಾಟಕ ಸಂಗೀತ ಪಿತಾಮಹ ಪುರಂದರ ದಾಸರ ಹುಟ್ಟೂರಿನ ಕುರಿತ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಪುರಾತತ್ವ ಇಲಾಖೆ ಮಹತ್ವದ ನಿರ್ಣಯ ಕೈಗೊಂಡಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮ ಪಂಚಾಯ್ತಿಯ ಕೇಶವಾಪುರಕ್ಕೆ ಶೀಘ್ರವೇ ಅಧಿಕಾರಿಗಳ ತಂಡ ಭೇಟಿ ನೀಡಿ ಸ್ಥಳ ಸಮೀಕ್ಷೆ ನಡೆಸಲಿದೆ.

ADVERTISEMENT

ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕ ಾರ್ ಶೇಜೇಶ್ವರ್ ಅವರು ಈ ವಿಷಯವನ್ನು ತಿಳಿಸಿದ್ದು, ಹಂಪಿ ವಿವಿ ಸಂಶೋಧಕರು ಮತ್ತು ಇತರೆ ತಜ್ಞರನ್ನೊಳಗೊಂಡ ತಂಡ ನೀಡಿದ ಅಧ್ಯಯನ ವರದಿಯ ಆಧಾರದ ಮೇಲೆ ಇಲಾಖೆ ಸ್ಥಳ ಸಮೀಕ್ಷೆಯ ನಿರ್ಧಾರಕ್ಕೆ ಬಂದಿದ್ದು, ಒಂದೆರಡು ದಿನಗಳಲ್ಲಿ ಇಲಾಖೆಯ ಉನ್ನತಾಧಿಕಾರಿಗಳ ತಂಡ ದಾಸಶ್ರೇಷ್ಠರ ಹುಟ್ಟೂರು ಎಂದು ಪ್ರತಿಪಾದಿಸಲಾಗುತ್ತಿರುವ ಮಲೆನಾಡಿನ ಪುಟ್ಟ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಪುರಂದರ ವಿಠಲ ಕಾವ್ಯನಾಮದ ಮೂಲಕ ದಾಸ ಸಾಹಿತ್ಯ ಮತ್ತು ಕರ್ನಾಟಕ ಸಂಗೀತ ಕ್ಷೇತ್ರಕ್ಕೆ ಬುನಾದಿ ಹಾಕಿದ ಪುರಂದರ ದಾಸರ ಮೂಲ ಹೆಸರು ಶ್ರೀನಿವಾಸ ನಾಯಕ ಎಂದಿತ್ತು ಎನ್ನಲಾಗಿದ್ದು, ಅವರ ಹುಟ್ಟೂರಿನ ಬಗ್ಗೆ ಈವರೆಗೆ ವಿದ್ವಾಂಸರ ನಡುವೆ ಗೊಂದಲವಿದೆ. ಕೆಲವರು ಅವರು ಮಹಾರಾಷ್ಟ್ರದ ಪುರಂದರಗಢದವರು ಎಂದು ಪ್ರತಿಪಾದಿಸುತ್ತಿದ್ದರೆ, ಮತ್ತೆ ಕೆಲವರು ಮಲೆನಾಡಿನ ಆರಗದ ಕೇಶವಪುರದವರು ಎನ್ನುತ್ತಿದ್ದಾರೆ. ಆರಗ ಗ್ರಾಮ ಪುರಂದರ ದಾಸರು ಬದುಕಿದ್ದ ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ದೊಡ್ಡ ಪಟ್ಟಣವಾಗಿ, ವ್ಯಾಪಾರ ಕೇಂದ್ರವಾಗಿತ್ತು. ಸ್ವತಃ ಶ್ರೀನಿವಾಸ ನಾಯಕ ದೊಡ್ಡ ವ್ಯಾಪಾರಿಯಾಗಿದ್ದ. ಬಳಿಕ ಐಹಿಕ ಜೀವನದ ಬಗ್ಗೆ ಜುಗುಪ್ಸೆಗೊಂಡು ಪುರಂದರ ನಾಮಸ್ಮರಣೆಯ ಮೂಲಕ ಲೋಕಸಂಚಾರಿಯಾದರು ಎಂಬ ಐತಿಹ್ಯವಿದೆ.

ಪುರಂದರ ದಾಸರು ಮಲೆನಾಡಿನವರು ಎಂಬ ಸಂಗತಿ ಕಳೆದ ಎರಡು – ಮೂರು ದಶಕಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಮುಖ್ಯವಾಗಿ ದಾಸ ಸಾಹಿತ್ಯದಲ್ಲಿ ಬರುವ ಮಲೆನಾಡಿನ ಭಾಷೆ, ಊರುಗಳು, ಸಂಪ್ರದಾಯ, ಆಚರಣೆಗಳ ಪ್ರಸ್ತಾಪದ ಹಿನ್ನೆಲೆಯಲ್ಲಿ ಅವರು ಆರಗದ ಮೂಲದವರೇ ಇರಬಹುದು ಎಂಬ ವಾದ ಮುನ್ನೆಲೆಗೆ ಬಂದಿತ್ತು. ಆ ಹಿನ್ನೆಲೆಯಲ್ಲಿ ಪ್ರಮುಖವಾಗಿ ತೀರ್ಥಹಳ್ಳಿ ಮೂಲದವರಾದ ಹಿರಿಯ ಸಹಕಾರಿ ಧುರೀಣ ಬಿ ಎಸ್ ವಿಶ್ವನಾಥ್ ಮತ್ತು ಮಾಜಿ ಶಾಸಕ ಪಟ್ಟಮಕ್ಕಿ ರತ್ನಾಕರ್ ಅವರು ಆಸಕ್ತಿ ವಹಿಸಿ ಸರ್ಕಾರದ ಗಮನ ಸೆಳೆದಿದ್ದರು. ಜೊತೆಗೆ ಪುರಂದರ ವೇದಿಕೆ ಎಂಬ ಸಂಸ್ಥೆ ಹುಟ್ಟುಹಾಕಿ ತೀರ್ಥಹಳ್ಳಿ ಭಾಗದಲ್ಲಿ ಪುರಂದರ ದಾಸರ ಹೆಗ್ಗಳಿಕೆಯ ಬಗ್ಗೆ ಅರಿವು ಮೂಡಿಸುವ ಮತ್ತು ಅದೇ ಹೊತ್ತಿಗೆ ಅವರ ಹುಟ್ಟೂರಿನ ಕುರಿತ ಸಂಶೋಧನೆಗೆ ಒತ್ತಾಯಿಸುವ ನಿಟ್ಟಿನಲ್ಲಿ ಶ್ರಮಿಸಿದ್ದರು.

ಅಂತಹ ಪ್ರಯತ್ನಗಳ ಫಲವಾಗಿ ಮೂರು ವರ್ಷಗಳ ಹಿಂದೆ ಹಂಪಿ ಕನ್ನಡ ವಿವಿಯ ಸಂಶೋಧಕ ಎ ವಿ ನಾವುಡ, ಖ್ಯಾತ ಸಂಗೀತಗಾರರಾದ ವಿದ್ವಾನ್ ಆರ್ ಕೆ ಪದ್ಮನಾಭ, ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್, ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಮತ್ತಿತರ ವಿವಿಧ ಕ್ಷೇತ್ರಗಳ ತಜ್ಞರ ಸಮಿತಿ ರಚನೆಯಾಗಿತ್ತು ಮತ್ತು ಆರಗ ಸುತ್ತಮುತ್ತಲ ಊರುಗಳಲ್ಲಿ ಮಾಹಿತಿ ಕಲೆಹಾಕಲಾಗಿತ್ತು. ಇತ್ತೀಚೆಗೆ ಸಮಿತಿ ಸಲ್ಲಿಸಿದ ವರದಿಯ ಆಧಾರದ ಮೇಲೆ ಇದೀಗ ಪುರಾತತ್ವ ಇಲಾಖೆ ಸ್ಥಳ ಸಮೀಕ್ಷೆಗೆ ನಿರ್ಧರಿಸಿದ್ದು, ಕರ್ನಾಟಕ ಸಂಗೀತ ಪಿತಾಮಹರ ಜನ್ಮಸ್ಥಳದ ಕುರಿತ ಗೊಂದಲಗಳಿಗೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇದಾಗಿದೆ ಎನ್ನಲಾಗುತ್ತಿದೆ.

Tags: AragaPurandara dasaShivamoggaTheerthahalliಕರ್ನಾಟಕ ಸಂಗೀತ ಪಿತಾಮಹತೀರ್ಥಹಳ್ಳಿದಾಸ ಸಾಹಿತ್ಯಪುರಂದರ ದಾಸ
Previous Post

ಕರೋನಾಗಿಂತಲೂ ಅಪಾಯಕಾರಿ ಆಗಲಿದೆಯೇ ಬಿಸಿಗಾಳಿ?

Next Post

ರಾಜ್ಯ ಸರ್ಕಾರದ ಮೇಲೆ ಸಂಘ ಪರಿವಾರದ ಹಿಡಿತ ಅತಿಯಾಯಿತೇ?

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ರಾಜ್ಯ ಸರ್ಕಾರದ ಮೇಲೆ ಸಂಘ ಪರಿವಾರದ ಹಿಡಿತ ಅತಿಯಾಯಿತೇ?

ರಾಜ್ಯ ಸರ್ಕಾರದ ಮೇಲೆ ಸಂಘ ಪರಿವಾರದ ಹಿಡಿತ ಅತಿಯಾಯಿತೇ?

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada