• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪೌರತ್ವ ಕಾಯ್ದೆ ತಿದ್ದುಪಡಿಗೆ 700 ಕ್ಕೂ ಹೆಚ್ಚು ಗಣ್ಯರ ವಿರೋಧ

by
December 11, 2019
in ದೇಶ
0
ಪೌರತ್ವ ಕಾಯ್ದೆ ತಿದ್ದುಪಡಿಗೆ 700 ಕ್ಕೂ ಹೆಚ್ಚು ಗಣ್ಯರ ವಿರೋಧ
Share on WhatsAppShare on FacebookShare on Telegram

ಸಂಸತ್ತಿನ ಉಭಯ ಸದನಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮಂಡಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಶಾನ್ಯದ ಕೆಲವು ರಾಜ್ಯಗಳಲ್ಲಿನ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ADVERTISEMENT

ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಈ ಕಾಯ್ದೆಯಿಂದಾಗಿ ಇದೇ ಮೊದಲ ಬಾರಿಗೆ ನಂಬಿಕೆ ಮೇಲೆ ಕೆಲವೇ ವರ್ಗದ ಜನರಿಗೆ ಸವಲತ್ತುಗಳನ್ನು ಕಲ್ಪಿಸುವುದು ಮತ್ತು ಇದೇ ವೇಳೆ ಮುಸ್ಲಿಂರನ್ನು ಎರಡನೇ ದರ್ಜೆಗೆ ಇಳಿಸುವ ಪ್ರಯತ್ನವನ್ನು ಮಾಡಲಾಗಿದೆ.

ಬಿಜೆಪಿ ಸರ್ಕಾರದ ಈ ಒಡೆದು ಆಳುವ ನೀತಿಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೆ, ವಿವಿಧ ಕ್ಷೇತ್ರಗಳಿಗೆ ಸೇರಿದ 726 ಮಂದಿ ಗಣ್ಯ ನಾಗರಿಕರು ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಖಂಡನಾ ಪತ್ರಕ್ಕೆ ಸಹಿ ಮಾಡಿದ್ದಾರೆ.

ಶಿಕ್ಷಣ, ನ್ಯಾಯಾಂಗ, ಪತ್ರಿಕೋದ್ಯಮ, ಉದ್ಯಮ, ಚಿತ್ರರಂಗ, ಕಲೆ, ಸಾಹಿತ್ಯ ಸೇರಿದಂತೆ ಇನ್ನೂ ಹಲವಾರು ಕ್ಷೇತ್ರಗಳಿಗೆ ಸಂಬಂಧಿಸಿದ ಗಣ್ಯರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಅವರಲ್ಲಿ ಪ್ರಮುಖವಾಗಿ ನ್ಯಾಯಮೂರ್ತಿ ಪಿ.ಬಿ.ಸಾವಂತ್, ಅಡ್ಮಿರಲ್ ರಾಮದಾಸ್, ಜಾವೇದ್ ಅಖ್ತರ್, ನಾಸಿರುದ್ದೀನ್ ಶಾ, ಅಪರ್ಣಾ ಸೇನ್, ಮಲ್ಲಿಕಾ ಸಾರಾಬಾಯಿ, ಪ್ರಭಾತ್ ಪಟ್ನಾಯಕ್ ಮತ್ತು ಇನ್ನೂ ಅನೇಕರು ಇದ್ದಾರೆ.
“ಇದೇ ಮೊದಲ ಬಾರಿಗೆ ಕೆಲವು ಧರ್ಮ ಮತ್ತು ನಂಬಿಕೆಗಳ ಮೂಲಕ ಸವಲತ್ತು ನೀಡುವ ಶಾಸನಬದ್ಧ ಕಾನೂನನ್ನು ಜಾರಿಗೆ ತರುವ ಪ್ರಯತ್ನ ನಡೆಯುತ್ತಿದೆ. ಆದರೆ ಇದೇ ಸಮಯದಲ್ಲಿ ಮತ್ತೊಂದು ಧರ್ಮಕ್ಕೆ ಸೇರಿದ ಮುಸ್ಲಿಂರಿಗೆ ಎರಡನೇ ದರ್ಜೆಯ ಸ್ಥಾನವನ್ನು ಕೊಟ್ಟು ಕೆಳಗಿಳಿಸುವ ಪ್ರಯತ್ನವೂ ನಡೆಯುತ್ತಿದೆ” ಎಂದು ಸಹಿ ಹಾಕಿದ ಪತ್ರದಲ್ಲಿ ಹೇಳಲಾಗಿದೆ.

“ಉಳ್ಳವರು ಮತ್ತು ಕೆಲವರು ಎಂಬ ಶ್ರೇಣೀಕರಣದಿಂದ ಭಾರತೀಯ ಸಮಾಜ ಸೃಷ್ಟಿಯಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಜನರು ಪೌರತ್ವವನ್ನು ಸಾಬೀತುಪಡಿಸಲು ದಾಖಲೆಗಳನ್ನು ಪೂರೈಸಬೇಕೆನ್ನುವುದು ಅನ್ಯಾಯದ ಪರಮಾವಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಗಣ್ಯರು,

ಭಾರತದಲ್ಲಿ ಪೌರತ್ವ ಎನ್ನುವುದು ಸಮಾನತೆ ಮತ್ತು ತಾರತಮ್ಯ ರಹಿತವಾದದ್ದು. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಎಲ್ಲರನ್ನೂ ಒಳಗೊಳ್ಳುವ ಸಹಬಾಳ್ವೆಯ ದೇಶವಾಗಿ ರೂಪುಗೊಂಡಿದೆ. 1950ರಲ್ಲಿ ಎಲ್ಲಾ ಧರ್ಮಗಳು, ಜಾತಿಗಳು, ಭಾಷೆಗಳು ಮತ್ತು ಲಿಂಗಗಳು ಎಲ್ಲಾ ರೀತಿಯ ಜನರು ಸಮಾನವಾಗಿ ಮತ್ತು ತಾರತಮ್ಯವಿಲ್ಲದೆ ಭಾರತೀಯರು ಎಂದು ಒಪ್ಪಿಕೊಂಡರು.

ಹೀಗಿದ್ದರೂ, ಕಳೆದ ಆರು ವರ್ಷಗಳಿಂದ ದೇಶದಲ್ಲಿ ರಾಜಕೀಯವಾಗಿ ಸಂವಿಧಾನ ಆಧಾರಿತ ಭಾರತೀಯ ರಾಷ್ಟ್ರೀಯತೆ ಮತ್ತು ಪೌರತ್ವದ ಮೇಲೆ ಗದಾಪ್ರಹಾರವನ್ನು ಮಾಡುತ್ತಿರುವ ಸ್ಪಷ್ಟವಾಗುತ್ತಿದೆ. ವಿಶೇಷವಾಗಿ ಈಗಿನ ಪೌರತ್ವ ತಿದ್ದುಪಡಿ ಕಾಯ್ದೆಯು ಇದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಇದರ ಜತೆಗೆ ಪ್ರಜೆಗಳ ರಾಷ್ಟ್ರೀಯ ನೋಂದಣಿ ಪ್ರಕ್ರಿಯೆಯನ್ನು ತರಾತುರಿಯಲ್ಲಿ ಆರಂಭಿಸುತ್ತಿರುವುದೂ ಒಂದು ರಾಜಕೀಯ ಹಲ್ಲೆಯಂತಾಗಿದೆ.

ಕೇಂದ್ರ ಸರ್ಕಾರದ ಈ ಎರಡೂ ನಿರ್ಧಾರಗಳನ್ನು ಖಂಡಿಸಲಾಗುತ್ತದೆ ಮತ್ತು ಇದರ ವಿರುದ್ಧ ಪ್ರತಿಭಟನೆ ಮಾಡಲಾಗುತ್ತದೆ. ಮೂರು ಇಸ್ಲಾಮಿಕ್ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದು ಇಲ್ಲಿ ನೆಲೆಸಿರುವ ನಿರಾಶ್ರಿತರಿಗೆ ಭಾರತೀಯ ಪೌರತ್ವ ಕೊಡುವುದು ಸೇರಿದಂತೆ ಮತ್ತಿತರೆ ಸವಲತ್ತುಗಳನ್ನು ನೀಡುವ ಭರವಸೆಯನ್ನು ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಕೊಡಲಾಗಿದೆ. ಹಿಂದೂಗಳು, ಸಿಖ್ಖರು, ಬೌದ್ಧರು, ಜೈನ್ಮ ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುತ್ತದೆ. ಆದರೆ, ಈ ಮೂರೂ ದೇಶಗಳಿಂದ ಬಂದಿರುವ ಒಬ್ಬೇ ಒಬ್ಬ ಮುಸ್ಲಿಂನಿಗೂ ಈ ಅವಕಾಶವನ್ನು ಕಲ್ಪಿಸಲಾಗುತ್ತಿಲ್ಲ. ಉದಾಹರಣೆಗೆ ಪಾಕಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾದ ಅಹ್ಮದೀಯರು, ಮ್ಯಾನ್ಮಾರ್ ನಿಂದ ಬಂದ ರೊಹಿಂಗ್ಯಾಗಳು ಅಥವಾ ಶ್ರೀಲಂಕಾದಿಂದ ಬಂದಿರುವ ತಮಿಳರಿಗೆ ಇಲ್ಲಿ ಆಶ್ರಯ ಪಡೆಯಲು ಸಾಧ್ಯವೇ ಇಲ್ಲ.

ಮುಸ್ಲಿಂರನ್ನು ಎರಡನೇ ದರ್ಜೆಗೆ ಇಳಿಸುವಂತಹ ಈ ಕಾಯ್ದೆಗೆ ತೀವ್ರವಾದ ವಿರೋಧಗಳು ವ್ಯಕ್ತವಾಗಬೇಕು. ಏಕೆಂದರೆ, ಇದು ತಾರತಮ್ಯ ಮಾಡುವಂತಹ ಮತ್ತು ಒಂದು ಧರ್ಮವನ್ನು ಓಲೈಸಿ ಮತ್ತೊಂದು ಧರ್ಮವನ್ನು ಕೀಳಾಗಿ ಕಾಣುವಂತಹ ತಿದ್ದುಪಡಿ ಕಾಯ್ದೆಯಾಗಿದೆ. ಇದು ಸಂವಿಧಾನ ಪರಿಚ್ಛೇದ 13, 14, 15, 16 ಮತ್ತು 21 ರ ಜಾತ್ಯತೀತ ತತ್ತ್ವಗಳಿಗೆ ವಿರುದ್ಧವಾಗಿದೆ ಮತ್ತು ಉಲ್ಲಂಘನೆ ಮಾಡಿದಂತಾಗುತ್ತದೆ. ಈ ಕಾರಣದಿಂದಲೇ ಇದನ್ನು ತಿರಸ್ಕರಿಸಲೇಬೇಕು ಎಂದು ಗಣ್ಯರು ತಮ್ಮ ಖಂಡನಾ ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ ಸಿ) ಗಳ ಮೂಲಕ ಹಾಲಿ ಸರ್ಕಾರವು ಭಾರತೀಯ ಸಮಾಜದಲ್ಲಿ ದೊಡ್ಡ ಮಟ್ಟದ ಬಿರುಕನ್ನು ಉಂಟುಮಾಡಲು ಹೊರಟಂತಿದೆ. ಈಗಾಗಲೇ ಈ ಕೆಟ್ಟ ನಿರ್ಧಾರದಿಂದ ಅಸ್ಸಾಂ 2013 ರಿಂದ ನಲುಗಿ ಹೋಗಿದೆ.

ಕಿತ್ತು ತಿನ್ನುತ್ತಿರುವ ಆಹಾರ ಭದ್ರತೆ, ನಿರುದ್ಯೋಗ, ಜಾತಿ ಪದ್ಧತಿ, ಸಮುದಾಯ, ಲಿಂಗ ತಾರತಮ್ಯದಂತಹ ಸಮಸ್ಯೆಗಳನ್ನು ಪರಿಹರಿಸುವುದರ ಬದಲಾಗಿ ಎನ್ಆರ್ ಸಿ ವಿಸ್ತಾರವಾದ ದೇಶಾದ್ಯಂತ ಜನರಲ್ಲಿ ವ್ಯಾಪಕವಾದ ವಿಭಜನೆ ಮತ್ತು ಸಂಕಷ್ಟಗಳನ್ನು ತಂದೊಡ್ಡುತ್ತದೆ. ಅಲ್ಲದೇ, ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ ಎಂಬ ಆತಂಕ ಈ ಗಣ್ಯರದ್ದಾಗಿದೆ.

ಈ ಹಿನ್ನೆಲೆಯಲ್ಲಿ ಕೆಲವೇ ಕೆಲವು ಧರ್ಮಗಳನ್ನು ಓಲೈಸುವಂತಹ ಇಂತಹ ಕಾನೂನುಗಳು ಬರಬಾರದು ಎಂದು ಗಣ್ಯರು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರ ಮಂಡಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ 2019 ನ್ನು ತಿರಸ್ಕರಿಸುವಂತೆ ಬರೆಯಲಾಗಿರುವ ಖಂಡನಾ ಪತ್ರಕ್ಕೆ ಸಹಿಹಾಕಿರುವವರಲ್ಲಿ ಪ್ರಮುಖರೆಂದರೆ:- ನ್ಯಾಯಮೂರ್ತಿ ಪಿ.ಬಿ.ಸಾವಂತ್, ನ್ಯಾಯಮೂರ್ತಿ ಹೊಸಬೆಟ್ ಸುರೇಶ್, ನ್ಯಾಯಮೂರ್ತಿ ಬಿಜಿ ಕೊಲ್ಸೆ ಪಾಟೀಲ್, ಜಾವೇದ್ ಅಖ್ತರ್, ಸ್ವಾಮಿ ಅಗ್ನಿವೇಶ್, ಅನಿಲ್ ಧಾರ್ಕರ್, ನಂದನ್ ಮಾಲುಸ್ತೆ, ನಾಸಿರುದ್ದೀನ್ ಶಾ, ಸಯೀದ್ ಮಿರ್ಜಾ, ಸೈರಸ್ ಗುಝ್ಞಾರ್, ಹರ್ಷ್ ಮಂದರ್, ಅಪರ್ಣ ಸೇನ್, ಅಡ್ಮಿರಲ್ ರಾಮದಾಸ್, ಮಲ್ಲಿಕಾ ಸಾರಾಬಾಯಿ, ಝೀನಕ್ ಶೌಕತ್ ಅಲಿ, ನಸ್ರೀನ್ ಫಝಾಲ್ ಭೋಯ್, ಪ್ರಭಾತ್ ಪಾಟ್ನಾಯಕ್, ಉತ್ಸ ಪಾಟ್ನಾಯಕ್, ಗೀತಾ ಕಪೂರ್, ತೀಸ್ತಾ ಸೆಟಲ್ವಾದ್, ಜಾವೇದ್ ಆನಂದ್, ಅಂಜುಂ ರಾಜಾಬಾಲಿ, ಮಿಹಿರಿ ದೇಸಾಯಿ, ಸಂಧ್ಯಾ ಗೋಖಲೆ, ಚಿತ್ರಾ ಪಾಲೇಕರ್ ಮತ್ತು ಇತರರು.

ಆಧಾರ: ದಿ ವೈರ್

Tags: ಕೇಂದ್ರ ಸರ್ಕಾರದೇಶನಂಬಿಕೆಗಳುಪೌರತ್ವಮಸೂದೆಮಾನ್ಯತೆಮುಸ್ಲಿಂರುಶಾಸನಬದ್ಧ
Previous Post

ಭವಿಷ್ಯದಲ್ಲಿ ಕೆ.ಆರ್.ಪೇಟೆ ಮೇಲೆ ಕಣ್ಣಿಟ್ಟೇ ಬಿಜೆಪಿ ಗೆಲ್ಲಿಸಿದ ವಿಜಯೇಂದ್ರ

Next Post

ನರಮೇಧವೋ, ನಾನಾವತಿ ಆಯೋಗವೋ, ನರೇಂದ್ರ ಮೋದಿಯೋ? ಯಾವುದು ಸುಳ್ಳು?

Related Posts

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
0

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ (Heart attack) ನಿಂದ ಸರಣಿ ಮುಂದುವರೆದಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕೇಂದ್ರದ ಆರೋಗ್ಯ ಇಲಾಖೆಯಿಂದ (Central health department)...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
ನರಮೇಧವೋ

ನರಮೇಧವೋ, ನಾನಾವತಿ ಆಯೋಗವೋ, ನರೇಂದ್ರ ಮೋದಿಯೋ? ಯಾವುದು ಸುಳ್ಳು?

Please login to join discussion

Recent News

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada