• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರಧಾನಿ ಆರ್ಥಿಕ ಸಲಹೆಗಾರರಿಗೆ ಅರ್ಧಚಂದ್ರ- ಹಳೆಯ ವ್ಯಾಧಿ

by
September 28, 2019
in ದೇಶ
0
ಪ್ರಧಾನಿ ಆರ್ಥಿಕ ಸಲಹೆಗಾರರಿಗೆ ಅರ್ಧಚಂದ್ರ- ಹಳೆಯ ವ್ಯಾಧಿ
Share on WhatsAppShare on FacebookShare on Telegram

ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಮಂಡಳಿಯ ಅರೆಕಾಲಿಕ ಸದಸ್ಯರಾಗಿದ್ದ ರತಿನ್ ರಾಯ್ ಮತ್ತು ಶಮಿಕಾ ರವಿ ಅವರನ್ನು ಕೈ ಬಿಡಲಾಗಿದೆ. ಕಾರಣಗಳನ್ನು ಕೇಂದ್ರ ಸರ್ಕಾರ ತಿಳಿಸಿಲ್ಲವಾದರೂ ಸ್ಪಷ್ಟವೇದ್ಯ.

ADVERTISEMENT

ಸರ್ಕಾರ ಯಾವುದಾದರೂ ಸರಿ. ಬಿಜೆಪಿಯದೇ ಇರಲಿ, ಕಾಂಗ್ರೆಸ್ಸಿನದೇ ಆಗಲಿ. ಸರ್ಕಾರಗಳು ಸರ್ಕಾರಗಳೇ. ಟೀಕೆ ಟಿಪ್ಪಣಿಗಳನ್ನು ಸಹಿಸದಿರುವುದು ಅವುಗಳ ಜಾಯಮಾನ. ಪ್ರತಿಪಕ್ಷಗಳ ರಚನಾತ್ಮಕ ಟೀಕೆಗಳನ್ನೇ ನಿತ್ತರಿಸುವುದಿಲ್ಲ. ಇನ್ನು ತಾವೇ ನೇಮಕ ಮಾಡಿದವರಿಂದ ಟೀಕೆ ಟಿಪ್ಪಣಿ ವಿಮರ್ಶೆಗಳನ್ನು ಸಹಿಸುತ್ತವೆಂದು ಹೇಗೆ ನಿರೀಕ್ಷಿಸಲು ಬಂದೀತು? ಟೀಕಿಸಿದವರಿಗೆ ಪ್ರತ್ಯಕ್ಷವಾಗಿಯೋ ಇಲ್ಲವೇ ಪರೋಕ್ಷವಾಗಿಯೋ ಅರ್ಧಚಂದ್ರ ಪ್ರಯೋಗ ಮಾಡಿರುವ ಪ್ರಕರಣಗಳು ಭಾರತದ ಆಡಳಿತದ ಇತಿಹಾಸದಲ್ಲಿ ಸಾವಿರಾರು ಸಂಖ್ಯೆಯಲ್ಲಿವೆ. ಇವುಗಳ ಸಾಲಿಗೆ ರತಿನ್ ರಾಯ್ ಮತ್ತು ಶಮಿಕ ರವಿ ಪ್ರಕರಣವೂ ಸೇರಿತು ಅಷ್ಟೇ.

ರಿಸರ್ವ್ ಬ್ಯಾಂಕಿನ ಅತ್ಯುತ್ತಮ ಗೌರ್ನರ್ ಗಳಲ್ಲಿ ಒಬ್ಬರೆನಿಸಿದ್ದ ರಘುರಾಮ ರಾಜನ್ ಅವರನ್ನು ಉಳಿಸಿಕೊಳ್ಳುವ ಔಪಚಾರಿಕ ಪ್ರಯತ್ನ ಕೂಡ ನಡೆಯಲಿಲ್ಲ. ಅವರ ಸ್ಥಾನಕ್ಕೆ ಮೋದಿ ಸರ್ಕಾರವೇ ಆರಿಸಿ ನೇಮಕ ಮಾಡಿದ ಉರಿಜಿತ್ ಪಟೇಲ್ ರಿಸರ್ವ್ ಬ್ಯಾಂಕ್ ಮೀಸಲು ನಿಧಿಗಳನ್ನು ಸರ್ಕಾರಕ್ಕೆ ವರ್ಗಾವಣೆ ಮಾಡುವ ವಿಚಾರದಲ್ಲಿ ತಣ್ಣಗೆ ತಿರುಗಿಬಿದ್ದರು. ತಾವಾಗಿಯೇ ನಿರ್ಗಮಿಸುವ ಸ್ಥಿತಿ ಸೃಷ್ಟಿಸಲಾಯಿತು. ಅರ್ಥಸ್ಥಿತಿಯ ಆರೋಗ್ಯ ಕುರಿತು ವಸ್ತುನಿಷ್ಠವಾಗಿ ಮಾತಾಡಿದ ಉಪಗೌರ್ನರ್ ವಿರಲ್ ಆಚಾರ್ಯ ಕೂಡ ಮನೆಗೆ ಹೋದರು. ಆಳುವವರು ದೇಶವನ್ನು ಮತ್ತು ಅದರ ಆಡಳಿತ ವ್ಯವಹಾರಗಳನ್ನು ಸ್ವಪ್ರತಿಷ್ಠೆಯ, ಅಹಂಕಾರದ ಹಾಗೂ ಆತ್ಮರತಿಯ ವಿಷಯವಾಗಿಸಿಕೊಂಡಿರುವುದೇ ಈ ವ್ಯಾಧಿಯ ತಾಯಿಬೇರು. ಎಲ್ಲ ಪಕ್ಷಗಳೂ ಒಟ್ಟಿಗೆ ಕುಳಿತು ಈ ವ್ಯಾಧಿಗೆ ಮದ್ದು ಅರೆಯುವ ತನಕ, ದೇಶವನ್ನು ಕಾಡುವ ಸಮಸ್ಯೆಗಳನ್ನು ಪಕ್ಷಪಾತದ, ಸ್ವಪ್ರತಿಷ್ಠೆಯ ಪಕ್ಷ ರಾಜಕಾರಣದಿಂದ ಎಲ್ಲಿಯವರೆಗೆ ಮೇಲೆತ್ತದೆ ಇರುವ ತನಕ ಈ ವ್ಯಾಧಿಯಿಂದ ಬಿಡುಗಡೆ ಇಲ್ಲ.

ಕೈಬಿಡಲಾದ ಸದಸ್ಯ ರತಿನ್ ರಾಯ್ ಅವರು ಇತ್ತೀಚೆಗೆ `ಸದ್ದುಗದ್ದಲವಿಲ್ಲದೆ ಬಂದು ನಿಂತಿರುವ ವಿತ್ತೀಯ ಬಿಕ್ಕಟ್ಟಿನ’ ಕುರಿತು ಮಾತಾಡಿದ್ದರು. ಅಂತಾರಾಷ್ಟ್ರೀಯ ಬಂಡವಾಳ ಮಾರುಕಟ್ಟೆಯಿಂದ ಹಣ ಎತ್ತಲು ಸಾಗರೋತ್ತರ ಬಾಂಡ್ ಗಳನ್ನು ವಿತರಿಸುವ ಇತ್ತೀಚಿನ ಕೇಂದ್ರ ಸರ್ಕಾರದ ಕ್ರಮವನ್ನೂ ಅವರು ಟೀಕಿಸಿದ್ದು ಎಚ್ಚರಿಕೆಯ ಹೆಜ್ಜೆಯಿರಿಸುವಂತೆ ಸೂಚಿಸಿದ್ದರು. ದೇಶ ಸಂರಚನಾತ್ಮಕ ಮಂದಗತಿಯನ್ನು ಎದುರಿಸಿದೆ ಎಂದು ಶಮಿಕಾ ರವಿ ಕೂಡ ಅರ್ಥಸ್ಥಿತಿಯ ಕುರಿತು ಆತಂಕ ಪ್ರಕಟಿಸಿದ್ದರು. ಮಂದಗತಿಯನ್ನು ಎದುರಿಸಲು ಭಾರೀ ಸುಧಾರಣೆಗಳ ಅಗತ್ಯವಿದೆ. ಸಣ್ಣಪುಟ್ಟ ಕ್ರಮಗಳಿಂದ ಪ್ರಯೋಜನವಿಲ್ಲ. ದೇಶದ ಆರ್ಥಿಕ ಸ್ಥಿತಿಗತಿಯನ್ನು ಕೇವಲ ಹಣಕಾಸು ಮಂತ್ರಾಲಯಕ್ಕೆ ಒಪ್ಪಿಸಿ ಕೈಕಟ್ಟಿ ಕುಳಿತುಕೊಳ್ಳಲು ಬರುವುದಿಲ್ಲ. ಕಂಪನಿಯೊಂದರ ಪ್ರಗತಿಯನ್ನು ಅದರ ಲೆಕ್ಕಪತ್ರ ಶಾಖೆಗೆ ಒಪ್ಪಿಸಿ ಕೈ ಕಟ್ಟಿ ಕುಳಿತುಕೊಳ್ಳುವುದು ಎಷ್ಟು ಅವಿವೇಕವೋ ಅಷ್ಟೇ ಅವಿವೇಕ ಇದು ಕೂಡ ಎಂದು ಶಮಿಕಾ ವಿಮರ್ಶಿಸಿದ್ದರು.

2014ರಲ್ಲಿ ಮನಮೋಹನ್ ಸರ್ಕಾರದ ನಿರ್ಗಮನದ ಜೊತೆಗೆ ಸಿ. ರಂಗರಾಜನ್ ಅಧ್ಯಕ್ಷತೆಯ ಸಲಹಾ ಮಂಡಳಿಯ ಅಧಿಕಾರಾವಧಿಯೂ ತೀರಿತ್ತು. ಮೋದಿ ಸರ್ಕಾರ ಈ ಮಂಡಳಿಗೆ ಬಿಬೇಕ್ ದೇವ್ರಾಯ್ ಅಧ್ಯಕ್ಷತೆಯಲ್ಲಿ ಪುನಃ ಜೀವ ನೀಡಿದ್ದು 2017ರ ಕಡೆಯ ಭಾಗದಲ್ಲಿ. ಪ್ರಧಾನಿ ತನಗೆ ವಹಿಸಿದ ಅಥವಾ ತನಗೆ ಸೂಕ್ತವೆಂದು ತೋರಿದ ಆರ್ಥಿಕ ಮತ್ತಿತರೆ ವಿಷಯಗಳು ದೇಶದ ಅರ್ಥನೀತಿಯ ಮೇಲೇ ಉಂಟು ಮಾಡಬಹುದಾದ ಸಾಧಕ ಬಾಧಕಗಳನ್ನು ವಿಶ್ಲೇಷಿಸಿ ಅವರಿಗೆ ಸಲಹೆ ನೀಡುವುದು ಈ ಮಂಡಳಿಯ ಕರ್ತವ್ಯ.

ಪ್ರಧಾನಿ ಆರ್ಥಿಕ ಸಲಹಾ ಮಂಡಳಿ ಮೊದಲ ಬಾರಿಗೆ ರೂಪು ತಳೆದದ್ದು ಮೂರೂವರೆ ದಶಕಗಳ ಹಿಂದೆ ಇಂದಿರಾಗಾಂಧಿಯವರ ಕಾಲದಲ್ಲಿ. ಅವರು 1980ರಲ್ಲಿ ಅಧಿಕಾರಕ್ಕೆ ಮರಳಿದ್ದ ಸಂದರ್ಭ. ಜಾಗತಿಕ ತೈಲ ಬಿಕ್ಕಟ್ಟು ಮತ್ತು ಬರಗಾಲದಿಂದ ರಾಷ್ಟ್ರೀಯ ಆದಾಯ ಕುಗ್ಗಿತ್ತು. ಬೆಲೆ ಏರಿಕೆ ಕಾಡಿತ್ತು. ಅಂದಿನ ಅರ್ಥಮಂತ್ರಿ ಆರ್. ವೆಂಕಟರಾಮನ್. ದೆಹಲಿ ಅರ್ಥಶಾಸ್ತ್ರಶಾಲೆಯಲ್ಲಿ ಅಮರ್ತ್ಯಸೇನ್ ಮತ್ತು ಮನಮೋಹನಸಿಂಗ್ ಅವರೊಂದಿಗೆ ಪಾಠ ಹೇಳುತ್ತಿದ್ದ ಪ್ರೊ. ಸುಖಮೊಯ್ ಚಕ್ರವರ್ತಿ ಅವರನ್ನು ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡರು ಇಂದಿರಾಗಾಂಧಿ. ಚಕ್ರವರ್ತಿ ಅವರು ಇಂದಿರಾ ನಂತರ ರಾಜೀವ್ ಗಾಂಧೀ ಕಾಲದಲ್ಲೂ ಮುಂದುವರೆದರು. ವಿ. ಪಿ. ಸಿಂಗ್ ಅಂದಿನ ಹಣಕಾಸು ಮಂತ್ರಿ. ಈ ಅವಧಿಯಲ್ಲೂ ಸಲಹಾ ಮಂಡಳಿ ಗುರುತರ ಕಾರ್ಯ ನಿರ್ವಹಿಸಿತು. ಸಿ. ರಂಗರಾಜನ್ ಮತ್ತು ಕೆ. ಎನ್. ರಾಜ್ ಅವರು ಆರಂಭದ ದಿನಗಳಲ್ಲಿ ಈ ಮಂಡಳಿಯ ಸದಸ್ಯರಾಗಿದ್ದರು. ಚಂದ್ರಶೇಖರ್ ಕೆಲ ಕಾಲ ಪ್ರಧಾನಿಯಾಗಿದ್ದಾಗ ಮನಮೋಹನ ಸಿಂಗ್ ಕೂಡ ಈ ಮಂಡಳಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.

1998ರಲ್ಲಿ ಈ ಸಲಹಾ ಮಂಡಳಿಗೆ ಖುದ್ದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಅಧ್ಯಕ್ಷರಾದರು. ಐಜಿ ಪಟೇಲ್, ಪಿ. ಎನ್. ಧಾರ್, ಅರ್ಜುನ್ ಸೇನ್ ಗುಪ್ತಾ, ಅಶೋಕ್ ದೇಸಾಯಿ, ಮಾಂಟೆಕ್ ಸಿಂಗ್ ಆಹ್ಲುವಾಲಿಯಾ, ಬ್ರಜೇಶ್ ಮಿಶ್ರಾ, ಎನ್. ಕೆ. ಸಿಂಗ್, ಜಿ. ವಿ. ರಾಮಕೃಷ್ಣ, ಕಿರೀಟ್ ಪಾರೀಖ್ ಮುಂತಾದ ಹೇಮಾಹೇಮಿಗಳು ಈ ಮಂಡಳಿಯ ಸದಸ್ಯರಾಗಿದ್ದರು.

2004ರಲ್ಲಿ ಅಂದಿನ ಪ್ರಧಾನಿ ಮನಮೋಹನ ಸಿಂಗ್ ರಚಿಸಿದ್ದ ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿಗೆ ರಂಗರಾಜನ್ ಅವರಂತಹ ಘಟಾನುಘಟಿ ಅಧ್ಯಕ್ಷರಾಗಿದ್ದರು. ಪಿ. ಚಿದಂಬರಂ ಮತ್ತು ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಗಳಾಗಿದ್ದ ಅವಧಿ. ಮಾಂಟೆಕ್ ಸಿಂಗ್ ಆಹ್ಲೂವಾಲಿಯಾ ಯೋಜನಾ ಆಯೋಗದ ಉಪಾಧ್ಯಕ್ಷರು. ಈ ಹತ್ತು ವರ್ಷಗಳ ಅವಧಿಯಲ್ಲಿ ಅರ್ಥಸ್ಥಿತಿ ಮತ್ತು ಇತರೆ ಹಲವು ವಿಷಯಗಳ ಕುರಿತು ಪ್ರಧಾನಿ ಅರ್ಥಿಕ ಸಲಹಾ ಮಂಡಳಿಯು ತನ್ನದೇ ಪ್ರತ್ಯೇಕ ವಿಮರ್ಶೆಯನ್ನು ಹೊರತಂದದ್ದು ಉಂಟು.

ಮಂಡಳಿಯ ಮೂರು ದಶಕಗಳ ಇತಿಹಾಸದಲ್ಲಿ ಮನಮೋಹನ್ ಸಿಂಗ್ ಕಾಲದ ಈ ಮಂಡಳಿಯಷ್ಟು ಸಬಲ ಮತ್ತು ಪ್ರಭಾವಿಯಾದದ್ದು ಮತ್ತೊಂದಿಲ್ಲ ಎನ್ನಲಾಗಿದೆ. ಪ್ರಧಾನಮಂತ್ರಿಯವರ ಸಂಪೂರ್ಣ ವಿಶ್ವಾಸವನ್ನು ಹೊಂದಿದ್ದ ಕಾರಣಕ್ಕಾಗಿಯೇ ಅದು ಅಷ್ಟು ಸದೃಢವಾಗಿತ್ತು. ಇಂತಹ ಪರಂಪರೆಯ ಮಂಡಳಿಯೊಂದಕ್ಕೆ ಅರೆ ಸ್ವಾಯತ್ತ ಅಧಿಕಾರವನ್ನಾದರೂ ದಯಪಾಲಿಸುವುದು ಜನತಾಂತ್ರಿಕ ದೇಶವೊಂದಕ್ಕೆ ಕ್ಷೇಮಕರ.

Tags: Economic Advisory CouncilGovernment of IndiaNirmala SitharamanPrime Minister Narendra ModiRathin RoyShamika RaviUnion Finance Ministryಆರ್ಥಿಕ ಸಲಹಾ ಮಂಡಳಿನಿರ್ಮಲಾ ಸೀತಾರಾಮನ್ಪ್ರಧಾನಿ ನರೇಂದ್ರ ಮೋದಿಭಾರತ ಸರ್ಕಾರರತಿನ್ ರಾಯ್ಶಮಿಕಾ ರವಿಹಣಕಾಸು ಸಚಿವಾಲಯ
Previous Post

ಕಾಂಗ್ರೆಸ್ ಒಳಜಗಳ: ಯುದ್ಧಕ್ಕೂ ಮೊದಲಿನ ಶಸ್ತ್ರತ್ಯಾಗ

Next Post

ದೇಶದ ಕಾರ್ಮಿಕರ ಕಲ್ಯಾಣ ಮಂಡಳಿಗಳಲ್ಲಿ ಕೊಳೆಯುತ್ತಿದೆ 30,000 ಕೋಟಿ!

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ದೇಶದ ಕಾರ್ಮಿಕರ ಕಲ್ಯಾಣ ಮಂಡಳಿಗಳಲ್ಲಿ ಕೊಳೆಯುತ್ತಿದೆ 30

ದೇಶದ ಕಾರ್ಮಿಕರ ಕಲ್ಯಾಣ ಮಂಡಳಿಗಳಲ್ಲಿ ಕೊಳೆಯುತ್ತಿದೆ 30,000 ಕೋಟಿ!

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada