• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಂಗಾಳ ಕೊಲ್ಲಿಗೆ ಅಪ್ಪಳಿಸಲಿದೆ ʼಅಂಫಾನ್‌ʼ; ಭಾರತ, ಬಾಂಗ್ಲಾಕ್ಕೆ ಆತಂಕ!

by
May 19, 2020
in ದೇಶ
0
ಬಂಗಾಳ ಕೊಲ್ಲಿಗೆ ಅಪ್ಪಳಿಸಲಿದೆ ʼಅಂಫಾನ್‌ʼ; ಭಾರತ
Share on WhatsAppShare on FacebookShare on Telegram

ಬಂಗಾಳಕೊಲ್ಲಿಯಲ್ಲಿ ಭಾರೀ ಚಂಡಮಾರುತವೊಂದು ಭಾರತ ಹಾಗೂ ಬಾಂಗ್ಲಾದೇಶದ ತೀರ ಪ್ರದೇಶಗಳಿಗೆ ಬುಧವಾರ ರಾತ್ರಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಪ್ರದೇಶದ 5 ಲಕ್ಷಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ADVERTISEMENT

ಬಂಗಾಳ ಕೊಲ್ಲಿಯಲ್ಲಿ 220 ರಿಂದ 230 ಕಿ.ಮೀ ವೇಗದಲ್ಲಿ ಚಲಿಸುತ್ತಿರುವ ʼಅಂಫಾನ್‌ʼ ಚಂಡಮಾರುತವು, 1999 ರಲ್ಲಿ ಒಡಿಸ್ಸಾ ತೀರ ಪ್ರದೇಶದಲ್ಲಿ ಅಪ್ಪಳಿಸಿದ ಚಂಡಮಾರುತದ ನಂತರ ಬಂಗಾಳ ಕೊಲ್ಲಿಯಲ್ಲಿ ಕಂಡು ಬರುವ ಭೀಕರವಾದ ಚಂಡಮಾರುತವಾಗಿರಲಿದೆ ಎಂದು ಭಾರತ ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಮೃತ್ಯುಂಜಯ ಮೊಹಪಾತ್ರ ಹೇಳಿದ್ದಾರೆ. 1999 ರ ಚಂಡಮಾರುತವು ಒಡಿಸ್ಸಾದಲ್ಲಿ 10 ಸಾವಿರ ಮಂದಿಯನ್ನು ಬಲಿ ಪಡೆದಿತ್ತು.

ಗಾಳಿಯು ಗಂಟೆಗೆ 265 ಕಿ.ಮೀ ತನಕ ವೇಗ ಹೆಚ್ಚಳವಾಗುವ ಸಾಧ್ಯತೆ ಇದೆ. ಗಾಳಿಯ ಈ ವೇಗವು ಬೆಳೆಗಳು, ತೋಟಗಳು, ಮರಗಳು, ಮಣ್ಣಿನ ಮನೆಗಳು ಮತ್ತು ಸಂವಹನ ಮತ್ತು ವಿದ್ಯುತ್ ಕಂಬಗಳಿಗೆ ಹಾನಿಯಾಗುವಷ್ಟು ತೀವ್ರವಾಗಿರುತ್ತದೆ, ಜೊತೆಗೆ ರಸ್ತೆ ಸಂಚಾರ ಮತ್ತು ಅಗತ್ಯ ವಸ್ತುಗಳ ಸಾಗಣೆಗೆ ಅಡ್ಡಿಯಾಗುತ್ತದೆ. ದೊಡ್ಡ ದೊಡ್ಡ ಬೋಟುಗಳು ಹಾಗೂ ಹಡಗುಗಳು ತಮ್ಮ ಲಂಗರು ಪ್ರದೇಶದಲ್ಲಿ ಹಾಳಾಗುವ ಸಾಧ್ಯತೆಯಿದೆಯೆಂದು ಭಾರತದ ಹವಾಮಾನ ಕಛೇರಿ ಹೇಳಿಕೆ ನೀಡಿದೆ.

ಭಾರತ ಕಳೆದ ನಾಲ್ಕು ದಶಕಗಳಲ್ಲಿಯೇ ಮೊದಲ ಬಾರಿಗೆ ಪೂರ್ಣ ವರ್ಷದ ಆರ್ಥಿಕ ಕುಗ್ಗುವಿಕೆಯ ಕಡೆಗೆ ಸಾಗುತ್ತಿದೆ. ಎಪ್ರಿಲ್ ನಿಂದ ಬಾಂಗ್ಲಾದ ಜಿಡಿಪಿಯೂ ಕುಸಿಯುತ್ತಿದೆ. ಕರೋನಾ ಸಾಂಕ್ರಾಮಿಕ ಹಾಗೂ ಆರ್ಥಿಕ ಕುಸಿತಗಳ ದೊಡ್ಡ ಹೊಡೆತ ಬಿದ್ದಿರುವ ಬಾಂಗ್ಲಾ ಹಾಗೂ ಭಾರತಕ್ಕೆ ಚಂಡಮಾರುತವು ಭಾರೀ ದೊಡ್ಡ ನಷ್ಟ ತರಬಲ್ಲದೆಂದು ಊಹಿಸಲಾಗಿದೆ.

ಬಾಂಗ್ಲಾದೇಶವು ತನ್ನ ಕರಾವಳಿ ಪ್ರದೇಶದ 50 ಲಕ್ಷ ಜನರನ್ನು ಸ್ಥಳಾಂತರಿಸಲು 12,078 ತಾತ್ಕಾಲಿಕ ಶೆಲ್ಟರ್‌ ಗಳನ್ನು ನಿರ್ಮಿಸಿದೆ ಎಂದು ವಿಪತ್ತು ನಿರ್ವಹಣೆ ಮತ್ತು ಪರಿಹಾರ ಸಚಿವ ಎನಾಮುರ್ ರಹಮಾನ್ ಢಾಕಾದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಭಾರತದಲ್ಲಿ NDRF ನ 25 ತಂಡಗಳು ಈಗಾಗಲೇ ಸ್ಥಳದಲ್ಲಿ ಸನ್ನದ್ಧವಾಗಿದ್ದು, ಇತರೆ 12 ತಂಡಗಳನ್ನು ಪ್ರತ್ಯೇಕವಾಗಿ ಮೀಸಲಿರಿಸಲಾಗಿದೆ.

ಒಡಿಸ್ಸಾ, ಸೋಮವಾರ ಸಂಜೆಯಿಂದ ತನ್ನ ಕರಾವಳಿ ಪ್ರದೇಶದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲು ಶುರು ಮಾಡಿದೆ. ಒಡಿಸ್ಸಾದಲ್ಲಿ 560 ಶಾಶ್ವತ ಚಂಡಮಾರುತ ಆಶ್ರಯಗಳಿವೆ, ಅಲ್ಲದೆ 7 ಸಾವಿರಕ್ಕಿಂತಲೂ ಹೆಚ್ಚಿನ ಸಾರ್ವಜನಿಕ ಕಟ್ಟಡಗಳನ್ನು ಜನರಿಗೆ ತಾತ್ಕಾಲಿಕವಾಗಿ ತಂಗಲು ಗುರುತಿಸಲಾಗಿದೆ ಎಂದು ಒಡಿಸ್ಸಾದ ವಿಶೇಷ ಪರಿಹಾರ ಕಮಿಷನರ್ ಪ್ರದೀಪ್ ಕುಮಾರ್ ಜೇನಾ ಹೇಳಿದ್ದಾರೆ.

ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮೀನುಗಾರಿಕೆ ಕಾರ್ಯಾಚರಣೆಯನ್ನು ಮೇ 20 ರವರೆಗೆ ಸ್ಥಗಿತಗೊಳಿಸಬೇಕು ಎಂದು ಭಾರತ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Tags: ‌ BangaladeshAmphanBay of bengalOdishaಅಮ್ಫಾನ್ಒಡಿಶಾಬಂಗಾಳ ಕೊಲ್ಲಿಬಾಂಗ್ಲಾದೇಶ
Previous Post

ಕಷ್ಟಕ್ಕೆ ಮರುಗುವ ವ್ಯಕ್ತಿತ್ವ ಲೋಕೇಶ್‌ ಅವರದ್ದು

Next Post

ಲಕ್ಷ್ಯ ನೀಡದ ಕಾರಣಕ್ಕೆ ಲಕ್ಷ ದಾಟಿದ ದೇಶದ ಕರೋನಾ ಪೀಡಿತರ ಸಂಖ್ಯೆ

Related Posts

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್
Top Story

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು’ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ...

Read moreDetails
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
Next Post
ಲಕ್ಷ್ಯ ನೀಡದ ಕಾರಣಕ್ಕೆ ಲಕ್ಷ ದಾಟಿದ ದೇಶದ ಕರೋನಾ ಪೀಡಿತರ ಸಂಖ್ಯೆ

ಲಕ್ಷ್ಯ ನೀಡದ ಕಾರಣಕ್ಕೆ ಲಕ್ಷ ದಾಟಿದ ದೇಶದ ಕರೋನಾ ಪೀಡಿತರ ಸಂಖ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada