• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಗೆದಷ್ಟೂ ಬಯಲಾದ ಪ್ರಕರಣಗಳೇ ಡಿಕೆಶಿ ಜಾಮೀನಿಗೆ ಮುಳುವಾಯಿತು

by
September 25, 2019
in ಕರ್ನಾಟಕ
0
ಬಗೆದಷ್ಟೂ ಬಯಲಾದ ಪ್ರಕರಣಗಳೇ ಡಿಕೆಶಿ ಜಾಮೀನಿಗೆ ಮುಳುವಾಯಿತು
Share on WhatsAppShare on FacebookShare on Telegram

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ನ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರಿಗೆ ಇಡಿ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಇದರೊಂದಿಗೆ ಶಿವಕುಮಾರ್ ಅವರಿಗೆ ಮತ್ತಷ್ಟು ದಿನ ತಿಹಾರ್ ಜೈಲೇ ಗತಿ ಎನ್ನುವಂತಾಗಿದೆ. ಅನಾರೋಗ್ಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕಾರಣವನ್ನೇ ಪ್ರಧಾನವಾಗಿಟ್ಟುಕೊಂಡು ಜಾಮೀನು ಕೊಡಿಸಲು ಶಿವಕುಮಾರ್ ಪರ ವಕೀಲರು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿದೆ. ಅನಾರೋಗ್ಯವಿದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿ. ಈಗಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಮಾಧಾನ ತರದಿದ್ದರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿ ಎಂದು ಹೇಳಿದ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಗುರುವಾರ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ವಕೀಲರು ನಿರ್ಧರಿಸಿದ್ದಾರೆ.

ADVERTISEMENT

ಇಡಿ ಅಧಿಕಾರಿಗಳು ಡಿ. ಕೆ. ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ಕಾರಣ, ದೆಹಲಿಯ ಫ್ಲಾಟ್ ಗಳಲ್ಲಿ ಪತ್ತೆಯಾದ 8.59 ಕೋಟಿ ರೂಪಾಯಿ. ಆದರೆ, ಇದಿಷ್ಟೇ ಅಂಶದ ಬಗ್ಗೆ ವಿಚಾರಣೆ ನಡೆದಿದ್ದರೆ ಶಿವಕುಮಾರ್ ಅವರಿಗೆ ಸುಲಭವಾಗಿ ಜಾಮೀನು ಲಭ್ಯವಾಗುತ್ತಿತ್ತು. ಆದರೆ, ಇಡಿ ತನಿಖಾಧಿಕಾರಿಗಳು ಬಗೆದಷ್ಟೂ ಒಂದೊಂದೇ ಪ್ರಕರಣಗಳು ಇದಕ್ಕೆ ಸೇರಿಕೊಂಡವು. ಪುತ್ರಿ ಐಶ್ವರ್ಯಾ ವಿಚಾರಣೆ ವೇಳೆ ನೀಡಿದ ಹೇಳಿಕೆಗಳು ಕೂಡ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿತು. ಇದರ ಪರಿಣಾಮ ಶಿವಕುಮಾರ್ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಇಡಿ ಅಧಿಕಾರಿಗಳಿಗೆ ಪ್ರಬಲ ಕಾರಣಗಳು ಸಿಕ್ಕಿದವು.

ಆರ್ಥಿಕ ಅಪರಾಧಗಳ ಕುರಿತು ಇಡಿ ನಡೆಸುತ್ತಿರುವ ತನಿಖೆ, ಈ ತನಿಖಾ ಸಂಸ್ಥೆಗೆ ಇರುವ ಅಧಿಕಾರಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸರಿಯಾದ ಮಾಹಿತಿಯೇ ಇಲ್ಲದ ಕಾರಣ ಶಿವಕುಮಾರ್ ಅವರಿಗೆ ಜಾಮೀನು ಸಿಗಬಹುದು ಎಂದು ಬಹುತೇಕರು ನಿರ್ಧರಿಸಿದ್ದರು. ಆದರೆ, ತೆರಿಗೆ ಪಾವತಿಸಿ ಆದಾಯ ಘೋಷಿಸಿದ ಮಾತ್ರಕ್ಕೆ ಗಳಿಸಿದ್ದೆಲ್ಲವೂ ಸಕ್ರಮವಾಗುವುದಿಲ್ಲ. ಗಳಿಸಿದ ಹಣಕ್ಕೆ ಮೂಲ ತೋರಿಸಿ ಆ ಮೂಲಗಳು ಕಾನೂನು ಬದ್ಧವಾಗಿದ್ದರೆ ಮಾತ್ರ ಅದು ಸಕ್ರಮ ಆದಾಯವಾಗುತ್ತದೆ ಎಂದು ಇಡಿ ಪರ ವಕೀಲರು ಕಳೆದ ವಿಚಾರಣೆ ವೇಳೆ ನ್ಯಾಯಾಲಯದ ಮುಂದೆ ಸ್ಪಷ್ಟಪಡಿಸಿದಾಗಲೇ ಪ್ರಕರಣ ಇಷ್ಟೊಂದು ಗಂಭೀರವಿದೆ ಎಂಬುದು ಅರ್ಥವಾಗಿದ್ದು. ಇದೀಗ ಜಾಮೀನು ನಿರಾಕರಣೆಯೊಂದಿಗೆ ಆ ಗಂಭೀರತೆಯ ಪರಿಣಾಮವೂ ಗೊತ್ತಾಗಿದೆ.

www.truthprofoundationindia.com  

ಜಾಮೀನು ನಿರಾಕರಣೆಗೆ ಇಡಿ ಆಕ್ಷೇಪಣೆಗಳೇನು

1997ರಿಂದ 2017ರವರೆಗೆ ಶಿವಕುಮಾರ್ ಅವರು ತಮ್ಮ ಕೃಷಿ ಆದಾಯ 1.38 ಕೋಟಿ ರೂ. ಎಂದು ತೋರಿಸಿದ್ದರು. ಆದರೆ, ಅವರ ಘೋಷಿತ ಆಸ್ತಿಯೇ (ತೆರಿಗೆ ಪಾವತಿಸಿದ್ದು) 800 ಕೋಟಿ ರೂಪಾಯಿ ಇದೆ. ಇಷ್ಟೊಂದು ಆದಾಯ ಬಂದಿದ್ದು ಎಲ್ಲಿಂದ ಅದರ ಮೂಲ ಯಾವುದು ಎಂಬುದು ತೋರಿಸಿಲ್ಲ. ಹೀಗಾಗಿ ಈ ಆದಾಯ ಸಕ್ರಮವಾಗಿ ಬಂದಿರುವುದಲ್ಲ. ಆದ್ದರಿಂದ ಇದೊಂದು ದೇಶದ ಆರ್ಥಿಕತೆ ಮೇಲೆ ಪ್ರಭಾವ ಬೀರಿರುವ ಪ್ರಕರಣವಾಗಿರುವುದರಿಂದ ಲಘುವಾಗಿ ಪರಿಗಣಿಸಬಾರದು. ಗಂಭೀರ ಪ್ರಕರಣಗಳಿಗೆ ಜಾಮೀನು ನೀಡಿದರೆ ತನಿಖೆಯ ಉದ್ದೇಶವೇ ವ್ಯರ್ಥವಾಗುತ್ತದೆ ಎಂಬುದು ಇಡಿಯ ಮೊದಲ ವಾದ.

ಇದೊಂದು ಗಂಭೀರ ಪ್ರಕರಣ. ಸುಮಾರು 317 ಖಾತೆಗಳ ಮೂಲಕ ಹಣದ ವಹಿವಾಟು ನಡೆದಿದೆ. ಅದರಲ್ಲೂ ಕೇವಲ ಎರಡು ಖಾತೆಗಳಲ್ಲಿ 161 ಕೋಟಿ ರೂ. ವಹಿವಾಟು ನಡೆದಿದೆ. ಈ ಎಲ್ಲಾ ವಹಿವಾಟುಗಳು ಯಾರ ಮಧ್ಯೆ ನಡೆದಿದೆ. ಅವುಗಳಲ್ಲಿ ಬೇನಾಮಿ ವ್ಯವಹಾರಗಳು ಯಾವುವು ಎಂಬುದೆಲ್ಲಾ ತನಿಖೆಯಾಗಬೇಕಿದೆ. ತನಿಖೆಯ ವ್ಯಾಪ್ತಿ ದೊಡ್ಡದಿದ್ದು, ವಿಚಾರಣೆ ಮುಕ್ತಾಯವಾಗಿಲ್ಲ. 14 ದಿನ ಶಿವಕುಮಾರ್ ಅವರು ಇಡಿ ವಶದಲ್ಲಿದ್ದರೂ ತನಿಖೆ ನಡೆಸಲು ಸಾಧ್ಯವಾಗಿದ್ದು 4 ಗಂಟೆ ಮಾತ್ರ. ಈ ಸಂದರ್ಭದಲ್ಲಿ ಅವರು ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ಕೊಟ್ಟಿಲ್ಲ. ಪುತ್ರಿಯ ಹೆಸರಿನಲ್ಲಿ 108 ಕೋಟಿ ರೂ. ಮೊತ್ತದ ಆಸ್ತಿ ಇದ್ದು, ಅದರಲ್ಲಿ 40 ಕೋಟಿ ರೂ. ಸಾಲವಿದೆ. ಈ ಸಾಲ ಕೊಟ್ಟವರು ಯಾರು ಎಂಬುದೇ ಪುತ್ರಿಗೆ ಗೊತ್ತಿಲ್ಲ. ಕುಟುಂಬದ ಹೆಸರಿನಲ್ಲಿ ಮಾತ್ರವಲ್ಲದೆ, ಅವರಿಗೆ ಗೊತ್ತಿಲ್ಲದಂತೆ ಬೇನಾಮಿ ಆಸ್ತಿ ಮಾಡಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಇವೆಲ್ಲದರ ಬಗ್ಗೆ ವಿಚಾರಣೆ ನಡೆಸಬೇಕಿದೆ. ಜಾಮೀನು ನೀಡಿದರೆ ಸಾಕ್ಷ್ಯ ನಾಶ ಮಾಡುವ ಅಥವಾ ಸಾಕ್ಷಿಗಳನ್ನು ತಿರುಚುವ ಕೆಲಸ ಆಗಬಹುದು. ಆದ್ದರಿಂದ ನ್ಯಾಯಾಂಗ ಬಂಧನದಲ್ಲಿದ್ದರೆ ಬೇಕಾದಾಗ ಕರೆಸಿ ವಿಚಾರಣೆ ನಡೆಸಬಹುದು. ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಬೇಡ ಎಂಬುದು ಇಡಿ ವಾದವಾಗಿತ್ತು. ಇದಕ್ಕೆ ನ್ಯಾಯಾಲಯ ಅಸ್ತು ಎಂದಿದೆ.

ಜಾಮೀನು ನಿರಾಕರಣೆಗೆ 5 ಕಾರಣಗಳು

1. ಇದು ಹಣದ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವಾಗಿದ್ದು, ಹಲವಾರು ಮಂದಿಯ ಮಧ್ಯೆ ಆಗಿರುವಂತಹದ್ದು. ಎಲ್ಲಾ ಮಾಹಿತಿಗಳನ್ನು ಪಡೆಯಬೇಕಾದರೆ ಇನ್ನಷ್ಟು ಮಂದಿಯನ್ನು ವಿಚಾರಣೆ ನಡೆಸಬೇಕಾಗುತ್ತದೆ. ವ್ಯವಹಾರ ನಡೆಸಿದವರೆಲ್ಲರೂ ಆಪ್ತರು, ಪರಿಚಯಸ್ಥರು ಆಗಿರುವುದರಿಂದ ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿದರೆ ಇತರರೊಂದಿಗೆ ಮುಕ್ತವಾಗಿ ಚರ್ಚಿಸಿ ತನಿಖೆಯ ದಾರಿ ತಪ್ಪಿಸಬಹುದು.

2. ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ಮಾತ್ರವಲ್ಲ, ಅವರ ಕುಟುಂಬದವರ ಹೆಸರೂ ಕೇಳಿಬಂದಿದೆ. ಅವರ ಪುತ್ರಿಯನ್ನು ಈಗಾಗಲೇ ವಿಚಾರಣೆ ನಡೆಸಲಾಗಿದೆ. ಆದರೆ, ತಾಯಿ, ಸಹೋದರ, ಪತ್ನಿಯ ವಿಚಾರಣೆ ಆಗಿಲ್ಲ. ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿದರೆ ಮುಖಾಮುಖಿ ವಿಚಾರಣೆ ಕಷ್ಟವಾಗಬಹುದು.

3. ಶಿವಕುಮಾರ್ ಅವರ ಆಸ್ತಿ ಹೆಚ್ಚಳವಾಗಿದ್ದು ಬಹುತೇಕ ಅವರು ಅಧಿಕಾರದಲ್ಲಿದ್ದಾಗ. ಅಂದರೆ, 1999-2004, 2004-2006, 2013-2018ರ ಅವಧಿಯಲ್ಲಿ. ಇಲ್ಲಿ ಅಧಿಕಾರ ದುರುಪಯೋಗವಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತದೆ. ಆ ಕುರಿತು ವಿಚಾರಣೆ ನಡೆಸಬೇಕಾದರೆ ಶಿವಕುಮಾರ್ ಹೊರಗಿರುವುದು ಸರಿಯಲ್ಲ.

4. ಬ್ಯಾಂಕ್ ಖಾತೆಗಳು, ಅದರಲ್ಲಿ ವರ್ಗಾವಣೆಯಾಗಿರುವ ಹಣ, ಆ ಹಣದ ಮೂಲ ಹೀಗೆ ನಾನಾ ಅಂಶಗಳ ಬಗ್ಗೆ ತನಿಖೆ ಜತೆಗೆ ದೆಹಲಿ ಫ್ಲಾಟ್ ಗಳಲ್ಲಿ ಪತ್ತೆಯಾದ ಹಣದ ಕುರಿತಂತೆ ನ್ಯಾಯಾಲಯದ ಆದೇಶದ ಕಾರಣ ಬಂಧನಕ್ಕೆ ಒಳಗಾಗದವರನ್ನು ಕೂಡ ವಿಚಾರಣೆ ನಡೆಸಬೇಕಿದ್ದು, ಅದಕ್ಕೆ ಕಾಲಾವಕಾಶ ಬೇಕು.

5. ಡಿ.ಕೆ.ಶಿವಕುಮಾರ್ 14 ದಿನ ಇಡಿ ವಶದಲ್ಲಿದ್ದರೂ ಆ ಪೈಕಿ ಕೊನೆಯ ನಾಲ್ಕು ದಿನ ಆಸ್ಪತ್ರೆಯಲ್ಲೇ ಇದ್ದರು. ಈ ಅವಧಿಯಲ್ಲಿ ತನಿಖೆ ಸಾಖ್ಯವಾಗಿಲ್ಲ. ಇನ್ನು ಉಳಿದ 11 ದಿನಗಳಲ್ಲಿ ಕೇವಲ ನಾಲ್ಕು ಗಂಟೆ ಮಾತ್ರ ಅವರು ವಿಚಾರಣೆಗೆ ಸಹಕರಿಸಿದ್ದಾರೆ. ಉಳಿದ ಅವಧಿಯಲ್ಲಿ ಸರಿಯಾದ ಮಾಹಿತಿ ನೀಡುತ್ತಿರಲಿಲ್ಲ ಎಂದು ಇಡಿ ಅಧಿಕಾರಿಗಳು ನೀಡಿದ ಮಾಹಿತಿ.

ಈ ಎಲ್ಲಾ ಕಾರಣಗಳಿಂದಾಗಿ ಶಿವಕುಮಾರ್ ಅವರು ಮತ್ತಷ್ಟು ದಿನ ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ. ಇದರ ಮಧ್ಯೆಯೇ ಇಡಿ ಅಧಿಕಾರಿಗಳು ಇನ್ನಷ್ಟು ಆಳಕ್ಕೆ ತನಿಖೆಯನ್ನು ಕೊಂಡೊಯ್ಯುವಂತೆ ಕಾಣುತ್ತಿದ್ದಾರೆ. ಹಾಗೇನಾದರೂ ಆದಲ್ಲಿ ಶಿವಕುಮಾರ್ ಮಾತ್ರವಲ್ಲ, ಅವರೊಂದಿಗೆ ವ್ಯಾವಹಾರ ನಡೆಸಿದ ಇತರರಿಗೂ ಅಪಾಯ ಎದುರಾಗುವುದು ಖಂಡಿತ.

Tags: Amit ShahBJPCongress PartyD K ShivakumarEnforcement DirectorateIncome Tax DepartmentPrevention of Money Laundering ActPrime Minister Narendra Modiಅಕ್ರಮ ಹಣ ತಡೆ ಕಾಯ್ದೆಅಮಿತ್ ಶಾಆದಾಯ ತೆರಿಗೆ ಇಲಾಖೆಕಾಂಗ್ರೆಸ್ ಪಕ್ಷಜಾರಿ ನಿರ್ದೇಶನಾಲಯಡಿ ಕೆ ಶಿವಕುಮಾರ್ಪ್ರಧಾನಿ ನರೇಂದ್ರ ಮೋದಿಬಿಜೆಪಿ
Previous Post

ಹಿಂದಿ ಹೇರಿಕೆಯನ್ನು ಮಾತ್ರ ವಿರೋಧಿಸಿದರೆ ಸಾಕೆ?

Next Post

ವಾರಾಹಿ ಯೋಜನೆಗೆ 40 ವರ್ಷ, ಹೊಲಗಳಿಗೆ ಮಾತ್ರ ನೀರಿಲ್ಲ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ವಾರಾಹಿ ಯೋಜನೆಗೆ 40 ವರ್ಷ

ವಾರಾಹಿ ಯೋಜನೆಗೆ 40 ವರ್ಷ, ಹೊಲಗಳಿಗೆ ಮಾತ್ರ ನೀರಿಲ್ಲ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada