• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಜೆಟ್ 2020: ಯುವಜನರ ಹಾಗೂ ಕೃಷಿಕರ ಆದ್ಯತೆಗಳೇನು?

by
January 31, 2020
in ದೇಶ
0
ಬಜೆಟ್ 2020: ಯುವಜನರ ಹಾಗೂ ಕೃಷಿಕರ ಆದ್ಯತೆಗಳೇನು?
Share on WhatsAppShare on FacebookShare on Telegram

ಫೆಬ್ರವರಿ 1 ರಂದು ಕೇಂದ್ರ ಆಯವ್ಯಯ ಪಟ್ಟಿ ಮಂಡನೆಯ ಸಲುವಾಗಿ ದೇಶದ ಜನ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಸದ್ಯ ದೇಶದ ಆರ್ಥಿಕ ಸ್ಥಿತಿಗತಿ ಅಷ್ಟೇನೂ ಚೆನ್ನಾಗಿಲ್ಲದ್ದರಿಂದ ಆರ್ಥಿಕತೆಯನ್ನು ಸರಿಯಾದ ದಾರಿಗೆ ತರುವುದು ಮೋದಿ ಸರಕಾರದ ಮುಂದಿರುವ ದೊಡ್ಡ ಸವಾಲಾಗಿದೆ. ಕೇಂದ್ರ ಮಧ್ಯಂತರ ಬಜೆಟ್‌ನಲ್ಲಿ ಹೊಸತನವೇನಿರಲಿಲ್ಲ, ಹಾಗಾಗಿ ಈ ಬಾರಿಯಾದರೂ ದೇಶದ ಸಾಮಾನ್ಯ ವರ್ಗಕ್ಕೆ ಮುಂಬರುವ ಬಜೆಟ್‌ನಲ್ಲಿ ಹಲವು ರೀತಿಯ ನಿರೀಕ್ಷೆಗಳಿವೆ.

ADVERTISEMENT

ನಿರುದ್ಯೋಗ ಸಮಸ್ಯೆ

ನಿರುದ್ಯೋಗ ಸಮಸ್ಯೆಯು ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಶಿಕ್ಷಣದಿಂದಾಗಿ ಉದ್ಯೋಗ ದಕ್ಕಿಸಿಕೊಳ್ಳಬಹುದು ಎಂದುಕೊಂಡು ಅನೇಕ ವಿದ್ಯಾರ್ಥಿಗಳು ಶಿಕ್ಷಣ ಸಾಲವನ್ನು ಪಡೆದುಕೊಂಡಿರುತ್ತಾರೆ. ಅನೇಕ ಮಂದಿ ಸ್ನಾತಕೋತ್ತರ ಪದವಿಯನ್ನೂ ಪೂರೈಸಿಕೊಂಡು ಹೊರಬರುವಾಗ ಇತ್ತ ಉದ್ಯೋಗವೂ ಇಲ್ಲದೇ ಅತ್ತ ಸಾಲವನ್ನೂ ತೀರಿಸಲಾಗದ ಪರಿಸ್ಥಿತಿ ಎದುರಾಗಿದೆ. ಸರಕಾರವು ಉದ್ಯೋಗ ಸೃಷ್ಠಿಸುವ ಯೋಜನೆಗಳನ್ನು ದಿನೇ ದಿನೇ ಜಪಿಸುತ್ತಿದೆ. ಆದರೆ ಯಾವುದೇ ರೀತಿಯ ಯೋಜನೆ ಅನುಷ್ಠಾನಗೊಂಡಿಲ್ಲ, ಉದ್ಯೋಗ ಸೃಷ್ಠಿಯಿಂದ ಆರ್ಥಿಕ ಹೊಡೆತದಿಂದ ಪಾರಾಗಬಹುದೆಂದು ಕೇಂದ್ರ ಹಣಕಾಸು ಸಚಿವರ ಯೋಚನೆಯಾಗಿದ್ದರೆ ಒಳಿತು. ಕೇಂದ್ರ ಸರಕಾರವು ಈ ಸಮಸ್ಯೆಗೆ ಹಲವಾರು ರೀತಿಯ ಕಾರಣಗಳನ್ನು ನೀಡುತ್ತಿದೆ. ಆದರೆ ಸಮಸ್ಯೆಗೆ ಪರಿಹಾವಂತೂ ಸಿಕ್ಕಿಲ್ಲ, ಹಾಗಾಗಿ  ಮುಂಬರುವ ಬಜೆಟ್‌ನಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಗಬಹುದೇ ಎಂದು ನಿರುದ್ಯೋಗಿ ಯುವಕರ ಮತ್ತು ವಿದ್ಯಾರ್ಥಿಗಳ ನಿರೀಕ್ಷೆಯಾಗಿದೆ.

ಸಣ್ಣ ಕೈಗಾರಿಕೆಗಳಲ್ಲಿ ಶೇ 5೦%ರಷ್ಟು ಮುಚ್ಚಿಹೋಗಿವೆ. ಇದರಿಂದಾಗಿ ಸಾಕಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಸಣ್ಣ ಕೈಗಾರಿಕೆಗಳನ್ನು ಮತ್ತೆ ಪುನಃಶ್ಚೇನಗೊಳಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಆರ್ಥಿಕತೆಯ ಕುಸಿತದೊಂದಿಗೆ, ಅಟೋಮೊಬೈಲ್ ಉತ್ಪಾದಕ ಕ್ಷೇತ್ರದಲ್ಲಿ ಸಾಕಷ್ಟು ಮಂದಿ ಉದ್ಯೋಗ ಕಳೆದುಕೊಂಡು ಹತಾಷರಾಗಿದ್ದಾರೆ. ಗಾರ್ಮೆಂಟ್ ಉದ್ಯಮ ಸೇರಿದಂತೆ ಹಲವಾರು ಕೈಗಾರಿಕೋದ್ಯಮಗಳು ಉದ್ಯೋಗ ಕಡಿತವನ್ನು ಮಾಡುತ್ತಿದೆ. ಆರ್ಥಿಕತೆಯ ಕುಸಿತದಿಂದಾಗಿ ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ನಗರ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಠಿಸುವುದರ ಜೊತೆಗೆ ಗ್ರಾಮೀಣ ಭಾಗದಲ್ಲೂ ಕೈಗಾರಿಕೋದ್ಯಮಕ್ಕೆ ಆದ್ಯತೆಯನ್ನು ಕಲ್ಪಿಸಬೇಕು. ಇದರಿಂದ ಆರ್ಥಿಕತೆಯ ಮೇಲೆ ಸ್ವಲ್ಪ ಮಟ್ಟಿಗಾದರೂ ಸ್ಥಿರತೆಯನ್ನು ಕಾಯ್ದುಕೊಳ್ಳಬಹುದು.

ಕೃಷಿ ವಲಯ

ಭಾರತವು ವರ್ಷದಲ್ಲಿ 200 ದಿನದಿಂದ 240 ದಿನಗಳವರೆಗೆ ದುಡಿಮೆಯನ್ನು ಮಾಡುವಂತಹ ಹವಾಮಾನವನ್ನು ಹೊಂದಿದೆ. ಈ ವ್ಯವಸಾಯವನ್ನು ನಂಬಿಕೊಂಡು ಶೇ 4೦%ರಷ್ಟು ಕೂಲಿಗಾರರು, ಶೇ 45%ರಷ್ಟು ಸಣ್ಣ ಅತಿ ಸಣ್ಣ ರೈತರು ಹಾಗೂ ಶೇ 7.5% ರಷ್ಟು ಮಂದಿ ಇದನ್ನೇ ಜೀವಾಳವಾಗಿ ನಂಬಿದ್ದಾರೆ. ಕೃಷಿಯಲ್ಲಿನ ಹಿನ್ನಡೆ ಮತ್ತು ಉತ್ತಮ ಬೇಡಿಕೆಯ ಕೊರತೆಯಿಂದಾಗಿ ಸಾಕಷ್ಟು ಮಂದಿ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ವಲಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇದರಲ್ಲಿ ಪ್ರಮುಖವಾಗಿ ರೈತರ ಆದಾಯ ದುಪ್ಪಟ್ಟುಗೊಳಿಸುವ ಇರಾದೆ ಇದೆ. ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೀಡುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಈಗಾಗಲೇ ಕೇಂದ್ರ ಸರಕಾರ ಜಾರಿಗೆ ತಂದಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ 75 ಸಾವಿರ ಕೋಟಿ ರೂ. ಹೊರೆ ಬೀಳುತ್ತಿದೆ. ಉದ್ಯೋಗವನ್ನರಸಿ ನಗರ ಪ್ರದೇಶಗಳಿಗೆ ವಲಸೆ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕೃಷಿಗೆ ಯುವ ಸಮುದಾಯವನ್ನು ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಸರ್ಕಾರವು ಯೋಜನೆಗಳನ್ನು ಹಮ್ಮಿಕೊಳ್ಳಬೇಕಿದೆ. ರೈತಾಪಿ ವರ್ಗದ ಅಭಿವೃದ್ಧಿ ಯೋಜನೆಗಳು ರಾಷ್ಟ್ರ ಮಟ್ಟಕ್ಕಿಂತಲೂ ಹೆಚ್ಚಾಗಿ ಪ್ರಾದೇಶಿಕ ಮಟ್ಟದಲ್ಲಿ ರೂಪುಗೊಳ್ಳಬೇಕಾಗಿದೆ. ಕೇಂದ್ರದ ರೈತಪರ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯಗಳು ಉತ್ತಮ ಸಹಕಾರ ನೀಡಬೇಕು ಸರಿಯಾದ ನಿಟ್ಟಿನಲ್ಲಿ ಅನುಷ್ಠಾನಗೊಳಿಸಬೇಕು. ಹಾಗಾಗಿ ರೈತಾಪಿ ವರ್ಗವೂ ಈ ಬಾರಿಯ ಬಜೆಟ್‌ನಲ್ಲಿ ಉತ್ತಮ ಯೋಜನೆಗಳನ್ನು ನಿರೀಕ್ಷಿಸುತ್ತಿದೆ.

ಇವೆಲ್ಲಾ ಕ್ಷೇತ್ರಗಳಲ್ಲಿ ಆಗಬೇಕಾದ ಸುಧಾರಣೆಗಳು ಬಹಳಷ್ಟಿವೆ. ಅತೀ ಮುಖ್ಯವಾಗಿ, ಯುವ ಜನತೆ ಉದ್ಯೋಗವಿಲ್ಲದೆ ಪರದಾಡುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಉದ್ಯೋಗಗಳನ್ನು ಸೃಷ್ಟಿಸುವಂತಹ ಯೋಜನೆಗಳು ಜಾರಿಗೆ ಬಂದಲ್ಲಿ, ಉದ್ಯೋಗ ಸೃಷ್ಟಿಯ ಜೊತೆಗೆ ಆರ್ಥಿಕತೆಯನ್ನು ಕೂಡ ಸ್ಥಿರಗೊಳಿಸುವ ಅವಕಾಶ ಕೇಂದ್ರ ಸರ್ಕಾರಕ್ಕಿದೆ. ಹಾಗಾಗಿ, ನಿರುದ್ಯೋಗ ಮತ್ತು ಕೃಷಿ ವಲಯದಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ ಇರಬಹುದು ಎಂಬ ಆಶಾ ಭಾವನೆ ಯುವಕರಲ್ಲಿ ಹಾಗೂ ಕೃಷಿಕರಲ್ಲಿ ಮೂಡಿದೆ.

Tags: Budget 2020Budget sessionUnion Budgetಕೃಷಿಕಬಜೆಟ್‌ 2020ಯುವಜನ
Previous Post

ಅಪಾಯಕಾರಿ ಕರೋನಾಗೆ ಯುನಾನಿ, ಹೊಮಿಯೋಪತಿ ಮದ್ದು

Next Post

ಕೊನೆಗೂ ಶಾ ಭೇಟಿಯಾದ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಮೂರು ದಿನ ಗಡುವು  

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

February 5, 2026
Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

February 5, 2026
Next Post
ಕೊನೆಗೂ ಶಾ ಭೇಟಿಯಾದ ಯಡಿಯೂರಪ್ಪ

ಕೊನೆಗೂ ಶಾ ಭೇಟಿಯಾದ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಮೂರು ದಿನ ಗಡುವು  

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada