• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿಗೆ ನ್ಯಾಯಾಲಯದ ನೂರು ಪ್ರಶ್ನೆ!

by
July 24, 2020
in ದೇಶ
0
ಬಾಬರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿಗೆ ನ್ಯಾಯಾಲಯದ ನೂರು ಪ್ರಶ್ನೆ!
Share on WhatsAppShare on FacebookShare on Telegram

ಒಂದು ಕಡೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಆಗಸ್ಟ್ 31ರೊಳಗೆ ವಿಚಾರಣೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯೂ ವೇಗ ಪಡೆದುಕೊಂಡಿದೆ.

ADVERTISEMENT

ಪ್ರಕರಣದ ವಿಚಾರಣೆ ನಡೆಸುತ್ತಿರುವ ಲಖನೌದ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಷಿ ನಿನ್ನೆಯಷ್ಟೇ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಅದರ ಬೆನ್ನಲ್ಲೇ ಶುಕ್ರವಾರ ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕ ಮತ್ತು ರಾಮಜನ್ಮಭೂಮಿ ರಥಯಾತ್ರೆ ಮೂಲಕ ದೇಶದಲ್ಲಿ ರಾಮಜನ್ಮಭೂಮಿ ರಾಜಕಾರಣಕ್ಕೆ ನಾಂದಿ ಹಾಡಿದ ಲಾಲ್ ಕೃಷ್ಣ ಅಡ್ವಾಣಿ ವೀಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಪ್ರಾಸಿಕ್ಯೂಷನ್ ಸಾಕ್ಷ್ಯಗಳ ಪರಿಶೀಲನೆಯ ಬಳಿಕ ನ್ಯಾಯಾಲಯ, ಪ್ರಕರಣದ ಆರೋಪಿಗಳ ಹೇಳಿಕೆಗಳನ್ನು ದಾಖಲಿಸುವ ಪ್ರಕ್ರಿಯೆ ಆರಂಭಿಸಿದ್ದು, ತಿಂಗಳ ಆರಂಭದಲ್ಲಿ ಮತ್ತೊಬ್ಬ ನಾಯಕಿ ಉಮಾ ಭಾರತಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿತ್ತು. ಸದ್ಯ ದಿನಂಪತ್ರಿ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದ್ದು, ಶುಕ್ರವಾರ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ 92 ವರ್ಷದ ಅಡ್ವಾಣಿ ಅವರು ನ್ಯಾಯಪೀಠದ ಮುಂದೆ ವರ್ಚುವಲ್ ಆಗಿ ಹೇಳಿಕೆ ದಾಖಲಿಸಿದರು.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಶುಕ್ರವಾರ ಬೆಳಗ್ಗೆ 11ಕ್ಕೆ ಆರಂಭವಾದ ವಿಚಾರಣೆ, ಮಧ್ಯಾಹ್ನ 3.30ಕ್ಕೆ ಮುಕ್ತಾಯವಾಯಿತು. ಸುಮಾರು ನಾಲ್ಕೂವರೆ ತಾಸು ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು ಅಡ್ವಾಣಿ ಅವರಿಗೆ ಸುಮಾರು ನೂರು ಪ್ರಶ್ನೆಗಳನ್ನು ಕೇಳಿದರು. ಆದರೆ, ಅಡ್ವಾಣಿ ಅವರು ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದರು ಎಂದು ಅವರ ವಕೀಲರು ತಿಳಿಸಿದ್ದಾರೆ.

ಗುರುವಾರ ಮುರಳಿ ಮನೋಹರ ಜೋಷಿ ಕೂಡ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದ್ದರು ಮತ್ತು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ತಮ್ಮನ್ನು ಪ್ರಕರಣದಲ್ಲಿ ಸಿಲುಕಿಸಿದೆ ಎಂದು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದರು.. ಈ ಮೊದಲು ಹೇಳಿಕೆ ನೀಡಿದ್ದ ಉಮಾ ಭಾರತಿ ಕೂಡ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸುತ್ತಾ, ಅಂದಿನ ಕಾಂಗ್ರೆಸ್ ಸರ್ಕಾರ ರಾಜಕೀಯ ಸೇಡಿನ ಹಿನ್ನೆಲೆಯಲ್ಲಿ ತಮ್ಮನ್ನು ಪ್ರಕರಣದಲ್ಲಿ ಸಿಲುಕಿಸಿತ್ತು ಎಂದೇ ಹೇಳಿದ್ದರು.

ಈ ನಡುವೆ, ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದರು. ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ತಯಾರಿಗಳ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿತ್ತು.

ಹದಿನಾರನೇ ಶತಮಾನದ ಬಾಬರಿ ಮಸೀದಿಯನ್ನು 1992ರ ಡಿಸೆಂಬರ್ 6ರಂದು ನೆಲಸಮಗೊಳಿಸಲಾಗಿತ್ತು. ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳಿಗೆ ಸೇರಿದ ಕರಸೇವಕರು ಆ ಕಟ್ಟಡವನ್ನು ನೆಲಸಮಗೊಳಿಸಿದ್ದು, ಆ ಕೃತ್ಯಕ್ಕೆ ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಸಂಚು ನಡೆಸಿದ್ದರು ಮತ್ತು ಕುಮ್ಮಕ್ಕು ನೀಡಿದ್ದರು ಎಂಬ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ನಡೆಸುತ್ತಿದೆ.

ಕಳೆದ ವರ್ಷ ಅಯೋಧ್ಯೆಯ ವಿವಾದಿತ ಜಾಗದ ಕುರಿತ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದ ನ್ಯಾಯಾಲಯ, ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿತ್ತು ಮತ್ತು ಮಸೀದಿ ನಿರ್ಮಾಣಕ್ಕೆ ಪರ್ಯಾಯ ಜಾಗ ನೀಡುವಂತೆ ಹೇಳಿತ್ತು. ಜಾಗದ ಕುರಿತ ವಿವಾದ ಇತ್ಯರ್ಥವಾದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಇದ್ದ ಜಾಗದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ವೇಗ ಸಿಕ್ಕಿದೆ. ಆಗಸ್ಟ್ ಮೊದಲ ವಾರದಲ್ಲಿ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಆಗಸ್ಟ್ 31ಕ್ಕೆ ಮುನ್ನ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಬೇಕಾದ ಸುಪ್ರೀಂಕೋರ್ಟ್ ಗಡುವಿಗೆ ಸಿಲುಕಿರುವ ಸಿಬಿಐ ವಿಶೇಷ ನ್ಯಾಯಾಲಯ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಚುರುಕುಗೊಳಿಸಿದೆ.

Tags: ಎಲ್ ಕೆ ಅಡ್ವಾಣಿಬಾಬರಿ ಮಸೀದಿ ಧ್ವಂಸ ಪ್ರಕರಣ
Previous Post

ಕೋವಿಡ್-19: ದೇಶಾದ್ಯಂತ ಸುಮಾರು 50 ಸಾವಿರ ಹೊಸ ಪ್ರಕರಣ ಪತ್ತೆ

Next Post

ಟ್ವಿಟರ್ನಲ್ಲಿ ಟ್ರೆಂಡ್ ಆಗುತ್ತಿದೆ ಸುಶಾಂತ್ ಸಿಂಗ್ ಕೊನೆಯ ಸಿನೆಮಾ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಟ್ವಿಟರ್ನಲ್ಲಿ ಟ್ರೆಂಡ್ ಆಗುತ್ತಿದೆ ಸುಶಾಂತ್ ಸಿಂಗ್ ಕೊನೆಯ ಸಿನೆಮಾ

ಟ್ವಿಟರ್ನಲ್ಲಿ ಟ್ರೆಂಡ್ ಆಗುತ್ತಿದೆ ಸುಶಾಂತ್ ಸಿಂಗ್ ಕೊನೆಯ ಸಿನೆಮಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada