• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿಯಲ್ಲಿ ‘ಪ್ರವಾಹ’ ಸೃಷ್ಟಿಸಿದ ಯತ್ನಾಳ್  ಕಿಡಿ

by
October 5, 2019
in ರಾಜಕೀಯ
0
ಬಿಜೆಪಿಯಲ್ಲಿ ‘ಪ್ರವಾಹ’ ಸೃಷ್ಟಿಸಿದ ಯತ್ನಾಳ್  ಕಿಡಿ
Share on WhatsAppShare on FacebookShare on Telegram

ರಾಜ್ಯದ ಪ್ರವಾಹಪೀಡಿತ ಪ್ರದೇಶದ ಜನರ ಸಂಕಷ್ಟಕ್ಕೆ ಸ್ಪಂದಿಸದ ತಮ್ಮದೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ವಿಜಯಪುರ ಜಿಲ್ಲೆಯ ವಿವಾದಾತ್ಮಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಶಿಸ್ತುಪಾಲನಾ ಸಮಿತಿ ಶೋ ಕಾಸ್ ನೋಟಿಸ್ ಜಾರಿಗೊಳಿಸುವ ಮೂಲಕ ರಾಜ್ಯ ಬಿಜೆಪಿಯಲ್ಲಿನ ಕ್ಷಿಪ್ರ ಬೆಳವಣಿಗೆಗೆ ಮುನ್ನುಡಿ ಬರೆದಿದೆ.

ADVERTISEMENT

ತಮಗೆ ನೀಡಲಾದ ನೋಟಿಸ್ ಗೆ ಖಾಸಗಿ ಸುದ್ದಿಯೊಂದಿಗೆ ಮಾತನಾಡುತ್ತಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯತ್ನಾಳ್ ಅವರು ಪಕ್ಷದಲ್ಲಿ ಬಣ ರಾಜಕೀಯ ತಾರಕಕ್ಕೇರಿರುವುದು ಹಾಗೂ ಪಕ್ಷದಲ್ಲಿ ಮೇಲುಗೈ ಸಾಧಿಸಲು ನಡೆಯುತ್ತಿರುವ ಹಗ್ಗಜಗ್ಗಾಟದ ಸೂಚನೆಗಳನ್ನು ಸ್ಪಷ್ಟವಾಗಿ ಗುರುತಿಸಿದ್ದಾರೆ. ಯತ್ನಾಳ್ ಮಾತಿನಲ್ಲಿ ಮೂರು ಪ್ರಮುಖ ವಿಚಾರಗಳು ಸ್ಪಷ್ಟವಾಗಿವೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿದ್ದ ಬಿಜೆಪಿಗೂ ಇಂದಿನ ನಾಯಕತ್ವಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂಬುದನ್ನು ಉದಾಹರಣೆ ಸಮೇತ ವಿವರಿಸಿದ್ದಾರೆ. ಈ ಮೂಲಕ ಕೇಂದ್ರ ನಾಯಕತ್ವ ಏಕಪಕ್ಷೀಯವಾಗಿದೆ ಎಂಬ ಸಾರ್ವಜನಿಕ ಅಭಿಪ್ರಾಯಕ್ಕೆ ಅಧಿಕೃತ ಮುದ್ರೆ ಒತ್ತಿದ್ದಾರೆ.

ಪ್ರಧಾನಿ ಮೋದಿಯೊಂದಿಗೆ ಉತ್ತರ ಕರ್ನಾಟಕದ ಬಿಜೆಪಿ ನಾಯಕರೊಂದಿಗೆ ಯತ್ನಾಳ್

ಬಿಜೆಪಿ ರಾಜ್ಯ ಘಟಕದಲ್ಲಿ ಮೇಲುಗೈ ಸಾಧಿಸಲು ಕಳೆದೊಂದು ದಶಕದಿಂದ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ ಎನ್ನುವ ಮೂಲಕ ಬಣ ರಾಜಕೀಯದ ಕರಾಳಮುಖವನ್ನೂ ಪರಿಚಯಿಸಿದ್ದಾರೆ. ಇದೆಲ್ಲಕ್ಕೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕಾರಣ ಎಂಬುದನ್ನು ಪರೋಕ್ಷವಾಗಿ ಧ್ವನಿಸುವ ಮೂಲಕ ರೋಗದ ಮೂಲವನ್ನೂ ಯತ್ನಾಳ್ ಗುರುತಿಸಿದ್ದಾರೆ. ತಮ್ಮ‌ ಆರೋಪಗಳಿಗೆ ಬಿ ಎಸ್ ಯಡಿಯೂರಪ್ಪ ಅವರ ಅಸಹಾಯಕ ಪರಿಸ್ಥಿತಿಯನ್ನು ಪ್ರಸ್ತಾಪಿಸಿರುವ ಯತ್ನಾಳ್ ಅವರು ತಮಗೆ ಆಗುತ್ತಿರುವ ಅನ್ಯಾಯಗಳಿಗೆ ಸಮುದಾಯದ ಅಸ್ಮಿತೆಯನ್ನು ಬಡಿದೆಬ್ಬಿಸುವ ಕೆಲಸವನ್ನೂ ಸೂಕ್ಷ್ಮವಾಗಿ ಆರಂಭಿಸಿದ್ದಾರೆ. ಇದರ ಭಾಗವಾಗಿಯೇ ಯಡಿಯೂರಪ್ಪ ಅವರ ಹೆಸರನ್ನು‌ ಪ್ರಸ್ತಾಪಿಸಿರುವುದು. ಪ್ರವಾಹಪೀಡಿತರ ಸಂಕಷ್ಟದ ಬಗ್ಗೆ ಪ್ರಧಾನ ಮಂತ್ರಿಗೆ ಮನವರಿಕೆ ಮಾಡಲು ಯತ್ನಿಸಿರುವ ಬಿ ಎಸ್ ವೈ ಗೆ ಕಾಲಾವಕಾಶ ನಿರಾಕರಿಸಲಾಗಿದೆ ಎನ್ನುವ ಮೂಲಕ ಕೇಂದ್ರ ನಾಯಕತ್ವದ ವಿರುದ್ಧ ನೇರ ಸಮರ ಸಾರಿದ್ದಾರೆ.

ಇದೆಲ್ಲಕ್ಕಿಂತಲೂ ಮಿಗಿಲಾಗಿ, ಬಿಜೆಪಿ ಹೊರತಾಗಿಯೂ ವಿಧಾನ ಪರಿಷತ್ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆದ್ದು ತನ್ನ ಸಾಮರ್ಥ್ಯ ಪ್ರದರ್ಶಿಸಿದ್ದೇನೆ ಎನ್ನುವ ಮೂಲಕ ಮತ್ತೊಮ್ಮೆ ಉಚ್ಚಾಟನೆ ಶಿಕ್ಷೆಗೆ ಗುರಿಯಾದರೆ ಅದಕ್ಕೂ ಲೆಕ್ಕಿಸುವುದಿಲ್ಲ ಎಂಬುದನ್ನೂ ಬಿಜೆಪಿ ನಾಯಕತ್ವಕ್ಕೆ ಉತ್ತರಿಸಿದ್ದಾರೆ.
ವಿಧಾನಸಭಾ ಚುನಾವಣೆ ಹಾಗೂ ಅನಂತರದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅನಪೇಕ್ಷಿತ ಹಾಗೂ ಅನಾವಶ್ಯಕ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಉತ್ತರ ಕನ್ನಡದ ಸಂಸದ ಅನಂತಕುಮಾರ್ ಹೆಗಡೆಯನ್ನು ಮೀರಿಸಿ, ಸಂಘ-ಪರಿವಾರವನ್ನು ಓಲೈಸುವ ವಿಫಲ ಸಾಹಸ ಮಾಡಿದ ಯತ್ನಾಳ್ ಸಕಾರಣವಾಗಿ ಪ್ರವಾಹಪೀಡಿತ ಜನರ ಪರವಾಗಿ ಧ್ವನಿ ಎತ್ತುವ ಮೂಲಕ ತಮ್ಮ ನೈಜ ವ್ಯಕ್ತಿತ್ವ ಅನಾವರಣಗೊಳಿಸಿದ್ದಾರೆ.

ಹುಸಿ, ನಕಲಿತನವೇ ಇಂದಿನ ಭಾರತದ ಮುಖ್ಯವಾಹಿನಿಯ ಭಾಗವಾಗಿರುವಾಗ ಕಹಿಸತ್ಯಗಳನ್ನು ಮಾತನಾಡುವ ಮೂಲಕ ಬಿಜೆಪಿಯಿಂದ ಹೊರನಡೆದ ಹಿರಿಯ ನಾಯಕರಾದ ಯಶವಂತ್ ಸಿನ್ಹಾ, ಅರುಣ್ ಶೌರಿ, ಶತ್ರುಘ್ನಾ ಸಿನ್ಹಾ ಅವರಿಗೆ ಎದುರಾದ ಸ್ಥಿತಿ ಯತ್ನಾಳ್ ಗೆ ಎದುರಾದರೆ ಆಶ್ಚರ್ಯವಿಲ್ಲ. ಒಟ್ಟಾರೆ ಪ್ರವಾಹ ಪರಿಸ್ಥಿತಿಯ ನೆಪದಲ್ಲಿ ಬಿಜೆಪಿಯ ಆಂತರಿಕ ಕಚ್ಚಾಟ ಸ್ಫೋಟಗೊಳ್ಳಬಹುದು. ಇದನ್ನು ಯಡಿಯೂರಪ್ಪ ನಿಷ್ಠರು ಸ್ವಾಭಿಮಾನದ ಹೋರಾಟವಾಗಿ ಬದಲಿಸುವರೋ ಇಲ್ಲ, ದೆಹಲಿ ಸುಲ್ತಾನರ ಮುಂದೆ ಕೈಕಟ್ಟಿ ನಿಲ್ಲುವರೋ ಎಂಬುದು ಕುತೂಹಲ ಮೂಡಿಸಿದೆ. ಎರಡನೇ ಸಾಧ್ಯತೆಯೇ ವಾಸ್ತವಕ್ಕೆ ಹತ್ತಿರ ಎನಿಸುತ್ತದೆ.‌

Tags: BJP High CommandFlood Reliefflood situationflood victimsKarnataka BJPNorth KarnatakaVijayapura MLA Basana Gouda Patil Yatnalಉತ್ತರ ಕರ್ನಾಟಕಕರ್ನಾಟಕ ಬಿಜೆಪಿನೆರೆ ಪರಿಹಾರಪ್ರವಾಹ ಪರಿಸ್ಥಿತಿಪ್ರವಾಹ ಸಂತ್ರಸ್ತರುಬಿಜೆಪಿ ಹೈ ಕಮಾಂಡ್ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Previous Post

ಕಲ್ಯಾಣ ಕರ್ನಾಟಕ – ಹೆಸರಿನಲ್ಲೇನಿದೆ?

Next Post

ಆರು ಹಂಪಿ ಸ್ಮಾರಕಗಳ ನಿರ್ವಹಣೆ ವಹಿಸಲಿರುವ ಖಾಸಗಿ ಸಂಸ್ಥೆಗಳು

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ಆರು ಹಂಪಿ ಸ್ಮಾರಕಗಳ ನಿರ್ವಹಣೆ ವಹಿಸಲಿರುವ ಖಾಸಗಿ ಸಂಸ್ಥೆಗಳು

ಆರು ಹಂಪಿ ಸ್ಮಾರಕಗಳ ನಿರ್ವಹಣೆ ವಹಿಸಲಿರುವ ಖಾಸಗಿ ಸಂಸ್ಥೆಗಳು

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada