• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿಯಲ್ಲಿ ‘ಪ್ರವಾಹ’ ಸೃಷ್ಟಿಸಿದ ಯತ್ನಾಳ್  ಕಿಡಿ

by
October 5, 2019
in ರಾಜಕೀಯ
0
ಬಿಜೆಪಿಯಲ್ಲಿ ‘ಪ್ರವಾಹ’ ಸೃಷ್ಟಿಸಿದ ಯತ್ನಾಳ್  ಕಿಡಿ
Share on WhatsAppShare on FacebookShare on Telegram

ರಾಜ್ಯದ ಪ್ರವಾಹಪೀಡಿತ ಪ್ರದೇಶದ ಜನರ ಸಂಕಷ್ಟಕ್ಕೆ ಸ್ಪಂದಿಸದ ತಮ್ಮದೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ವಿಜಯಪುರ ಜಿಲ್ಲೆಯ ವಿವಾದಾತ್ಮಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಶಿಸ್ತುಪಾಲನಾ ಸಮಿತಿ ಶೋ ಕಾಸ್ ನೋಟಿಸ್ ಜಾರಿಗೊಳಿಸುವ ಮೂಲಕ ರಾಜ್ಯ ಬಿಜೆಪಿಯಲ್ಲಿನ ಕ್ಷಿಪ್ರ ಬೆಳವಣಿಗೆಗೆ ಮುನ್ನುಡಿ ಬರೆದಿದೆ.

ADVERTISEMENT

ತಮಗೆ ನೀಡಲಾದ ನೋಟಿಸ್ ಗೆ ಖಾಸಗಿ ಸುದ್ದಿಯೊಂದಿಗೆ ಮಾತನಾಡುತ್ತಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯತ್ನಾಳ್ ಅವರು ಪಕ್ಷದಲ್ಲಿ ಬಣ ರಾಜಕೀಯ ತಾರಕಕ್ಕೇರಿರುವುದು ಹಾಗೂ ಪಕ್ಷದಲ್ಲಿ ಮೇಲುಗೈ ಸಾಧಿಸಲು ನಡೆಯುತ್ತಿರುವ ಹಗ್ಗಜಗ್ಗಾಟದ ಸೂಚನೆಗಳನ್ನು ಸ್ಪಷ್ಟವಾಗಿ ಗುರುತಿಸಿದ್ದಾರೆ. ಯತ್ನಾಳ್ ಮಾತಿನಲ್ಲಿ ಮೂರು ಪ್ರಮುಖ ವಿಚಾರಗಳು ಸ್ಪಷ್ಟವಾಗಿವೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿದ್ದ ಬಿಜೆಪಿಗೂ ಇಂದಿನ ನಾಯಕತ್ವಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂಬುದನ್ನು ಉದಾಹರಣೆ ಸಮೇತ ವಿವರಿಸಿದ್ದಾರೆ. ಈ ಮೂಲಕ ಕೇಂದ್ರ ನಾಯಕತ್ವ ಏಕಪಕ್ಷೀಯವಾಗಿದೆ ಎಂಬ ಸಾರ್ವಜನಿಕ ಅಭಿಪ್ರಾಯಕ್ಕೆ ಅಧಿಕೃತ ಮುದ್ರೆ ಒತ್ತಿದ್ದಾರೆ.

ಪ್ರಧಾನಿ ಮೋದಿಯೊಂದಿಗೆ ಉತ್ತರ ಕರ್ನಾಟಕದ ಬಿಜೆಪಿ ನಾಯಕರೊಂದಿಗೆ ಯತ್ನಾಳ್

ಬಿಜೆಪಿ ರಾಜ್ಯ ಘಟಕದಲ್ಲಿ ಮೇಲುಗೈ ಸಾಧಿಸಲು ಕಳೆದೊಂದು ದಶಕದಿಂದ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ ಎನ್ನುವ ಮೂಲಕ ಬಣ ರಾಜಕೀಯದ ಕರಾಳಮುಖವನ್ನೂ ಪರಿಚಯಿಸಿದ್ದಾರೆ. ಇದೆಲ್ಲಕ್ಕೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕಾರಣ ಎಂಬುದನ್ನು ಪರೋಕ್ಷವಾಗಿ ಧ್ವನಿಸುವ ಮೂಲಕ ರೋಗದ ಮೂಲವನ್ನೂ ಯತ್ನಾಳ್ ಗುರುತಿಸಿದ್ದಾರೆ. ತಮ್ಮ‌ ಆರೋಪಗಳಿಗೆ ಬಿ ಎಸ್ ಯಡಿಯೂರಪ್ಪ ಅವರ ಅಸಹಾಯಕ ಪರಿಸ್ಥಿತಿಯನ್ನು ಪ್ರಸ್ತಾಪಿಸಿರುವ ಯತ್ನಾಳ್ ಅವರು ತಮಗೆ ಆಗುತ್ತಿರುವ ಅನ್ಯಾಯಗಳಿಗೆ ಸಮುದಾಯದ ಅಸ್ಮಿತೆಯನ್ನು ಬಡಿದೆಬ್ಬಿಸುವ ಕೆಲಸವನ್ನೂ ಸೂಕ್ಷ್ಮವಾಗಿ ಆರಂಭಿಸಿದ್ದಾರೆ. ಇದರ ಭಾಗವಾಗಿಯೇ ಯಡಿಯೂರಪ್ಪ ಅವರ ಹೆಸರನ್ನು‌ ಪ್ರಸ್ತಾಪಿಸಿರುವುದು. ಪ್ರವಾಹಪೀಡಿತರ ಸಂಕಷ್ಟದ ಬಗ್ಗೆ ಪ್ರಧಾನ ಮಂತ್ರಿಗೆ ಮನವರಿಕೆ ಮಾಡಲು ಯತ್ನಿಸಿರುವ ಬಿ ಎಸ್ ವೈ ಗೆ ಕಾಲಾವಕಾಶ ನಿರಾಕರಿಸಲಾಗಿದೆ ಎನ್ನುವ ಮೂಲಕ ಕೇಂದ್ರ ನಾಯಕತ್ವದ ವಿರುದ್ಧ ನೇರ ಸಮರ ಸಾರಿದ್ದಾರೆ.

ಇದೆಲ್ಲಕ್ಕಿಂತಲೂ ಮಿಗಿಲಾಗಿ, ಬಿಜೆಪಿ ಹೊರತಾಗಿಯೂ ವಿಧಾನ ಪರಿಷತ್ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆದ್ದು ತನ್ನ ಸಾಮರ್ಥ್ಯ ಪ್ರದರ್ಶಿಸಿದ್ದೇನೆ ಎನ್ನುವ ಮೂಲಕ ಮತ್ತೊಮ್ಮೆ ಉಚ್ಚಾಟನೆ ಶಿಕ್ಷೆಗೆ ಗುರಿಯಾದರೆ ಅದಕ್ಕೂ ಲೆಕ್ಕಿಸುವುದಿಲ್ಲ ಎಂಬುದನ್ನೂ ಬಿಜೆಪಿ ನಾಯಕತ್ವಕ್ಕೆ ಉತ್ತರಿಸಿದ್ದಾರೆ.
ವಿಧಾನಸಭಾ ಚುನಾವಣೆ ಹಾಗೂ ಅನಂತರದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅನಪೇಕ್ಷಿತ ಹಾಗೂ ಅನಾವಶ್ಯಕ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಉತ್ತರ ಕನ್ನಡದ ಸಂಸದ ಅನಂತಕುಮಾರ್ ಹೆಗಡೆಯನ್ನು ಮೀರಿಸಿ, ಸಂಘ-ಪರಿವಾರವನ್ನು ಓಲೈಸುವ ವಿಫಲ ಸಾಹಸ ಮಾಡಿದ ಯತ್ನಾಳ್ ಸಕಾರಣವಾಗಿ ಪ್ರವಾಹಪೀಡಿತ ಜನರ ಪರವಾಗಿ ಧ್ವನಿ ಎತ್ತುವ ಮೂಲಕ ತಮ್ಮ ನೈಜ ವ್ಯಕ್ತಿತ್ವ ಅನಾವರಣಗೊಳಿಸಿದ್ದಾರೆ.

ಹುಸಿ, ನಕಲಿತನವೇ ಇಂದಿನ ಭಾರತದ ಮುಖ್ಯವಾಹಿನಿಯ ಭಾಗವಾಗಿರುವಾಗ ಕಹಿಸತ್ಯಗಳನ್ನು ಮಾತನಾಡುವ ಮೂಲಕ ಬಿಜೆಪಿಯಿಂದ ಹೊರನಡೆದ ಹಿರಿಯ ನಾಯಕರಾದ ಯಶವಂತ್ ಸಿನ್ಹಾ, ಅರುಣ್ ಶೌರಿ, ಶತ್ರುಘ್ನಾ ಸಿನ್ಹಾ ಅವರಿಗೆ ಎದುರಾದ ಸ್ಥಿತಿ ಯತ್ನಾಳ್ ಗೆ ಎದುರಾದರೆ ಆಶ್ಚರ್ಯವಿಲ್ಲ. ಒಟ್ಟಾರೆ ಪ್ರವಾಹ ಪರಿಸ್ಥಿತಿಯ ನೆಪದಲ್ಲಿ ಬಿಜೆಪಿಯ ಆಂತರಿಕ ಕಚ್ಚಾಟ ಸ್ಫೋಟಗೊಳ್ಳಬಹುದು. ಇದನ್ನು ಯಡಿಯೂರಪ್ಪ ನಿಷ್ಠರು ಸ್ವಾಭಿಮಾನದ ಹೋರಾಟವಾಗಿ ಬದಲಿಸುವರೋ ಇಲ್ಲ, ದೆಹಲಿ ಸುಲ್ತಾನರ ಮುಂದೆ ಕೈಕಟ್ಟಿ ನಿಲ್ಲುವರೋ ಎಂಬುದು ಕುತೂಹಲ ಮೂಡಿಸಿದೆ. ಎರಡನೇ ಸಾಧ್ಯತೆಯೇ ವಾಸ್ತವಕ್ಕೆ ಹತ್ತಿರ ಎನಿಸುತ್ತದೆ.‌

Tags: BJP High CommandFlood Reliefflood situationflood victimsKarnataka BJPNorth KarnatakaVijayapura MLA Basana Gouda Patil Yatnalಉತ್ತರ ಕರ್ನಾಟಕಕರ್ನಾಟಕ ಬಿಜೆಪಿನೆರೆ ಪರಿಹಾರಪ್ರವಾಹ ಪರಿಸ್ಥಿತಿಪ್ರವಾಹ ಸಂತ್ರಸ್ತರುಬಿಜೆಪಿ ಹೈ ಕಮಾಂಡ್ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Previous Post

ಕಲ್ಯಾಣ ಕರ್ನಾಟಕ – ಹೆಸರಿನಲ್ಲೇನಿದೆ?

Next Post

ಆರು ಹಂಪಿ ಸ್ಮಾರಕಗಳ ನಿರ್ವಹಣೆ ವಹಿಸಲಿರುವ ಖಾಸಗಿ ಸಂಸ್ಥೆಗಳು

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

HM Ramesh Gowda: ಗ್ರೇಟರ್‌ ಬೆಂಗಳೂರು ವಾರ್ಡ್‌ ವಿಂಗಡಣೆ ಬಗ್ಗೆ ಜೆಡಿಎಸ್‌ ಅತೃಪ್ತಿ

October 11, 2025

DK Shivakumar: ಲಾಲ್ ಬಾಗ್ ಅಭಿವೃದ್ಧಿಗೆ ₹10 ಕೋಟಿ ರೂ.: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

October 11, 2025
Next Post
ಆರು ಹಂಪಿ ಸ್ಮಾರಕಗಳ ನಿರ್ವಹಣೆ ವಹಿಸಲಿರುವ ಖಾಸಗಿ ಸಂಸ್ಥೆಗಳು

ಆರು ಹಂಪಿ ಸ್ಮಾರಕಗಳ ನಿರ್ವಹಣೆ ವಹಿಸಲಿರುವ ಖಾಸಗಿ ಸಂಸ್ಥೆಗಳು

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada