ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ “ದುರ್ಬಲ ಮತ್ತು ಅಸಂಘಟಿತವಾಗಿದೆ” ಎಂದಿರುವ ಶಿವಸೇನೆ ಮುಖವಾಣಿ ‘ಸಾಮ್ನಾ’, ಶಿವಸೇನೆ ಸೇರಿದಂತೆ ಎಲ್ಲಾ ಬಿಜೆಪಿ ವಿರೋಧಿ ಪಕ್ಷಗಳು ಯುಪಿಎಯಡಿ ಒಗ್ಗಟ್ಟಾಗಬೇಕು ಎಂದು ಸಲಹೆ ನೀಡಿದೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ರೈತರ ಪ್ರತಿಭಟನೆಯ ಬಗ್ಗೆ ಅಸಡ್ಡೆ ತೋರುತ್ತಿದೆ. ಪ್ರತಿಪಕ್ಷಗಳು ದುರ್ಬಲವಾಗಿರುವುದೇ ಸರ್ಕಾರದ ರೈತರ ಕುರಿತಾದ ಈ ಮಟ್ಟಿನ ನಿರಾಸಕ್ತಿಗೆ ಪ್ರಮುಖ ಕಾರಣ ಎಂದು ಹೇಳಿದೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ತನ್ನ ನಾಯಕತ್ವದ ವಿಷಯದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲು ಕಾಂಗ್ರೆಸ್ ಗೆ ಸಲಹೆ ನೀಡಿದ ಸಾಮ್ನಾ, ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಬೇಕು ಎಂದಿದೆ.
ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ ಒಂದು ತಿಂಗಳಿಂದ ಸಾವಿರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ದೆಹಲಿಯ ಆಡಳಿತಗಾರರು ಈ ಆಂದೋಲನದ ಬಗ್ಗೆ ಸಂಪೂರ್ಣ ಅಸಡ್ಡೆ ಹೊಂದಿದ್ದಾರೆ. ಸರ್ಕಾರದ ಈ ಉದಾಸೀನತೆಗೆ ಅಸಂಘಟಿತ ಮತ್ತು ದುರ್ಬಲವಾದ ವಿರೋಧ ಪಕ್ಷಗಳೇ ಕಾರಣ. ಪರಿಣಾಮಕಾರಿಯಲ್ಲದ ವಿರೋಧವು ಈ ಪ್ರಜಾಪ್ರಭುತ್ವದ ವಿಘಟನೆಗೆ ಕಾರಣವಾಗಿದೆ” ಎಂದು ಸಾಮ್ನಾ ಅಭಿಪ್ರಾಯಪಟ್ಟಿದೆ.