• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

“ಬಿಹಾರ ಘಟನೆಯಲ್ಲಿ ಮಾಧ್ಯಮಗಳು ಕೇವಲ ಅರ್ಧ ಸತ್ಯವನ್ನಷ್ಟೇ ಹೇಳಿದೆ..”

by
June 10, 2020
in ದೇಶ
0
"ಬಿಹಾರ ಘಟನೆಯಲ್ಲಿ ಮಾಧ್ಯಮಗಳು ಕೇವಲ ಅರ್ಧ ಸತ್ಯವನ್ನಷ್ಟೇ ಹೇಳಿದೆ.."
Share on WhatsAppShare on FacebookShare on Telegram

ಬಿಹಾರದ ಮುಜಫರಾಪುರ ರೈಲ್ವೇ ನಿಲ್ದಾಣದಲ್ಲಿ ʼಸಾವನ್ನಪ್ಪಿದ ತಾಯಿಯನ್ನ ಎಬ್ಬಿಸುವʼ ಮಗುವಿನ ವೀಡಿಯೋ ತುಣುಕೊಂದು ಜಾಲತಾಣಗಳಲ್ಲಿ ಹರಡಿ ರಾಷ್ಟ್ರೀಯ ಮಟ್ಟದ ಸುದ್ದಿಯಾಗಿತ್ತು. ಈ ಮನಕಲಕುವ ದೃಶ್ಯ ಕಂಡು ದೇಶದ ಜನ ಮರುಗಿದ್ದರು. ಹಸಿವಿನಿಂದ ಕಂಗೆಟ್ಟು ಆಕೆ ಸಾವನ್ನಪ್ಪಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ರೈಲ್ವೇ ಅಧಿಕಾರಿಗಳು ಅದನ್ನ ನಿರಾಕರಿಸಿದ್ದರು. ಇದೀಗ ಪಾಟ್ನಾ ಹೈಕೋರ್ಟ್‌ ಮುಂದೆ ಭಾರತೀಯ ರೈಲ್ವೇ “ಈ ವೀಡಿಯೋವನ್ನ ಹರಿಯಬಿಡುವ ಮೂಲಕ ಸಂವೇದನಾಶೀಲಗೊಳಿಸಿ ಕೇವಲ ಅರ್ಧ ಸತ್ಯ ಮಾತ್ರ ಹರಿಯಬಿಡಲಾಗಿದೆ” ಎಂದಿದೆ.

ADVERTISEMENT

ಮೇ 28 ರಂದು ವೈರಲ್‌ ಆಗಿದ್ದ ವೀಡಿಯೋದ ಬಗ್ಗೆ ಪಾಟ್ನಾ ಹೈ ಕೋರ್ಟ್‌ ಮುಖ್ಯ ನ್ಯಾಯಾಧೀಶ ಸಂಜಯ್‌ ಕಾರೊಲ್‌ ಹಾಗೂ ಜಸ್ಟಿಸ್‌ ಎಸ್‌. ಕುಮಾರ್‌ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. “ಇದೊಂದು ಆಘಾತಕಾರಿ ಹಾಗೂ ದುರಾದೃಷ್ಟಕರ ಸಂಗತಿ” ಎಂದು ಕರೆದಿದ್ದರು. ಮಾತ್ರವಲ್ಲದೇ ಬಿಹಾರ ರಾಜ್ಯ ಸರಕಾರ ಹಾಗೂ ರೈಲ್ವೇ ಇಲಾಖೆಗೂ ಉತ್ತರಿಸುವಂತೆ ನೋಟೀಸ್‌ ನೀಡಿತ್ತು. ಇದೀಗ ರೈಲ್ವೇ ಇಲಾಖೆ ಪರವಾಗಿ ಆಶಿಶ್‌ ಗಿರಿ ತಮ್ಮ ವಾದ ಮಂಡಿಸಿದ್ದಾರೆ.

ಹೈಕೋರ್ಟ್‌ ಮುಂದೆ ಬಂದ ಈ ಪ್ರಕರಣ ಸೋಮವಾರ ವಿಚಾರಣೆ ನಡೆದು ಮುಂದೂಡಲ್ಪಟ್ಟಿತು. ಜೂನ್‌ 15ಕ್ಕೆ ನಿಗದಿಪಡಿಸಿರುವ ವಿಚಾರಣೆ ಸಂದರ್ಭ ಪ್ರಕರಣ ಸಂಬಂಧ ರಾಜ್ಯ ಗೃಹ ಸಚಿವಾಲಯ, ಭಾರತೀಯ ರೈಲ್ವೇ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯಿಂದ ಅಫಿಡವಿಟ್‌ ಸಲ್ಲಿಸುವಂತೆಯೂ ಸೂಚಿಸಲಾಗಿದೆ.

ರೈಲ್ವೇ ಸಲ್ಲಿಸಿರುವ ಅಫಿಡವಿಟ್‌ ನಲ್ಲಿ ದೃಶ್ಯವನ್ನು ಚಿತ್ರೀಕರಿಸಿದ ವರದಿಗಾರ ತನಗೆ ಬೇಕಾದಲ್ಲಿ ದೃಶ್ಯವನ್ನ ಕತ್ತರಿಸಿ, ದೃಶ್ಯದ ನೈಜತೆ ಮರೆಮಾಚಲು ತೆಗೆದು ಹಾಕಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಮಾತ್ರವಲ್ಲದೇ ಆ ರೀತಿ ಮಾಡುವ ಬದಲು ವರದಿಗಾರನಿಗೆ ಈ ಘಟನೆ ಬಗ್ಗೆ ರೈಲ್ವೇ ಅಧಿಕಾರಿಗಳು ಇಲ್ಲವೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಬಹುದಿತ್ತು ಎಂದೂ ತಿಳಿಸಿದೆ.

“ನಿಜವಾಗಿಯೂ ಅಗತ್ಯ ಸಹಾಯ ಮಾಡುವ ಬದಲು, ಅವರು ಅದನ್ನ ತನ್ನ ಪ್ರಚಾರಕ್ಕಾಗಿ ಚಿತ್ರೀಕರಿಸಿದ್ದಾರೆ ಮತ್ತು ಅದನ್ನ ಅರ್ಧ ಸತ್ಯ ಹಾಗೂ ನೈಜತೆ ಮರೆಮಾಚಿ ಪ್ರಚುರಪಡಿಸಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

“ಇಂತಹ ಅರ್ಧ ಸತ್ಯಾಂಶ ಮುಂದಿಡುವ ನಡೆ ಅತ್ಯಂತ ಅಪಾಯಕಾರಿಯಾಗಿದ್ದು, ಆದ್ದರಿಂದ ನ್ಯಾಯಾಲಯ ಇಂತಹ ವಿಚಾರದಲ್ಲಿ ನ್ಯಾಯಯುತವಾಗಿ ವ್ಯವಹರಿಸುವ ಅಗತ್ಯವಿದ್ದು, ಅಸಮರ್ಪಕ ಸುದ್ದಿಗಳನ್ನ ಪರಿಶೀಲಿಸದೇ ಮಾಧ್ಯಮಗಳು ಪ್ರಕಟಿಸುವುದರಿಂದ ಇದು ಸಮಾಜದ ಮೇಲೆ ಸಾಕಷ್ಟು ಅಡ್ಡ ಪರಿಣಾಮ ಬೀರುತ್ತದೆ” ಎಂದು ತಿಳಿಸಿದೆ.

ಮಾತ್ರವಲ್ಲದೇ ವಲಸೆ ಕಾರ್ಮಿಕರಿಗಾಗಿ ವಿಶೇಷ ರೈಲು ನಿಗದಿಪಡಿಸಿದ ಬಳಿಕ ರೈಲ್ವೇ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಾತ್ರಿ-ಹಗಲೆನ್ನದೆ ವಲಸೆ ಕಾರ್ಮಿಕರು ಸುರಕ್ಷಿತ ಪ್ರಯಾಣಕ್ಕಾಗಿ ಅವಿರತವಾಗಿ ದುಡಿಯುತ್ತಿದ್ದಾರೆ” ಎಂದೂ ದಾಖಲಿಸಲಾದ ಅಫಿಡವಿಟ್‌ ನಲ್ಲಿ ತಿಳಿಸಲಾಗಿದೆ. ಜೊತೆಗೆ ಪ್ರಕರಣ ಗಮನಕ್ಕೆ ಬಂದ ತಕ್ಷಣವೇ ರೈಲ್ವೇ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಪಂದಿಸಿದ್ದು, ಅತ್ಯಂತ ಕಡಿಮೆ ಸಮಯದಲ್ಲಿ ಪ್ರಾಮಾಣಿಕವಾಗಿ ಸ್ಪಂದಿಸಿದ್ದಾಗಿ ನ್ಯಾಯಾಲಯಕ್ಕೆ ಭಾರತೀಯ ರೈಲ್ವೇ ತಿಳಿಸಿದೆ. ಮಾತ್ರವಲ್ಲದೇ ಯಾವುದೇ ಹಂತದಲ್ಲೂ ನಿರ್ಲಕ್ಷ್ಯ ನಡೆದಿಲ್ಲ ಎಂದಿದೆ.

ಇನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಆರಂಭಿಕ ಹಂತದಲ್ಲಿ ತಾನು ನಿರ್ವಹಿಸಿದ ಕೆಲಸವನ್ನ ನ್ಯಾಯಾಲಯ ಮುಂದಿಟ್ಟಿದೆ. ಮೃತ ಮಹಿಳೆಗೆ ಇಬ್ಬರು ಮಕ್ಕಳಿದ್ದು, ಅವರ ಖರ್ಚಿಗಾಗಿ ತಕ್ಷಣವೇ ಮೃತ ಮಹಿಳೆ ತಾಯಿಯ ಬ್ಯಾಂಕ್‌ ಖಾತೆಗೆ 2 ಸಾವಿರ ರೂಪಾಯಿಯನ್ನು ಒದಗಿಸಲಾಗಿದ್ದು, ಅಲ್ಲದೇ ಮೃತ ಮಹಿಳೆಯ ಹೆಸರಿನಲ್ಲಿ ರೇಷನ್‌ ಕಾರ್ಡ್‌ ನೀಡಲಾಗಿದೆ. ಇನ್ನು ಮಕ್ಕಳ ಆರೈಕೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 20 ಸಾವಿರ ರೂಪಾಯಿ ಧನ ಸಹಾಯ ಹಾಗೂ ಮೃತ ಮಹಿಳೆ ಪೋಷಕರಿಗೆ ಜಮೀನನ್ನೂ ನೀಡಲಾಗಿದೆ ಅಂತ ನ್ಯಾಯಾಲಯಕ್ಕೆ ತಿಳಿಸಿದೆ.

ಇನ್ನು ಮೃತ ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸದಿರುವ ಬಗ್ಗೆಯೂ ನ್ಯಾಯಾಲಯ ರಾಜ್ಯದ ಗೃಹ ಇಲಾಖೆಯಿಂದ ಮಾಹಿತಿ ಕೇಳಿದ್ದು, ಅದರಂತೆ ಗೃಹ ಇಲಾಖೆ ಅಧಿಕಾರಿಗಳು ಒದಗಿಸಿದ ಮಾಹಿತಿ ಪ್ರಕಾರ, ಮೃತ ಮಹಿಳೆಯ ಕುಟುಂಬವು ಮರಣೋತ್ತರ ಪರೀಕ್ಷೆ ನಡೆಸದಂತೆ ಒತ್ತಾಯಿಸಿತ್ತು ಎಂದಿದೆ. ಅದಾಗ್ಯೂ, ಮರಣೋತ್ತರ ಪರೀಕ್ಷೆ ನಡೆಸದೇ ಹೊಣೆಗೇಡಿತನ ಪ್ರದರ್ಶಿಸಿದ ಅಧಿಕಾರಿಯನ್ನ ಗುರುತಿಸಲು ಜೂನ್‌ 1 ರಂದು ತನಿಖೆಗೆ ಆದೇಶಿಸಲಾಗಿದೆ ಅಂತಾ ನ್ಯಾಯಾಲಯಕ್ಕೆ ತಿಳಿಸಿದೆ.

ಆದರೆ ನ್ಯಾಯಾಲಯದ ಮುಂದೆ ಪ್ರಬಲ ಸಾಕ್ಷಿಯಾಗಿಸಲು ರೈಲ್ವೇ ಹಾಗೂ ಗೃಹ ಇಲಾಖೆ ಅಧಿಕಾರಿಗಳು ನೆಚ್ಚಿಕೊಂಡಿರುವುದು ಮೃತ ಮಹಿಳೆಯ ಸೋದರ ಮಾವನ ಹೇಳಿಕೆಯನ್ನೇ ಆಧರಿಸಿದ್ದಾರೆ. ಅವರ ಹೇಳಿಕೆ ಪ್ರಕಾರ, ಮೃತಪಟ್ಟಿರುವ ಮಹಿಳೆಯು ಮಾನಸಿಕ ಅಸ್ವಸ್ಥತೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವುದಾಗಿ ಹೇಳಿದ್ದರು. ಇದರಿಂದಾಗಿ ಸದ್ಯ ದೇಶವನ್ನೇ ಬೆಚ್ಚಿಬೀಳಿಸಿದ್ದ ಬಿಹಾರ ಮುಜಫರಪುರದಲ್ಲಿ ನಡೆದ ಘಟನೆಗೆ ನ್ಯಾಯಾಲಯದಲ್ಲಿ ಟ್ವಿಸ್ಟ್‌ ಸಿಕ್ಕರೂ ಅಚ್ಚರಿಪಡುವಂತಿಲ್ಲ.

Tags: Bihargovt of BiharIndian railwaysmuzaffarpurಬಿಹಾರಬಿಹಾರ ರಾಜ್ಯ ಸರ್ಕಾರಭಾರತೀಯ ರೈಲ್ವೇಮುಜಫರಾಪುರ
Previous Post

ಧಾರ್ಮಿಕ ನಂಬಿಕೆಯ ಆಧಾರದ ಮೇಲಿನ ತಾರತಮ್ಯ‌ ಕೂಡ ಜನಾಂಗೀಯಬೇಧ: ಇರ್ಫಾನ್‌ ಪಠಾಣ್

Next Post

ಕರೋನಾ ಸೋಂಕಿಗೆ ತಮಿಳುನಾಡು ಶಾಸಕ ಬಲಿ

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಕರೋನಾ ಸೋಂಕಿಗೆ ತಮಿಳುನಾಡು ಶಾಸಕ ಬಲಿ

ಕರೋನಾ ಸೋಂಕಿಗೆ ತಮಿಳುನಾಡು ಶಾಸಕ ಬಲಿ

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada