• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಹಾರ ಚುನಾವಣೆಯಲ್ಲಿ ಮತ್ತೆ ಜೀವಂತವಾದ ʼಜಿನ್ನಾ ಆತ್ಮʼ..!

by
October 16, 2020
in ದೇಶ
0
ಬಿಹಾರ ಚುನಾವಣೆಯಲ್ಲಿ ಮತ್ತೆ ಜೀವಂತವಾದ ʼಜಿನ್ನಾ ಆತ್ಮʼ..!
Share on WhatsAppShare on FacebookShare on Telegram

ಬಿಹಾರ ವಿಧಾನಸಭಾ ಚುನಾವಣೆ ನಡೆಯಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಎಲ್ಲಾ ಪಕ್ಷಗಳು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ತೊಡಗಿದರೆ, ಬಿಹಾರದ ಜಾಲೆ ವಿಧಾನಸಭಾ ಕ್ಷೇತ್ರವು ವಿಶಿಷ್ಟವಾದ ಕಾರಣಕ್ಕೆ ಸುದ್ದಿಯಲ್ಲಿದೆ. ಇದಕ್ಕೆ ಪಾಕಿಸ್ತಾನದ ʼಜಿನ್ನಾʼ ಅವರ ಆತ್ಮ ಕಾರಣ.

ಬಿಹಾರದ ಚುನಾವಣೆಗೂ ಪಾಕಿಸ್ತಾನದ ಮೊದಲ ಅಧ್ಯಕ್ಷರಾದ ಜಿನ್ನಾ ಅವರ ಆತ್ಮಕ್ಕೂ ಮಾಧ್ಯಮದ ವ್ಯಕ್ತಿಯೊಬ್ಬರು ಸಂಬಂಧ ಕಲ್ಪಿಸಿದ್ದಾರೆ. ಅವರ ಹೇಳಿಕೆಯೇ ಈಗ ಅವರಿಗೆ ಮುಳುವಾಗಿ ಪರಿಣಮಿಸಿದೆ.

CNN-News18 ಸುದ್ದಿ ವಾಹಿನಿಯಲ್ಲಿ ರಾಜಕೀಯ ಸುದ್ದಿಯ ಸಂಪಾದಕಿಯಾಗಿರುವ ಮಾರ್ಯಾ ಶಾಕಿಲ್‌ ಅವರು ಮಾಡಿರುವ ಒಂದು ಟ್ವೀಟ್‌ ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಅವರ ಟ್ವೀಟ್‌ ವಿರುದ್ದ ಆರ್‌ಟಿಐ ಹಾಗೂ ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ಕೂಡಾ ನೀಡಿದ್ದಾರೆ.

“ಬಿಹಾರ ಚುನಾವಣೆಗೆ ʼಜಿನ್ನಾ ಆತ್ಮʼ ಆಗಮಿಸಿದೆ. 2018ರ ಪ್ರತಿಭಟನೆಯಿಂದಾಗಿ ಮುನ್ನೆಲೆಗೆ ಬಂದಿದ್ದ AMU (Aligarh Muslim University) ಯ ಮುಖ್ಯಸ್ಥ ಮಷ್ಕೂರ್‌ ಉಮಾನಿಗೆ ಕಾಂಗ್ರೆಸ್‌ ಪಕ್ಷ ಟಿಕೆಟ್‌ ನೀಡಿದೆ. ಇದನ್ನು ಬಿಜೆಪಿಯು ಟೀಕಿಸಿದೆ,” ಎಂದು ಮಾರ್ಯಾ ಶಾಕಿಲ್‌ ಅವರು ಟ್ವೀಟ್‌ ಮಾಡಿದ್ದರು.

ಈ ಟ್ವೀಟ್‌ಗೆ ಖಾರವಾದ ಪ್ರತಿಕ್ರಿಯೆ ಮಾತ್ರ ಬಂದಿದ್ದಲ್ಲದೇ, ಸಾಕೇತ್‌ ಗೋಖಲೆ ಅವರು ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ಮಾರ್ಯಾ ಅವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Serious question. What's AMU chief? Never heard about it. https://t.co/aEg94N1rJi

— صدیق جیلانی Siddique Jilani (@szjilani) October 16, 2020


“ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಯ ಧರ್ಮವನ್ನು ಕೇಂದ್ರೀಕರಿಸಿ ಅವರ ವಿರುದ್ದ ಟೀಕೆ ಮಾಡಲಾಗುತ್ತಿದೆ. ಪಾಕಿಸ್ತಾನಕ್ಕೂ ಅಭ್ಯರ್ಥಿಗೂ ಯಾವುದೇ ಸಂಬಂಧವಿಲ್ಲದಿದ್ದರೂ, ಉದ್ದೇಶಪೂರ್ವಕವಾಗಿ ʼಜಿನ್ನಾ ಆತ್ಮʼ ಎಂಬ ಪದವನ್ನು ಬಳಸಲಾಗಿದೆ. ಈ ಪದವನ್ನು ಬಳಸಿ, ಚುನಾವಣಾ ವ್ಯವಸ್ಥೆಗೆ ಕೋಮು ಬಣ್ಣ ಬಳಿಯುವ ಪ್ರಯತ್ನವನ್ನು ಮಾರ್ಯಾ ಶಾಕಿಲ್‌ ಮಾಡಿದ್ದಾರೆ,” ಎಂದು ಸಾಕೇತ್‌ ತಮ್ಮ ದೂರಿನಲ್ಲಿ ಬರೆದುಕೊಂಡಿದ್ದಾರೆ.

Filed a Model Conduct of Conduct violation complaint against the attached tweet with ECI & CEO, Bihar.

It's time that media is taught that they CANNOT get away demonizing Muslim youth & leaders by using dog whistles like “Jinnah's ghost”.

This MUST stop.

cc: @SpokespersonECI https://t.co/qqcyZuuFar pic.twitter.com/BbzsEVldDU

— Saket Gokhale (@SaketGokhale) October 16, 2020


ADVERTISEMENT

ಮಾರ್ಯಾ ಶಾಕಿಲ್‌ ಅವರ ಈ ಹೇಳಿಕೆಯು ಚುನಾವಣಾ ನೀತಿ ಸಂಹಿತೆಗೆ ವಿರುದ್ದವಾದದ್ದು. ಮಾಧ್ಯಮಗಳು ಪಕ್ಷಾತೀತರಾಗಿ ಇರಬೇಕಾಗಿವೆ. ಅಷ್ಟು ಮಾತ್ರವಲ್ಲದೇ, ಅವರ ವರದಿಗಾರಿಕೆ ಅಥವಾ ಮಾಧ್ಯಮದ ವ್ಯಕ್ತಿಗಳ ಹೇಳಿಕೆಗಳು ಕೋಮು ದ್ವೇಷವನ್ನು ಪ್ರಚೋದಿಸುವಂತಿರಬಾರದು. ಆದರೆ, ಮಾರ್ಯಾ ಶಾಕಿಲ್‌ ಅವರು ಅಭ್ಯರ್ಥಿಯ ಧರ್ಮವನ್ನು ಉಲ್ಲೇಖಿಸಿ ನೀಡಿರುವ ಹೇಳಿಕೆ ಮಾದರಿ ಚುನಾವಣಾ ಸಂಹಿತೆಗೆ ಅಪಚಾರವೆಗುವಂತದ್ದು, ಎಂದು ಸಾಕೇತ್‌ ಹೇಳಿದ್ದಾರೆ.

Tags: Bihar electionghost of jinnahಜಿನ್ನಾ ಆತ್ಮಬಿಹಾರ ಚುನಾವಣೆ
Previous Post

ಏಳು ತಿಂಗಳ ಬಳಿಕ ಭಕ್ತರಿಗೆ ಶಬರಿಮಲೆ ಪ್ರವೇಶಕ್ಕೆ ಅವಕಾಶ

Next Post

ಪ್ರಾಯೋಜಿತ ಹಬ್ಬಗಳಿಂದ ಹೊರಬರೋಣ

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಪ್ರಾಯೋಜಿತ ಹಬ್ಬಗಳಿಂದ ಹೊರಬರೋಣ

ಪ್ರಾಯೋಜಿತ ಹಬ್ಬಗಳಿಂದ ಹೊರಬರೋಣ

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada