• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಬಿಹಾರ ಚುನಾವಣೆ: ಬಿಜೆಪಿ ನಾಯಕರಿಗೆ ಮಗ್ಗುಲ ಮುಳ್ಳಾದ ಚಿರಾಗ್‌ ಪಾಸ್ವಾನ್‌

by
October 18, 2020
in ರಾಜಕೀಯ
0
ಬಿಹಾರ ಚುನಾವಣೆ: ಬಿಜೆಪಿ ನಾಯಕರಿಗೆ ಮಗ್ಗುಲ ಮುಳ್ಳಾದ ಚಿರಾಗ್‌ ಪಾಸ್ವಾನ್‌
Share on WhatsAppShare on FacebookShare on Telegram

ಬಿಹಾರ ಚುನಾವಣೆಯಲ್ಲಿ ರಾಜಕೀಯ ನಾಯಕರ ಮಾತಿನ ಬಿರುಸು ಮತ್ತಷ್ಟು ಮುಂದುವರೆದಿದೆ. ಅದರಲ್ಲೂ, ಎನ್‌ಡಿಎ ಮೈತ್ರಿಕೂಟದ ಒಳಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಬಿಹಾರ ಚುನಾವಣೆಯ ಕಾವನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಾದೇಶಿಕ ಪಕ್ಷವಾದ ಎಲ್‌ಜೆಪಿ, ಈಗ ಬಿಹಾರ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವಹಿಸಲಿದ್ದು, ಬಿಜೆಪಿಯ ರಾಷ್ಟ್ರೀಯ ನಾಯಕರಿಗೇ ಮಗ್ಗುಲ ಮುಳ್ಳಾಗಿ ಪರಿಣಮಿಸಿದೆ.

ADVERTISEMENT

ಜೆಡಿಯು ಮತ್ತು ಎಲ್‌ಜೆಪಿ ನಡುವಿನ ವೈಮನಸ್ಯದಿಂದಾಗಿ ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ತೊರದು ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿರುವ ಎಲ್‌ಜೆಪಿ ನಾಯಕ ಚಿರಾಗ್‌ ಪಾಸ್ವಾನ್‌ ಈಗ ಬಿಜೆಪಿ ನಾಯಕರಿಗೆ ಆಯ್ಕೆ ನೀಡಿದ್ದಾರೆ. ನಿತೀಶ್‌ ಕುಮಾರ್‌ ಮುಖ್ಯಮಂತ್ರಿ ಆದಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಸಂಪೂರ್ಣವಾಗಿ ಹೊರಬರುವುದು ಖಚಿತ ಎಂದು ಅವರು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಚಿರಾಗ್‌ ಪಾಸ್ವಾನ್‌ ಅವರನ್ನು ಬಿಜೆಪಿ ನಾಯಕರು ʼಮತ ವಿಭಜಕʼ ಎಂದು ಜರೆದಿದ್ದರು. ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಹೆಸರಿನಲ್ಲಿ ಬಿಜೆಪಿ ಮತ್ತು ಜೆಡಿಯು ಮೈತ್ರಿಕೂಟದ ಮತಗಳನ್ನು ಒಡೆಯುವ ಪ್ರಯತ್ನ ಚಿರಾಗ್‌ ಪಾಸ್ವನ್‌ ಮಾಡುತ್ತಿದ್ದಾರೆ ಎಂದು ಬಿಹಾರದ ಪ್ರಮುಖ ನಾಯಕರು ಹೇಳಿಕೆ ನೀಡಿದ್ದರು.

ಇದರಿಂದಾಗಿ ಕುಪಿತಗೊಂಡಿರುವ ಚಿರಾಗ್‌ ಪಾಸ್ವಾನ್‌ “ಬಿಜೆಪಿ ನಾಯಕರಿಂದ ಇಂತಹ ಹೇಳಿಕೆಯನ್ನು ನಾನು ನಿರೀಕ್ಷಿಸಿರಲಿಲ್ಲ. ನಿತಿಶ್‌ ಕುಮಾಋ ಅವರನ್ನು ಚುನಾವಣೆಯಲ್ಲಿ ಸೋಲಿಸುವುದು ನನ್ನ ಪ್ರಮುಖ ಧ್ಯೇಯ. ಒಂದು ವೇಳೆ ನಿತೀಶ್‌ ಕುಮಾರ್‌ ಅವರು ಮತ್ತೆ ಮುಖ್ಯಮಂತ್ರಿಯಾದಲ್ಲಿ, ನಾನು ಎನ್‌ಡಿಎ ಬಿಟ್ಟು ಹೊರಗೆ ಬಂದು ವಿರೋಧ ಪಕ್ಷದ ಸ್ಥಾನದಲ್ಲಿ ಕೂರುತ್ತೇನೆ,” ಎಂದು ಕಟುವಾಗಿ ನುಡಿದಿದ್ದಾರೆ.

Also Read: ಬಿಹಾರ ಚುನಾವಣೆ: NDA ಮೈತ್ರಿಕೂಟದಿಂದ ಹೊರನಡೆದ LJP ಏನು ಸಾಧಿಸಬಲ್ಲದು?

ಈ ಹಿಂದೆ ನಾನು ಪ್ರಧಾನಿ ಮೋದಿಯವರಿಗೆ ಹನುಮಂತನಿದ್ದಂತೆ, ನನ್ನ ಹೃದಯ ಸೀಳಿದರೆ ಪ್ರಧಾನಿ ಮೋದಿ ಕಾಣಿಸುತ್ತಾರೆ ಎಂದು ಚಿರಾಗ್‌ ಹೇಳಿದ್ದರು. ಇದನ್ನು ಕೂಡಾ ಖಂಡಿಸಿದ್ದ ಬಿಜೆಪಿ ನಾಯಕರು, ಚಿರಾಗ್‌ ಪಾಸ್ವಾನ್‌ ಮತದಾರರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು. ಇಷ್ಟು ಮಾತ್ರವಲ್ಲದೇ, ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿಯವರ ಹೆಸರು ಹಾಗೂ ಅವರ ಭಾವ ಚಿತ್ರವನ್ನು ಎಲ್‌ಜಿಪಿ ನಾಯಕರು ಬಳಸಿಕೊಳ್ಳಲು ಅವಕಾಶ ನೀಡಬಾರದು ಎಂದು ನಿಜೆಪಿಯವರು ಚುನಾವಣಾ ಆಯೋಗಕ್ಕೆ ಪತ್ರವನ್ನು ಕೂಡಾ ಬರೆದಿದ್ದಾರೆ.

Also Read: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಪ್ರಕ್ರಿಯೆ ಮುಕ್ತಾಯ

ಬಿಜೆಪಿಯಿಂದ ಟಿಕೆಟ್‌ ವಂಚಿತರಾಗಿದ್ದ ಒಟ್ಟು ಒಂಬತ್ತು ಜನ ನಾಯಕರು ಎಲ್‌ಜೆಪಿ ಸೇರಿದ್ದಾರೆ. ಚಿರಾಗ್‌ ಪಾಸ್ವಾನ್‌ ಅವರ ʼಬಿಹಾರ್‌ ಮೊದಲು, ಬಿಹಾರಿ ಮೊದಲುʼ ಎಂಬ ಘೋಷ ವಾಕ್ಯವನ್ನು ಜಾರಿಗೆ ತರಲು ಇದು ಸಕಾಲ ಎಂದು ಅವರೆಲ್ಲರೂ ಅಭಿಪ್ರಾಯಪಟ್ಟಿದ್ದಾರೆ. ಈ ಒಂಬತ್ತು ಜನರನ್ನು ಬಿಜೆಪಿಯು ಪ್ರಾಥಮಿಕ ಸದಸ್ಯತ್ವದಿಂದ ಕಿತ್ತೊಗೆದಿದ್ದು, ಬಂಡಾಯಗಾರರಿಗೆ ಖಡಕ್‌ ಸಂದೇಶ ರವಾನಿಸಿದೆ.

ಎಲ್‌ಜೆಪಿಯು ಈ ಬಾರಿ ಚುನಾವಣೆಯಲ್ಲಿ ಒಟ್ಟು 143 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಹೆಚ್ಚಿನ ಕಡೆಗಳಲ್ಲಿ ಜೆಡಿಯು ಅದರ ನಿಕಟ ಪ್ರತಿಸ್ಪರ್ಧಿಯಾಗಿದೆ. ಕೇಂದ್ರದಲ್ಲಿ ಈಗಲೂ ಎನ್‌ಡಿಎ ಮೈತ್ರಿಕೂಟದಲ್ಲಿ ಸಕ್ರಿಯವಾಗಿರುವ ಎಲ್‌ಜೆಪಿಯು, ಒಂದು ವೇಳೆ ನಿತೀಶ್‌ ಸಿಎಂ ಆದಲ್ಲಿ ಕೇಂದ್ರದಲ್ಲಿಯೂ ಬೆಂಬಲವನ್ನು ಹಿಂಪಡೆಯುವ ನಿರ್ಧಾರ ತಾಳಿದೆ.

Also Read: ಬಿಹಾರ ಚುನಾವಣೆ: ಬಿಜೆಪಿಯಿಂದ ʼಕರೋನಾ ಯುದ್ಧ ಗೆಲ್ಲುತ್ತಿದ್ದೇವೆʼ ಎಂಬ ಸುಳ್ಳು ಪ್ರಚಾರ

ಬಿಜೆಪಿ ಹಾಗೂ ಎಲ್‌ಜೆಪಿ ನಡುವಿನ ತಿಕ್ಕಾಟ ಎನ್‌ಡಿಎ ಮೈತ್ರಿಕೂಟವನ್ನು ನಿಜಕ್ಕೂ ಗೊಂದಲಕ್ಕೆ ತಳ್ಳುತ್ತಿದೆ. ಇದರಿಂದಾಗಿ ಮತದಾರರು ಕೂಡಾ ಸಂಪೂರ್ಣವಾಗಿ ಗೊಂದಲದಲ್ಲಿದ್ದು, ಈ ಪರಿಸ್ಥಿತಿ ಚುನಾವಣಾ ಫಲಿತಾಂಶದ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಈ ಪರಿಸ್ಥಿತಿಯನ್ನು ಆರ್‌ಜೆಡಿ ಮತ್ತು ಕಾಂಗ್ರೆಸ್‌ ನಾಯಕರು ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂಬುದರ ಮೇಲೆ ಸಂಪೂರ್ಣ ಚುನಾವಣೆಯ ಫಲಿತಾಂಶ ನಿರ್ಧಾರವಾಗಲಿದೆ.

Tags: bihar assembly electionಬಿಹಾರ ಚುನಾವಣೆ
Previous Post

ಕರ್ನಾಟಕ ನೆರೆ ಪರಿಸ್ಥಿತಿ; ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ- ಕುರಬೂರು ಶಾಂತಕುಮಾರ್

Next Post

ಕರೋನಾ ಸೋಂಕು: ಫೆಬ್ರವರಿ 2021ರ ವೇಳೆಗೆ ಭಾರತದಲ್ಲಿ ಒಂದು ಕೋಟಿ ದಾಟಲಿರುವ ಸೋಂಕಿತರ ಸಂಖ್ಯೆ

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

June 20, 2025
Next Post
ಕರೋನಾ ಸೋಂಕು: ಫೆಬ್ರವರಿ 2021ರ ವೇಳೆಗೆ ಭಾರತದಲ್ಲಿ ಒಂದು ಕೋಟಿ ದಾಟಲಿರುವ ಸೋಂಕಿತರ ಸಂಖ್ಯೆ

ಕರೋನಾ ಸೋಂಕು: ಫೆಬ್ರವರಿ 2021ರ ವೇಳೆಗೆ ಭಾರತದಲ್ಲಿ ಒಂದು ಕೋಟಿ ದಾಟಲಿರುವ ಸೋಂಕಿತರ ಸಂಖ್ಯೆ

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada