• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಹಾರ ಚುನಾವಣೆ; ಬಿಜೆಪಿ ಪ್ರಣಾಳಿಕೆಗೆ ಕಾಂಗ್ರೆಸ್‌ ಮುಖಂಡರ ಟೀಕೆ

by
October 23, 2020
in ದೇಶ
0
ಬಿಹಾರ ಚುನಾವಣೆ; ಬಿಜೆಪಿ ಪ್ರಣಾಳಿಕೆಗೆ ಕಾಂಗ್ರೆಸ್‌ ಮುಖಂಡರ ಟೀಕೆ
Share on WhatsAppShare on FacebookShare on Telegram

ಬಿಹಾರ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಬಹಳಷ್ಟು ಟೀಕೆಗೆ ಒಳಗಾಗಿದೆ. ಉದ್ಯೋಗ ಮತ್ತು ಕೋವಿಡ್‌ ಲಸಿಕೆಯನ್ನು ಮುಂದಿಟ್ಟುಕೊಂಡು ಚುನಾವಣೆಡ ಹೊರಟಿರುವ ಬಿಜೆಪಿಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಹಿಂದಿಯಲ್ಲಿ ಶಾಯರಿ ಬರೆದೆರುವ ರಾಹುಲ್‌ ಅವರು “ಬಿಹಾರದ ವಾತಾವರಣ ಗುಲಾಬಿಯಷ್ಟೇ ಅಂದವಾಗಿದೆ. ಆದರೆ, ನಿಮ್ಮ ಅಂಕಿ-ಅಂಶಗಳು ಸುಳ್ಳು ಮತ್ತು ಹೇಳಿಕೆಗಳು ಪುಸ್ತಕದಲ್ಲಿ ಮಾತ್ರ ಇವೆ,” ಎಂದು ಹೇಳಿದ್ದಾರೆ.

‘तुम्हारे दावों में बिहार का मौसम गुलाबी है 
मगर ये आंकड़े झूठे हैं ये दावा किताबी है।’

कोरोना हो या बेरोज़गारी, झूठे आँकड़ों से पूरा देश परेशान है।

आज बिहार में आपके बीच रहूँगा। आइए, इस झूठ और कुशासन से पीछा छुड़ाएँ।

— Rahul Gandhi (@RahulGandhi) October 23, 2020


“ಕರೋನಾವಿರಲಿ ಅಥವಾ ನಿರುದ್ಯೋಗವಿರಲಿ ಸುಳ್ಳು ಅಂಕಿ-ಅಂಶಗಳಿಂದ ಇಡೀ ಭಾರತ ಸಂಕಷ್ಟದಲ್ಲಿದೆ. ಬನ್ನಿ, ಈ ಸುಳ್ಳು&ಕೆಟ್ಟ ಆಡಳಿತದಿಂದ ಮುಕ್ತರಾಗೋಣ,” ಎಂದು ಅವರು ಹೇಳಿದ್ದಾರೆ.

ಬಿಜೆಪಿಯು ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಕರೋನಾ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಹೇಳಿದೆ. ಇದು ಮತದಾರರನ್ನು ಹಾದಿ ತಪ್ಪಿಸುವ ಸಂಚು ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಸಿಎಂ ಸಿದ್ದರಾಮಯ್ಯರಿಂದಲೂ ವಿರೋಧ:

ಚುನಾವಣಾ ಪ್ರಣಾಳಿಕೆಯಲ್ಲಿ ಕೋವಿಡ್‌ ಲಸಿಕೆಯನ್ನು ಕೂಡಾ ನಮೂದಿಸಿರುವುದನ್ನು ಸೂಚ್ಯವಾಗಿ ಟೀಕಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು “ಸರ್ಕಾರದಿಂದ ಉಚಿತ ಕೋವಿಡ್‌ ಲಸಿಕೆ ಪಡೆಯುವ ಘೋಷಣೆಗಾಗಿ ಕನ್ನಡಿಗರು ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಕರ್ನಾಟಕ ಬಿಜೆಪಿಯ ಅಧ್ಯಕ್ಷರು ಇದನ್ನು ಖಚಿತಪಡಿಸಬಲ್ಲರೇ?,” ಎಂದು ನಳಿನ್‌ ಕುಮಾರ್‌ ಕಟೀಲ್‌ಗೆ ಪ್ರಶ್ನಿಸಿದ್ದಾರೆ.

Kannadigas are waiting for the announcement of free vaccine by govt.

Will @BJP4Karnataka President assure on behalf of @narendramodi?

Or

Will he conspire against @CMofKarnataka @BSYBJP to eventually promise in the election manifesto?#OpportunistBJP

3/3

— Siddaramaiah (@siddaramaiah) October 23, 2020


ADVERTISEMENT

“ಅಥವಾ, ಮುಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಇದನ್ನು ಕೂಡಾ ಒಂದು ಭರವಸೆಯಾಗಿ ನೀಡಲು ಸಿಎಂ ಬಿಎಸ್‌ವೈ ಅವರಿಗೆ ಹೇಳುತ್ತಾರೆಯೇ?,” ಎಂದು ಟ್ವೀಟ್‌ ಮಾಡಿದ್ದಾರೆ.

“ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತರಾಮನ್‌ ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ (ಇದು ನಿಮ್ಮದೇ ಭಾಷೆ) ನಿಮಗಿದೆಯೇ ನಳಿನ್‌ ಕುಮಾರ್‌ ಕಟೀಲ್‌ ಅವರೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Previous Post

ನಳಿನ್ ವಿರುದ್ದ ಸಿದ್ದರಾಮಯ್ಯ ಟೀಕೆ; ಪ್ರತಿಕ್ರಿಯಿಸಿದ ಸಿಟಿ ರವಿ

Next Post

ನವೆಂಬರ್‌ 17ರಿಂದ ಕಾಲೇಜುಗಳ ಪುನರಾರಂಭಕ್ಕೆ ನಿರ್ಧಾರ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ನವೆಂಬರ್‌ 17ರಿಂದ ಕಾಲೇಜುಗಳ ಪುನರಾರಂಭಕ್ಕೆ ನಿರ್ಧಾರ

ನವೆಂಬರ್‌ 17ರಿಂದ ಕಾಲೇಜುಗಳ ಪುನರಾರಂಭಕ್ಕೆ ನಿರ್ಧಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada