• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬುದ್ಧಿವಂತರ ಜಿಲ್ಲೆಗಳ ಹೆದ್ದಾರಿಯ ಟೋಲ್  ಗೇಟ್  ಕರ್ಮಕಾಂಡ

by
October 16, 2019
in ಕರ್ನಾಟಕ
0
ಬುದ್ಧಿವಂತರ ಜಿಲ್ಲೆಗಳ ಹೆದ್ದಾರಿಯ ಟೋಲ್  ಗೇಟ್  ಕರ್ಮಕಾಂಡ
Share on WhatsAppShare on FacebookShare on Telegram

ಬುದ್ಧಿವಂತರ, ವಿದ್ಯಾವಂತರ ಜಿಲ್ಲೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೇವಲ 93 ಕಿಲೋ ಮೀಟರ್ ಅಂತರಲ್ಲಿ ಇರುವ ಐದು ಟೋಲ್ ಗೇಟುಗಳಲ್ಲಿ ದಿನನಿತ್ಯ ಹಗಲು ದರೋಡೆ ನಡೆಯುತ್ತಿದೆ. ಭಾರತ ಸರಕಾರದ ಕಾನೂನು ಪ್ರಕಾರ ರಸ್ತೆ ನಿರ್ವಹಣಾ ಶುಲ್ಕ ಸಂಗ್ರಹಿಸುವ ಟೋಲ್ ಗೇಟುಗಳು 60 ಕಿಲೋ ಮೀಟರ್ ಅಂತರದಲ್ಲಿ ಇರಬಾರದು. ಹಾಗಿದ್ದರೂ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಐದು ಟೋಲ್ ಗೇಟುಗಳು ವಾಹನ ಚಾಲಕರಿಂದ ಹಣ ಸಂಗ್ರಹ ಮಾಡುತ್ತಿವೆ.

ADVERTISEMENT

ಈ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರಿದ್ದಾರೆ. ಎರಡೂ ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಶಾಸಕರಿದ್ದಾರೆ. ಅಕ್ರಮ ಟೋಲ್ ಗೇಟನ್ನು ತೆಗೆದು ಹಾಕುತ್ತೇನೆ ಎಂದು ಘೋಷಣೆ ಮಾಡಿದವರು ಇದೀಗ ಆಡಳಿತ ಪಕ್ಷದ ರಾಜ್ಯ ಅಧ್ಯಕ್ಷರಾಗಿದ್ದಾರೆ. ಅಸಂಖ್ಯ ಚೌಕಿದಾರರಿದ್ದಾರೆ. ಹಾಗಿದ್ದರೂ ಹಗಲು ದರೋಡೆ ನಡೆಯುತ್ತಲೇ ಇದೆ. ಇದು ಹೇಗೆ ಸಾಧ್ಯ.

National Highways Fee (Determination of rates and collection) Rules, 2008, Sec 8(2) ಪ್ರಕಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಟೋಲ್‍ಗೇಟ್ ನಡುವಿನ ಕನಿಷ್ಟ ಅಂತರ ಅರವತ್ತು ಕಿಲೋ ಮೀಟರ್ ಇರಲೇಬೇಕು. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಹಾದುಹೋಗುವ ಕೇರಳ- ಗೋವಾ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾಲ್ಕು ಟೋಲ್ ಗೇಟುಗಳು ಇವೆ.

ಮೊದಲಿಗೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ. ಸಿ. ರೋಡ್ ಮತ್ತು ನಂತೂರು (ಮಂಗಳೂರು) ನಡುವೆ ಬ್ರಹ್ಮರಕೂಟ್ಲು (ತುಂಬೆ) ಎಂಬಲ್ಲಿ ಒಂದು ಗೋಲ್ ಗೇಟ್ ಸಿಗುತ್ತದೆ. ಇದು 2013ರಿಂದ ಟೋಲ್ ಸಂಗ್ರಹ ಆರಂಭಿಸಿದೆ. ಇದು ಸಂಪೂರ್ಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅನುದಾನ ಮತ್ತು ಬಂದರು ಸುತ್ತಮುತ್ತಲ ಅಭಿವೃದ್ಧಿ ಯೋಜನೆಯಡಿ ನಿರ್ಮಿತ (ನ್ಯೂ ಮಂಗಳೂರು ಪೋರ್ಟ್ ರೋಡ್ ಲಿಮಿಟೆಡ್) ರಸ್ತೆ.

ಕೇರಳ ಗಡಿ ಪ್ರದೇಶ ತಲಪಾಡಿಯಿಂದ ಗೋವಾ ರಾಜ್ಯ ಗಡಿ ತನಕ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಲಪಾಡಿಯಿಂದ ಕುಂದಾಪುರ ತಾಲೂಕಿನ ಸಾಸ್ತಾನ ನಡುವೆ ನಾಲ್ಕು ಟೋಲ್ ಗೇಟುಗಳನ್ನು ಹಾಕಿ ಶುಲ್ಕ ಸಂಗ್ರಹಿಸಲಾಗುತ್ತಿದೆ. ನಂತೂರು ವೃತ್ತದಿಂದ ಸುರತ್ಕಲ್ ತನಕ ಹಳೆಯ ಗುತ್ತಿಗೆಯಲ್ಲಿ ನಾಲ್ಕು ಪಥಗಳ ರಸ್ತೆ ನಿರ್ಮಾಣ ಮಾಡಲಾಗಿದೆ. ಒಂದು ತುಂಡನ್ನು ಹೊರತು ಪಡಿಸಿದ ಗೋವಾ ಗಡಿ ತನಕದ ಹೆದ್ದಾರಿಯನ್ನು ನಾಲ್ಕು ಪಥಗಳ ಹೆದ್ದಾರಿಯಾಗಿ ಪರಿವರ್ತಿಸಿ ಸರ್ವೀಸ್ ರಸ್ತೆ ನಿರ್ಮಿಸುವ ಯೋಜನೆಯನ್ನು ಆಂಧ್ರಪ್ರದೇಶ ಮೂಲದ ನವಯುಗ್ ಉಡುಪಿ ಪ್ರೈವೆಟ್ ಲಿಮಿಟೆಡ್ ವಹಿಸಿಕೊಂಡಿದೆ. ಬಂಡವಾಳ ಹೂಡಿಕೆ ಮತ್ತು ಕಾಮಗಾರಿ ಅನುಷ್ಠಾನ ನಡೆಸಿ ಟೋಲ್ ಸಂಗ್ರಹಿಸುವ ಒಪ್ಪಂದದ ಮೇರೆಗೆ ಈ ಕಾಮಗಾರಿ ನಡೆಯುತ್ತಿದೆ.

ಪಂಪ್ ವೆಲ್ ಸರ್ಕಲ್ ಕಾಮಗಾರಿ ಸೇರಿದಂತೆ ಹೆದ್ದಾರಿ ಕಾಮಗಾರಿ ಶೇಕಡ 50ರಷ್ಟು ಮುಗಿಯುವ ಮುನ್ನವೇ ನವಯುಗ್ ಕಂಪೆನಿ ರಸ್ತೆ ಶುಲ್ಕ ಸಂಗ್ರಹಕ್ಕೆ ಟೋಲ್ ಗೇಟ್ ಪ್ಲಾಜ ಸ್ಥಾಪಿಸಿತ್ತು. ಟೋಲ್ ಸಂಗ್ರಹಿಸಬೇಕಾದರೆ ಹೆದ್ದಾರಿಯ ಕೆಲಸ ಕನಿಷ್ಟ 75% ಮುಗಿದಿರಬೇಕು. ಆದರೆ, ಸರಕಾರ ರಸ್ತೆ ಶುಲ್ಕ ಸಂಗ್ರಹಿಸಲು ಅನುಮತಿ ನೀಡಿತ್ತು. ಮೊದಲಿಗೆ ತಾತ್ಕಾಲಿಕ ಎಂಬ ನೆಲೆಯಲ್ಲಿ ಸುರತ್ಕಲ್ ಎನ್ ಐ ಟಿ ಕೆ ಬಳಿ ಮೊದಲ ಟೋಲ್ ಗೇಟ್, ಅನಂತರ ಪಡುಬಿದ್ರಿ ಸಮೀಪದ ಹೆಜಮಾಡಿ ಮತ್ತು ತಲಪಾಡಿಯಲ್ಲಿ ಹಾಗೂ ಅಂತಿಮವಾಗಿ ಕುಂದಾಪುರ ಸಾಸ್ತಾನ ಸಮೀಪದ ಗುಂಡ್ಮಿಯಲ್ಲಿ ಟೋಲ್ ಗೇಟ್ ಬಿತ್ತು. ಎಲ್ಲ ಟೋಲ್ ಗೇಟ್ ಸ್ಥಾಪನೆಗೂ ಮುನ್ನ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ಆರಂಭಕ್ಕೂ ಮುನ್ನ ಭಾರತೀಯ ಜನತಾ ಪಾರ್ಟಿ ಸ್ಥಳೀಯವಾಗಿ ವಿರೋಧಿಸುವ ಉದ್ದೇಶದಿಂದ ಸಭೆ ನಡೆಸಿತ್ತು. ಆದರೆ, ಆ ಸಭೆಯಲ್ಲಿ ಸ್ಥಾಪಿತ ಹಿತಾಸಕ್ತಿಗಳು ಟೋಲ್ ಗೇಟ್ ಸಂಗ್ರಹದ ಪರವಾಗಿ ಪರೋಕ್ಷ ವಕಾಲತ್ ಮಾಡಿದ ಪರಿಣಾಮ ಸ್ಥಳೀಯ ಬಿಜೆಪಿ ಕಾರ್ಯಕರ್ತರಿಗೆ ಟೋಲ್ ಗೇಟ್ ವಿರೋಧಿಸಲು ಸಾಧ್ಯ ಆಗಲಿಲ್ಲ. ಅನಂತರ ಹಲವಾರು ಸಂಘಟನೆಗಳು ಉಡುಪಿ, ಸಾಸ್ತಾನ, ಹೆಜಮಾಡಿ, ಸುರತ್ಕಲ್, ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸುರತ್ಕಲ್ ಟೋಲ್ ಗೇಟ್ ತೆರವು ಮಾಡಲೇ ಬೇಕು ಎಂದು ಹಲವು ದಿನಗಳ ಕಾಲ ಪ್ರತಿಭಟನೆ ನಡೆಯಿತು. ಏಕೆಂದರೆ, ಸುರತ್ಕಲ್ NITK ಹಾಗೂ ಹೆಜಮಾಡಿ ನಡುವೆ ಹತ್ತು ಕಿಲೋಮೀಟರ್ ಅಂತರದಲ್ಲಿ ಎರಡು ಟೋಲ್‍ಗೇಟ್‍ಗಳಿವೆ. NITK ಸಮೀಪದ ಟೋಲ್ ಗೇಟ್ ತೆರವು ಮಾಡಲೇ ಬೇಕಾಗುತ್ತದೆ. ಕೇವಲ 10 ಕಿಲೋ ಮೀಟರ್ ಅಂತರಕ್ಕೆ 25 ರೂಪಾಯಿ ಶುಲ್ಕ ತೆರಬೇಕಾಗುತ್ತದೆ.

ತಲಪಾಡಿ ಹಾಗೂ ಗುಂಡ್ಮಿಯ ನಡುವಿನ ಅಂತರ 95 ಕಿಲೋಮೀಟರ್. ಕಾನೂನು ಪ್ರಕಾರ ಈ ಅಂತರದಲ್ಲಿ ಎರಡು ಟೋಲ್‍ಗೇಟ್‍‍ಗಳಿಗೂ ಅವಕಾಶವಿಲ್ಲ. ನಾಲ್ಕು ಟೋಲ್‍ಗೇಟ್‍ಗಳು ಶುಲ್ಕ ಸಂಗ್ರಹಿಸುತ್ತಿವೆ. ಅಂದರೆ ಸರಾಸರಿ ಇಪ್ಪತ್ತಮೂರು ಕಿಲೋಮೀಟರಿಗೊಂದು ಟೋಲ್‍ಗೇಟ್ ಇದ್ದಂತಾಯಿತು.

ಸಾಲಿಗ್ರಾಮದಿಂದ ಅಥವಾ ಕುಂದಾಪುರದಿಂದ ಮಂಗಳೂರು ಸಮೀಪದ ತಲಪಾಡಿಯವರೆಗೆ ಖಾಸಗಿ ಕಾರಿನಲ್ಲಿ ಹೋಗಿ ಬರಲು ಒಂದು ದಿನಕ್ಕೆ 390 ರೂಪಾಯಿ ರಸ್ತೆ ಶುಲ್ಕ ತೆರಬೇಕಾಗುತ್ತದೆ. ಮಾಸಿಕ ಪಾಸ್ ಮಾಡಿದರೂ 9,000 ರೂಪಾಯಿ ಬೇಕಾಗುತ್ತದೆ. ಹೀಗಿದೆ ಕರ್ನಾಟಕ ಕರಾವಳಿಯ ಕಾನೂನು ನಿಯಮಗಳು. ದೇಶದ ಎಲ್ಲಿಯೂ ಇಲ್ಲದ ಕಾನೂನು ಕರಾವಳಿ ಕರ್ನಾಟಕದಲ್ಲಿ ಚಲಾವಣೆಯಲ್ಲಿ ಇವೆ.

ರಸ್ತೆ ಶುಲ್ಕ ಪಾವತಿಸುವ ರಸ್ತೆ ಪೂರ್ಣ ಆಗಿಲ್ಲ ಎಂಬುದು ಒಂದೆಡೆಯಾದರೆ, ಕಳೆದ ಮಳೆಗಾಲದ ಅನಂತರ ಹೆದ್ದಾರಿಯಲ್ಲಿ ವಾಹನ ಚಲಾಯಿಸುವುದು ಅಪಾಯಕಾರಿಯಾಗಿದೆ. ಹೆದ್ದಾರಿ ಸಂಪೂರ್ಣ ಕೆಟ್ಟು ಹೋಗಿದೆ. ಇಂತಹ ರಸ್ತೆಗೆ ಜನರು ಶುಲ್ಕ ಪಾವತಿಸುವಂತಾಗಿದೆ ಎಂಬುದು ವಿಪರ್ಯಾಸ. 1999ರಲ್ಲಿ ಬಂಟ್ವಾಳ – ಮಂಗಳೂರು – ಸುರತ್ಕಲ್ ನಡುವೆ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಈ ಯೋಜನೆ ಅನುಷ್ಠಾನ ಆದಾಗ ಹತ್ತು ವರ್ಷಗಳು ಕಳೆಯಿತು. ಅನಂತರ 2010ರಲ್ಲಿ ತಲಪಾಡಿ – ಕುಂದಾಪುರ ನಾಲ್ಕು ಪಥಗಳ ಹೆದ್ದಾರಿ ಖಾಸಗಿ ಹೂಡಿಕೆಯಿಂದ ನಡೆಸಲು ಅನುಮತಿ ನೀಡಲಾಗಿತ್ತು. ಹೆದ್ದಾರಿ ಕಾಮಗಾರಿ ಇಂದಿರೂ ಪೂರ್ಣಗೊಂಡಿಲ್ಲ.

ರಾಜ್ಯದಲ್ಲಿ ಎರಡು ಹೆದ್ದಾರಿಗಳನ್ನು ನಿರ್ವಹಿಸುತ್ತಿರುವ ನವಯುಗ ಕಂಪೆನಿ ಹಣಕಾಸು ಸಂಕಷ್ಟದಲ್ಲಿ ಸಿಲುಕಿರುವುದು ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆದ ವಿಳಂಬದಿಂದ ಕಾಮಗಾರಿ ಕೂಡ ವಿಳಂಬ ಆಗಲು ಕಾರಣವಾಗಿದೆ. ಇದರಲ್ಲಿ ಸ್ಥಳೀಯ ರಾಜಕೀರಣಿಗಳ ಇಚ್ಛಾಶಕ್ತಿಯ ಕೊರತೆ, ದೂರದೃಷ್ಟಿಯ ಕೊರತೆ, ರಾಜಕೀಯ ಅಪಕ್ವತೆ ಕೂಡ ಕಾರಣವಾಗಿದೆ. ಇವೆರಡು ಯೋಜನೆಗಳ ಅವ್ಯವಸ್ಥೆ, ವೈಫಲ್ಯಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಸಮಾನ ಪಾಲುದಾರರು.

Tags: BJP MPsCoastal KarnatakaKarnatakaNational Highway WideningNational Highways Fee RulesToll Gateಕರಾವಳಿ ಕರ್ನಾಟಕಕರ್ನಾಟಕಟೋಲ್ ಗೇಟ್ಬಿಜೆಪಿ ಸಂಸದರುರಾಷ್ಟ್ರೀಯ ಹೆದ್ದಾರಿ ಅಗಲೀಕರಣರಾಷ್ಟ್ರೀಯ ಹೆದ್ದಾರಿ ಫೀ ನಿಯಮಗಳು
Previous Post

BCCI ಗಂಗೂಲಿಗೆ ಬಿಟ್ಟು ಬಂಗಾಳದ ಗದ್ದುಗೆ‌‌ ಮೇಲೆ‌ ಕಣ್ಣಿಟ್ಟರೇ ಅಮಿತ್ ಶಾ?

Next Post

ಕನ್ಹಯ್ಯ ಭಾಷಣ ಯಾರಿಗೆ ಬೇಡ ಎಂದು ತೋರಿಸಿದ ಗುಲ್ಬರ್ಗಾ!

Related Posts

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
0

ಬಿಗ್‌ ಬಾಸ್‌ ಕನ್ನಡ ಸೀಸನ್‌ 12(Bigg Boss Kannada 12) ಕಾರ್ಯಕ್ರಮ ಪ್ರಾರಂಭವಾದ ದಿನದಿಂದಲೇ ಗಿಲ್ಲಿ ನಟ(Gilli Nata) ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ತಮ್ಮ...

Read moreDetails
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
Next Post
ಕನ್ಹಯ್ಯ ಭಾಷಣ ಯಾರಿಗೆ ಬೇಡ ಎಂದು ತೋರಿಸಿದ ಗುಲ್ಬರ್ಗಾ!

ಕನ್ಹಯ್ಯ ಭಾಷಣ ಯಾರಿಗೆ ಬೇಡ ಎಂದು ತೋರಿಸಿದ ಗುಲ್ಬರ್ಗಾ!

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada