• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಭವಿಷ್ಯದಲ್ಲಿ ಕೆ.ಆರ್.ಪೇಟೆ ಮೇಲೆ ಕಣ್ಣಿಟ್ಟೇ ಬಿಜೆಪಿ ಗೆಲ್ಲಿಸಿದ ವಿಜಯೇಂದ್ರ

by
December 11, 2019
in ರಾಜಕೀಯ
0
ಭವಿಷ್ಯದಲ್ಲಿ ಕೆ.ಆರ್.ಪೇಟೆ ಮೇಲೆ ಕಣ್ಣಿಟ್ಟೇ ಬಿಜೆಪಿ ಗೆಲ್ಲಿಸಿದ ವಿಜಯೇಂದ್ರ
Share on WhatsAppShare on FacebookShare on Telegram

ಈ ಲೇಖನದ ಆಡಿಯೋ ಆವೃತ್ತಿ ಇಲ್ಲಿದೆ. ಕ್ಲಿಕ್‌ ಮಾಡಿ ಕೇಳಿ

ADVERTISEMENT

ರಾಜ್ಯ ವಿಧಾನಸಭೆ ಉಪ ಚುನಾವಣೆ ಮುಗಿದು ಫಲಿತಾಂಶವೂ ಬಂದಾಗಿದೆ. ಸ್ಪೀಕರ್, ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರು ಎನಿಸಿಕೊಂಡ 15 ಮಂದಿ ಪೈಕಿ 11 ಮಂದಿ ಮತದಾರರಿಂದ ಅರ್ಹರು ಎನಿಸಿಕೊಂಡಾಗಿದೆ. 12 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಭಾರಿಸುವ ಮೂಲಕ ಸರ್ಕಾರ ಸುಭದ್ರ ಎನ್ನುವಂತಾಗಿದೆ. 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಹೆಚ್ಚು ಅಚ್ಚರಿಯ ಫಲಿತಾಂಶ ಸಿಕ್ಕಿರುವುದು ಕೆ.ಆರ್.ಪೇಟೆ, ಕಾಗವಾಡ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ. ಅದರಲ್ಲೂ ಕೆ.ಆರ್.ಪೇಟೆಯಲ್ಲಿ ಬಿಜೆಪಿಯಿಂದ ನಾರಾಯಣಗೌಡ ಅವರು ಗೆಲ್ಲುವ ಮೂಲಕ ಕಮಲ ಅರಳಿಸಿದ್ದಾರೆ ಮಾತ್ರವಲ್ಲ, ಜೆಡಿಎಸ್ ಭದ್ರಕೋಟೆಯನ್ನು ಛಿದ್ರಗೊಳಿಸಿದ್ದಾರೆ.

ಇಲ್ಲಿ ನಾರಾಯಣಗೌಡ ಗೆದ್ದಿರಬಹುದು. ಬಿಜೆಪಿ ತನ್ನ ಖಾತೆ ತೆರೆದಿರಬಹುದು. ತಮ್ಮ ಹುಟ್ಟೂರು ಕೆ.ಆರ್.ಪೇಟೆಯಲ್ಲಿ ಗೆಲ್ಲಬೇಕೆಂಬ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕನಸು ನನಸಾಗಿರಬಹುದು. ಜೆಡಿಎಸ್ ಭದ್ರ ಕೋಟೆಯನ್ನು ಒಡೆದು ಹಾಕಿದ್ದೇವೆ ಎಂದು ಬಿಜೆಪಿಯವರು ಬೀಗಬಹುದು. ಆದರೆ, ಕೆ.ಆರ್.ಪೇಟೆಯಲ್ಲಿ ನಿಜವಾಗಿ ಗೆದ್ದಿರುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ. ಕ್ಷೇತ್ರದ ಉಸ್ತುವಾರಿಯಾಗಿ ನಾರಾಯಣಗೌಡರನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತಿದ್ದ ವಿಜಯೇಂದ್ರ ಅದರಲ್ಲಿ ಯಶಸ್ಸು ಸಾಧಿಸಿದ್ದಾರೆ. ಈ ಹೋರಾಟದಲ್ಲಿ ವಿಜಯೇಂದ್ರ ಜತೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ಅವರ ಸಹಕಾರ ಇದ್ದರೂ ಗೆಲುವಿನ ಒಟ್ಟಾರೆ ಶ್ರೇಯ ಸಲ್ಲಬೇಕಾಗಿರುವುದು ವಿಜಯೇಂದ್ರ ಹೂಡಿದ ಕಾರ್ಯತಂತ್ರಕ್ಕೆ.

ಬಿಜೆಪಿಗೆ ಠೇವಣಿಯೇ ಕಷ್ಟ ಎಂಬಂತಿದ್ದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ 9,509 ಮತಗಳಿಂದ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಲು ಕಾರಣವಾಗಿದ್ದು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ತೋಟದ ಮನೆ ಮತ್ತು 15 ದಿನ ಅಲ್ಲಿ ತಂಗಿದ್ದು ರಣತಂತ್ರಗಳನ್ನು ರೂಪಿಸಿ ಅದನ್ನು ಜಾರಿಗೊಳಿಸುವಲ್ಲಿ ಖುದ್ದಾಗಿ ಕೆಲಸ ಮಾಡಿದ ವಿಜಯೇಂದ್ರ. ತಂದೆ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟೂರು ಬೂಕನಕೆರೆಯನ್ನು ಒಳಗೊಂಡಿರುವ ಕೆ.ಆರ್.ಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಪಣತೊಟ್ಟಿದ್ದ ಅವರು ಅಲ್ಲೇ ಇದ್ದು 43 ರೋಡ್ ಶೋ, 10 ಬೈಕ್ ರ‍್ಯಾಲಿ ಮತ್ತು 20ಕ್ಕಿಂತ ಹೆಚ್ಚು ಸಭೆಗಳನ್ನು ಮಾಡಿದ್ದರು. ಸಣ್ಣ ಸಣ್ಣ ಜಾತಿಗಳ ಜನರನ್ನು ತಮ್ಮೆಡೆ ಸೆಳೆದುಕೊಂಡರು. ಪ್ರತಿದಿನ ಊರಿನ ದೇವಸ್ಥಾನ, ಕಟ್ಟೆಗಳಲ್ಲಿ ಬಿಜೆಪಿ ಮುಖಂಡರು ಸಭೆ ಮಾಡಿದ್ದರಲ್ಲದೆ, ಕಾರ್ಯಕರ್ತರ ಜತೆ ಸೇರಿ ಊರಿನ ಮುಖಂಡರನ್ನು ಭೇಟಿಯಾಗಿದ್ದರು. ಬಹುತೇಕ ಎಲ್ಲಾ ಹಳ್ಳಿಗಳಿಗೂ ಖುದ್ದು ಭೇಟಿ ನೀಡಿದ್ದರು. ಸುಮಾರು 600 ಸ್ವಸಹಾಯ ಸಂಘಗಳನ್ನು ಸಂಪರ್ಕಿಸಿದ್ದರು.

ಇದಷ್ಟೇ ಮಾಡಿಲ್ಲ. ಊರಿನ ಸಮಸ್ಯೆ, ಸ್ವಸಹಾಯ ಸಂಘಗಳ ಸಮಸ್ಯೆ ಹೇಳಿಕೊಂಡವರಿಗೆ, ಬೇಡಿಕೆಗಳನ್ನು ಮುಂದಿಟ್ಟವರಿಗೆ ತನ್ನ ಮೊಬೈಲ್ ನಂಬರ್ ಹಾಗೂ ಆಪ್ತ ಸಹಾಯಕನ ಮೊಬೈಲ್ ನಂಬರ್ ಕೊಟ್ಟು ಫಲಿತಾಂಶ ಬಂದ ನಂತರ ಸಂಪರ್ಕಿಸುವಂತೆ ಹೇಳಿದ್ದರು. ಇದರ ಪರಿಣಾಮ ಜನ ನಾರಾಯಣಗೌಡ ಪರ ಮತ ಹಾಕಿದರು. ಬಿಜೆಪಿ ಗೆಲುವಿನ ನಗೆ ಬೀರಿತು. ಆದರೆ, ಇಷ್ಟಕ್ಕೇ ವಿಜಯೇಂದ್ರ ಅವರ ಕೆಲಸ ಮುಗಿದಿಲ್ಲ. ಯಾರಿಗೆಲ್ಲಾ ತಾವು ತಮ್ಮ ಮೊಬೈಲ್ ನಂಬರ್ ಕೊಟ್ಟಿದ್ದರೋ ಅವರು ಸಂಪರ್ಕಿಸಿದಾಗ ನೀಡಿದ ಭರವಸೆಯಂತೆ ಕೆಲಸ ಮಾಡಿಕೊಡಲಿದ್ದಾರೆ. ಈಗಾಗಲೇ ಕೆಲವರನ್ನು ಬೆಂಗಳೂರಿಗೆ ಕರೆಸಿಕೊಂಡು ಸಣ್ಣ ಪುಟ್ಟ ಸಮಸ್ಯೆಗಳಿಗೆ ಪರಿಹಾರವನ್ನೂ ಒದಗಿಸಿದ್ದಾರೆ.

ಭವಿಷ್ಯದಲ್ಲಿ ಕೆ.ಆರ್.ಪೇಟೆ ಮೇಲೆ ಕಣ್ಣಿಟ್ಟೇ ಇಷ್ಟೆಲ್ಲಾ ಮಾಡಿದ್ದು

ವಿಜಯೇಂದ್ರ ಇಷ್ಟೆಲ್ಲಾ ಮುತುವರ್ಜಿ ವಹಿಸಿ ಕ್ಷೇತ್ರದಲ್ಲಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಅಲ್ಲಿಗೆ ಅವರ ಕೆಲಸ ಮುಕ್ತಾಯ ಎಂದು ಭಾವಿಸಿದ್ದರೆ ಅದು ಖಂಡಿತಾ ಸುಳ್ಳು. ಏಕೆಂದರೆ, ಅವರ ನಿಜವಾದ ಆಟ ಆರಂಭವಾಗಿರುವುದೇ ಈಗ. ಈ ಆಟವನ್ನು ಮುಂದುವರಿಸುವ ಮೂಲಕ ಕ್ಷೇತ್ರದಲ್ಲಿ ನಿಧಾನವಾಗಿ ತಮ್ಮ ಹಿಡಿತವನ್ನು ಗಟ್ಟಿಗೊಳಿಸುವುದು ವಿಜಯೇಂದ್ರ ಅವರ ಉದ್ದೇಶ.

ಇದಕ್ಕೆ ಕಾರಣವೂ ಇಲ್ಲದಿಲ್ಲ. ಕೆ.ಆರ್.ಪೇಟೆ ಕ್ಷೇತ್ರದ ವ್ಯಾಪ್ತಿಗೆ ಬರುವ ಭೂಕನಕೆರೆಯಲ್ಲಿ ಜನಿಸಿದ ಯಡಿಯೂರಪ್ಪ ಅವರು ನಂತರದಲ್ಲಿ ಕಾರಣಾಂತರಗಳಿಂದ ದೂರದ ಶಿಕಾರಿಪುರಕ್ಕೆ ತೆರಳಬೇಕಾಗಿ ಬಂದಿತ್ತು. ಅಲ್ಲಿಯೇ ಅವರು ತಮ್ಮ ರಾಜಕೀಯ ಭವಿಷ್ಯವನ್ನೂ ಕಂಡುಕೊಂಡರು. ಇದೀಗ ತಾತನ (ಯಡಿಯೂರಪ್ಪ ಅವರ ತಂದೆ) ಊರಿನಲ್ಲಿ ತಮ್ಮ ರಾಜಕೀಯ ಭವಿಷ್ಯವನ್ನು ಕಂಡುಕೊಳ್ಳುವುದು ವಿಜಯೇಂದ್ರ ಅವರ ಉದ್ದೇಶವಾಗಿದೆ. ಇದರ ಜತೆಗೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯನ್ನು ಬೆಳೆಸಿ ತಾವೂ ನಾಯಕನಾಗಿ ಬೆಳೆಯುವುದು ಅವರ ಇಂಗಿತವಾಗಿದೆ.

ಶಿಕಾರಿಪುರದಲ್ಲಿ ಹೇಗೂ ತಂದೆ ಯಡಿಯೂರಪ್ಪ ಇದ್ದಾರೆ. ಸಹೋದರ ಬಿ.ವೈ.ರಾಘವೇಂದ್ರ ಇದ್ದಾರೆ. ಇವರ ಬಳಿಕ ಕುಟುಂಬದ ಇನ್ಯಾರಾದರೂ ಸದಸ್ಯರನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುವುದು ಕಷ್ಟವೇನೂ ಅಲ್ಲ. ರಾಘವೇಂದ್ರ ಸಂಸದರಾಗಿರುವುದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಕುಟುಂಬದ ಹಿಡಿತ ಗಟ್ಟಿಯಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯನ್ನು ತಮ್ಮ ಕಾರ್ಯಕ್ಷೇತ್ರವಾಗಿಸಿಕೊಂಡು ರಾಜಕೀಯದಲ್ಲಿ ಬೆಳೆಯಬೇಕು ಎಂಬುದು ವಿಜಯೇಂದ್ರ ಅವರ ಅಲೋಚನೆಯಾಗಿದೆ. ಈ ಕಾರಣಕ್ಕಾಗಿಯೇ ಅವರು ತಮ್ಮ ತಾತನ ಊರಾದ ಕೆ.ಆರ್.ಪೇಟೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಪ್ರಸ್ತುತ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿರುವ ನಾರಾಯಣಗೌಡ ಅವರು ಯಡಿಯೂರಪ್ಪ ಅವರ ಸರ್ಕಾರದಲ್ಲಿ ಮಂತ್ರಿಯಾಗಲಿದ್ದಾರೆ. ಆದರೆ, ಅವರು ಪೂರ್ಣಾವಧಿ ಬಿಜೆಪಿಯಲ್ಲೇ ಇರುತ್ತಾರೆ ಅಥವಾ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಖಾತರಿ ಇಲ್ಲ. ಹೀಗಾಗಿ ಈಗಿನಿಂದಲೇ ಕ್ಷೇತ್ರದ ಜನರನ್ನು ತಮ್ಮತ್ತ ಸೆಳೆದುಕೊಂಡರೆ ಮುಂದೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲಲು ಅನುಕೂಲವಾಗುತ್ತದೆ. ತಂದೆಯ ನೆರಳು ಇಲ್ಲದೆ ಸ್ವಂತ ಬಲದಿಂದ ರಾಜಕೀಯ ನೆಲೆ ಕಂಡುಕೊಂಡರೆ ಆಗ ಬಿಜೆಪಿಯಲ್ಲೂ ಸ್ಥಾನಮಾನ ಸಿಕ್ಕೇ ಸಿಗುತ್ತದೆ. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡೇ ವಿಜೇಯೇಂದ್ರ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಅಹರ್ನಿಶಿ ಕೆಲಸ ಮಾಡಿ ಬಿಜೆಪಿಯನ್ನು ಗೆಲ್ಲಿಸಿದ್ದು.

Tags: BJP PartyBS YeddyurappaBY RaghavendraBY VijayendraByelection ResultKR Pet ConstituencyMandyaNarayanagowdaShikaripuraಉಪ ಚುನಾವಣೆ ಫಲಿತಾಂಶಕೆ.ಆರ್.ಪೇಟೆ ಕ್ಷೇತ್ರನಾರಾಯಣಗೌಡಬಿ ಎಸ್ ಯಡಿಯೂರಪ್ಪಬಿ ವೈ ರಾಘವೇಂದ್ರಬಿ.ವೈ.ವಿಜಯೇಂದ್ರಬಿಜೆಪಿ ಪಕ್ಷಶಿಕಾರಿಪುರ
Previous Post

ಅತ್ತ ದೇಶದ ಆರ್ಥಿಕತೆ ಕುಸಿತ: ಇತ್ತ ಆರ್ಥಿಕ ಅಪರಾಧಗಳ ಜಿಗಿತ!

Next Post

ಪೌರತ್ವ ಕಾಯ್ದೆ ತಿದ್ದುಪಡಿಗೆ 700 ಕ್ಕೂ ಹೆಚ್ಚು ಗಣ್ಯರ ವಿರೋಧ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ಪೌರತ್ವ ಕಾಯ್ದೆ ತಿದ್ದುಪಡಿಗೆ 700 ಕ್ಕೂ ಹೆಚ್ಚು ಗಣ್ಯರ ವಿರೋಧ

ಪೌರತ್ವ ಕಾಯ್ದೆ ತಿದ್ದುಪಡಿಗೆ 700 ಕ್ಕೂ ಹೆಚ್ಚು ಗಣ್ಯರ ವಿರೋಧ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada