• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತಕ್ಕೆ ಬರುವ ಮುನ್ನ ಟ್ರಂಪ್‌ ಮಾತಿನ ದಾಳಿ! ಕುದುರೀತೆ ವ್ಯಾಪಾರ ವಹಿವಾಟು? 

by
February 22, 2020
in ದೇಶ
0
ಭಾರತಕ್ಕೆ ಬರುವ ಮುನ್ನ ಟ್ರಂಪ್‌ ಮಾತಿನ ದಾಳಿ!  ಕುದುರೀತೆ ವ್ಯಾಪಾರ ವಹಿವಾಟು? 
Share on WhatsAppShare on FacebookShare on Telegram

ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೆರಿಕ ಭಾರತದತ್ತ ಹೆಜ್ಜೆ ಇಟ್ಟಿದೆ. ಇದೇ ಫೆಬ್ರವರಿ 24ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಮೇರಿಕದಲ್ಲಿ ನಡೆಸಿದ ಹೌಡಿ ಮೋದಿ ಕಾರ್ಯಕ್ರಮದ ರೀತಿಯಲ್ಲೇ ಗುಜರಾತ್‌ನಲ್ಲಿ ನಮಸ್ತೇ ಟ್ರಂಪ್‌ ಕಾರ್ಯಕ್ರಮ ನಡೆಸಲಾಗ್ತಾ ಇದೆ. ಈಗಾಗಲೇ ಅಮೆರಿಕದಿಂದ ಡೊನಾಲ್ಡ್‌ ಟ್ರಂಪ್‌ಗೆ ಸಂಬಂಧಿಸಿದ ಕಾರು ಸೇರಿದಂತೆ ಭದ್ರತಾ ಪಡೆಗಳು ಆಗಮಿಸಿ, ಸಿದ್ದತೆ ಮಾಡಿಕೊಳ್ಳುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಗಿಯಾಗುವ 3 ಗಂಟೆಯ ಈ ಕಾರ್ಯಕ್ರಮಕ್ಕೆ ಬರೋಬ್ಬರಿ 85 ಕೋಟಿ ರೂಪಾಯಿ ವೆಚ್ಚ ಮಾಡಲಾಗ್ತಿದೆ.

ADVERTISEMENT

ಗುಜರಾತ್‌ನ ಅಹಮದಾಬಾದ್‌ಗೆ ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಭಾರತದ ಕೊಳಗೇರಿಯ ಗುಡಿಸಲು ಕಾಣಿಸಬಾರದು ಎನ್ನುವ ಕಾರಣಕ್ಕೆ ಬರೋಬ್ಬರಿ ಆರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಚೀನಾದ ಮಹಾಗೋಡೆಯಂತೆ ಗೋಡೆಯನ್ನು ನಿರ್ಮಿಸಲಾಗಿದೆ. 1640 ಸ್ಕೈರ್‌ ಫೀಟ್‌ ಉದ್ದಕ್ಕೂ ತಡೆ ಗೋಡೆ ನಿರ್ಮಾಣ ಮಾಡಿದ್ದು, ಬಣ್ಣ ಬಣ್ಣದ ಚಿತ್ತಾರ ಮಾಡಲಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟಕ್ಕೆ ತೋರಿಸುವ ಉದ್ದೇಶದಿಂದ 2 ಸಾವಿರ ಜನರು ವಾಸ ಮಾಡುವ ಸ್ಲಂ ರಸ್ತೆಯನ್ನೇ ಮುಚ್ಚಲಾಗಿದೆ. ನರೇಂದ್ರ ಮೋದಿ ಸರ್ಕಾರ, ಡೊನಾಲ್ಡ್‌ ಟ್ರಂಪ್‌ ಎದುರು ಭಾರತವನ್ನು ಉತ್ಕೃಷ್ಟ ಮಟ್ಟದಲ್ಲಿ ತೋರಿಸಲು ಏನು ತಯಾರಿ ಬೇಕೋ ಅದನ್ನೆಲ್ಲಾ ಮಾಡುತ್ತಿದ್ದಾರೆ. ಆದರೆ ಅಮೆರಿಕ ದೊಡ್ಡಣ್ಣ ಮಾತ್ರ ಭಾರತದ ಮೇಲೆ ಕಿಡಿ ಕಾರುತ್ತಿದೆ.

ಫೆಬ್ರವರಿ 24ಕ್ಕೆ ಬಂದಿಳಿಯಲಿದ್ದು, 36 ಗಂಟೆಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ ಟ್ರಂಪ್‌. ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳುವುದಕ್ಕೂ ಮುನ್ನ ಮಗಳು, ಅಳಿಯ ಹಾಗು ಪತ್ನಿ ಸಮೇತ ಪ್ರೇಮ ಸ್ಮಾರಕ ತಾಜ್‌ ಮಹಲ್‌ಗೆ ಭೇಟಿ ನೀಡಲಿದ್ದಾರೆ. ವಿಶೇಷ ಅಂದರೆ ಅಮೆರಿಕ ಅಧ್ಯಕ್ಷರು ಭಾರತಕ್ಕೆ ಬರುವ ಮೊದಲೇ ಭಾರತದ ಬಗ್ಗೆ ಅಸಹನೆಯ ಮಾತುಗಳನ್ನು ಆಡಿದ್ದಾರೆ. ಭಾರತ ನಮ್ಮ ಜೊತೆ ಯಾವಾಗಲೂ ಉತ್ತಮ ಸಂಬಂಧಗಳನ್ನು ಇಟ್ಟುಕೊಂಡಿಲ್ಲ. ನಮ್ಮ ಬಗ್ಗೆ ಭಾರತ ಕಠಿಣ ನಿಲುವುಗಳನ್ನು ಹೊಂದಿದೆ. ನಮ್ಮನ್ನು ಉತ್ತಮವಾಗಿ ನಡೆಸಿಕೊಂಡಿಲ್ಲ ಎಂದು ಕಟುನುಡಿಗಳನ್ನು ಟ್ರಂಪ್‌ ಹೇಳಿದ್ದಾರೆ. ಆದರೆ ನಾನು ನರೇಂದ್ರ ಮೋದಿ ಬಗ್ಗೆ ಅಪಾರ ಗೌರವ ಹೊಂದಿದ್ದು ಭಾರತಕ್ಕೆ ಹೋಗಲು ಕಾತುರನಾಗಿದ್ದೇನೆ ಎಂದು ತೇಪೆ ಹಾಕುವ ಕೆಲಸ ಮಾಡಿದ್ದಾರೆ.

ಎಲ್ಲರಿಗೂ ಒಂದೇ ಅಚ್ಚರಿ ಎರಡು ದೇಶಗಳು ಒಟ್ಟಿಗೆ ಸಂಧಿಸುತ್ತಿವೆ ಎಂದರೆ ಸ್ನೇಹದ ಹಸ್ತ ಚಾಚುತ್ತಿದ್ದಾರೆ ಎಂದರ್ಥ. ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತಕ್ಕೆ ಬರುವ ಮುನ್ನ ಭಾರತದ ಬಗ್ಗೆ ಅಲ್ಪ ಸ್ವಲ್ಪ ಕಟು ನುಡಿಗಳನ್ನಾಡುವ ಮೂಲಕ ವ್ಯಾಪಾರ ಮಾರ್ಗವನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಚೀನಾದಿಂದ ಗಂಟು ಮೂಟೆ ಕಟ್ಟಿಕೊಂಡು ಹೊರಟಿರುವ ದೊಡ್ಡಣ್ಣ, ಮಾರುಕಟ್ಟೆ ವಿಸ್ತರಣೆ ಮಾಡಲು ತಿಣುಕಾಡುತ್ತಿದೆ. ಒಂದು ವೇಳೆ ಜಾಗತಿಕ ಮಟ್ಟದಲ್ಲಿ ವಿಸ್ತಾರ ಮಾರುಕಟ್ಟೆ ಹೊಂದಿರುವ ಭಾರತದ ಮಾರುಕಟ್ಟೆ ದೊಡ್ಡಣ್ಣನ ತನ್ನ ಕೈಗೆ ತೆಗೆದುಕೊಳ್ಳಲು ಮಾಡುತ್ತಿರುವ ತಂತ್ರಗಾರಿಕೆ ಎನ್ನಲಾಗಿದೆ. ಇಲ್ಲೀವರೆಗೂ ಅಮೆರಿಕದಿಂದ ಭಾರತ ಹಲವಾರು ವಸ್ತುಗಳನ್ನು ಆಮದು ಮಾಡಿಕೊಂಡಿದೆ. ಕೆಲವೊಂದು ಪದಾರ್ಥಗಳನ್ನು ರಫ್ತು ಮಾಡಿದೆ. ಮುಂದಿನ ದಿನಗಳಲ್ಲಿ ತನ್ನ ಸಿದ್ಧ ವಸ್ತುಗಳ ಮಾರುಕಟ್ಟೆ ಮಾಡಿಕೊಳ್ಳಲು ಉದ್ದೇಶ ಮಾಡಿರುವ ಅಮೆರಿಕ, ಭಾರತದ ಕಡೆಗೆ ನೇರ ದೃಷ್ಟಿಯಿಟ್ಟುದ್ದು, ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಇದು ಸಾಧ್ಯ ಎನ್ನುವಂತಾ ಭರವಸೆ ಇದೆ. ಸದ್ಯಕ್ಕೆ ಅಲ್ಲದಿದ್ದರೂ ಮುಂದಿನ ದಿನಗಳಲ್ಲಿ ವ್ಯಾಪಾರ ಒಪ್ಪಂದ ನಡೆಯುತ್ತೆ ಎನ್ನುವ ಭರವಸೆ ಇಟ್ಟುಕೊಂಡಿದ್ದಾರೆ ಡೊನಾಲ್ಡ್‌ ಟ್ರಂಪ್‌.

ವ್ಯಾಪಾರ ಒಪ್ಪಂದದ ಕುದುರಿಸಲು ಅಮೆರಿಕ ಅಧ್ಯಕ್ಷರು ಭಾರತಕ್ಕೆ ಬರುವ ಮೊದಲೇ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ. ಟ್ರಂಪ್‌ ಉರುಳಿಸಿರುವ ದಾಳ ಸ್ವತಃ ಬಿಜೆಪಿ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್‌ ಕಳವಳ ವ್ಯಕ್ತಪಡಿಸಿದೆ ಎನ್ನಲಾಗಿದೆ. ಡೊನಾಲ್ಡ್‌ ಟ್ರಂಪ್‌ ಎರಡು ದಿನಗಳ ಬೇಟಿ ವೇಳೆ ಯಾವುದೇ ವ್ಯಾಪಾರ ಒಪ್ಪಂದಕ್ಕೆ ನಾನು ಸಹಿ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ವ್ಯಾಪಾರ ಒಪ್ಪಂದ ನಡೆಯುವ ಬಗ್ಗೆ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಆದರೆ ಅಮೆರಿಕದಿಂದ ಹಾಲು ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಆಮದು ಮಾಡಿಕೊಳ್ಳದಂತೆ ಆರ್‌ಎಸ್‌ಎಸ್‌ ಆಗ್ರಹ ಮಾಡಿದೆ. ನಾವು ಭಾರತದಲ್ಲಿ ಹಸುಗಳನ್ನು ತಾಯಿಯಂತೆ ಭಾವಿಸುತ್ತೇವೆ. ಅಮೆರಿಕ ನಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು. ನಾವು ಅಮೆರಿಕದಿಂದ ಬೆಣ್ಣೆ, ತುಪ್ಪ ಸೇರಿದಂತೆ ಯಾವುದೇ ಪದಾರ್ಥಗಳನ್ನು ಆಮದು ಮಾಡಿಕೊಳ್ಳಬಾರದು ಎಂದು ಸ್ವದೇಶಿ ಜಾಗರಣಾ ಮಂಚ್‌ನ ಪ್ರಧಾನ ಕಾರ್ಯದರ್ಶಿ ಅಶ್ವಿನಿ ಮಹಾಜನ್‌ ತಿಳಿಸಿದ್ದಾರೆ. ಒಟ್ಟಾರೆ ವ್ಯಾಪಾರ ವಹಿವಾಟು ವೃದ್ಧಿಸುವುದು. ಮುಂಬರುವ ಅಮೆರಿಕ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಗಳು ಜಯಭೇರಿ ಭಾರಿಸಲು ಭಾರತೀಯ ಮೂಲದ ಜನರನ್ನು ಸೆಳೆಯುವ ಉದ್ದೇಶದಿಂದ ಭಾರತಕ್ಕೆ ಬರುತ್ತಿರುವ ಡೊನಾಲ್ಡ್‌ ಟ್ರಂಪ್‌ಗೆ ಯಾವ ಮಟ್ಟದ ಯಶಸ್ಸು ಸಿಗಲಿದೆ ಕಾದು ನೋಡ್ಬೇಕು.

Tags: Import & ExportTrump in IndiaTrump india visitಟ್ರಂಪ್ಭಾರತವ್ಯಾಪಾರ ವಹಿವಾಟು
Previous Post

1947ರ ಆ ಬ್ರೆಕ್ಸಿಟ್‌ಗೂ, 2020ರ ಈ ಬ್ರೆಕ್ಸಿಟ್‌ಗೂ, ಗೋಚರಿಸುತ್ತಿದೆಯೇ ಕಾಲ ಚಕ್ರದ ಮಹಿಮೆ?

Next Post

ಕೃಷಿ ಸಾಲ ಮನ್ನಾ: ಮಧ್ಯಪ್ರದೇಶದಲ್ಲಿ ರೈತರ ಕಣ್ಣಿಗೆ ಮಣ್ಣೆರಚಿದ ಕಾಂಗ್ರೆಸ್‌ ಸರ್ಕಾರ!

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

January 31, 2026
Next Post
ಕೃಷಿ ಸಾಲ ಮನ್ನಾ: ಮಧ್ಯಪ್ರದೇಶದಲ್ಲಿ ರೈತರ ಕಣ್ಣಿಗೆ ಮಣ್ಣೆರಚಿದ ಕಾಂಗ್ರೆಸ್‌ ಸರ್ಕಾರ!

ಕೃಷಿ ಸಾಲ ಮನ್ನಾ: ಮಧ್ಯಪ್ರದೇಶದಲ್ಲಿ ರೈತರ ಕಣ್ಣಿಗೆ ಮಣ್ಣೆರಚಿದ ಕಾಂಗ್ರೆಸ್‌ ಸರ್ಕಾರ!

Please login to join discussion

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada