• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತದ ನ್ಯಾಯಾಂಗ ವ್ಯವಸ್ಥೆಯನ್ನೇ ಅಣಕಿಸುತ್ತಿರುವ ವಕೀಲರು ಮತ್ತು ಕೆಲವು ಪ್ರಕರಣಗಳು

by
February 28, 2020
in ದೇಶ
0
ಭಾರತದ ನ್ಯಾಯಾಂಗ ವ್ಯವಸ್ಥೆಯನ್ನೇ ಅಣಕಿಸುತ್ತಿರುವ ವಕೀಲರು ಮತ್ತು ಕೆಲವು ಪ್ರಕರಣಗಳು
Share on WhatsAppShare on FacebookShare on Telegram

ಇಡೀ ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ವ್ಯಕ್ತಿ ಸ್ವಾತಂತ್ರ್ಯ ಮತ್ತು ಸಮಾನತೆಗೆ ಮಾದರಿ ರಾಷ್ಟ್ರವೂ ಹೌದು. “ಕಾನೂನಿನ ಕೈಯಿಂದ ನೂರು ಅಪರಾಧಿಗಳು ಬಚಾವಾದರೂ ಚಿಂತೆ ಇಲ್ಲ, ಒಬ್ಬೇ ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು” ಎಂಬುದು ಲಿಖಿತ ಸಂವಿಧಾನ ಮತ್ತು ಬಲಿಷ್ಠ ಕಾನೂನನ್ನು ಹೊಂದಿರುವ ಗಣತಂತ್ರ ಭಾರತ ದಂಡ ಸಂಹಿತೆಯ ಏಕೈಕ ಆಶಯ. ಇದೇ ಕಾರಣಕ್ಕೆ ಇತರೆ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ಭಾರತ ಕಾನೂನು ವ್ಯವಸ್ಥೆ ಸಾಕಷ್ಟು ಉದಾರಿಯೂ ಹೌದು! ನೇರ ನಿಷ್ಠುರವಾದಿಯೂ ಹೌದು!

ADVERTISEMENT

ಪ್ರಜಾಪ್ರಭುತ್ವ ಮತ್ತು ಸಂವಿಧಾನ ದೇಶದ ಒಂದು ಕಣ್ಣಾದರೆ, ನ್ಯಾಯಾಂಗ ವ್ಯವಸ್ಥೆ ಮತ್ತು ಭಾರತೀಯ ದಂಡ ಸಂಹಿತೆ ಈ ದೇಶದ ಮತ್ತೊಂದು ಕಣ್ಣು. ಇದೇ ಕಾರಣಕ್ಕೆ ಇಡೀ ದೇಶದ ಶಾಸಕಾಂಗ ಮತ್ತು ಕಾರ್ಯಾಂಗ ಅವ್ಯವಹಾರದಲ್ಲಿ ನಲುಗಿ ಜನರಿಂದ ಛೀಮಾರಿ ಹಾಕಿಸಿಕೊಂಡರೂ ನ್ಯಾಯಾಂಗ ವ್ಯವಸ್ಥೆಯ ಮೇಲೆ ಮಾತ್ರ ಈಗಲೂ ಜನ ಅಚಲವಾದ ನಂಬಿಕೆ ಇಟ್ಟಿದ್ದಾರೆ.

ಆದರೆ, ಇತ್ತೀಚಿನ ಬೆಳವಣಿಗೆಯ ಕಡೆಗೆ ಒಮ್ಮೆ ಕಣ್ಣಾಯಿಸಿದರೆ ನ್ಯಾಯಾಂಗ ವ್ಯವಸ್ಥೆಯ ಮರ್ಯಾದೆ ಮತ್ತು ಘನತೆಯನ್ನು ಕಳೆಯುವ ಕೆಲಸ ಅಥವಾ ಪಿತೂರಿ ವ್ಯವಸ್ಥಿತವಾಗಿ ನಡೆಯುತ್ತಿದೆಯೇ ಎಂದೆನಿಸದೆ ಇರದು.

ಏಕೆಂದರೆ ಒಂದೆಡೆ ಯಾವುದೇ ಅಪರಾಧ ಘಟನೆ ನಡೆದರೂ ಸಹ ಆ ಅಪರಾಧ ಘಟನೆಯಲ್ಲಿ ಭಾಗಿಯಾದ ವ್ಯಕ್ತಿ ಅಪರಾಧಿ ಹೌದೋ? ಇಲ್ಲವೋ? ಎಂದು ತೀರ್ಮಾನಿಸುವ ಕೆಲಸ ನ್ಯಾಯಾಲಯದ್ದು. ಆ ತೀರ್ಮಾನ ಆಗುವವರೆಗೆ ಆತ ಆರೋಪಿ ಹೌದೇ ಹೊರತು ಅಪರಾಧಿ ಅಲ್ಲ. ಆದರೆ, ಪ್ರಸ್ತುತ ಈ ದೇಶದಲ್ಲಿ ನ್ಯಾಯಾಧೀಶರಿಗಿಂತ ಮುಂಚಿತವಾಗಿಯೇ ಮಾಧ್ಯಮಗಳು ಹಾಗೂ ವಕೀಲರು ಇಂತಹ ತೀರ್ಪು ಕೊಡುತ್ತಿರುವುದನ್ನು ಕೋರ್ಟ್
ನಿಂದನೆ ಅಥವಾ ನ್ಯಾಯಾಲಯ ವ್ಯವಸ್ಥೆ ಮೇಲಿನ ಹಸ್ತಕ್ಷೇಪ ಎನ್ನದೆ ವಿಧಿಯಿಲ್ಲ.

ಈ ಮೇಲಿನ ವಿಶ್ಲೇಷಣೆ ಅಥವಾ ಆರೋಪಕ್ಕೆ ನಮ್ಮದೇ ರಾಜ್ಯದಲ್ಲಿ ಸಾಲು ಸಾಲು ಉದಾಹರಣೆ ಸಿಗುತ್ತವೆ. ಮೈಸೂರಿನಲ್ಲಿ Free Kashmir ಪೋಸ್ಟರ್
ಹಿಡಿದು ಹೋರಾಟ ನಡೆಸಿದ್ದ ಪತ್ರಿಕೋದ್ಯಮ ವಿದ್ಯಾರ್ಥಿನಿ ನಳಿನಿ ಬಾಲಕೃಷ್ಣನ್
, ಹುಬ್ಬಳ್ಳಿಯಲ್ಲಿ Pakistan Zindabad ಎಂದು ಘೋಷಣೆ ಕೂಗಿದ್ದ ಮೂವರು ಇಂಜಿನಿಯರ್
ವಿದ್ಯಾರ್ಥಿಗಳು, CAA ವಿರೋಧಿ ವೇದಿಕೆಯಲ್ಲಿ Pakistan Zindabad ಎಂದು ಘೋಷಣೆ ಕೂಗಿದ್ದ ಅಮೂಲ್ಯಾ ಲಿಯೋನ್
ಹಾಗೂ ಹಿಂದೂಪರ ಸಂಘಟನೆಗಳ ಪ್ರತಿಭಟನೆ ವೇಳೆ Kashmir-CAA-NRC-Transgender Free ಎಂದು ಪೋಸ್ಟರ್
ಹಿಡಿದಿದ್ದ ಆರುದ್ರಾ ಹೀಗೆ ಸಾಲು ಸಾಲು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ.

ವಿಪರ್ಯಾಸ ಎಂದರೆ ನಳಿನಿ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಇಂದು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಇವರನ್ನು ನ್ಯಾಯಾಂಗ ವ್ಯವಸ್ಥೆಯಲ್ಲಿ ಅಪರಾಧಿಗಳು ಎಂದು ಸಾಬೀತುಪಡಿಸಬೇಕಾಗಿರುವ ವಕೀಲರು ಇವರ ಪ್ರಕರಣವನ್ನು ಯಾರೂ ವಾದಿಸಲು ಮುಂದೆ ಬರಬಾರದು ಎಂದು ಫರ್ಮಾನು ಹೊರಡಿಸಿದೆ. ಈ ಮೂಲಕ ನ್ಯಾಯಾಧೀಶರಿಗಿಂತ ಮುಂಚಿತವಾಗಿಯೇ ಇವರೆಲ್ಲರೂ ಅಪರಾಧಿಗಳು ಎಂದು ತೀರ್ಪು ನೀಡಿಬಿಟ್ಟಿದೆ.

ಅಸಲಿಗೆ ನಳಿನಿ, ಅಮೂಲ್ಯ, ಆರಿದ್ರಾ ಮತ್ತು ಹುಬ್ಬಳಿಯಲ್ಲಿ pakisthan Zindabad ಎಂದು ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳು ನಿರಪರಾಧಿಗಳು ಎಂದು ಇಲ್ಲಿ ಯಾರೂ ಹೇಳುತ್ತಿಲ್ಲ. ಮತ್ತು ಇವರ ಪರವಾಗಿ ಮಾತನಾಡುವಷ್ಟು ಮೂರ್ಖರು ಈ ದೇಶದಲ್ಲಿ ಯಾರೂ ಇಲ್ಲ ಎಂದು ನಾವು ಭಾವಿಸಿದ್ದೇವೆ. ಆದರೆ, ಈ ದೇಶದ ನ್ಯಾಯಾಂಗ ವ್ಯವಸ್ಥೆಗೆ ಒಂದು ಘನತೆ ಇದೆ, ಗೌರವ ಇದೆ. ಅದನ್ನು ಕಾನೂನು ಬಾಹೀರ ಚಟುವಟಿಕೆಗಳಿಂದ ಕಳೆಯಬೇಡಿ ಎಂಬುದಷ್ಟೇ ನಮ್ಮ ಆಶಯ (ವಿ.ಸೂ:-ಓರ್ವ ವ್ಯಕ್ತಿಯ ಪರ ವಕಾಲತ್ತು ವಹಿಸಬಾರದು ಎಂದು ತಾಕೀತು ಮಾಡುವುದು ಸಹ ಕಾನೂನು ಬಾಹೀರ)

ಅಫ್ಜಲ್
ಗುರು-ಕಸಬ್
ನಿಂದ, ಆಸೀಫಾ-ನಿರ್ಭಯಾ ಅತ್ಯಾಚಾರಿಗಳ ವರೆಗೆ

2001ರಲ್ಲಿ ದೇಶದ ಹೃದಯ ಎಂದೇ ಭಾವಿಸಲಾಗುವ ಸಂಸತ್
ಮೇಲೆ ಉಗ್ರರು ದಾಳಿ ನಡೆಸಿದ್ದರು. ಕೂದಲೆಳೆಯ ಅಂತರದಲ್ಲಿ ನಮ್ಮ ಸಂಸದರು ಈ ದಾಳಿಯಿಂದ ಪಾರಾಗಿದ್ದರು. ಕಾಶ್ಮೀರ ಮೂಲದ ಅಫ್ಜಲ್
ಗುರು ಈ ದಾಳಿಯ ಹಿಂದಿನ ಮಾಸ್ಟರ್
ಮೈಂಡ್
ಎಂದು ಆರೋಪಿಸಿ ಆತನನ್ನು ಬಂಧಿಸಲಾಗಿತ್ತು.

ಆದರೆ, ಈ ದೇಶದ ಕಾನೂನು ವ್ಯವಸ್ಥೆ ಆತನನ್ನು ಗುಂಡಿಟ್ಟು ಕೊಲ್ಲಲಿಲ್ಲ. ಬದಲಾಗಿ ಆತನಿಗೆ ನ್ಯಾಯಾಲಯದ ಎದುರು ವಾದ ಮಂಡಿಸಲು ಒಂದು ಅವಕಾಶ ಕಲ್ಪಿಸಿಕೊಡಲಾಗಿತ್ತು ಮತ್ತು ಆತನಿಗಾಗಿಯೂ ವಕೀಲರನ್ನು ಸರ್ಕಾರವೇ ನೇಮಿಸಿತ್ತು.

ತಾಜ್ Attack: 2008ರಲ್ಲಿ ಇಡೀ ಮುಂಬೈ ನಗರವನ್ನೇ ಬೆಚ್ಚಿ ಬೀಳಿಸಿದ್ದ ಘಟನೆ ಅದು. ದೋಣಿಯ ಮೂಲಕ ಗಡಿ ಉಲ್ಲಂಘಿಸಿ ಭಾರತ ಪ್ರವೇಶಿಸಿದ್ದ ಉಗ್ರರು ಮುಂಬೈನ ಪ್ರಸಿದ್ಧ ತಾಜ್ ಹೋಟಲ್
ಗೆ ನುಗ್ಗಿ ಗುಂಡಿನ ಮಳೆಗೆರೆದಿದ್ದರು. ಈ ಘಟನೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಜನ ಬಲಿಯಾಗಿದ್ದರೆ, ಹೇಮಂತ್
ಕರ್ಕರೆಮ ವಿಜಯ್ ಸಾಲಾಸ್ಕರ್
, ಅಶೋಕ್ ಕಾಮ್ಟೆ ಯಂತಹ ಪ್ರಾಮಾಣಿಕ ಪೊಲೀಸ್
ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ವೇಳೆ ಉಗ್ರರ ಗುಂಡಿಗೆ ಬಲಿಯಾಗಿದ್ದರು.

ಕೊನೆಗೂ ಹರಸಾಹಸಪಟ್ಟ ಭಾರತೀಯ ಸೇನೆ ಉಗ್ರರನ್ನು ಸದೆಬಡಿಯುವಲ್ಲಿ ಸಫಲವಾಗಿತ್ತು. ಅಲ್ಲದೆ, ಅಜ್ಮಲ್
ಕಸಬ್ ಎನ್ನುವ ಓರ್ವ ಪಾಕಿಸ್ತಾನಿ ಉಗ್ರನನ್ನು ಜೀವಂತ ಸೆರೆಹಿಡಿಯುವಲ್ಲಿ ಸಫಲವಾಗಿತ್ತು. ಆದರೂ, ಆತನಿಗೆ ನ್ಯಾಯಾಂಗದ ಎದುರು ವಾದ ಮಂಡಿಸಲು ಅವಕಾಶ ನೀಡಲಾಗಿತ್ತು, ಓರ್ವ ಸರ್ಕಾರಿ ನ್ಯಾಯವಾದಿಯನ್ನೂ ಅದಕ್ಕೆಂದು ನೇಮಿಸಲಾಗಿತ್ತು.

ನಿರ್ಭಯಾ ಅತ್ಯಾಚಾರ: 2012 ಡಿಸೆಂಬರ್
12ರ ರಾತ್ರಿ ದೆಹಲಿಯಲ್ಲಿ ನಡೆದ ಆ ಒಂದು ರಣ ಭಯಂಕರ ಘಟನೆ ಭಾಗಶಃ ಭಾರತ ಇಡೀ ವಿಶ್ವದ ಎದುರು ತಲೆ ತಗ್ಗಿಸುವಂತೆ ಮಾಡಿತ್ತು. ಓಡುವ ಬಸ್ಸಿನಲ್ಲಿ ಓರ್ವ ಫ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಅಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿ ರಸ್ತೆಯಲ್ಲೇ ಆಕೆಯ ದೇಹವನ್ನು ಎಸೆದುಹೋಗಲಾಗಿತ್ತು.

ಆ ಘಟನೆಗೆ ಭಾರತೀಯರು ತೋರಿಸಿದ ಕಿಚ್ಚಿಗೆ ಅಂದೇ ಎಲ್ಲಾ ಆರೋಪಿಗಳನ್ನು ಗುಂಡಿಟ್ಟು ಕೊಲ್ಲಬಹುದಿತ್ತು. ಆ ಅವಕಾಶವೂ ಪೊಲೀಸರ ಬಳಿ ಇತ್ತು. ಆದರೆ, ದೇಶದ ನ್ಯಾಯಾಂಗ ವ್ಯವಸ್ಥೆ ಅದಕ್ಕೆ ಅವಕಾಶ ನೀಡಲಿಲ್ಲ. ಬದಲಾಗಿ ಅವರ ಪರವಾಗಿಯೂ ವಾದ ಮಂಡಿಸಲು ನ್ಯಾಯವಾದಿಗಳನ್ನು ನೇಮಕ ಮಾಡಲಾಯಿತು. ಸತತ 8 ವರ್ಷಗಳ ನ್ಯಾಯಾಂಗ ತನಿಖೆ ಕೊನೆಗೂ ಮುಗಿದಿದ್ದು, ಆರೋಪಿಗಳ ಅಪರಾಧ ಸಾಬೀತಾಗಿದ್ದು, ಎಲ್ಲರಿಗೂ ಗಲ್ಲುಶಿಕ್ಷೆ ವಿಧಿಸಲಾಗಿದೆ. ಈಗಲೂ ಅವರ ಗಲ್ಲುಶಿಕ್ಷೆಯನ್ನು ತಪ್ಪಿಸಲು ನಮ್ಮದೇ ವಕೀಲರಿಂದ ಪ್ರಯತ್ನಗಳು ನಡೆಯುತ್ತಿವೆ ಎಂಬುದು ಅರಗಿಸಿಕೊಳ್ಳಲು ಸಾಧ್ಯವಾಗದ ಕಟು ಸತ್ಯ.

ಕಾಮುಕರಿಗೆ ಆಹಾರವಾದ ಆಸೀಫಾ: ಭಾಗಶಃ ಆಸೀಫಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಜಗತ್ತು ಎಂದಿಗೂ ಭಾರತವನ್ನು ಕ್ಷಮಿಸದೇನೋ? ಕಾಶ್ಮೀರದ ಕತುವಾ ಎಂಬಲ್ಲಿ ಪಾಪ ಕುದುರೆಗೆ ಹಲ್ಲು ಮೇಯಿಸಲು ಮನೆಯಿಂದ ಆಚೆ ಹೋದ 8 ವರ್ಷ ಬಾಲಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಪೊಲೀಸ್ ಪ್ರಕರಣ ದಾಖಲಿಸಿ ಹುಡುಕಿದರೂ ಆಕೆ ಸಿಕ್ಕಿರಲಿಲ್ಲ. ಆದರೆ, ಆಕೆ ಸಿಕ್ಕಾಗ ಜೀವ ಇರಲಿಲ್ಲ.

ಆಕೆ ಮುಸ್ಲಿಂ ಎಂಬ ಏಕೈಕ ಕಾರಣಕ್ಕೆ 6 ಜನ ಆಕೆಯನ್ನು ಒಂದು ವಾರಗಳ ಕಾಲ ದೇವಾಸ್ಥಾನವೊಂದರಲ್ಲಿ ಕೂಡಿ ಹಾಕಿ ಸತತವಾಗಿ ಅತ್ಯಾಚಾರವೆಸಗಿ ಕೊಲೆಗೈದಿದ್ದರು. ಹೀಗೆ ಅತ್ಯಾಚಾರ ಎಸಗಿದವರ ಪೈಕಿ 15 ವರ್ಷದ ಬಾಲಕನೂ ಪ್ರಮುಖ ಆರೋಪಿ. ಈ ಪ್ರಕರಣದ ವಿರುದ್ಧ ಇಡೀ ದೇಶ ಸಿಡಿದೆದ್ದಿತ್ತು. ಪರಿಣಾಮ ಎಲ್ಲಾ ಆರೋಪಿಗಳ ಬಂಧನವಾಯಿತು. ಆದರೆ, ನೆನಪಿರಲಿ ಈ ಪ್ರಕರಣದಲ್ಲೂ ಸಹ ಇವರ ಪರ ವಾದ ಮಂಡಿಸಲು ನ್ಯಾಯವಾದಿ ಇದ್ದಾರೆ.

ಈ ನಾಲ್ಕು ಪ್ರಕರಣಗಳು ಕೇವಲ ಉದಾಹರಣೆಗಳಷ್ಟೇ. ದೇಶದಲ್ಲಿ ಪ್ರತಿನಿತ್ಯ ಇಂತಹ ನೂರಾರು ಘಟನೆಗಳು ಸಂಭವಿಸುತ್ತಲೇ ಇರುತ್ತವೆ, ಅತ್ಯಾಚಾರ ಎಂಬುದು ಇತ್ತೀಚೆಗೆ ಸಾಮಾನ್ಯ ಸಂಗತಿಗಳಾಗಿವೆ ಬಿಡಿ. ಆದರೆ, ಅವರ ಪರ ವಾದ ಮಂಡಿಸಲು ವಕೀಲರು ಮಾತ್ರ ನಾ ಮುಂದು ತಾ ಮುಂದು ಎಂದು ಮುಂದೆ ಬರುತ್ತಲೇ ಇರುತ್ತಾರೆ.

ಈ ಸಂದರ್ಭದಲ್ಲಿ ಯಾವ ವಕೀಲರ ಸಂಘಟನೆಯೂ ಈ ಪ್ರಕರಣವನ್ನು ಯಾರೂ ವಾದಿಸಬಾರದು ಎಂದು ಘೋಷಣೆ ಕೂಗುವುದಿಲ್ಲ, ಕರಪತ್ರ ಹಂಚುವುದಿಲ್ಲ. ಆದರೆ, ಇತ್ತೀಚೆಗೆ ಈ ಪ್ರವೃತ್ತಿ ಹೆಚ್ಚಾಗಿದೆ. ಅತ್ಯಾಚಾರ, ಕೊಲೆ ಮತ್ತು ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದವರ ಮೇಲೆ ಪ್ರೀತಿ ತೋರಿಸಿದ ವಕೀಲರು ಇಂದು ನಳಿನಿ, ಅಮೂಲ್ಯ, ಆರಿದ್ರಾ ಎಂಬ ಎಳಸುಗಳ ವಿರುದ್ಧ ಬ್ರಹ್ಮಾಸ್ತ್ರ ಹೂಡುತ್ತಿರುವುದು ಏಕೆ? ಅಸಲಿಗೆ ಇದು ನ್ಯಾಯಾಂಗ ನಿಂದನೆಯಲ್ಲವೇ? ಈ ಪ್ರಶ್ನೆಗೆಲ್ಲಾ ಉತ್ತರಿಸುವವರು ಯಾರು?

Tags: Bar AssociationContempt Of CourtJudiciary Systemಕೋರ್ಟ್​ ನಿಂದನೆನ್ಯಾಯಾಂಗ ವ್ಯವಸ್ಥೆನ್ಯಾಯಾಲಯವಕೀಲರು
Previous Post

ವೋಟ್‌ ಹಾಕಲು ಕನ್ನಡಿಗರು.. ಜೈಕಾರಕ್ಕೆ ಮಹಾರಾಷ್ಟ್ರ.. ಇದು ರಾಜಕಾರಣಿಗಳ ಲೆಕ್ಕಾಚಾರ..!

Next Post

ಮಹಾದಾಯಿ ನದಿ ವಿವಾದದ ಕುರಿತು ಭಾರತ ಸರ್ಕಾರ ಹೊರಡಿಸಿದ ಗೆಜೆಟ್‌

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025
Next Post
ಮಹಾದಾಯಿ ನದಿ ವಿವಾದದ ಕುರಿತು ಭಾರತ ಸರ್ಕಾರ ಹೊರಡಿಸಿದ ಗೆಜೆಟ್‌

ಮಹಾದಾಯಿ ನದಿ ವಿವಾದದ ಕುರಿತು ಭಾರತ ಸರ್ಕಾರ ಹೊರಡಿಸಿದ ಗೆಜೆಟ್‌

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada