• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತ-ಚೀನಾ ಗಡಿ ವಿವಾದ: ಭಾರತದ ನಿಲುವಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ವಿರೋಧ ಪಕ್ಷಗಳು

by
June 19, 2020
in ದೇಶ
0
ಭಾರತ-ಚೀನಾ ಗಡಿ ವಿವಾದ: ಭಾರತದ ನಿಲುವಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ವಿರೋಧ ಪಕ್ಷಗಳು
Share on WhatsAppShare on FacebookShare on Telegram

ಚೀನಾ ಭಾರತ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದ ಹಿನ್ನಲೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಜೂನ್‌ 19 ರ ಸಂಜೆ 5 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದು, ಚೀನಾ-ಭಾರತ ಗಡಿ ವಿವಾದ, ಭಾರತ ಇಡಬೇಕಿರುವ ಹೆಜ್ಜೆಯ ಕುರಿತು ದೀರ್ಘವಾಗಿ ಚರ್ಚಿಸಿದ್ದಾರೆ.

ADVERTISEMENT

ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಪಕ್ಷಗಳು ಈ ವಿಷಯದ ಕುರಿತಂತೆ ಭಾರತದ ಸರ್ಕಾರದ ಎಲ್ಲಾ ತೀರ್ಮಾನಗಳಿಗೂ ಬೆಂಬಲ ನೀಡುವುದಾಗಿ ಘೋಷಿಸಿವೆ. ಆಂತರಿಕ ರಾಜಕೀಯದಲ್ಲಿ ಎಷ್ಟೇ ಭಿನ್ನಾಭಿಪ್ರಾಯವಿದ್ದರೂ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ಬಂದರೆ ಎಲ್ಲರೂ ಒಟ್ಟಾಗಿ ನಿಲ್ಲುವುದಾಗಿ ತೋರಿಸಿಕೊಟ್ಟಿವೆ. ಹಾಗಾಗಿ ಚೀನಾದ ವಿರುದ್ಧ ಭಾರತದ ಸರ್ಕಾರ ಯಾವುದೇ ನಿರ್ಣಯ ಕೈಗೊಳ್ಳುವುದಿದ್ದರೂ ಜೊತೆಗೆ ನಿಲ್ಲುವುದಾಗಿ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಅಧ್ಯಕ್ಷತೆಯ ಸಭೆಯಲ್ಲಿ ಈಶಾನ್ಯ ರಾಜ್ಯದ ಎಲ್ಲಾ ಪಕ್ಷಗಳೂ ಪ್ರಧಾನಿಗೆ ಸಂಪೂರ್ಣ ಬೆಂಬಲ ಸೂಚಿಸಿವೆ.

ಸಭೆಯಲ್ಲಿ ಮಾತನಾಡಿದ ಹಿರಿಯ ರಾಜಕಾರಣಿ ಶರದ್‌ ಪವಾರ್‌, ಯೋಧರು ಶಸ್ತ್ರಾಸ್ತ್ರಗಳನ್ನು ಬಳಸಬೇಕೋ ಬೇಡವೋ ಎಂಬುದನ್ನು ಅಂತರಾಷ್ಟ್ರೀಯ ಒಪ್ಪಂದಗಳ ಆಧಾರದಲ್ಲಿ ನಿರ್ಧರಿಸಲಾಗುತ್ತದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ನಾವು ಗೌರವಿಸಬೇಕೆಂದು ಹೇಳಿದ್ದಾರೆ.

SKM ಪಕ್ಷದ ಪ್ರೇಮ್‌ ಸಿಂಗ್‌ ತಮಂಗ್‌ ಪ್ರಧಾನಿಯ ಮೇಲೆ ಸಂಪೂರ್ಣ ಭರವಸೆಯಿರುವುದಾಗಿ ಹೇಳಿದ್ದಾರೆ. ರಾಷ್ಟ್ರೀಯ ಭದ್ರತೆ ವಿಚಾರಕ್ಕೆ ಬಂದಾಗ ಪ್ರಧಾನಿ ಐತಿಹಾಸಿಕ ನಿರ್ಧಾರಗಳನ್ನು ಕೈಗೊಳ್ಳುತ್ತಾರೆಂಬ ಅಚಲ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಗಾಲ್ವಾನ್ ಘರ್ಷಣೆ ಬಗ್ಗೆ ಸರ್ಕಾರ ಇನ್ನೂ ಸ್ಪಷ್ಟ ಮಾಹಿತಿ ನೀಡಿಲ್ಲ, ಸರ್ಕಾರ ಪೂರ್ಣ ಮಾಹಿತಿ ಸಾರ್ವಜನಿಕವಾಗಿ ನೀಡಬೇಕು. ಹಲವು ಅಂಶಗಳನ್ನು ಕೇಂದ್ರ ಸರ್ಕಾರ ಜನರಿಂದ ಅಡಗಿಸಿಡುತ್ತಿದೆ. ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಸೋನಿಯಾ ಗಾಂಧಿ ಸಭೆಯಲ್ಲಿ ಕೋರಿದರು.

ಚೀನಾ ಹಾಗೂ ಭಾರತದ ನಡುವೆ ಮೈತ್ರಿಗೆ ಪ್ರಯತ್ನಿಸುತ್ತಿರುವ ಅಮೇರಿಕಾದ ನಡೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಡಿ, ಚೀನಾ ವಿರುದ್ಧ ಪ್ರತೀಕಾರ ತೀರಿಸಬೇಕು ಎಂದು ಆಗ್ರಹಿಸಿದೆ. ಅದಾಗ್ಯೂ ಕೇಂದ್ರ ಸರ್ಕಾರದ ಬೆಂಬಲ ನೀಡುವುದಾಗಿ ಹೇಳಿದೆ.

ಸರ್ವ ಪಕ್ಷ ಸಭೆಯಲ್ಲಿ ಡಿಎಂಕೆ ಪರವಾಗಿ ಮಾತನಾಡಿದ ಸ್ಟಾಲಿನ್ ಚೀನಾ ವಸ್ತುಗಳ ನಿರ್ಬಂಧಕ್ಕೆ ಬೆಂಬಲ ನೀಡಿದ್ದಾರೆ.

ಭಾರತ ದೇಶವು ಶಾಂತಿ ಬಯಸುತ್ತದೆ, ಹಾಗೆಂದು ನಾವು ದುರ್ಬಲರೆಂದಲ್ಲ. ದ್ರೋಹ ಬಗೆಯುವುದು ಚೀನಾದ ಸಹಜ ಗುಣ. ಭಾರತ ಈಗ ಶಕ್ತಿಯುತವಾಗಿದೆ. ಸರಕಾರಕ್ಕೆ ಸಾಮರ್ಥ್ಯವಿದೆ ಎಂದು ಶಿವಸೇನಾ ಮುಖಂಡ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಚೀನಾ ಮತ್ತು ಪಾಕಿಸ್ತಾನವನ್ನು ನಂಬಲು ಸಾಧ್ಯವಿಲ್ಲ, ಎರಡು ದೇಶಗಳ ನಿಯತ್ತು ಸರಿಯಿಲ್ಲ. ಚೀನಾದಿಂದ ಆಮದಾಗುವ ವಸ್ತುಗಳ ಮೇಲೆ 300% ಆಮದು ಸುಂಕ ಹೆಚ್ಚಿಸಬೇಕು ಎಂದು ಸಮಾಜವಾದಿ ಪಾರ್ಟಿ ಮುಖಂಡ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ.

ಭಾರತ ಜಾಗತಿಕ ಬೆಳೆಯುತ್ತಿರುವುದನ್ನು ಚೀನಾ ಸಹಿಸುತ್ತಿಲ್ಲ. ಹಾಗಾಗಿ ಭಾರತದ ವಿರುದ್ಧ ಕ್ಯಾತೆ ತೆಗೆಯುತ್ತಿದೆ. ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿದೆ ಎಂದು ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ಪದೇ ಪದೇ ದ್ರೋಹ ಮಾಡುತ್ತಿರುವ ಚೀನಾಕ್ಕೆ‌ ಸೂಕ್ತವಾದ ಉತ್ತರವನ್ನು ನೀಡಬೇಕು. ನಾವು ಸರ್ಕಾರದ ಜೊತೆಗೆ ಇದ್ದೇವೆ ಎಂದು ಅಕಾಲಿದಳ್ ನಾಯಕ ಸುಖಬೀರ್ ಸಿಂಗ್ ಬಾದಲ್ ಹೇಳಿದ್ದಾರೆ.

ಭಾರತದ ದೂರ ಸಂಪರ್ಕ, ರೈಲು, ವಿಮಾನಯಾನ ಕ್ಷೇತ್ರದಲ್ಲಿ ಚೀನಾ ಕಾಲಿಡಬಾರದು, ಹೀಗಾದಾಗ ಸಮಸ್ಯೆ ಎದುರಾಗುತ್ತದೆ. ಎಲ್ಲವನ್ನೂ ಎದುರಿಸೋಣ, ಭಾರತ ಒಟ್ಟಾಗಿ ಕೆಲಸ ಮಾಡಿ ಗೆಲ್ಲಬೇಕಾಗಿದೆ, ನಾವು ಧೃಢವಾಗಿ ಸರಕಾರದ ಜೊತೆ ನಿಲ್ಲುತ್ತೇವೆ ಎಂದು ಪಶ್ವಿಮ‌ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಚೀನಾದ ಉತ್ಪನ್ನಗಳು ಕಳಪೆ ಗುಣಮಟ್ಟದವು, ಪ್ಲಾಸ್ಟಿಕ್, ಎಲೆಕ್ಟ್ರಾನಿಕ್ ವಸ್ತುಗಳು ಹೆಚ್ಚು ಭಾರತಕ್ಕೆ ಆಮದಾಗುತ್ತಿದೆ, ಇನ್ನು ಮುಂದಾದರೂ ಭಾರತದ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಚೀನಾ ವಸ್ತು ಬ್ಯಾನ್ ಮಾಡುವ ಕುರಿತ ನಿರ್ಧಾರವನ್ನು ಬೆಂಬಲಿಸಬೇಕು ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

Tags: All party meetingಭಾರತ-ಚೀನಾ ಗಡಿ ವಿವಾದಸರ್ವ ಪಕ್ಷ ಸಭೆ
Previous Post

ಲಾಕ್‌ಡೌನ್‌ ವರದಿಗಾರಿಗೆ: ಮತ್ತೋರ್ವ ಪತ್ರಕರ್ತೆಯ ಮೇಲೆ ಎಫ್‌ಐಆರ್‌

Next Post

ಸಮುದಾಯಕ್ಕೆ ಕರೋನಾ ಸೋಂಕು ಹರಡಿಲ್ಲ ಯಾಕೆ..?

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

December 22, 2025
Next Post
ಸಮುದಾಯಕ್ಕೆ ಕರೋನಾ ಸೋಂಕು ಹರಡಿಲ್ಲ ಯಾಕೆ..?

ಸಮುದಾಯಕ್ಕೆ ಕರೋನಾ ಸೋಂಕು ಹರಡಿಲ್ಲ ಯಾಕೆ..?

Please login to join discussion

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada