• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭೂಸುಧಾರಣೆ ಸುಗ್ರೀವಾಜ್ಞೆ ಹಿಂಪಡೆಯುವಂತೆ ಕೋರಿ ಪ್ರಧಾನಿಗೆ ಸಿದ್ಧರಾಮಯ್ಯ ಪತ್ರ

by
August 28, 2020
in ಕರ್ನಾಟಕ
0
ಭೂಸುಧಾರಣೆ ಸುಗ್ರೀವಾಜ್ಞೆ ಹಿಂಪಡೆಯುವಂತೆ ಕೋರಿ ಪ್ರಧಾನಿಗೆ ಸಿದ್ಧರಾಮಯ್ಯ ಪತ್ರ
Share on WhatsAppShare on FacebookShare on Telegram

ಕರ್ನಾಟಕದ ಬಿ ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ಭೂಸುಧಾರಣೆ ಕಾಯ್ದೆ ಸುಗ್ರೀವಾಜ್ಞೆ ಹೊರಡಿಸಿರುವುದು ರೈತರ ಕೃಷಿ ಭೂಮಿಗೆ ಮಾರಕವಾಗಲಿದೆ ಎಂದು ಆರೋಪಿಸುತ್ತಿರುವ ಪ್ರತಿಪಕ್ಷಗಳು ಸುಗ್ರೀವಾಜ್ಞೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸುತ್ತಾ ಬಂದಿದೆ. ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ರೈತರ ಹಿತದೃಷ್ಟಿಯಿಂದ ಬಿ ಎಸ್‌ ಯಡಿಯೂರಪ್ಪ ಸರ್ಕಾರಕ್ಕೆ ಭೂಸುಧಾರಣೆ ಸುಗ್ರೀವಾಜ್ಞೆಯನ್ನು ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ಕೋರಲಾಗಿದೆ.

ಬಿ ಎಸ್‌ ಯಡಿಯೂರಪ್ಪ ತಂದಿರುವ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ರೈತರ ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಂದ ತಿದ್ದುಪಡಿಯಾಗಿದೆ. ಈ ತಿದ್ದುಪಡಿ ಜಾರಿಗೆ ತರುವ ಮೊದಲು ಅಸೆಂಬ್ಲಿಯಲ್ಲಿ ಸುದೀರ್ಘ ಚರ್ಚೆ ನಡೆಯಬೇಕಿದೆ. ಕರ್ನಾಟಕದ ಲಕ್ಷಾಂತರ ರೈತರ ಹಿತದೃಷ್ಟಿಯಿಂದ ಭೂಸುಧಾರಣೆ ಕಾಯದೆ ತಿದ್ದುಪಡಿ ಸುಗ್ರೀವಾಜ್ಞೆಗೆ ತಡೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಪ್ರಧಾನಮಂತ್ರಿ ನಿರ್ದೇಶನ ನೀಡಬೇಕೆಂದು ಸಿದ್ದರಾಮಯ್ಯ ಕೇಳಿದ್ದಾರೆ.

My letter to Prime Minister Shri. Narendra Modi urging him, in the interest of farmers, to direct @CMofKarnataka @BSYBJP to revoke Land Reforms (Amendment) Ordinance, 2020. pic.twitter.com/v1QyT8x3Sz

— Siddaramaiah (@siddaramaiah) August 27, 2020


ADVERTISEMENT

ಭೂಸುಧಾರಣೆ ಕಾಯ್ದೆ(1961)ಗೆ 1974ರಲ್ಲಿ ದೇವರಾಜ ಅರಸು ಅವರು ಸೆಕ್ಷನ್‌ 63, ಸೆಕ್ಷನ್‌ 79 ಎ , ಸೆಕ್ಷನ್ 79 ಬಿ ,ಸೆಕ್ಷನ್ 79 ಸಿ ಹಾಗೂ ಸೆಕ್ಷನ್ 80 ಇವುಗಳನ್ನು ಸೇರ್ಪಡೆಗೊಳಿಸಿ ಪ್ರಗತಿಪರವಾದ, ಸಾಮಾಜಿಕ ನ್ಯಾಯದಿಂದ ಕೂಡಿದಂತಹ ಕ್ರಾಂತಿಕಾರಕ ನಿರ್ಣಯ ತೆಗೆದುಕೊಂಡರು. ʼಉಳುವವನೇ ಹೊಲದೊಡೆಯʼ ಎಂಬ ಘೋಷವ್ಯಾಕ್ಯದಂತೆ ಗೇಣಿಗೆ ಹೊಲ ಉಳುತ್ತಿದ್ದ ರೈತರಿಗೆ ಗೇಣಿ ಮಾಡುತ್ತಿದ್ದಂತಹ ಜಮೀನಿನ ಮಾಲಿಕತ್ವದ ಹಕ್ಕು ನೀಡಿದ್ದರು.1974ರಲ್ಲಿ ಅರಸು ಅವರು ತಂದಿದ್ದ ತಿದ್ದುಪಡಿ ಇಡೀ ದೇಶಕ್ಕೆ ಮಾದರಿಯಾಗಿತ್ತು. ಅಂತಹ ಪ್ರಗತಿಪರವಾದ ನಿರ್ಣಯವನ್ನು ಕರ್ನಾಟಕ ರಾಜ್ಯ ಸರ್ಕಾರ ಈಗ ರದ್ದು ಗೊಳಿಸುತ್ತಿದೆ ಎಂದು ರಾಜ್ಯ ಸರ್ಕಾರ ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊಡಿಸಿದಾಗ ಸಿದ್ದರಾಮಯ್ಯ ಕಿಡಿಕಾರಿದ್ದರು.

1961ರ ಭೂ ಸುಧಾರಣಾ ಕಾಯ್ದೆಯ 79A, 79B ಮತ್ತು 79C ಸೆಕ್ಷನ್‌ಗಳನ್ನು ತೆಗೆದುಹಾಕುವ ಕರ್ನಾಟಕ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ವಿರುದ್ದವಾಗಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶರಾದ ಅಭಯ್‌ ಶ್ರೀನಿವಾಸ್‌ ಓಕಾ ಅವರಿದ್ದ ವಿಭಾಗೀಯ ಪೀಠವು, ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತ್ತು.

Tags: ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಭೂ ಸುಧಾರಣೆ ತಿದ್ದುಪಡಿ ಕಾಯ್ದೆಸಿದ್ದರಾಮಯ್ಯ
Previous Post

ಕಗ್ಗತ್ತಲಲಿ ಕ್ರಾಂತಿವೀರನ ಪ್ರತಿಮೆ ಅನಾವರಣ: ಬೆಳಗಾವಿ ಉದ್ವಿಗ್ನ

Next Post

‘ದೇವರ ಆಟ’ ಬಲ್ಲವರಾರು ಎಂದ ಹಣಕಾಸು ಸಚಿವೆಗೆ ಸ್ವಾಮಿ ತಿರುಗೇಟು!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
‘ದೇವರ ಆಟ’ ಬಲ್ಲವರಾರು ಎಂದ ಹಣಕಾಸು ಸಚಿವೆಗೆ ಸ್ವಾಮಿ ತಿರುಗೇಟು!

‘ದೇವರ ಆಟ’ ಬಲ್ಲವರಾರು ಎಂದ ಹಣಕಾಸು ಸಚಿವೆಗೆ ಸ್ವಾಮಿ ತಿರುಗೇಟು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada