• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರು ಗೋಲಿಬಾರ್‌ಗೆ 245 ದಿನಗಳು: ಇನ್ನೂ ಜೈಲಲ್ಲಿರುವ ಪ್ರತಿಭಟನಕಾರರು

by
August 19, 2020
in ಕರ್ನಾಟಕ
0
ಮಂಗಳೂರು ಗೋಲಿಬಾರ್‌ಗೆ 245 ದಿನಗಳು: ಇನ್ನೂ ಜೈಲಲ್ಲಿರುವ ಪ್ರತಿಭಟನಕಾರರು
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಜಾರಿಗೆ ತಂದ ವಿವಾದಿತ ತಿದ್ದುಪಡಿ ಕಾಯ್ದೆ CAA-NRC ದೇಶದುದ್ದಗಲಕ್ಕೂ ಜನರ ಸಂಘಟಿತ ಹೋರಾಟಕ್ಕೆ ಕಾರಣವಾಯಿತು. ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿರುವ ಹಲವಾರು ಸಂಘಟನೆಗಳು, ಪಕ್ಷಗಳು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದವು, ಕೇಂದ್ರದ ವಿರುದ್ಧದ ಪ್ರತಿಭಟನೆಗಳು ನಿತ್ಯ ಸುದ್ದಿಯಾಗಿಬಿಟ್ಟವು. ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ರಾತ್ರಿ-ಹಗಲು ಪ್ರತಿಭಟನೆ ಜರುಗಿತು, ಪ್ರಯಾಗ್‌ರಾಜ್‌, ಕೊಲ್ಕತ್ತಾ, ಬೆಂಗಳೂರು ಮುಂತಾದ ಕಡೆಗಳಲ್ಲಿ ಶಾಹೀನ್‌ ಬಾಗ್‌ ಮಾದರಿಯದ್ದೇ ಪ್ರತಿಭಟನೆಗಳು ಕರೋನಾ ಹಾವಳಿ ದೇಶವನ್ನು ತಟ್ಟುವವರೆಗೆ ನಡೆಯಿತು.

ADVERTISEMENT

ಮಂಗಳೂರಿನ ಅಡ್ಯಾರ್‌ ಮೈದಾನದಲ್ಲಿ ಜನವರಿ 15 ರಂದು ನಡೆದ ಸಿಎಎ- ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಯಲ್ಲಿ ಲಕ್ಷೋಪಾದಿಯಲ್ಲಿ ಪ್ರತಿಭಟನಕಾರರು ಸೇರಿದ್ದರು. ಮಂಗಳೂರಿನ ಇತಿಹಾಸದ ಸ್ಮೃತಿಪಟಲದಲ್ಲಿ ಅಚ್ಚಳಿಯದೆ ಉಳಿದುಬಿಡುವ ಸಿಎಎ-ಎನ್‌ಆರ್‌ಸಿ ಪ್ರತಿಭಟನೆಗೆ ಲಕ್ಷಗಳ ಸಂಖ್ಯೆಯಲ್ಲಿ ಜನಸೇರಲು ಡಿಸೆಂಬರ್‌ 19 ರಂದು ನಡೆದ ಮಂಗಳೂರು ಗೋಲಿಬಾರ್‌ ಬಹುಮುಖ್ಯ ಕಾರಣವಾಗಿ ಹೊರಹೊಮ್ಮಿತ್ತು.

ಅಡ್ಯಾರಿನಲ್ಲಿ ನಡೆದ ಸಿಎಎ ವಿರೋಧಿ ಹೋರಾಟ

ಡಿಸೆಂಬರ್‌ 19; ಮಂಗಳೂರು ಗೋಲಿಬಾರ್

ಡಿಸೆಂಬರ್‌ 19 ರಂದು ಸಿಎಎ- ಎನ್‌ಆರ್‌ಸಿ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕಛೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ಕೊಡದ ಹಿನ್ನಲೆಯಲ್ಲಿ ಕೊನೆ ಘಳಿಗೆಯಲ್ಲಿ ಪ್ರತಿಭಟನೆ ರದ್ದು ಗೊಂಡಿತ್ತು. ಅದಕ್ಕೂ ಒಂದು ದಿನ ಮೊದಲು, ಪ್ರತಿಭಟನೆ ಮಾಡಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದರು. ಡಿ.19ರಂದು ಕೆಲವು ಎಸ್‌ಕೆಎಸ್‌ಎಸ್‌ಎಫ್‌ ಸಂಘಟನೆಯಡಿಯಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ಪತ್ರ ನೀಡಿದ್ದರು, ಅದರಂತೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆಯಲ್ಲಿ ಭಾಗಿಯಾಗಬೇಕೆಂದು ತಯಾರಿಯೂ ನಡೆದಿತ್ತು. ಆದರೆ ಕೊನೆ ಕ್ಷಣದಲ್ಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಾರೆ. ಕೊನೆ ಕ್ಷಣದ ರದ್ದಾಗುವಿಕೆ, ಹಾಗೂ ತರಾತುರಿಯ ಸೆಕ್ಷನ್‌144 ಹೇರುವಿಕೆಯ ತಿಳಿಯದ ಹಲವಾರು ಮಂದಿ ಯೋಜನೆಯಂತೆ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ್ದರು, ಈ ಸನ್ನಿವೇಶವನ್ನು ಸಾಧಕವಾಗಿ ಬಳಸಿಕೊಂಡ ಪೊಲೀಸರು ಪ್ರತಿಭಟನೆಗೆ ಆಗಮಿಸಿದವರ ಮೇಲೆ ಏಕಾಏಕಿ ಲಾಠಿ ಪ್ರಹಾರ ನಡೆಸಿದ್ದಾರೆ.

ಅಡ್ಯಾರಿನಲ್ಲಿ ನಡೆದ ಸಿಎಎ ವಿರೋಧಿ ಹೋರಾಟ

ಹಿಂದಿನ ದಿನ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್‌ ನಿಂದ ಮೊದಲೇ ಅಸಮಾಧಾನಗೊಂಡಿದ್ದ ಪ್ರತಿಭಟನಾಗಾರರಿಗೆ, ಕೊನೇ ಕ್ಷಣದ ಪೊಲೀಸರ ಅನಿರೀಕ್ಷಿತ ತಿರುವು ಹಾಗೂ ಏಕಾಏಕಿ ಲಾಠೀಚಾರ್ಜ್ ಇನ್ನಷ್ಟು ಆಕ್ರೋಶ ಹೆಚ್ಚಿಸಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಯಿತು. ಮಂಗಳೂರು ಉತ್ತರ ಪೊಲೀಸ್‌ ಠಾಣೆ, ಬೀಬಿ ಆಲಾಬಿ, ನೆಲ್ಲಿಕಾಯಿ ರಸ್ತೆ, ಕುದ್ರೋಳಿ ಮೊದಲಾದ ಭಾಗದಲ್ಲಿ ಆಕ್ರೋಶ ಹೊತ್ತಿ ಉರಿಯತೊಡಗಿತು. ಪರಿಸ್ಥಿತಿ ಕೈಮೀರಿ ಹೋದವು. ಇದನ್ನೇ ಎದುರು ನೋಡುತ್ತಿದ್ದಂತಿದ್ದ ಪೊಲೀಸರು ಯಾವುದೇ ಮುನ್ನೆಚ್ಚರಿಕೆ ನೀಡದೆ ಪ್ರತಿಭಟನಕಾರರ ಮೇಲೆ ಬಂದೂಕು ಗುರಿಯಿಟ್ಟು, ಟ್ರಿಗರ್‌ ಎಳೆದರು. ಸ್ಥಳದಲ್ಲೇ ಇಬ್ಬರು ದಿನಗೂಲಿ ಕಾರ್ಮಿಕರು ನೆಲಕ್ಕುರುಳಿದರು. ಪೊಲೀಸರ ವಿನಂತಿಯ ಮೇರೆಗೆ ಸಮಾಧಾನ ಪಡಿಸಲು ಘಟನಾಸ್ಥಳಕ್ಕೆ ಆಗಮಿಸಿದ ಮುಸ್ಲಿಂ ಮುಖಂಡ ಅಶ್ರಫ್ ಸೇರಿದಂತೆ ಹಲವಾರು ಮಂದಿ ಪೊಲೀಸ್ ಗುಂಡೇಟಿನಿಂದ ಗಾಯಗೊಂಡಿದ್ದರು.

ಪ್ರತಿಭಟನಾಕಾರರೆಡೆಗೆ ಕಲ್ಲೆಸೆಯುತ್ತಿರುವ ಪೊಲೀಸರು

ಮಂಗಳೂರು ಪೊಲೀಸರ ರಕ್ತಪಿಪಾಸುತನ

ಪ್ರತಿಭಟನಾಕಾರರು ದೊಂಬಿಯೆಬ್ಬಿಸಿದರು, ಪೋಲಿಸರೆಡೆಗೆ ಕಲ್ಲೆಸೆದರು ಹಾಗಾಗಿ ಪೊಲೀಸರು ಗುಂಡು ಹೊಡೆಯಬೇಕಾಗಿ ಬಂತು ಎಂಬ ಆರೋಪಗಳು ಕೇಳಿಬರುತ್ತಿದ್ದಂತೆಯೇ, ಪೊಲೀಸರ ರಕ್ತಪಿಪಾಸುತನ ಅನಾವರಣಗೊಳಿಸುವಂತಹ ಚಿತ್ರಗಳು, ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದವು. ಒಂದು ವಿಡಿಯೋದಲ್ಲಂತೂ ಓರ್ವ ಪೊಲೀಸ್‌ ʼಇಷ್ಟು ಗುಂಡು ಹೊಡೆದರೂ ಒಬ್ರೂ ಸಾಯಲಿಲ್ವಲ್ಲʼ ಎಂದು ಹೇಳುವುದು ಸ್ಪಷ್ಟವಾಗಿ ಕೇಳಿಸಿಕೊಂಡಿತ್ತು. ಪೊಲೀಸರು ಪ್ರತಿಭಟನಾಕಾರರೆಡೆಗೆ ಕಲ್ಲು ತೂರುವ ಚಿತ್ರಗಳೂ ಹರಡಲಾರಂಭಿಸಿದವು. ಗುಂಪನ್ನು ಚದುರಿಸಲು, ಶಾಂತಿ ಸ್ಥಾಪಿಸಲು ಗುಂಡು ಹೊಡೆಯಲಿಲ್ಲ, ಬದಲಾಗಿ ಪ್ರತಿಭಟನಾಕಾರರನ್ನು ಕೊಲ್ಲಲೆಂದೇ ಪೊಲೀಸರು ಬಂದೂಕು ಚಲಾಯಿಸಿದ್ದರು ಎಂಬುದಕ್ಕೆ ಪೂರಕವೆಂಬಂತೆ ಇನ್ನೊಂದು ವಿಡಿಯೋ ಕೂಡಾ ವೈರಲಾಗಿತ್ತು. ಗುಂಪನ್ನು ಹಿಮ್ಮಟ್ಟಿಸಲು ಕುಳಿತ ಭಂಗಿಯಲ್ಲಿ, ಮೊಣಕಾಲಿಗಿಂತ ಕೆಳಗೆ ಗುರಿಯಿಡಬೇಕಿದ್ದ ಪೊಲೀಸರು ಬಂದೂಕಿನ ನಳಿಕೆಯನ್ನು ಎತ್ತರಿಸಿ ಗುಂಡು ಹೊಡೆಯುವುದು ಆ ವಿಡಿಯೋದಲ್ಲಿ ವೈರಲಾಗಿತ್ತು. ಅದಾಗ್ಯೂ, ಪ್ರತಿಭಟನಕಾರರನ್ನಷ್ಟೇ ತಪ್ಪಿತಸ್ಥರನ್ನಾಗಿಸುವ ಹುನ್ನಾರಕ್ಕೆ ಆಳುವ ಪಕ್ಷದ ಪರವಿದ್ದ ಮಾಧ್ಯಮಗಳೂ ಜೊತೆಗೂಡಿದ್ದವು.

ಹೈಕೋರ್ಟ್‌ ಜಾಮೀನು- ಸುಪ್ರೀಂ ತಡೆಯಾಜ್ಞೆ; 9 ತಿಂಗಳಾದರೂ ಜೈಲಲ್ಲೇ ಬಂಧಿಯಾದ ಪ್ರತಿಭಟನಾಕಾರರು

ಘಟನೆ ಸಂಬಂಧಪಟ್ಟಂತೆ, ಪೊಲೀಸರ ವಿರುದ್ಧ ಹಿಂಸಾಚಾರ ನಡೆಸಿದ ಆರೋಪದ ಮೇಲೆ ಮಂಗಳೂರು ಪೊಲೀಸರು 24 ಮಂದಿಯನ್ನು ಬಂಧಿಸಿದ್ದರು. ಆರೋಪಿಗಳ ಬಂಧನ ಮಾಡುವಾಗ ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಸಂಬಂಧಿಸಿದಂತೆ ಸರಿಯಾದ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಒದಗಿಸದೆ ಇರುವ ಅಂಶಗಳನ್ನು ಪರಿಗಣಿಸಿದ ಹೈಕೋರ್ಟ್ ಎಲ್ಲಾ 24 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ ಸಾಕ್ಷ್ಯ ಎಂದು ಪರಿಗಣಿಸಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಗಳು ನೇರವಾಗಿ ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಹೈ ಕೋರ್ಟ್ ಏಕ ಸದಸ್ಯ ಪೀಠ ಮನಗಂಡು ಜಾಮೀನು ಮಂಜೂರು ಮಾಡಿತ್ತು.

ಗೋಲಿಬಾರ್‌ನಲ್ಲಿ ಮೃತಪಟ್ಟ ನೌಶೀನ್‌ ಹಾಗೂ ಜಲೀಲ್

ಜಾಮೀನು ನೀಡಿದ ಹೈಕೋರ್ಟ್‌ ತನ್ನ ಆದೇಶದಲ್ಲಿ, “SPP (Special Public Prosecutor) ದಾಖಲೆಗಳಾಗಿ ನೀಡಿರುವ ಛಾಯಾಚಿತ್ರಗಳಲ್ಲಿ, ಆರೋಪಿಸಲ್ಪಟ್ಟ ಯಾರ ಕೈಯಲ್ಲಿಯೂ ಯಾವುದೇ ಮಾರಕಾಸ್ತ್ರಗಳಿಲ್ಲ. ಓರ್ವ ವ್ಯಕ್ತಿಯ ಕೈಯಲ್ಲಿ ಬಾಟಲ್ ಇರುವುದು ಹೊರತುಪಡಿಸಿದರೆ, ಪೊಲೀಸರನ್ನು ಅಥವಾ ಪೊಲೀಸ್‌ ಸ್ಟೇಷನ್‌ ಅನ್ನು ಸುತ್ತುವರೆದಿರುವ ಬೇರೆ ಯಾವುದೇ ಚಿತ್ರಗಳು ಲಭ್ಯವಾಗಿಲ್ಲ. ಆದರೆ ಅರ್ಜಿದಾರರು ಸಲ್ಲಿಸಿರುವ ಚಿತ್ರಗಳಲ್ಲಿ ಗುಂಪಿನ ಮೇಲೆ ಪೊಲೀಸರೇ ಕಲ್ಲು ತೂರಾಟ ನಡೆಸುತ್ತಿದ್ದ ಘಟನೆಗಳು ಚಿತ್ರಿತವಾಗಿವೆ.” ಎಂದು ಸ್ಪಷ್ಟವಾಗಿ ಉಲ್ಲೇಖಿಸಿತ್ತು.

ಆದರೆ, ಹೈಕೋರ್ಟ್‌ ಜಾಮೀನು ಪಡೆದ ಪ್ರತಿಭಟನಾಕಾರರು ಬಿಡುಗಡೆಯಾಗಬೇಕಾದ ದಿನವೇ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಜಾಮೀನಿಗೆ ಮಧ್ಯಂತರ ತಡೆ ವಿಧಿಸಿ ಆದೇಶ ಹೊರಡಿಸಿದ್ದು, ಹೈಕೋರ್ಟ್‌ ಜಾಮೀನು ರದ್ದಾಗಿದೆ. ಪ್ರಕರಣದ ಕುರಿತಂತೆ ಸುಪ್ರಿಂ ಕೋರ್ಟಿನಲ್ಲಿ ಇದುವರೆಗೂ ಎರಡು ಹಿಯರಿಂಗ್‌ ನಡೆದಿದೆ. ಇದೇ ಆಗಸ್ಟ್‌ 11 ರಂದು ನಡೆದ ವಿಚಾರಣೆಯಲ್ಲಿ ಮುಂದಿನ ಇನ್ನೆರಡು ವಾರಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರೂ, ದಿನಾಂಕ ನಿಗದಿಪಡಿಸಿಲ್ಲ ಎಂದು ಪ್ರತಿಭಟನಾಕಾರರ ಪರ ವಕೀಲರಲ್ಲೊಬ್ಬರಾದ ಅಶ್ರಫ್‌ ಅಗ್ನಾಡಿ, ಪ್ರತಿಧ್ವನಿಯೊಂದಿಗೆ ಹೇಳಿದ್ದಾರೆ.

ಕಳೆದ 9 ತಿಂಗಳಿನಿಂದ ಮಂಗಳೂರಿನ ಪ್ರತಿಭಟನಾಕಾರರು ಜೈಲುವಾಸಿಗಳಾಗಿದ್ದಾರೆ. ಕರೋನಾ ಸಾಂಕ್ರಾಮಿಕ ರೋಗದೊಂದಿಗೆ ಕೇಂದ್ರ ಸರ್ಕಾರದ ವಿಭಜಕ ಕಾಯ್ದೆ ಸಿಎಎ-ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳು ತಣ್ಣಗಾಗಿವೆ. ಅದರೊಂದಿಗೆ ಜೈಲುಪಾಲಾಗಿರುವ ಸಿಎಎ- ಎನ್‌ಆರ್‌ಸಿ ವಿರೋಧಿ ಪ್ರತಿಭಟನಕಾರರ ಕುರಿತಾದ ಕಾಳಜಿ, ಚರ್ಚೆಗಳೂ ಹಿನ್ನಲೆಗೆ ಸರಿದಿವೆ.

Also Read: ಮಂಗಳೂರು ಗೋಲಿಬಾರ್, ದೆಹಲಿ ಕೋಮು ಗಲಭೆ ಪ್ರಭುತ್ವ ಪ್ರೇರಿತವೇ? ಅನುಮಾನಕ್ಕೀಡಾದ ಚಾರ್ಜ್ ಶೀಟ್

Tags: ಎನ್‌ಆರ್‌ಸಿಮಂಗಳೂರು ಗೋಲಿಬಾರ್ಸಿಎಎ
Previous Post

ಸಂಘಟಿತ ವಲಯದಲ್ಲಿ 18 ದಶಲಕ್ಷ ಉದ್ಯೋಗ ನಷ್ಟ; ಮರೀಚಿಕೆಯಾದ ಆರ್ಥಿಕ ಚೇತರಿಕೆ

Next Post

ಬೆಂಗಳೂರು ಗಲಭೆ: ಸರ್ಕಾರಕ್ಕೆ 13 ಅಂಶಗಳ ಪತ್ರ ಬರೆದ ಸಿದ್ದರಾಮಯ್ಯ..!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಬೆಂಗಳೂರು ಗಲಭೆ: ಸರ್ಕಾರಕ್ಕೆ 13 ಅಂಶಗಳ ಪತ್ರ ಬರೆದ ಸಿದ್ದರಾಮಯ್ಯ..!

ಬೆಂಗಳೂರು ಗಲಭೆ: ಸರ್ಕಾರಕ್ಕೆ 13 ಅಂಶಗಳ ಪತ್ರ ಬರೆದ ಸಿದ್ದರಾಮಯ್ಯ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada