• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮತಾಂತರ ವಿರೋಧಿ ಕಾನೂನು ವಿರುದ್ಧ ಯೋಗಿ‌ಗೆ ಮಾಜಿ IAS ಅಧಿಕಾರಿಗಳ ಪತ್ರ

by
December 30, 2020
in ದೇಶ
0
ಮತಾಂತರ ವಿರೋಧಿ ಕಾನೂನು ವಿರುದ್ಧ ಯೋಗಿ‌ಗೆ ಮಾಜಿ IAS ಅಧಿಕಾರಿಗಳ ಪತ್ರ
Share on WhatsAppShare on FacebookShare on Telegram

ʼಲವ್ ಜಿಹಾದ್’ ಹೆಸರಿನಲ್ಲಿ ಉತ್ತರ ಪ್ರದೇಶ ಸರ್ಕಾರದ ವಿವಾದಾತ್ಮಕ ಮತಾಂತರ ವಿರೋಧಿ ಸುಗ್ರೀವಾಜ್ಞೆಯು ರಾಜ್ಯವನ್ನು “ದ್ವೇಷ, ವಿಭಜನೆ ಮತ್ತು ಧರ್ಮಾಂಧತೆಯ ರಾಜಕೀಯದ ಕೇಂದ್ರಬಿಂದುವಾಗಿ” ಪರಿವರ್ತಿಸಿದೆ ಎಂದು 104 ಮಾಜಿ ಐಎಎಸ್ ಅಧಿಕಾರಿಗಳು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ..

ADVERTISEMENT

ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಮತ್ತು ಪ್ರಧಾನ ಮಂತ್ರಿ ಮಾಜಿ ಸಲಹೆಗಾರ ಟಿಕೆಎ ನಾಯರ್ ಸೇರಿದಂತೆ ಒಟ್ಟು 104 ಮಾಜಿ ಐಎಎಸ್ ಅಧಿಕಾರಿಗಳು “ಅಕ್ರಮ ಸುಗ್ರೀವಾಜ್ಞೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು” ಎಂದು ಪತ್ರ ಬರೆದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಒಂದು ಕಾಲದಲ್ಲಿ ಗಂಗಾ-ಯಮುನಾ ನಾಗರಿಕತೆಯ ತೊಟ್ಟಿಲು ಎಂದು ಕರೆಯಲ್ಪಡುತ್ತಿದ್ದ ಉತ್ತರ ಪ್ರದೇಶ ಈಗ ದ್ವೇಷ, ವಿಭಜನೆ ಮತ್ತು ಧರ್ಮಾಂಧತೆಯ ರಾಜಕಾರಣದ ಕೇಂದ್ರಬಿಂದುವಾಗಿದೆ, ಹಾಗೂ ಆಡಳಿತ ಸಂಸ್ಥೆಗಳು ಕೋಮು ವಿಷ ಹರಡುವಲ್ಲಿ ಮುಳುಗಿವೆ.” ಎಂದು ಪತ್ರದಲ್ಲಿ ತೀಕ್ಷ್ಣವಾಗಿ ಟೀಕಿಸಲಾಗಿದೆ.

‘ಆಯ್ಕೆಯ ಸ್ವಾತಂತ್ರ್ಯದ ಮೇಲೆ ಆಕ್ರಮಣ’

ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡ ಹಲವಾರು ಉದಾಹರಣೆಗಳನ್ನು ಈ ಪತ್ರವು ಎತ್ತಿ ತೋರಿಸಿದೆ.

ಕಳೆದ ವಾರ, ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಇಬ್ಬರು ಹದಿಹರೆಯದವರನ್ನು ಕಿರುಕುಳ ನೀಡಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಬಾಲಕಿ ಮತ್ತು ಆಕೆಯ ತಾಯಿಯ ಆಕ್ಷೇಪಣೆಗಳ ನಡುವೆಯೂ ‘ಲವ್ ಜಿಹಾದ್’ ಪ್ರಕರಣ ದಾಖಲಾಗಿದೆ. 16 ವರ್ಷದ ಹಿಂದೂ ಬಾಲಕಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ ಆರೋಪದ ಮೇಲೆ ಬಾಲಕ ಒಂದು ವಾರದಿಂದ ಜೈಲಿನಲ್ಲಿದ್ದಾನೆ.

“ಮತಾಂತರ ವಿರೋಧಿ ಸುಗ್ರೀವಾಜ್ಞೆ ವಿಶೇಷವಾಗಿ ಮುಸ್ಲಿಮರಾದ ಭಾರತೀಯ ಪುರುಷರು ಮತ್ತು ತಮ್ಮ ಆಯ್ಕೆಯ ಸ್ವಾತಂತ್ರ್ಯವನ್ನು ಚಲಾಯಿಸಲು ಧೈರ್ಯವಿರುವ ಮಹಿಳೆಯರನ್ನು ಬಲಿಪಶು ಮಾಡಲು ಆಯುಧದಂತೆ ಬಳಸಲಾಗುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

Also Read: ಲವ್‌ ಜಿಹಾದ್‌ ಹೆಸರಿನಲ್ಲಿ ಮಹಿಳೆಯ ಸ್ವಾತಂತ್ರ್ಯ ನಿರಾಕರಿಸುವ ಷಡ್ಯಂತ್ರ್ಯ -AILAJ

ಅಲಹಾಬಾದ್ ಹೈಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್‌ಗಳು, ಒಬ್ಬರು ತಮ್ಮ ಜೀವನ ಸಂಗಾತಿಯನ್ನು ಆರಿಸುವುದು ಸಂವಿಧಾನವು ಖಾತರಿಪಡಿಸುವ ಮೂಲಭೂತ ಹಕ್ಕು ಎಂದು ನಿಸ್ಸಂದಿಗ್ಧವಾಗಿ ತೀರ್ಪು ನೀಡಿದೆ, ಆದರೆ “ಉತ್ತರ ಪ್ರದೇಶ ರಾಜ್ಯವು ಆ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ” ಎಂದು ಸಹಿ ಮಾಡಿದ ಮಾಜಿ ಅಧಿಕಾರಿಗಳು ತಿಳಿಸಿದ್ದಾರೆ.

Also Read: ಲವ್ ಜಿಹಾದ್ ಕಾನೂನಿಗೆ ಒಂದು ತಿಂಗಳಾಗುವಾಗ 35 ಮಂದಿಯನ್ನು ಬಂಧಿಸಿದ ಉ.ಪ್ರ ಪೊಲೀಸರು

ಮುಕ್ತ ದೇಶದ ಮುಕ್ತ ಪ್ರಜೆಗಳಾಗಿ ತಮ್ಮ ಜೀವನವನ್ನು ಸರಳವಾಗಿ ಬದುಕಲು ಬಯಸುವ ಯುವ ಭಾರತೀಯರ ಮೇಲೆ ಉತ್ತರ ಪ್ರದೇಶ ಸರ್ಕಾರ ಸರಣಿ ದೌರ್ಜನ್ಯ ಎಸಗುತ್ತಿದೆಯೆಂದು ಪತ್ರದಲ್ಲಿ ಆರೋಪಿಸಲಾಗಿದೆ.

ಹೊಸ ಸುಗ್ರೀವಾಜ್ಞೆಯಡಿ ಉತ್ತರ ಪ್ರದೇಶ ಪೊಲೀಸರು ಸರಣಿ ಪ್ರಕರಣಗಳನ್ನು ದಾಖಲಿಸಿದ ಬಳಿಕ ಮಾಜಿ ಐಎಎಸ್ ಅಧಿಕಾರಿಗಳ ಈ ಪತ್ರ ಬಂದಿದೆ.

Also Read: ಅಂತರ್ಧರ್ಮೀಯ ಮದುವೆ ಊರ್ಜಿತಗೊಳಿಸಿದ ಅಲಹಾಬಾದ್ ಕೋರ್ಟ್

Tags: anti-conversionPolitics Of HateUttar PradeshYogi Adityanathಮತಾಂತರ ವಿರೋಧಿ ಕಾನೂನುಯೋಗಿ ಆದಿತ್ಯನಾಥ್
Previous Post

ಭಾರತ-ಯುಕೆ ವಿಮಾನಯಾನ ರದ್ದು; ಜ.7 ರವರೆಗೆ ವಿಸ್ತರಣೆ

Next Post

ಮಹಾರಾಷ್ಟ್ರ: ಜನವರಿ 31 ರವರೆಗೆ ಲಾಕ್‌ಡೌನ್ ನಿರ್ಬಂಧ ವಿಸ್ತರಣೆ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಮಹಾರಾಷ್ಟ್ರ: ಜನವರಿ 31 ರವರೆಗೆ ಲಾಕ್‌ಡೌನ್ ನಿರ್ಬಂಧ ವಿಸ್ತರಣೆ

ಮಹಾರಾಷ್ಟ್ರ: ಜನವರಿ 31 ರವರೆಗೆ ಲಾಕ್‌ಡೌನ್ ನಿರ್ಬಂಧ ವಿಸ್ತರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada