• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮತ್ತೆ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಸೇರುವ ಸೂಚನೆ ನೀಡಿದ ನಳಿನ್‌ ಕುಮಾರ್‌, ಲಕ್ಷ್ಮಣ ಸವದಿ

by
October 24, 2020
in ಕರ್ನಾಟಕ
0
ಮತ್ತೆ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಸೇರುವ ಸೂಚನೆ ನೀಡಿದ ನಳಿನ್‌ ಕುಮಾರ್‌
Share on WhatsAppShare on FacebookShare on Telegram

ಕಾಂಗ್ರೆಸ್‌ನ ಐವರು ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರಲಿದ್ದರೆ ಎಂದು ಸಿರಾ ಉಪಚುನಾವಣೆ ಪ್ರಚಾರದ ನಡುವೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಯಾವುದೇ ಭವಿಷ್ಯವಿಲ್ಲವೆಂದು ಅರಿತ ಅವರು ತಮ್ಮ ಪಕ್ಷ ತೊರೆಯುವ ಯೋಚನೆಯಲ್ಲಿದ್ದಾರೆ ಎಂದು ಸವದಿ ತಿಳಿಸಿದ್ದಾರೆ.

ADVERTISEMENT

ಸಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎಂ ರಾಜೇಶ್‌ ಗೌಡ ಅವರ ಪರ ಪ್ರಚಾರ ನಡೆಸಿದ ಸವದಿ, ಆರ್‌ ಆರ್‌ ನಗರ ಹಾಗೂ ಸಿರಾ ಎರಡೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಟಿಕೆಟ್‌ ಹಂಚಿಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ ಎನ್ ರಾಜಣ್ಣ ಕಾಂಗ್ರೆಸ್‌ನೊಳಗೆ ಬಂಡಾಯ ಎದ್ದಿದ್ದಾರೆ ಎಂಬ ಗುಸುಗುಸು ರಾಜಕೀಯ ಪಡಸಾಲೆಯಲ್ಲಿ ಹರಿಯುತ್ತಿದ್ದಂತೆಯೇ ಎನ್ ರಾಜಣ್ಣ ಅವರೊಂದಿಗೆ ಉತ್ತಮ ಸಂಬಂಧವಿದೆ ಎಂದು ಸವದಿ ಹೇಳಿದ್ದು ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

“ಪ್ರಧಾನಿ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿ, ತುಮಕೂರು ಬಿಜೆಪಿ ಅಭ್ಯರ್ಥಿ ಜಿ ಎಸ್ ಬಸವರಾಜು ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಎಚ್ ಡಿ ದೇವೇಗೌಡರ ವಿರುದ್ಧ ಗೆಲ್ಲಲು ಸಹಾಯ ಮಾಡಿದ್ದರು. ಆದರೆ ಈಗ ಸಿರಾದಲ್ಲಿ, ಸ್ವಲ್ಪ ಒತ್ತಡದಿಂದಾಗಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ”ಎಂದು ಸವದಿ ಹೇಳಿದ್ದಾರೆ.

ಈ ನಡುವೆ ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಕಾಂಗ್ರೆಸ್‌ ನ ಹತ್ತು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್‌ನೊಂದಿಗೆ ಭ್ರಮನಿರಸನಗೊಂಡು ಬಿಜೆಪಿಗೆ ಸೇರುವ ತವಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಸೇರುವ ಕಾಂಗ್ರೆಸ್‌ ಶಾಸಕರ ವಿಚಾರದಲ್ಲಿ ಸವದಿ ʼಲಕ್ಷ್ಮಣʼ ಲೆಕ್ಕ ಹೇಳಿದರೆ ನಳಿನ್‌ ʼರಾಮʼ ಲೆಕ್ಕ ಹೇಳಿದ್ದಾರೆ. ಸವದಿ ಮುಖಾಂತರ ಬೇರೆಯೇ ಐವರು ಶಾಸಕರಿದ್ದಾರೆಯೇ ಅಥವಾ ನಳಿನ್‌ ಹೇಳಿರುವ ಹತ್ತು ಶಾಸಕರಲ್ಲಿ ಸವದಿ ಹೇಳಿದ ಐವರು ಶಾಸಕರು ಒಳಗೊಂಡಿದ್ದಾರೆಯೇ ಎಂಬುವುದು ಸ್ಪಷ್ಟವಾಗಿಲ್ಲ.

Tags: BJP CongressLaxman SavadiMLANalin Kumar Kateel
Previous Post

ಸರ್ಕಾರಿ ಕಂಪನಿಗಳ ‘ಅಪಮೌಲ್ಯ’ಗೊಳಿಸುವ ಮೋದಿ ಸರ್ಕಾರದ ಅಜೆಂಡಾ ಯಶಸ್ವಿ

Next Post

ಬಿಹಾರ: ಮತ ಎಣಿಕೆಯಂದು ಲಾಲೂ ಪ್ರಸಾದ್ ಯಾದವ್‌ ಜಾಮೀನಿನ ಮೇಲೆ ಬಿಡುಗಡೆಯಾಗುವ ಸಾಧ್ಯತೆ

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
Next Post
ಬಿಹಾರ: ಮತ ಎಣಿಕೆಯಂದು ಲಾಲೂ ಪ್ರಸಾದ್ ಯಾದವ್‌ ಜಾಮೀನಿನ ಮೇಲೆ ಬಿಡುಗಡೆಯಾಗುವ ಸಾಧ್ಯತೆ

ಬಿಹಾರ: ಮತ ಎಣಿಕೆಯಂದು ಲಾಲೂ ಪ್ರಸಾದ್ ಯಾದವ್‌ ಜಾಮೀನಿನ ಮೇಲೆ ಬಿಡುಗಡೆಯಾಗುವ ಸಾಧ್ಯತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada