• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮತ್ತೆ ಸಂಕಷ್ಟದಲ್ಲಿ Republic Tv ಮುಖ್ಯಸ್ಥ ಅರ್ನಬ್ ಗೋಸ್ವಾಮಿ.!

by
May 27, 2020
in ದೇಶ
0
ಮತ್ತೆ ಸಂಕಷ್ಟದಲ್ಲಿ Republic Tv ಮುಖ್ಯಸ್ಥ ಅರ್ನಬ್ ಗೋಸ್ವಾಮಿ.!
Share on WhatsAppShare on FacebookShare on Telegram

ಅಕ್ಷತಾ ನಾಯಕ್‌ ಎಂಬವರು ವೀಡಿಯೋವೊಂದರ ಮೂಲಕ Republic Tv ಮುಖ್ಯಸ್ಥ ಅರ್ನಬ್‌ ಗೋಸ್ವಾಮಿ ವಿರುದ್ಧ ಗಂಭೀರವಾದ ಆರೋಪವೊಂದನ್ನ ಮಾಡಿದ್ದಾರೆ. ಈ ವೀಡಿಯೋವನ್ನು ಮಹಾರಾಷ್ಟ್ರ ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿಯೂ ಹಂಚಿಕೊಂಡಿದೆ.

Republic Tv ಸ್ಟುಡಿಯೋವನ್ನು ವಿನ್ಯಾಸಗೊಳಿಸಿದ್ದಕ್ಕಾಗಿ ಅರ್ನಬ್‌ ಗೋಸ್ವಾಮಿ ಹಾಗೂ ಇಬ್ಬರು ಇತರರು ತನ್ನ ಪತಿ ಅನ್ವೆ ನಾಯಕ್‌ ರಿಗೆ ನೀಡಬೇಕಿದ್ದ ಹಣ ಬಾಕಿ ಉಳಿಸಿಕೊಂಡಿದ್ದರು ಎಂದು ವೀಡಿಯೋದಲ್ಲಿ ಅನ್ವೆ ನಾಯಕ್‌ ಪತ್ನಿ ಅಕ್ಷತಾ ನಾಯಕ್‌ ಆರೋಪಿಸಿದ್ದಾರೆ. ಇನ್ನು ಮೇ 26ರಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್‌ ದೇಶ್ಮುಖ್‌ ಈ ಪ್ರಕರಣವನ್ನು ಮರು ತನಿಖೆಗಾಗಿ CIDಗೆ ವಹಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

Mrs.Akshata Naik has alleged that her entrepreneur husband and her mother in law had to commit suicide due to non payment of dues from Mr. Arnab Goswami's @republic.
This is serious and needs further investigation. pic.twitter.com/sp0dovnMDr

— Maharashtra Congress (@INCMaharashtra) May 5, 2020


ಪ್ರಕರಣದ ಹಿನ್ನೆಲೆ ಏನು.?

Sabrang India ಸುದ್ದಿ ಜಾಲತಾಣ ವರದಿ ಮಾಡಿರುವ ಪ್ರಕಾರ, 2018ರ ಮೇ ತಿಂಗಳಲ್ಲಿ ಅರ್ನಬ್‌ ಗೋಸ್ವಾಮಿ ಹಾಗೂ ಫಿರೋಜ್‌ ಶೈಕ್‌ ಮತ್ತು ನಿತೇಶ್‌ ಸರ್ದಾ ಎಂಬವರ ವಿರುದ್ಧ ಆಲಿಭಗ್‌ ಪೊಲೀಸ್‌ ಠಾಣೆಯಲ್ಲಿ ಅನ್ವೆ ನಾಯಕ್‌ ಮತ್ತು ಅವರ ತಾಯಿಯ ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಾಗಿತ್ತು.‌ ಅನ್ವೆ ನಾಯಕ್ ಕಾನ್ಕಾರ್ಡ್ ಡಿಸೈನ್ಸ್ ಪ್ರೈ. ಲಿ. ಸಂಸ್ಥೆಯ ಮಾಲೀಕರಾಗಿದ್ದರು. ಇವರು ಮಾನಸಿಕ ಖಿನ್ನತೆಗೆ ಒಳಗಾಗಿ ತನ್ನ ತಾಯಿಯ ಜೊತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಅನ್ವೆ ನಾಯಕ್‌ ಬರೆದಿಟ್ಟಿದ್ದ ಡೆತ್‌ ನೋಟ್‌ ನಲ್ಲಿ ಅರ್ನಬ್‌ ಗೋಸ್ವಾಮಿ, ಫಿರೋಜ್‌ ಶೈಕ್‌ ಹಾಗೂ ನಿತೇಶ್‌ ಸರ್ದಾ ಸೇರಿದಂತೆ ಒಟ್ಟು 5.4 ಕೋಟಿ ರೂಪಾಯಿ ಸಾಲ ಬಾಕಿ ಉಳಿಸಿಕೊಂಡಿದ್ದರು ಎಂದು ಉಲ್ಲೇಖಿಸಲಾಗಿತ್ತು. ಈ ಪೈಕಿ ಅರ್ನಬ್‌ ಗೋಸ್ವಾಮಿಯ ರಿಪಬ್ಲಿಕ್‌ ಟಿವಿ ಸ್ಟುಡಿಯೋ ವಿನ್ಯಾಸಗೊಳಿಸಿದಕ್ಕಾಗಿ ಅನ್ವೆ ನಾಯಕ್‌ ರಿಗೆ 83 ಲಕ್ಷ ರೂಪಾಯಿ ಹಣ ಕೊಡಬೇಕಾಗಿತ್ತು.

ಆದರೆ ಈ ಬಗ್ಗೆ ಆಗಲೇ ರಿಪಬ್ಲಿಕ್‌ ಟಿವಿ ಒಂದು ಸ್ಪಷ್ಟತೆಯನ್ನೂ ಕೂಡ ಪತ್ರದ ಮೂಲಕ ನೀಡಿತ್ತು. “ಈ ಪತ್ರದಲ್ಲಿ “ರಿಪಬ್ಲಿಕ್‌ ಟಿವಿ ಈ ಮೂಲಕ ಸ್ಪಷ್ಟ ಪಡಿಸಲು ಇಚ್ಛಿಸುವುದು ಏನೆಂದರೆ, ರಿಪಬ್ಲಿಕ್‌ ಟಿವಿ ಸ್ಟುಡಿಯೋ ವಿನ್ಯಾಸಗೊಳಿಸಿದ ಕಾನ್ಕಾರ್ಡ್ ಡಿಸೈನ್ಸ್ ಪ್ರೈ. ಲಿ. ಕಂಪೆನಿಗೆ ನೀಡಬೇಕಿದ್ದ ಎಲ್ಲಾ ಹಣವನ್ನು ಪಾವತಿ ಮಾಡಿಯಾಗಿದೆ. ಇದಕ್ಕೆ ಸಂಬಂಧಿಸಿದ ಚೆಕ್‌ ಹಾಗೂ ಬ್ಯಾಂಕ್‌ ವ್ಯವಹಾರಗಳ ದಾಖಲೆಗಳು ನಮ್ಮ ಬಳಿ ಇದೆ. ಸಂಬಂಧಿತ ಅಧಿಕಾರಿಗಳಿಗೆ ಅದನ್ನು ತೋರಿಸಲು ರಿಪಬ್ಲಿಕ್‌ ಟಿವಿ ಸಿದ್ಧವಿದೆ” ಎಂದು ಹೇಳಿತ್ತು.

ವಿಡಿಯೋದಲ್ಲಿ ಅಕ್ಷತಾ ನಾಯಕ್‌ ಮಾಡಿದ ಆರೋಪವೇನು.?

2018ರ ಮೇ ತಿಂಗಳಲ್ಲಿ ಅಲಿಭಾಗ್‌ ನಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ನನ್ನ ಪತಿ ಅನ್ವೆ ನಾಯಕ್‌ ಹಾಗೂ ತಾಯಿ ಆತ್ಮಹತ್ಯೆಗೆ ಶರಣಾಗಿದ್ದರು. ಇದಕ್ಕೂ ಮುನ್ನ ಅನ್ವೆ ಬರೆದಿಟ್ಟಿದ್ದ ಡೆತ್‌ ನೋಟ್‌ನಲ್ಲಿ ಅರ್ನಬ್‌ ಗೋಸ್ವಾಮಿ, ಫಿರೋಜ್‌ ಶೈಕ್‌ ಹಾಗೂ ನಿತೇಶ್‌ ಸರ್ದಾ ಎಂಬ ಮೂವರ ಹೆಸರು ಉಲ್ಲೇಖಿಸಿ, ಈ ಮೂವರಿಂದ ತನಗೆ ಸುಮಾರು 5 ಕೋಟಿ ರೂಪಾಯಿ ಮೊತ್ತ ಬರಬೇಕಿದೆ ಎಂದಿದ್ದರು. ಇದಕ್ಕೆ ಸಂಬಂಧಿಸಿದಂತೆ ಆಲಿಭಗ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದರು ಕೂಡ ಇವರನ್ನು ಈವರೆಗೆ ಬಂಧಿಸಿಲ್ಲ. ಈ ಪ್ರಕರಣದ ತನಿಖೆಯಲ್ಲಿ ಈವರೆಗೆ ಯಾವುದೇ ಪ್ರಗತಿಯೂ ಆಗಿಲ್ಲ. ಅರ್ನಬ್‌ ಗೋಸ್ವಾಮಿ ಸೇರಿದಂತೆ ಮೂವರ ವಿರುದ್ಧವೂ ಕ್ರಮಗೈಗೊಳ್ಳಬೇಕೆಂದು ಅಕ್ಷತಾ ನಾಯಕ್‌ ಕೇಳಿಕೊಂಡಿದ್ದಾರೆ. ಅಲ್ಲದೆ ತನ್ನ ಹಾಗೂ ತನ್ನ ಮಗಳಿದೆ ಜೀವದ ಭಯ ಇದೆ ಎಂದೂ ವೀಡಿಯೋದಲ್ಲಿ ಹೇಳಿದ್ದಾರೆ.

ಇನ್ನು ವೀಡಿಯೋದಲ್ಲಿ ಅಕ್ಷತಾ ನಾಯಕ್ ಆಲಿಭಗ್‌ ಪೊಲೀಸ್‌ ಠಾಣೆಯ‌ ಪಿಐ ಸುರೇಶ್‌ ವರದೆ ಎಂಬವರ ವಿರುದ್ಧವೂ ಆರೋಪ ಎತ್ತಿದ್ದಾರೆ. ಈ ಪ್ರಕರಣದ ಸಂಬಂಧ FIR ದಾಖಲಿಸಿ ಸೂಕ್ತ ಕ್ರಮಕೈಗೊಳ್ಳಿ ಎಂದು ಕೇಳಿಕೊಂಡರೂ ಸುರೇಶ್ ವರದೆ ಈ ಬಗ್ಗೆ ಸ್ಪಷ್ಟ ಮಾಹಿತಿಯನ್ನು ನೀಡಿರಲಿಲ್ಲ. ಕೇಳಿದಾಗಲೆಲ್ಲ ತನಿಖೆ ಪ್ರಗತಿಯಲ್ಲಿದೆ ಮತ್ತು ಪೂರಕ ಸಾಕ್ಷ್ಯಗಳು ಈವರೆಗೆ ಸಿಕ್ಕಿಲ್ಲ ಎಂದು ಸಬೂಬು ನೀಡುತ್ತಿದ್ದಾರೆ. ಅಲ್ಲದೆ ತನಿಖೆಗೆಂದು ಕೊಂಡೊಯ್ಯಲಾದ ಅನ್ವೆ ನಾಯಕ್‌ ಅವರ ಲ್ಯಾಪ್‌ಟಾಕ್‌ ಹಾಗೂ ಮೊಬೈಲ್‌ ಫೋನ್‌ ಈವರೆಗೂ ಹಿಂತಿರುಗಿಸಿಲ್ಲ ಎಂದು ಅಕ್ಷತಾ ನಾಯಕ್‌ ವೀಡಿಯೋದಲ್ಲಿ ಆರೋಪಿಸಿದ್ದಾರೆ.

ಸದ್ಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್ಮುಖ್‌ ಈ ಪ್ರಕರಣದ ಮರು ತನಿಖೆಗೆ CIDಗೆ ಒಪ್ಪಿಸಿದ್ದಾರೆ. ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್‌ ಖಾತೆಯಿಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Adnya Naik had complained to me that #AlibaugPolice had not investigated non-payment of dues from #ArnabGoswami's @republic which drove her entrepreneur father & grandmom to suicide in May 2018. I've ordered a CID re-investigation of the case.#MaharashtraGovernmentCares

— ANIL DESHMUKH (@AnilDeshmukhNCP) May 26, 2020


ADVERTISEMENT
Tags: Akshatha Naik VideoAnvay Naik SuicideArnab GoswamiCIDMaharashtra CongressRepublic TVಅನ್ವೆ ನಾಯಕ್‌ ಆತ್ಮಹತ್ಯೆಅರ್ನಬ್‌ ಗೋಸ್ವಾಮಿರಿಪಬ್ಲಿಕ್‌ ಟಿವಿ ಮುಖ್ಯಸ್ಥ
Previous Post

ಸಿಗರೇಟ್ ಮತ್ತು ಮಾಸ್ಕ್‌ನ ಮರೆಯಲ್ಲಿ ಬಯಲಿಗೆ ಬಂದ ಭ್ರಷ್ಟಾಚಾರ!

Next Post

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಸಮಗ್ರ ತನಿಖೆ ಅಗತ್ಯ – ಹೆಚ್‌ ಕೆ ಪಾಟೀಲ್

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಸಮಗ್ರ ತನಿಖೆ ಅಗತ್ಯ - ಹೆಚ್‌ ಕೆ ಪಾಟೀಲ್

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಸಮಗ್ರ ತನಿಖೆ ಅಗತ್ಯ - ಹೆಚ್‌ ಕೆ ಪಾಟೀಲ್

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada