• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಧ್ಯಪ್ರದೇಶ: ಕಾಂಗ್ರೆಸ್ ಪರ ಕಾರ್ಯತಂತ್ರ ರೂಪಿಸಲಿರುವ ಚುನಾವಣಾ ಚಾಣಕ್ಯ

by
May 23, 2020
in ದೇಶ
0
ಮಧ್ಯಪ್ರದೇಶ: ಕಾಂಗ್ರೆಸ್ ಪರ ಕಾರ್ಯತಂತ್ರ ರೂಪಿಸಲಿರುವ ಚುನಾವಣಾ ಚಾಣಕ್ಯ
Share on WhatsAppShare on FacebookShare on Telegram

ಭಾರತದ ರಾಜಕಾರಣದಲ್ಲಿ ಚುನಾವಣಾ ಚಾಣಕ್ಯನೆಂದೇ ಪ್ರಖ್ಯಾತರಾಗಿರುವ ಪ್ರಶಾಂತ್‌ ಕಿಶೋರ್‌ ಅವರು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಪರ ಚುನಾವಣಾ ಕಾರ್ಯತಂತ್ರ ರೂಪಿಸಲಿದ್ದಾರೆ. ಮುಂದಿನ ನಾಲ್ಕು ತಿಂಗಳ ಒಳಗೆ 24 ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಪ್ರಶಾಂತ್‌ ಕಿಶೋರ್‌ ಅವರು ಚಕ್ರವ್ಯೂಹ ಹೆಣೆಯಲಿದ್ದಾರೆ ಎಂಬ ಸುದ್ದಿ ಈಗ ಖಚಿತವಾಗಿದೆ.

ADVERTISEMENT

ಮಧ್ಯಪ್ರದೇಶದಲ್ಲಿ 15 ವರ್ಷಗಳ ವನವಾಸ ಅನುಭವಿಸಿದ ಕಾಂಗ್ರೆಸ್‌ ಕಮಲ್‌ನಾಥ್‌ ನೇತೃತ್ವದಲ್ಲಿ ಅಧಿಕಾರ ಪಡೆಯುವಲ್ಲಿ ಸಫಲವಾಯಿತು. ಆದರೆ, ಮಾರ್ಚ್‌ನಲ್ಲಿ ನಡೆದ ಮಹತ್ತರವಾದ ಬದಲಾವಣೆಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್‌ನ ಯುವ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ 22 ಶಾಸಕರೊಂದಿಗೆ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಸದ್ಯದ ಮಟ್ಟಿಗೆ ಅಧಿಕಾರ ಕಳೆದುಕೊಂಡು ಗಾಯಗೊಂಡ ಹುಲಿಯಂತಾಗಿರುವ ಕಾಂಗ್ರೆಸ್‌, ತಮ್ಮ ಈ ಅವಸ್ಥೆಗೆ ಕಾರಣವಾದ ಜ್ಯೋತಿರಾದಿತ್ಯ ಸಿಂಧಿಯಾ ಅವರ ತವರಾದ ಗ್ವಾಲಿಯರ್‌ನಲ್ಲೇ ವಾರ್‌ ರೂಮ್‌ ಒಂದನ್ನು ರೂಪಿಸಿದೆ. ಜಾಹಿರಾತು ಹಾಗೂ ಪ್ರಚಾರಕ್ಕಾಗಿ ಮೂರು ಸಂಸ್ಥೆಗಳೊಂದಿಗೆ ಈಗಾಗಲೇ ಕಾಂಗ್ರೆಸ್‌ ಒಪ್ಪಂದ ಮಾಡಿಕೊಂಡಿದೆ ಎಂದು ವರದಿಯಾಗಿದೆ.

24 ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ 16 ಸ್ಥಾನಗಳು ಗ್ವಾಲಿಯರ್‌ ಮತ್ತು ಚಂಬಲ್‌ ಪ್ರದೇಶಗಳಿಗೆ ಸೇರಿವೆ. ಈ ಪ್ರದೇಶಗಳಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪ್ರಭಾವ ಹೆಚ್ಚಾಗಿದ್ದು, ಇಲ್ಲಯೇ ಅತೀ ಹೆಚ್ಚು ಸ್ಥಾನಗಳನ್ನು ಪಡೆಯಬೇಕೆಂಬುದು ಕಾಂಗ್ರೆಸ್‌ ಬಯಕೆ.

ಇನ್ನು ಕರೋನಾ ಸಂಕಷ್ಟದಲ್ಲಿ ಬಾಧಿತರಾಗಿರುವ ಜನತೆಗೆ ಸರ್ಕಾರದ ವಿರುದ್ದವಿರುವ ಕೋಪವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡು ಮತ್ತೆ ಅಧಿಕಾರಕ್ಕೇರುವ ಕಾರ್ಯತಂತ್ರ ಕಾಂಗ್ರೆಸ್‌ ಪಕ್ಷದ್ದು.

ಇನ್ನುಳಿದಂತೆ, ಆಯಾ ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ ವಿಶ್ವಾಸಿಯಾಗಿರುವ ವ್ಯಕ್ತಿಗಳನ್ನೇ ಜಿಲ್ಲಾಧ್ಯಕ್ಷರನ್ನಾಗಿ ಮಾಡಿದ್ದು, ಸಿಂಧಿಯಾ ಹಾಗೂ ಬಿಜೆಪಿಯ ಬೆಂಬಲಿಗರನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಈ ಹಿಂದೆ ಮಾಡಿದ ತಪ್ಪು ಮರುಕಳಿಸದಂತೆ ಸಾಕಷ್ಟು ಎಚ್ಚರಿಕೆ ವಹಿಸುವ ಕೆಲಸ ಕಾಂಗ್ರೆಸ್‌ನಿಂದ ಆಗುತ್ತಿದೆ.

ಇವೆಲ್ಲದರ ಮೇಲೆ, ಚುನಾವಣಾ ಚಾಣಕ್ಯ ಪ್ರಶಾಂತ್‌ ಕಿಶೋರ್‌ ಮಧ್ಯಪ್ರದೇಶದಲ್ಲಿ ಯಾವ ರೀತಿ ಮೋಡಿ ಮಾಡುತ್ತಾರೆ? ಅವರ ಕಾರ್ಯತಂತ್ರದಿಂದ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕೃಪೆ: ನ್ಯೂಸ್‌ 18

Tags: bypollMadhya PradeshPrashant Kishorಉಪಚುನಾವಣೆಚುನಾವಣಾ ಚಾಣಕ್ಯಪ್ರಶಾಂತ್ ಕಿಶೋರ್ಮಧ್ಯಪ್ರದೇಶ
Previous Post

36 ಗಂಟೆಗಳ ಗೊಂದಲಮಯ ಲಾಕ್‌ಡೌನ್ ಆರಂಭ..!

Next Post

ವಲಸೆ ವರಸೆ-1: ಕರೋನಾ ಸೃಷ್ಟಿಸಿರುವ ದುರ್ದಿನಗಳಲ್ಲಾದರೂ ಎಚ್ಚೆತ್ತುಕೊಳ್ಳಬೇಕಿದೆ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ವಲಸೆ ವರಸೆ-1: ಕರೋನಾ ಸೃಷ್ಟಿಸಿರುವ ದುರ್ದಿನಗಳಲ್ಲಾದರೂ ಎಚ್ಚೆತ್ತುಕೊಳ್ಳಬೇಕಿದೆ

ವಲಸೆ ವರಸೆ-1: ಕರೋನಾ ಸೃಷ್ಟಿಸಿರುವ ದುರ್ದಿನಗಳಲ್ಲಾದರೂ ಎಚ್ಚೆತ್ತುಕೊಳ್ಳಬೇಕಿದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada