• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹಾ ಮಳೆಗೆ ಉತ್ತರ ಕರ್ನಾಟಕ ತತ್ತರ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

by
October 14, 2020
in ಕರ್ನಾಟಕ
0
ಮಹಾ ಮಳೆಗೆ ಉತ್ತರ ಕರ್ನಾಟಕ ತತ್ತರ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
Share on WhatsAppShare on FacebookShare on Telegram

ಕಳೆದ ನಾಲ್ಕೈದು ದಿನಗಳಿಂದ ಮಹಾ ಮಳೆಗೆ ಉತ್ತರ ಕರ್ನಾಟಕದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೊನ್ನೆ ತಾನೇ ಪ್ರವಾಹ ಬೀತಿಯುಂಟಾಗಿತ್ತು ಒಂದಷ್ಟು ಬೆಳೆ ಹಾಳನ್ನೂ ಮಾಡಿತ್ತು. ಇನ್ನೂ ಜಲಾಘಾತದ ಹೊಡೆತದಿಂದ ನಲುಗಿದ ಉತ್ತರ ಕರ್ನಾಟಕದ ಗ್ರಾಮಸ್ಥರು ಮನೆ ರಿಪೇರಿ ಮಾಡಿಕೊಂಡು ತಮಗೆ ಸರ್ಕಾರದಿಂದ ಬರಬೇಕಾದ ಹಣವನ್ನು ಕಾಯುತ್ತ ಕುಳಿತಿದ್ದರು. ಈಗ ಮತ್ತೊಮ್ಮೆ ಅಲ್ಲಲ್ಲ ಮಗದೊಮ್ಮೆ ಜಲಾಘಾತ.

ADVERTISEMENT

ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಮುಂದಿನ 48 ಗಂಟೆ ಹಾಗೂ ಬೀದರ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ 24 ಗಂಟೆ ಭಾರಿ ಮಳೆಯಾಗಲಿರುವ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಅಕ್ಟೋಬರ್ 15ರಂದು ವ್ಯಾಪಕ ಮಳೆಯಾಗಲಿದೆ. ಈ ಅವಧಿಯಲ್ಲಿ 204.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ.

ಮಲಪ್ರಭಾ, ಘಟಪ್ರಭಾ, ಕೃಷ್ಣಾ, ದೂಧಗಂಗಾ, ವೇದಗಂಗಾ, ಹಿರಣ್ಯಕೇಶಿ, ವರದಾ, ಕಾಳಿ ಅಘನಾಶಿನಿ, ಶರಾವತಿ, ಹೇಮಾವತಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಭಾಗಶಃ ನೀರಿನಲ್ಲಿವೆ. ಜನರೆಲ್ಲ ಮಹಾ ಮಳೆಗೆ ತತ್ತರಿಸಿ ಹೋಗಿವೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಂಗಾಲ ಕೊಲ್ಲಿಯಲ್ಲಾಗಿರುವ ವಾಯುಭಾರ ಕುಸಿತದ ಪರಿಣಾಮ ಮೂರು ದಿನಗಳಿಂದ ಅಬ್ಬರಿಸುತ್ತಿರುವ ಮಳೆಗೆ ಇಡೀ ಉತ್ತರ ಕರ್ನಾಟಕ ತತ್ತರಿಸಿದೆ. ಬಿಟ್ಟೂ ಬಿಡದೆ ಸುರಿದ ಮಳೆಯಿಂದಾಗಿ ಸಾವಿರಾರು ಎಕರೆ ಬೆಳೆ ನೀರಿನಲ್ಲಿ ಕೊಚ್ಚಿಹೋಗಿದ್ದರೆ, ಸಾವಿರಕ್ಕೂ ಅಧಿಕ ಮನೆಗಳು ಹಾನಿಗೀಡಾಗಿ ಕುಸಿಯುವ ಆತಂಕದಲ್ಲಿವೆ. ಈ ಆಘಾತ ಸಾಲದೆಂಬಂತೆ ಬಾಗಲಕೋಟೆ, ರಾಯಚೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಇನ್ನೂ 3 ದಿನ ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಸಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.

ಸತತ ಮಳೆಯಿಂದ ಊರು ಹಳ್ಳಿಗಳಲ್ಲೆಲ್ಲ ಕೊಳ್ಳಗಳುಂಟಾಗಿ ಯಾವುದು ಭೂಮಿ ಯಾವುದು ಹಳ್ಳ ಎಂಬುದೇ ತಿಳಿಯದಾಗಿದೆ. ರಾಯಚೂರು, ನಾರಾಯಣಪೂರ್ ಡ್ಯಾಂನಿಂದ ಕೃಷ್ಣಾ ನದಿಗೆ 91 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ದೇವದುರ್ಗ ತಾಲೂಕ ಹೂವಿನಹೆಡಗಿಯ ಶ್ರೀ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಮುಳುಗಡೆಯಾಗಿದೆ. ಹಲವೆಡೆ ಜಲಾವೃತಗೊಂಡು ಜನ ಸಂಚಾರ ಕಷ್ಟವಾಗಿದೆ. ಜಲಾಶಯಗಳು ತುಂಬಿ ಹರಿಯುತ್ತಿರುವುದರಿಂದ ಪ್ರವಾಹಭೀತಿ ಶುರುವಾಗಿದೆ. ಕರಾವಳಿ ತೀರದಲ್ಲಿ ಗಂಟೆಗೆ 40-45 ಕಿ.ಮೀ. ಗಾಳಿಬೀಸುತ್ತಿರುವ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ. ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

Also Read: ನೆರೆಯ ನೀರು: ಉತ್ತರ ಕರ್ನಾಟಕ ತತ್ತರ

ವಿಜಯಪುರ ಜಿಲ್ಲೆಯಲ್ಲೇ ಮಳೆಯಿಂದಾಗಿ 128 ಮನೆಗಳಿಗೆ ಹಾನಿಯಾಗಿದೆ. ಯಾದಗಿರಿಯಲ್ಲಿ 87 ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಕೊಪ್ಪಳದಲ್ಲಿ 800 ಮನೆಗಳಿಗೆ ಹಾನಿಯಾಗಿದೆ. ಸಾವಿರಾರು ಹೆಕ್ಟರ್ ಬೆಳೆ ನಾಶವಾಗಿದೆ. ದಾವಣಗೆರೆಯಲ್ಲಿ 200 ಎಕರೆ ಮೆಕ್ಕೆಜೋಳ 50 ಎಕರೆ ಭತ್ತ ನೀರುಪಾಲಾಗಿದ್ದು, ಬಳ್ಳಾರಿಯಲ್ಲಿ 40ಹೆಕ್ಟೇರ್ ಬೆಳೆ ಕೊಚ್ಚಿಹೋಗಿದೆ. ಯಾದಗಿರಿ ಗುರುಸಣಗಿ ಬ್ಯಾರೇಜನಿಂದ ಭೀಮಾ ನದಿಗೆ 40 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದ ನದಿ ಪಾತ್ರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಬಾಗಲಕೋಟೆಯಲ್ಲಿ 769 ಮನೆಗಳಿಗೆ ಹಾನಿಯಾಗಿದ್ದು, ಗೋಡೆಗಳು ಉರುಳಿ ಬೀಳುತ್ತಿವೆ. ಘಟಪ್ರಭಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಮತ್ತೆ ಮುಧೋಳ ತಾಲುಕಿನ ಮಾಚಕನೂರು ಗ್ರಾಮದ ಪ್ರಸಿದ್ದ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.

ಯಾದಗಿರಿಯ ಸುರಪುರ, ಶಹಾಪುರ, ವಡಗೇರಾ ಹಾಗೂ ಹುಣಸಗಿ ತಾಲೂಕಿನಲ್ಲಿ ಮನೆಗಳ ಗೋಡೆ ಬಿರುಕು ಬಿಟ್ಟ ಬಗ್ಗೆ ಜಿಲ್ಲಾಡಳಿತ ತಿಳಿಸಿದೆ. ಇನ್ನು ಕ್ರಮೇಣ ಒಳಹರಿವು ಹೆಚ್ಚುತ್ತಿರುವುದರಿಂದ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಪಾತ್ರಕ್ಕೆ ಹೆಚ್ಚಿನ ನೀರು ಹರಿಸಲಾಗುತ್ತಿದೆ. ನದಿ ಪಾತ್ರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ರಾಯಚೂರು ಜಿಲ್ಲೆಯಲ್ಲಿ 4.67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹತ್ತಿ ಮತ್ತು ತೊಗರಿ, ಸಜ್ಜೆ, ಸೂರ್ಯಕಾಂತಿ ಬೆಳೆ ಹೆಚ್ಚು ಬಿತ್ತಲಾಗಿದೆ. ಹತ್ತಿಯ ಕಾಯಿ ಕೊಳೆತು ಉದುರುತ್ತಿದೆ.

ಕೊಪ್ಪಳದಲ್ಲಿ 60 ಹೆಕ್ಟೇರ್ ಬೆಳೆಹಾನಿಯಾಗಿದೆ. ಭತ್ತ ಮೆಕ್ಕೆಜೋಳ ಹತ್ತಿ ಬೆಳೆಗಳು ಹಾನಿಗೀಡಾಗಿವೆ. ಕಳೆದ ಮೂರ್ನಾಲ್ಕು ದಿನದಲ್ಲಿ ಮಳೆಯಿಂದ 1100 ಹೆ. ಬೆಳೆ ಹಾನಿಯಾಗಿದೆ. 800 ಕ್ಕೂ ಅಧಿಕ ಮನೆಗಳು ಹಾನಿಯಾಗಿವೆ.

ಗದಗ ಜಿಲ್ಲೆಯ ರೋಣ ಹಾಗೂ ನರಗುಂದದಲ್ಲಿ ಹೆಚ್ಚಿನ ಮಳೆಯಾಗಿದ್ದು ಕಳೆದ ಮೂರ್ನಾಲ್ಕು ತಿಂಗಳಿಂದ ಸುರಿದ ಮಳೆ, ಘಟಪ್ರಭಾ ಮತ್ತು ಬೆಣ್ಣೆಹಳ್ಳ ಪ್ರವಾಹದಿಂದ ಶೇಂಗಾ 16 ಸಾವಿರ ಹೆಕ್ಟೇರ್, ಈರುಳ್ಳಿ 7 ಸಾವಿರ ಹೆಕ್ಟೇರ್, ಹತ್ತಿ 9900 ಹೆಕ್ಟೇರ್ ಮತ್ತು ಮೆಕ್ಕೆಜೋಳ 19 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ.

Also Read: ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

ಪ್ರತಿ ಬಾರಿ ಪ್ರವಾಹ ಸಾವಿರಾರು ಜನರ ಜೀವನವನ್ನೇ ಅಸ್ತವ್ಯಸ್ತ ಮಾಡುತ್ತಿದೆ. ಇದಕ್ಕೆ ಪರಿಹಾರವಿಲ್ಲವೇ? ಆಣೆಕಟ್ಟು ಗಳನ್ನು ಎತ್ತರ ಮಾಡಬಹುದು. ಜನರಿಗೆ ಬೇರೆ ಕಡೆಗೆ ಸೂರು ಕಲ್ಪಿಸಬಹುದು. ಅನೇಕ ದಾರಿಗಳುಂಟು. ಸರ್ಕಾರ ಈ ಬಗ್ಗೆ ಚಿಂತನೆ ಮಾಡಬೇಕಿದೆ. ಕಳೆದ ಬಾರಿಯ ನೆರೆ ಪರಿಹಾರವನ್ನೇ ಸಾಕಷ್ಟು ಪ್ರಮಾಣದಲ್ಲಿ ತರಲು ಸಾಧ್ಯವಾಗದ, ಜಿಎಸ್‌ಟಿ ಪಾಲನ್ನೂ ಪಡೆದುಕೊಳ್ಳಲು ಸಾಧ್ಯವಾಗದ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರ ಲಾಲಸೆಯನ್ನು ಬದಿಗಿಟ್ಟು ರಾಜ್ಯದ ಜನರ ಸಂಕಷ್ಟ ನಿವಾರಿಸಲು ಈ ಬಾರಿಯಾದರೂ ಯೋಗ್ಯ ಹೆಜ್ಜೆಗಳನ್ನಿಡುತ್ತದೆಯೇ ಎಂಬುದು ಕಾದುನೋಡಬೇಕು.

Tags: ಉತ್ತರ ಕರ್ನಾಟಕನೆರೆ ಪರಿಸ್ಥಿತಿನೆರೆ ಹಾವಳಿವಾಯುಭಾರ ಕುಸಿತ
Previous Post

ದೇಶದ ಕರೋನಾ ಪ್ರಕರಣ ಇಳಿಕೆ ನಿಜವಾಗಿಯೂ ಸಂಭ್ರಮದ ವಿಷಯವೆ?

Next Post

ವಿದೇಶಿ ನೇರ ಬಂಡವಾಳ ಹೂಡಿಕೆ: ಲಾಕ್‌ಡೌನ್‌ನಲ್ಲಿ ಅತೀ ಹೆಚ್ಚು ಬಂಡವಾಳ ಆಕರ್ಷಿಸಿದ ಕರ್ನಾಟಕ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ವಿದೇಶಿ ನೇರ ಬಂಡವಾಳ ಹೂಡಿಕೆ: ಲಾಕ್‌ಡೌನ್‌ನಲ್ಲಿ ಅತೀ ಹೆಚ್ಚು ಬಂಡವಾಳ ಆಕರ್ಷಿಸಿದ ಕರ್ನಾಟಕ

ವಿದೇಶಿ ನೇರ ಬಂಡವಾಳ ಹೂಡಿಕೆ: ಲಾಕ್‌ಡೌನ್‌ನಲ್ಲಿ ಅತೀ ಹೆಚ್ಚು ಬಂಡವಾಳ ಆಕರ್ಷಿಸಿದ ಕರ್ನಾಟಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada