ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ, ಆತ್ಮ ನಿರ್ಭರ್ ಭಾರತ ಅಭೊಯಾನ ಹಾಗೂ ವಿಶೇಷ ಯೋಜನೆಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಹೊಸ ಸರ್ಕಾರಿ ಯೋಜನೆಗಳು ಮುಂದಿನ ಒಂದು ವರ್ಷದ ಕಾಲ ಇರುವುದಿಲ್ಲವೆಂದು ಕೇಂದ್ರ ಹಣಕಾಸು ಸಚಿವಾಲಯ ಶುಕ್ರವಾರ ಹೇಳಿದೆ.
ಕರೋನಾ ಸಾಂಕ್ರಾಮಿಕ ಬಿಕ್ಕಟ್ಟಿನ ಸಂಧರ್ಭದಲ್ಲಿ ಆದ ನಷ್ಟವನ್ನು ಸರಿದೂಗಿಸುವ ಉದ್ದೇಶದಿಂದ ಸರ್ಕಾರದ ಹಣದ ಖರ್ಚನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹೊರಟಿದೆ. ವಿಶೇಷ ಯೋಜನೆಗಳಿಗೆ ಮಾತ್ರ ಹಣ ವಿನಿಯೋಗಿಸಲು ತೀರ್ಮಾನಿಸಿರುವ ಸರ್ಕಾರ ತನ್ನ ಎಲ್ಲಾ ಸಚಿವಾಲಯಗಳಿಗೆ ಹೊಸ ಯೋಜನೆಗಳಿಗೆ ವಿನಂತಿ ಕಳುಹಿಸುವುದನ್ನು ನಿಲ್ಲಿಸಬೇಕೆಂದು ಸೂಚಿಸಿದೆ.
ಈಗಾಗಲೇ ಅನುಮೋದಿಸಲ್ಪಟ್ಟಿರುವ ಯೋಜನೆಗಳನ್ನು ಮುಂದಿನ ವರ್ಷದ ಮಾರ್ಚ್ 31ರವರೆಗೆ ಅಥವಾ ಮುಂದಿನ ಆದೇಶ ಬರುವವರೆಗೆ ಅಮಾನತು ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ಹೇಳಿದೆ.
No New Scheme/Sub Scheme, whether under delegate power to ministry including SFC proposals or through EFC should be initiated in 2020-21 except proposal announced under PM Gareeb Kalyan Package, Aatma Nirbhar Bharat Abhiyan Package & any other special packages: Finance Ministry pic.twitter.com/bxf2pGkWqG
— ANI (@ANI) June 5, 2020