• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮುಖ್ಯಮಂತ್ರಿ ಯಡಿಯೂರಪ್ಪ ಈ ವರ್ಷ 90,000 ಕೋಟಿ ಸಾಲ ಮಾಡಬಹುದು!

by
May 18, 2020
in ಕರ್ನಾಟಕ
0
ಮುಖ್ಯಮಂತ್ರಿ ಯಡಿಯೂರಪ್ಪ ಈ ವರ್ಷ  90
Share on WhatsAppShare on FacebookShare on Telegram

ಕರೋನಾ ಸೋಂಕು ತಡೆಯಲು ದೇಶವ್ಯಾಪಿ ಲಾಕ್ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವಷ್ಟೇ ಅಲ್ಲದೇ ರಾಜ್ಯ ಸರ್ಕಾರಗಳೂ ಹಣಕಾಸು ಸಂಪನ್ಮೂಲಗಳ ಕೊರತೆ ಎದುರಿಸುತ್ತಿವೆ. ಪ್ರಸಕ್ತ ವಿತ್ತೀಯ ವರ್ಷದ ಅಂದರೆ 2020-21ನೇ ಸಾಲಿನ ಮೊದಲ ತಿಂಗಳಲ್ಲಿ ತೆರಿಗೆ ಸಂಗ್ರಹ ಬಹುತೇಕ ಶೂನ್ಯಮಟ್ಟಕ್ಕೆ ಇಳಿದಿದೆ. ಕೇಂದ್ರ ಸರ್ಕಾರವು ಈ ಮೊದಲೇ ತನ್ನ ಸಾಲ ಎತ್ತುವ ಪ್ರಮಾಣವನ್ನು 12 ಲಕ್ಷ ಕೋಟಿ ರುಪಾಯಿಗೆ ಏರಿಸಿದೆ.

ADVERTISEMENT

ರಾಜ್ಯಸರ್ಕಾರಗಳು ಸಹ ಸಾಲ ಪಡೆಯುವ ಮಿತಿಯನ್ನು ಏರಿಸುವಂತೆ ಕೇಂದ್ರದ ಮೇಲೆ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಈ ಹಿಂದಿನಿಂದಲೂ ಒತ್ತಡ ಹೇರುತ್ತಲೇ ಬಂದಿದ್ದರು. ಕೇಂದ್ರ ಸರ್ಕಾರ ಕೊನೆಗೂ ರಾಜ್ಯಗಳ ಸಾಲ ಪಡೆಯುವ ಮಿತಿಯನ್ನು ಹೆಚ್ಚಳ ಮಾಡಲು ಒಪ್ಪಿದೆ. ಪ್ರಸಕ್ತ ರಾಜ್ಯಗಳು ಆಯಾ ವಿತ್ತೀಯ ವರ್ಷದ ಎಸ್ಜಿಡಿಪಿಯ ಶೇ.3ರಷ್ಟು ಮೊತ್ತವನ್ನು ಸಾಲವಾಗಿ ಪಡೆಯಲು ಅವಕಾಶ ಇದೆ. ಈ ಮಿತಿಯನ್ನು ಕೇಂದ್ರ ಸರ್ಕಾರವು ಶೇ.5ಕ್ಕೆ ಹೆಚ್ಚಿಸಿದೆ.

Also Read: ನರೇಂದ್ರ ಮೋದಿ ಸರ್ಕಾರ ಈ ವರ್ಷ ಮಾಡೋ ಸಾಲ 12 ಲಕ್ಷ ಕೋಟಿ ದಾಟಲಿದೆ!

ವಿತ್ತೀಯ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆ (FRBM) ಕಾಯ್ದೆ ಪ್ರಕಾರ, ಕಾಲಕಾಲಕ್ಕೆ ಕೇಂದ್ರವು(RBI ಸಮಾಲೋಚನೆಯೊಂದಿಗೆ) ನಿಗದಿ ಮಾಡುವ ಪ್ರಮಾಣದ ಸಾಲ ಮತ್ತು ವಿತ್ತೀಯ ಕೊರತೆ ಮಿತಿಯನ್ನು ಎಲ್ಲಾ ರಾಜ್ಯಗಳೂ ಕಾಯ್ದುಕೊಳ್ಳಬೇಕು.

ಕೇಂದ್ರ ಸರ್ಕಾರವಾಗಲೀ, ರಾಜ್ಯ ಸರ್ಕಾರವಾಗಲೀ ವಿತ್ತೀಯ ಕೊರತೆ ಮಿತಿ ಮತ್ತು ಸಾಲದ ಮಿತಿಯನ್ನು ಮೀರಿದರೆ ಆಂತರಿಕ ಸಮಸ್ಯೆ ಎಂದರೆ ಹಣದುಬ್ಬರ ಹೆಚ್ಚಳವಾಗುತ್ತದೆ, ಬಾಹ್ಯ ಸಮಸ್ಯೆ ಎಂದರೆ, ವಿತ್ತೀಯ ಕೊರತೆ ಮಿತಿಯನ್ನು ಕಾಯ್ದುಕೊಳ್ಳದೇ ಇದ್ದಲ್ಲಿ ಅಂತಾರಾಷ್ಟ್ರೀಯ ರೇಟಿಂಗ್ ಏಜೆನ್ಸಿಗಳು ರೆಟಿಂಗ್ಸ್ ತಗ್ಗಿಸುತ್ತವೆ, ಇದರಿಂದ ವಿದೇಶಿ ನೇರಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

Also Read: ₹20 ಲಕ್ಷ ಕೋಟಿ ಪ್ಯಾಕೇಜ್: ಎಷ್ಟು ಸುಳ್ಳು? ಎಷ್ಟು ಸತ್ಯ?

ಈಗ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಸಾಲದ ಮಿತಿಯನ್ನು ಎಸ್ಜಿಡಿಪಿಯ ಶೇ.5ರಷ್ಟಕ್ಕೆ ಹೆಚ್ಚಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ಇದರಿಂದ ರಾಜ್ಯಗಳಿಗೆ ಖಂಡಿತಾ ಅನುಕೂಲವಾಗಲಿದೆ. ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಎಲ್ಲಾ ರಾಜ್ಯಗಳಿಗೆ ಇದು ವರದಾನವೇ ಹೌದು. ಪ್ರಸಕ್ತ ವಿತ್ತೀಯ ವರ್ಷದಲ್ಲಾಗುವ ತೆರಿಗೆ ಸಂಪನ್ಮೂಲದ ಕೊರತೆಯನ್ನು ಸಾಲದ ಮೂಲಕ ಸರಿದೂಗಿಸಿಕೊಳ್ಳುತ್ತವೆ. ಅಲ್ಲದೇ ಬೊಕ್ಕಸ ಪೂರ್ಣ ಬರಿದಾದಾಗ ಗರಿಷ್ಠ ಪ್ರಮಾಣದಲ್ಲಿ ಆಪತ್ಕಾಲೀನ ಸಾಲ (ವೇಸ್ ಅಂಡ್ ಮೀನ್ಸ್ ಲೋನ್) ಪಡೆಯಲು ಅವಕಾಶವಾಗುತ್ತದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಷ್ಟು ಕೋಟಿ ಹೆಚ್ಚುವರಿಯಾಗಿ ಸಾಲ ಮಾಡಬಹುದು?

ಒಂದು ಸಮಾಧಾನದ ಸಂಗತಿ ಎಂದರೆ, ಕರ್ನಾಟಕ ರಾಜ್ಯವು ಎಂದೂ ವಿತ್ತೀಯ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆ (FRBM) ಕಾಯ್ದೆ ವಿಧಿಸಿದ ಮಿತಿಯನ್ನು ಮೀರಿಲ್ಲ. ಅದು ವಿತ್ತೀಯ ಕೊರತೆಯಾಗಲೀ, ಸಾಲ ಪಡೆಯುವುದಾಗಲೀ, ನಿಯಮಗಳನ್ನು ಪಾಲಿಸುತ್ತಲೇ ಬಂದಿದೆ. ಆ ನಿಟ್ಟಿನಲ್ಲಿ ಅತಿಹೆಚ್ಚು ಬಾರಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯ ಅವರಿಗೂ, ಮುಖ್ಯಮಂತ್ರಿ ಆಗಿದ್ದಾಗಲೆಲ್ಲ ಹಣಕಾಸು ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಹಾಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ವಿತ್ತೀಯ ಶಿಸ್ತು ಕಾಯ್ದುಕೊಂಡಿರುವುದಕ್ಕೆ ಅಭಿನಂದಿಸಲೇ ಬೇಕು.

Also Read: ಹಣ ಮೂಲ ತಿಳಿಸದ, ವ್ಯಯದ ಗುರಿ ವಿವರಿಸದ ಅಸ್ಪಷ್ಟ 20 ಲಕ್ಷ ಕೋಟಿ ರೂ. ಪ್ಯಾಕೇಜ್

2020-21ನೇ ಸಾಲಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್ ನಲ್ಲಿ 53,917.50 ಕೋಟಿ ರುಪಾಯಿ ಸಾಲ ಪಡೆಯುವ ಪ್ರಸ್ತಾಪ ಮಾಡಿದ್ದಾರೆ. 46,071.66 ಕೋಟಿ ವಿತ್ತೀಯ ಕೊರತೆಯನ್ನು ಪ್ರಸ್ತಾಪಿಸಿದ್ದಾರೆ. ರಾಜ್ಯ ಸರ್ಕಾರ ಪ್ರಕಟಿಸಿರುವ ಮಧ್ಯಮಾವಧಿ ವಿತ್ತೀಯ ಯೋಜನಾ (2020-2024) ವರದಿಯಲ್ಲಿ ರಾಜ್ಯದ ಜಿಡಿಪಿ (SGDP) ಮೌಲ್ಯವು 2020-21ನೇ ಸಾಲಿನಲ್ಲಿ 18,05,742 ಕೋಟಿ ರುಪಾಯಿಗಳು ಎಂದು ಮುನ್ನಂದಾಜು ಮಾಡಿದೆ. ಈ ಪ್ರಕಾರ, ರಾಜ್ಯ ಸರ್ಕಾರವು ಪ್ರಸಕ್ತ ವಿತ್ತೀಯ ವರ್ಷದಲ್ಲಿ ಎಸ್ಜಿಡಿಪಿ 18,05,742 ಕೋಟಿ ರುಪಾಯಿಗಳ ಶೇ.5ರಷ್ಟು ಅಂದರೆ, 90,287 ಕೋಟಿ ರುಪಾಯಿಗಳಷ್ಟು ಸಾಲ ಪಡೆಯಬಹುದಾಗಿದೆ. ಅಂದರೆ, ಈಗಾಗಲೇ ಬಜೆಟ್ ನಲ್ಲಿ ಪ್ರಸ್ತಾಪಿಸಿದ ಪ್ರಮಾಣ 53,917.50 ಕೋಟಿ ರುಪಾಯಿಗಳ ಜತೆಗೆ ಯಡಿಯೂರಪ್ಪ ನವರು ಇನ್ನೂ ಹೆಚ್ಚುವರಿಯಾಗಿ 36,370 ಕೋಟಿ ರುಪಾಯಿಗಳನ್ನು ಸಾಲ ಪಡೆಯಬಹುದಾಗಿದೆ.

ಅಂದರೆ, ಒಂದು ವೇಳೆ ಪ್ರಸಕ್ತ ವಿತ್ತೀಯ ವರ್ಷದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಮತ್ತು ತೆರಿಗೆಯೇತರ ಮೂಲದ ಆದಾಯ ಬಾರದೇ ಇದ್ದರೂ ಯಾವುದೇ ಅಭಿವೃದ್ಧಿ ಮತ್ತು ಬಂಡವಾಳ ವೆಚ್ಚಗಳನ್ನು ತಗ್ಗಿಸದೇ ಅಭಿವೃದ್ಧಿಯನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ.

Also Read: 20 ಲಕ್ಷ ಕೋಟಿ ಪ್ಯಾಕೇಜ್: ಅಂಕಿ-ಸಂಖ್ಯೆ ಗಿಮಿಕ್ ಮಾಡಿ ಜನರ ಹಾದಿ ತಪ್ಪಿಸುತ್ತಿರುವ ಪ್ರಧಾನಿ ಮೋದಿ!

ಹಾಗಾದರೆ ಪ್ರತಿ ವರ್ಷ ಹೀಗೆ ಸಾಲ ಮಾಡುತ್ತಾ ಹೋದರೆ ಸಾಲದ ಪ್ರಮಾಣ ಹೆಚ್ಚುವುದಿಲ್ಲವೇ? ಹೌದು. ಹೆಚ್ಚುತ್ತದೆ. ಆದರೆ, ವಿತ್ತೀಯ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆ (FRBM) ಕಾಯ್ದೆ ಪ್ರಕಾರ ಯಾವುದೇ ರಾಜ್ಯಗಳು ತಮ್ಮ ಎಸ್ಜಿಡಿಪಿಯ ಶೇ.25ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮಾಡುವಂತಿಲ್ಲ. ಸಾಲದ ಮಿತಿಯನ್ನು ಮೀರಿದರೆ, ಈ ಸಾಲಗಳಿಗೆ ಗ್ಯಾರಂಟಿ ನೀಡಬೇಕಾದ, ಕೇಂದ್ರ ಸರ್ಕಾರ ಮತ್ತು ಸಾಲವನ್ನು ಪಡೆಯಲು ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುವ ಭಾರತೀಯ ರಿಸರ್ವ್ ಬ್ಯಾಂಕ್ ಹೆಚ್ಚಿನ ಸಾಲ ಪಡೆಯದಂತೆ ಕಡಿವಾಣ ಹಾಕುತ್ತವೆ.

ರಾಜ್ಯ ಸರ್ಕಾರಗಳು ಪ್ರತಿ ಬಜೆಟ್ ನಲ್ಲಿಯೂ ಈ ಹಿಂದೆ ಮಾಡಿರುವ ಸಾಲದ ಮರುಪಾವತಿ ಮತ್ತು ಸಾಲದ ಮೇಲಿನ ಬಡ್ಡಿ ಪಾವತಿಗೆ ಅನುದಾನವನ್ನು ಕಡ್ಡಾಯವಾಗಿ ಮೀಸಲಿಡುತ್ತವೆ. ಪ್ರಸಕ್ತ ವಿತ್ತೀಯ ವರ್ಷದಲ್ಲಿ ಸಾಲ ಮರುಪಾವತಿ ಮತ್ತು ಸಾಲದ ಮೇಲಿನ ಬಡ್ಡಿ ಪಾವತಿಗಾಗಿಯೇ ಮುಖ್ಯಮಂತ್ರಿಯಡಿಯೂರಪ್ಪ ಅವರು ಬಜೆಟ್ ನಲ್ಲಿ 11,605.28 ಕೋಟಿ ರುಪಾಯಿಗಳನ್ನು ಮೀಸಲಿಟ್ಟಿದ್ದಾರೆ. ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಪ್ರಕಾರ ರಾಜ್ಯ ಸರ್ಕಾರವು ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ವಿತ್ತೀಯ ನಿರ್ವಹಣೆ ಮತ್ತು ಪರಿಶೀಲನಾ ಸಮಿತಿಯನ್ನು ರಚಿಸಿದ್ದು, ಈ ಸಮಿತಿಯು ರಾಜ್ಯ ಸರ್ಕಾರದ ಸಾಲ ಪ್ರಮಾಣವು ವಿತ್ತೀಯ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆ (FRBM) ಕಾಯ್ದೆ ವಿಧಿಸಿರುವ ಮಿತಿಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನಿಗಾ ವಹಿಸುತ್ತದೆ.

ರಾಜ್ಯ ಸರ್ಕಾರವು SGDPಯ ಶೇ.25ರಷ್ಟು ಪ್ರಮಾಣದಲ್ಲಿ ಸಾಲ ಮಾಡುವ ಅವಕಾಶ ಇದ್ದರೂ, ರಾಜ್ಯದಲ್ಲಿ ಹಣಕಾಸು ಖಾತೆ ನಿರ್ವಹಿಸಿದವರ ವಿತ್ತೀಯ ಶಿಸ್ತಿನಿಂದಾಗಿ ಶೇ.20ರಷ್ಟರ ಗಡಿಯನ್ನು ದಾಟಿದ ಉದಾಹರಣೆಗಳು ಅತಿ ವಿರಳ. 2016-17ರಲ್ಲಿ ಶೇ.19.81 ರಷ್ಟು, 2017-18ರಲ್ಲಿ ಶೇ.18.75, 2018-19ರಲ್ಲಿ ಶೇ.20.26 ಮತ್ತು 2019-20ರಲ್ಲಿ ಶೇ.19.19ರಷ್ಟಿತ್ತು. ವಿತ್ತೀಯ ಶಿಸ್ತಿನ ಲೆಕ್ಕದಲ್ಲಿ ಕರ್ನಾಟಕ ಯಾವಾಗಲೂ ಅಗ್ರಪಂಕ್ತಿಯಲ್ಲಿದೆ.

Tags: CM BSYFRBMKarnatakaಕರ್ನಾಟಕಮುಖ್ಯಮಂತ್ರಿ ಯಡಿಯೂರಪ್ಪವಿತ್ತೀಯ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆ
Previous Post

ಲಾಕ್‌ಡೌನ್ 4.0: ಕೇಂದ್ರ ಸರ್ಕಾರ ನೀಡಿರುವ ಸಡಿಲಿಕೆಗಳೇನು?

Next Post

ಒಂದೇ ಕಟ್ಟಡದ 28 ಜನರಿಗೆ ಕೋವಿಡ್-19!

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಒಂದೇ ಕಟ್ಟಡದ 28 ಜನರಿಗೆ ಕೋವಿಡ್-19!

ಒಂದೇ ಕಟ್ಟಡದ 28 ಜನರಿಗೆ ಕೋವಿಡ್-19!

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada