• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೇ 16ರಿಂದ ಆರಂಭವಾಗಲಿದೆ ಎರಡನೇ ಹಂತದ ʼವಂದೇ ಭಾರತ್‌‌ʼ ಮಿಷನ್

by
May 13, 2020
in ದೇಶ
0
ಮೇ 16ರಿಂದ ಆರಂಭವಾಗಲಿದೆ ಎರಡನೇ ಹಂತದ ʼವಂದೇ ಭಾರತ್‌‌ʼ ಮಿಷನ್
Share on WhatsAppShare on FacebookShare on Telegram

ಕರೋನಾ ಸಂಕಷ್ಟದಿಂದ ಹೊರ ಬರಲು ಇಡೀ ವಿಶ್ವವೇ ಲಾಕ್ಡೌನ್ ಮೊರೆ ಹೋಗಿದೆ. ವಿದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ರೀತಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಕರೆತರಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಮೊದಲ ಹಂತದ ಯೋಜನೆ ಜಾರಿಯಲ್ಲಿದ್ದು, ಮೇ 16ರಿಂದ 22ರವರೆಗೆ 2ನೇ ಹಂತದ ʼವಂದೇ ಭಾರತ್ʼ ಮಿಷನ್ ಜಾರಿ ಮಾಡಲಾಗುತ್ತಿದೆ. 31 ದೇಶಗಳಿಂದ 149 ವಿಶೇಷ ವಿಮಾನಗಳ ಮೂಲಕ ಭಾರತೀಯರನ್ನು ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗಿದೆ. 14 ದೇಶಗಳಿಂದ ಕರ್ನಾಟಕಕ್ಕೆ 17 ವಿಮಾನಗಳು ಸಂಚರಿಸಲಿವೆ. ಅಮೆರಿಕ ಒಂದರಿಂದಲೇ ಬೆಂಗಳೂರಿಗೆ 3 ವಿಮಾನಗಳು ಆಗಮಿಸಿಲಿವೆ. ದೇಶದ 15 ನಗರಗಳಿಗೆ ವಿಶ್ವದ ವಿವಿಧ ಭಾಗಗಳಿಂದ ವಿಮಾನ ಆಗಮಿಸಲಿವೆ. ಕೆನಡಾದಿಂದ ಕರ್ನಾಟಕಕ್ಕೆ 2 ವಿಮಾನಗಳು ಆಗಮಿಸಲಿವೆ. ಇನ್ನೂ ಯುಎಇ, ಸೌದಿ ಅರೆಬಿಯಾ, ಮಲೇಷಿಯಾ, ಒಮನ್, ಫಿಲಿಪೈನ್ಸ್, ಫ್ರಾನ್ಸ್, ಜರ್ಮನಿ, ಕತಾರ್, ಇಂಡೋನೇಷ್ಯಾ, ಐರ್ಲೆಂಡ್, ಆಸ್ಟ್ರೇಲಿಯಾ, ಜಪಾನ್ ಗಳಿಂದ ಒಂದೊಂದು ವಿಮಾನ ಆಗಮಿಸಲಿದೆ.

ADVERTISEMENT

ಮಂಗಳವಾರ (12ಶ್ರ-05-2020) ದುಬೈನಿಂದ ಮಂಗಳೂರು ಏರ್ ಪೋರ್ಟ್ಗೆ ವಂದೇ ಭಾರತ್ ಯೋಜನೆ ಅಡಿ ಭಾರತೀಯರನ್ನು ಕತರುವ ಕೆಲಸ ಮಾಡಲಾಗ್ತಿದೆ. ಇದೀಗ ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ 176 ಪ್ರಯಾಣಿಕರು ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆಯನ್ನೂ ಮಾಡಲಾಗಿದೆ. ಆರೋಗ್ಯ ಇಲಾಖೆಯ ತಪಾಸಣಾ ತಂಡದಿಂದ ಪ್ರತೀ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗ್ತಿದೆ. ಪ್ರಯಾಣಿಕರಿಗೆ ಸ್ಟಾಂಪಿಂಗ್ ಮಾಡಿ, ಇಮಿಗ್ರೇಷನ್ ಪ್ರಕ್ರಿಯೆಯೂ ನಡೆಯುತ್ತಿದೆ. ವಿಮಾನ ಆಗಮನ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.‌ರಾಮಚಂದ್ರ ಬಾಯರಿ, ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ. ರಾವ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇನ್ನೂ ಇತ್ತ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಂಗಾಪುರದಿಂದ ವಿಮಾನ ಆಗಮಿಸಿದ್ದು, ಒಟ್ಟು 180 ಪ್ರಯಾಣಿಕರನ್ನು ಹೊತ್ತು ಬಂದಿದೆ. ಇದರಲ್ಲಿ ಕರ್ನಾಟಕದ 39, ಹಾಗೂ ತಮಿಳುನಾಡಿನ ಇಬ್ಬರನ್ನು ಇಲ್ಲಿ ಇಳಿಸಿದ ಬಳಿಕ ಕೇರಳ 139 ಜನರನ್ನು ಕೊಚ್ಚಿಯಲ್ಲಿ ಇಳಿಸಲಿದೆ. ಈಗ ಬಂದಿರುವ 180 ಜನರಲ್ಲಿ 15 ಮಂದಿ ಗರ್ಭಿಣಿಯರು ಸೇರಿದ್ದಾರೆ. ಕೆಂಪೇಗೌಡ ಏರ್ಪೋರ್ಟ್ನಲ್ಲೂ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದ್ದು, ಸ್ಕ್ರೀನಿಂಗ್ ಮುಗಿಸಿ ಬರುವ ಪ್ರಯಾಣಿಕರಿಗಾಗಿ ಹೊಟೆಲ್ ಬುಕ್ಕಿಂಗ್ ಗೆ ಪ್ರತ್ಯೇಕ ಕೌಂಟರ್ ಓಪನ್ ಮಾಡಲಾಗಿದೆ. ಟರ್ಮಿನಲ್ ಹೊರ ಭಾಗದಲ್ಲಿ ಮೂರು ಪ್ರತ್ಯೇಕ ಕೌಂಟರ್ ಸ್ಥಾಪಿಸಿದ್ದು, 5 ಸ್ಟಾರ್, 3 ಸ್ಟಾರ್ ಮತ್ತು ಸಾಮಾನ್ಯ ಹೋಟೆಲ್ ಬುಕ್ಕಿಂಗ್ ಗೆ ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಅವರ ಆರ್ಥಿಕತೆಗೆ ತಕ್ಕಂತೆ ಹೊಟೇಲ್ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹೊಟೇಲ್ ಬುಕ್ಕಿಂಗ್ ನಂತರ ಆಯ್ಕೆ ಮಾಡಿಕೊಂಡ ಹೋಟೆಲ್ ಗೆ ಬಸ್ ಮುಖಾಂತರ ಅಧಿಕಾರಿಗಳು ಕರೆದೊಯ್ಯಲಿದ್ದಾರೆ.

Tags: ‌ ಅನಿವಾಸಿ ಭಾರತೀಯರು‌ ವಂದೇ ಭಾರತ್‌ ಮಿಷನ್Air IndiaCovid 19NRIvande bharath missionಏರ್ ಇಂಡಿಯಾಕೋವಿಡ್-19
Previous Post

ಸಾಮುದಾಯಿಕ ಹಂತಕ್ಕೆ ತಲುಪಿದೆಯೇ ಕರೋನಾ? ಉತ್ತರ ಕಂಡುಕೊಳ್ಳಲು ಫೀಲ್ಡ್‌ಗಿಳಿಯುತ್ತಿದೆ ICMR !

Next Post

ಮದ್ಯ ನಿಷೇಧಕ್ಕೆ ಆಗ್ರಹಿಸುತ್ತಿರುವ ವಾಟಾಳ್‌ ನಾಗರಾಜ್‌ ಅವರೊಂದಿಗೆ ಸಂವಾದ

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಮದ್ಯ ನಿಷೇಧಕ್ಕೆ ಆಗ್ರಹಿಸುತ್ತಿರುವ ವಾಟಾಳ್‌ ನಾಗರಾಜ್‌ ಅವರೊಂದಿಗೆ ಸಂವಾದ

ಮದ್ಯ ನಿಷೇಧಕ್ಕೆ ಆಗ್ರಹಿಸುತ್ತಿರುವ ವಾಟಾಳ್‌ ನಾಗರಾಜ್‌ ಅವರೊಂದಿಗೆ ಸಂವಾದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada