ಮಂಡ್ಯ : ಸಕ್ಕರೆ ನಾಡು ಮಂಡ್ಯದ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ನಾಮಿನೇಷನ್ ಫೈಲ್ ಮಾಡಿದ್ದಾರೆ. ಗುರುವಾರ ಬೆಳಿಗ್ಗೆ 11.05ಕ್ಕೆ ಉಮೇದುವಾರಿಕೆ ಸಲ್ಲಿಸಿದ್ರು. ಕುಮಾರಸ್ವಾಮಿಗೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಗೋವಾ ಸಿಎಂ ಸಾಥ್ ಪ್ರಮೋದ್ ಸಾವಂತ್ ಸಾಥ್ ನೀಡಿದ್ರು.ಮೂರು ಬಾರಿ ನಾಮಪತ್ರ ಸಲ್ಲಿಸಿದ ಹೆಚ್ಡಿಕೆ.
ಪ್ರಾರಂಭದಲ್ಲಿ ಯಡಿಯೂರಪ್ಪ, ಗೋವಾ ಸಿಎಂ, ಯದುವೀರ್, ಪುಟ್ಟರಾಜು ಜೊತೆ ನಾಮಪತ್ರ ಸಲ್ಲಿಕೆ ಮಾಡಿದ್ರು.
ಬಳಿಕ ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕರಾದ ಸುರೇಶಗೌಡ, ರವೀಂದ್ರಶ್ರೀಕಂಠಯ್ಯ, ಅನ್ನದಾನಿ ಜೊತೆ ಉಮೇದುವಾರಿಕೆ ಸಲ್ಲಿಸಿದ್ರು.ಮೂರನೇ ಬಾರಿ ನಿಖಿಲ್, ಶಾಸಕ ಹೆಚ್.ಟಿ.ಮಂಜು, ಮಾಜಿ ಸಚಿವ ಸಾರಾ ಮಹೇಶ್, ಜೆಡಿಎಸ್ ಮುಖಂಡ ರಾಮಚಂದ್ರು ಜೊತೆ ನಾಮಪತ್ರ ಸಲ್ಲಿಕೆ ಮಾಡಿದ್ರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿಂದು ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಟೆಂಪಲ್ ರನ್ ಮಾಡಿದ್ರು .ಮಂಡ್ಯದ ಅರ್ಕೇಶ್ವರಸ್ವಾಮಿ ದೇವಸ್ಥಾನಕ್ಕೆ ಹೆಚ್ಡಿಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿದ್ರು.
ದೇವರ ಮುಂದೆ ನಾಮಪತ್ರವಿಟ್ಟು ವಿಶೇಷ ಪೂಜೆ ಸಲ್ಲಿದ ಹೆಚ್ಡಿಕೆಗೆ
ಹೆಚ್ಡಿಕೆಗೆ ಸ್ಥಳೀಯ ನಾಯಕರು ಸಾಥ್ ನೀಡಿದ್ರು. ನಂತ್ರ ಕಾಳಿಕಾಂಭ ದೇವಸ್ಥಾನಕ್ಕೆ ಎಚ್ಡಿಕೆ ಭೇಟಿ ಕೊಟ್ರು.ಶಕ್ತಿ ದೇವತೆ ಕಾಳಿಕಾಂಭ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕುಮಾರಸ್ವಾಮಿ, ಡಿಸಿ ಕಚೇರಿಗೆ ತೆರಳಿದ್ರು.
ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ..!
ಮಂಡ್ಯದಲ್ಲಿ ನಾನು ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ. ಮಂಡ್ಯದಿಂದಲೇ ಮೈತ್ರಿಯ ಮೊದಲ ಜಯ ಸಿಗಲಿದೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿಕೆ, ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಮೈತ್ರಿಯಿಂದ ಕಾಂಗ್ರೆಸ್ ಗೆ ಭೀತಿ ಶುರುವಾಗಿದೆ ಎಂದರು.
ಕಾಂಗ್ರೆಸ್ ಟೀಕೆ ಮಾಡುವುದನ್ನು ಬಿಟ್ಟು ಬೇರೆ ಏನು ಮಾಡುತ್ತಿಲ್ಲ ಜೆಡಿಎಸ್ ಸೋಲಿಸುವ ಕನನಸು ನನಸಾಗುವುದಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.