• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈತ್ರಿ ಸರ್ಕಾರ ಉರುಳಿಸಲು ಡ್ರಗ್ ಮಾಫಿಯಾ ಹಣ: ಸಚಿವ ಸುಧಾಕರ್ ಪ್ರತಿಕ್ರಿಯೆ

by
September 1, 2020
in ಕರ್ನಾಟಕ
0
ಮೈತ್ರಿ ಸರ್ಕಾರ ಉರುಳಿಸಲು ಡ್ರಗ್ ಮಾಫಿಯಾ ಹಣ: ಸಚಿವ ಸುಧಾಕರ್ ಪ್ರತಿಕ್ರಿಯೆ
Share on WhatsAppShare on FacebookShare on Telegram

ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಗಂಭೀರ ಆರೋಪಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಅವರು ಪ್ರತಿಕ್ರಿಯಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಜನಸೇವೆಯಲ್ಲಿ ವಿಶ್ವಾಸವಿಟ್ಟು ರಚ‌ನೆಗೊಂಡ ಸರಕಾರವೊಂದು ಮಾಫಿಯಾದ ಹಣದಿಂದ ಹೇಗೆ ಬುಡಮೇಲಾಯಿತು ಎಂಬುದಷ್ಟನ್ನೇ ಜನತೆಯ ಮುಂದೆ ಹೇಳಿದ್ದೇನೆ. ಆದರೆ ಸಚಿವ ಸುಧಾಕರ್ ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಉದ್ಭವಿಸಿದ್ದು ಏಕೆಂದು ಅರ್ಥವಾಗಲಿಲ್ಲ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದರು. ಇದಕ್ಕೆ ಉತ್ತರಿಸಿರುವ ಸುಧಾಕರ್‌, ʼಸರ್ಕಾರದ ವಿರುದ್ಧ ತಮ್ಮ ಆರೋಪಗಳಿಗೆ ಪುರಾವೆ ನೀಡಿ. ಸರ್ಕಾರದಲ್ಲಿ ಸಚಿವನಾಗಿ ಸರ್ಕಾರದ ವಿರುದ್ಧ ಆಧಾರರಹಿತ ಆರೋಪ ಮಾಡಿದರೆ ಅದಕ್ಕೆ ಪುರಾವೆ ಕೇಳುವುದು ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಹೇಗಾದೀತು? ಎಂದು ತಿರುಗಿ ಪ್ರಶ್ನಿಸಿದ್ದಾರೆ.

ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 15 ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ಎಂಬ ಬಗ್ಗೆಯೂ ಒಮ್ಮೆ ತಮ್ಮನ್ನು ಕೇಳಬಹುದೇ? ಪಕ್ಕದಲ್ಲಿ ಧರಮ್ ಸಿಂಗ್ ಅವರನ್ನು ಇಟ್ಟುಕೊಂಡು, ಕೆಲವು ಸ್ನೇಹಿತರೊಂದಿಗೆ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ಹಿನ್ನಲೆ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಒಮ್ಮೆ ಕೇಳಿಸಿಕೊಳ್ಳಿ! ಎಂದು ಕುಮಾರಸ್ವಾಮಿಯನ್ನು ಟೀಕಿಸಿದ್ದಾರೆ.

Also Read: ಡ್ರಗ್ಸ್ ಮಾಫಿಯಾ ವಸೂಲಿ ಹಣದಿಂದಲೇ ಮೈತ್ರಿ ಸರ್ಕಾರವನ್ನು ಉರುಳಿಸಲಾಗಿದೆ- HDK ಗಂಭೀರ ಆರೋಪ

ತಮ್ಮ ಆರೋಪಗಳ ಹಿನ್ನಲೆ ಆಧಾರಗಳ ಬಗ್ಗೆ ಕೇಳಿದ್ದೇನೆ. ನಾನು ಮಾಜಿ ಮುಖ್ಯಮಂತ್ರಿ ಮಾಜಿ ಪ್ರಧಾನಮಂತ್ರಿಯ ಮಗನಲ್ಲ, ಒಬ್ಬ ಸಾಮಾನ್ಯ ಶಾಲಾ ಶಿಕ್ಷಕನ ಮಗನಾಗಿ ಸ್ವಸಾಮರ್ಥ್ಯದಿಂದ, ಜನರ ಆಶೀರ್ವಾದದಿಂದ ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ನಾನೆಂದೂ ಯಾರ ಹೆಸರಿನಲ್ಲೂ ರಾಜಕೀಯ ಮಾಡಿಲ್ಲ. ಎಲ್ಲರ ಹಿನ್ನಲೆಗಳನ್ನೂ ರಾಜ್ಯದ ಜನರು ಗ್ರಹಿಸಿದ್ದಾರೆ. ನಾನು ಯಾವ ಮುಂಬೈಗೂ ಹೋಗಿಲ್ಲ. ಡ್ರಗ್ ಮಾಫಿಯಾ ಹಣದಿಂದ ಈ ಸರ್ಕಾರ ಬಂದಿದ್ದರೆ, ಅದು ಖಂಡಿತ ಇರಬಾರದು. ಮಾಜಿ ಮುಖ್ಯಮಂತ್ರಿಗಳಾಗಿ ಇಂಥ ಗಂಭೀರ ಆರೋಪಗಳಿಗೆ ಪುರಾವೆಯನ್ನೂ ನೀಡಲೇಬೇಕಾಗುತ್ತದೆ. ಇದನ್ನು ತಾವು ಸಾಬೀತು ಮಾಡಿದರೆ ನಾನು ರಾಜೀನಾಮೆ ಕೊಡ್ತೇನಿ ಆಗದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ಸುಧಾಕರ್‌ ಸವಾಲು ಹಾಕಿದ್ದಾರೆ.

ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 1೫ ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ಎಂಬ ಬಗ್ಗೆಯೂ ಒಮ್ಮೆ ತಮ್ಮನ್ನು ಕೇಳಬಹುದೇ? ಪಕ್ಕದಲ್ಲಿ ಧರಮ್ ಸಿಂಗ್ ಅವರನ್ನು ಇಟ್ಟುಕೊಂಡು, ಕೆಲವು ಸ್ನೇಹಿತರೊಂದಿಗೆ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ಹಿನ್ನಲೆ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಒಮ್ಮೆ ಕೇಳಿಸಿಕೊಳ್ಳಿ!(5/7)

— Dr Sudhakar K (@mla_sudhakar) August 31, 2020


ADVERTISEMENT

ಬಿಜೆಪಿ ಕಾರ್ಯಕರ್ತರ ಪರವಾಗಿ ಮಾತನಾಡಲು ನಮಲ್ಲಿ ಅರ್ಹ ವಕ್ತಾರರು ಇದ್ದಾರೆ. ಪಕ್ಷದ ಸಿದ್ದಾಂತದ ಬಗ್ಗೆ, ಅಥವಾ ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ ಬಿಡಿ! ತಾವು ತಲೆಕೆಡಿಸಿಕೊಳ್ಳುವ ಅಗತ್ಯವೇನಿದೆ? ನಾನು ಕೇಳಿದ್ದು ಡ್ರಗ್ ಮಾಫಿಯಾ ಆರೋಪದ ಹಿನ್ನಲೆಗಳ ಬಗ್ಗೆ, ಮಾಜಿ ಮುಖ್ಯಮಂತ್ರಿಗಳಾಗಿ, ಡ್ರಗ್ ಮಾಫಿಯಾ ಹಣದಿಂದ ಸರ್ಕಾರ ಬಂದಿದೆ ಎಂದು ಚುನಾಯಿತ ಸರ್ಕಾರದ ಮೇಲಿನ ಬೇಜಾವಾಬ್ದಾರಿ ಹೇಳಿಕೆಯ ಹಿನ್ನಲೆ ಬಗ್ಗೆ! ಬಿಜೆಪಿ ಅನೈತಿಕ ಕೆಲಸವನ್ನು ಎಂದೂ ಮಾಡಿಲ್ಲ, ಮಾಡುವುದಿಲ್ಲ. ಅದಕ್ಕೆ 2 ಸ್ಥಾನದಿಂದ 303 ಸ್ಥಾನಗಳನ್ನು ಜನ ಆಶೀರ್ವದಿಸಿದ್ದಾರೆ ಎಂದು ಸುಧಾಕರ್‌ ಹೇಳಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಡಾ. ಕೆ ಸುಧಾಕರ್ಮೈತ್ರಿ ಸರ್ಕಾರ
Previous Post

ಆನ್ಲೈನ್ ಜೂಜಿಗೆ ಜಾಹಿರಾತು: ಸ್ಟಾರ್ ನಟರ ವಿರುದ್ಧ ಪ್ರಶ್ನೆಯೆತ್ತಿದ ಚೇತನ್

Next Post

ಜಿಎಸ್‌ಟಿ ಪಾಲು ಕೊಡದಿದ್ದರೆ ಹೋರಾಟ: ಕೇಂದ್ರದ ವಿರುದ್ಧ ತಿರುಗಿಬಿದ್ದ ರಾಜ್ಯಗಳು!

Related Posts

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?
Top Story

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

by ಪ್ರತಿಧ್ವನಿ
July 14, 2026
0

ಬೆಂಗಳೂರು: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದರು. https://youtu.be/_88MGrTJXb0?si=TMbaKMg2Dn5lzJUR ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ...

Read moreDetails
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

July 14, 2026
Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

July 14, 2026
ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

July 14, 2026
Next Post
ಜಿಎಸ್‌ಟಿ ಪಾಲು ಕೊಡದಿದ್ದರೆ ಹೋರಾಟ: ಕೇಂದ್ರದ ವಿರುದ್ಧ ತಿರುಗಿಬಿದ್ದ ರಾಜ್ಯಗಳು!

ಜಿಎಸ್‌ಟಿ ಪಾಲು ಕೊಡದಿದ್ದರೆ ಹೋರಾಟ: ಕೇಂದ್ರದ ವಿರುದ್ಧ ತಿರುಗಿಬಿದ್ದ ರಾಜ್ಯಗಳು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada