• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೊಹರಂ ಮೆರವಣಿಗೆಗೆ ತಡೆ: ಕೋವಿಡ್ ಹರಡುವಿಕೆಗೆ ಒಂದು ಸಮುದಾಯವನ್ನು ಗುರಿಯಾಗಿಸಲಾಗುತ್ತದೆ- ಸುಪ್ರೀಂ

by
August 27, 2020
in ದೇಶ
0
ಮೊಹರಂ ಮೆರವಣಿಗೆಗೆ ತಡೆ: ಕೋವಿಡ್ ಹರಡುವಿಕೆಗೆ ಒಂದು ಸಮುದಾಯವನ್ನು ಗುರಿಯಾಗಿಸಲಾಗುತ್ತದೆ- ಸುಪ್ರೀಂ
Share on WhatsAppShare on FacebookShare on Telegram

ಮೊಹರಂ ಮೆರವಣಿಗೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿಯನ್ನು ನಿರಾಕರಿಸಿದೆ. ಇಡೀ ದೇಶಕ್ಕೆ ಏಕ ರೀತಿಯ ಮಾರ್ಗಸೂಚಿ ನೀಡುವುದರಿಂದ ಹಲವು ರೀತಿಯ ಗೊಂದಲಗಳಿಗೆ ಕಾರಣವಾಗಬಹುದು ಹಾಗೂ ನಿರ್ದಿಷ್ಟ ಸಮುದಾಯವು ಕರೋನವೈರಸ್ ಹರಡುವ ಆಪಾದನೆಯನ್ನು ಹೊರಬೇಕಾಗಿ ಬಂದೀತು ಎಂದು ನ್ಯಾಯಾಲಯ ಹೇಳಿದೆ.

ADVERTISEMENT

ಲಕ್ನೋ ಮೂಲದ ಶಿಯಾ ನಾಯಕ ಸೈಯದ್ ಕಲ್ಬೆ ಜವಾದ್ ಅವರ ಲಖನೌನಲ್ಲಿ ಮೊಹರಂ ಮೆರವಣಿಗೆ ನಡೆಸಲು ಮನವಿ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು ಲಖನೌನಲ್ಲಿ ಮೆರವಣಿಗೆ ನಡೆಸಲು ಅನುಮತಿಗೆ ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ನಿರ್ದೇಶಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ನೀವು ಸಾಮಾನ್ಯ ಮಾರ್ಗಸೂಚಿಯನ್ನು ಕೇಳುತ್ತಿದ್ದೀರಿ, ನಾವು ಇದನ್ನು ಅನುಮತಿಸಿದರೆ ಗೊಂದಲ, ಅವ್ಯವಸ್ಥೆ ಉಂಟಾಗುತ್ತದೆ. COVID ಹರಡುವಿಕೆಗೆ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲಾಗುತ್ತದೆ. ನಮಗೆ ಅದು ಬೇಡ. ನ್ಯಾಯಾಲಯವಾಗಿ ನಾವು ಎಲ್ಲ ಜನರ ಆರೋಗ್ಯಕ್ಕೆ ಅಪಾಯವನ್ನುಂಟುಮಾಡಲು ಸಾಧ್ಯವಿಲ್ಲ ”ಎಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಪೀಠ ಹೇಳಿದೆ.

ತಬ್ಲೀಘಿ ಜಮಾಅತ್‌ನ ಸದಸ್ಯರನ್ನು “ಬಲಿಪಶು” ಮಾಡಲಾಗಿದೆ ಹಾಗೂ ಪೌರತ್ವ ವಿರುದ್ಧದ ಪ್ರತಿಭಟನೆಯ ನಂತರ “ಭಾರತೀಯ ಮುಸ್ಲಿಮರಿಗೆ ಪರೋಕ್ಷ ಎಚ್ಚರಿಕೆ”ನೀಡಲು ತಬ್ಲೀಗ್‌ ಜಮಾತಿಗರ ಪ್ರಕರಣವನ್ನು ಬಳಸಲಾಗಿದೆ ಎಂದು ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠದ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ ಉಲ್ಲೇಖಿಸಿದೆ.

ಈ ವರ್ಷ ಆಗಸ್ಟ್ 29 ರಂದು ಮೊಹರಂ ಹಬ್ಬ ಬರಲಿದೆ. ಮೊಹರಂ ದಿವಸ ಕರ್ಬಲಾ ಕದನದಲ್ಲಿ ಕೊಲ್ಲಲ್ಪಟ್ಟ ಇಮಾಮ್ ಹುಸೇನ್ ಅವರ ಹುತಾತ್ಮತೆಯ ನೆನಪಿಗಾಗಿ ಶಿಯಾ ಮುಸ್ಲಿಮರು‌ ಶೋಕಾಚರಣೆಯನ್ನು ದೊಡ್ಡಮಟ್ಟದಲ್ಲಿ ಆಚರಿಸುತ್ತಾರೆ.

Tags: ಕರೋನಾಮೊಹರಂ ಆಚರಣೆಸುಪ್ರಿಂ ಕೋರ್ಟ್‌
Previous Post

ಗುರುಗ್ರಾಮ: ಪಾರ್ಕ್ ನಿರ್ಮಾಣಕ್ಕಾಗಿ ಬಡವರ ಗುಡಿಸಲು ಧ್ವಂಸ

Next Post

ಕರುನಾಡು ಆದ್ಯತೆ ನೀಡಬೇಕಿರುವುದು ಛತ್ರಪತಿ ಶಿವಾಜಿಗೋ ಅಥವಾ ಸಂಗೊಳ್ಳಿ ರಾಯಣ್ಣನಿಗೋ?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಕರುನಾಡು ಆದ್ಯತೆ ನೀಡಬೇಕಿರುವುದು ಛತ್ರಪತಿ ಶಿವಾಜಿಗೋ ಅಥವಾ ಸಂಗೊಳ್ಳಿ ರಾಯಣ್ಣನಿಗೋ?

ಕರುನಾಡು ಆದ್ಯತೆ ನೀಡಬೇಕಿರುವುದು ಛತ್ರಪತಿ ಶಿವಾಜಿಗೋ ಅಥವಾ ಸಂಗೊಳ್ಳಿ ರಾಯಣ್ಣನಿಗೋ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada